AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: 1 ರನ್ನಿಂದ ಗೆದ್ದ ಗುಜರಾತ್ ನಾಯಕನಿಗೆ ಬಿಗ್ ಶಾಕ್ ನೀಡಿದ ಬಿಸಿಸಿಐ

Shubman Gill fine IPL 2026: ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರೋಚಕ ಗೆಲುವು ಸಾಧಿಸಿದ ಗುಜರಾತ್ ಟೈಟಾನ್ಸ್ ನಾಯಕ ಶುಭ್​ಮನ್ ಗಿಲ್‌ಗೆ ನಿಧಾನಗತಿಯ ಓವರ್​ಗಾಗಿ ಬಿಸಿಸಿಐ 12 ಲಕ್ಷ ರೂಪಾಯಿ ದಂಡ ವಿಧಿಸಿದೆ. ಈ ಸೀಸನ್‌ನಲ್ಲಿ ಗುಜರಾತ್‌ನ ಮೊದಲ ನಿಯಮ ಉಲ್ಲಂಘನೆ ಇದಾಗಿದ್ದು, ಪಾಯಿಂಟ್ ಟೇಬಲ್‌ನಲ್ಲಿ ತಂಡ ಖಾತೆ ತೆರೆದರೂ, ಗಿಲ್‌ಗೆ ಆರ್ಥಿಕ ಹೊರೆಯಾಗಿದೆ. ಈ ಹಿಂದೆ ಶ್ರೇಯಸ್ ಅಯ್ಯರ್ ಕೂಡ ಇದೇ ಕಾರಣಕ್ಕೆ ದಂಡನೆಗೆ ಒಳಗಾಗಿದ್ದರು.

ಪೃಥ್ವಿಶಂಕರ
|

Updated on: Apr 09, 2026 | 6:24 PM

Share
ಈ ಬಾರಿಯ ಐಪಿಎಲ್‌ನಲ್ಲಿ ಸತತ ಎರಡು ಪಂದ್ಯಗಳನ್ನು ಸೋತಿದ್ದ ಶುಭ್​ಮನ್ ಗಿಲ್ ನಾಯಕತ್ವದಲ್ಲಿ ಗುಜರಾತ್ ಟೈಟಾನ್ಸ್ ತಂಡವು ತನ್ನ ಗೆಲುವಿನ ಖಾತೆ ತೆರೆದಿದೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಈ ಪಂದ್ಯವನ್ನು 1 ರನ್​ಗಳಿಂದ ರೋಚಕವಾಗಿ ಗೆದ್ದುಕೊಂಡ ಗುಜರಾತ್ ತಂಡಕ್ಕೆ ಎರಡು ಅಂಕಗಳು ಸಿಕ್ಕಿವೆ. ಇದರಿಂದ ಗುಜರಾತ್ ತಂಡ ಪಾಯಿಂಟ್ ಟೇಬಲ್‌ನಲ್ಲಿ ತಮ್ಮ ಖಾತೆಯನ್ನು ತೆರೆದಿದೆ.

ಈ ಬಾರಿಯ ಐಪಿಎಲ್‌ನಲ್ಲಿ ಸತತ ಎರಡು ಪಂದ್ಯಗಳನ್ನು ಸೋತಿದ್ದ ಶುಭ್​ಮನ್ ಗಿಲ್ ನಾಯಕತ್ವದಲ್ಲಿ ಗುಜರಾತ್ ಟೈಟಾನ್ಸ್ ತಂಡವು ತನ್ನ ಗೆಲುವಿನ ಖಾತೆ ತೆರೆದಿದೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಈ ಪಂದ್ಯವನ್ನು 1 ರನ್​ಗಳಿಂದ ರೋಚಕವಾಗಿ ಗೆದ್ದುಕೊಂಡ ಗುಜರಾತ್ ತಂಡಕ್ಕೆ ಎರಡು ಅಂಕಗಳು ಸಿಕ್ಕಿವೆ. ಇದರಿಂದ ಗುಜರಾತ್ ತಂಡ ಪಾಯಿಂಟ್ ಟೇಬಲ್‌ನಲ್ಲಿ ತಮ್ಮ ಖಾತೆಯನ್ನು ತೆರೆದಿದೆ.

1 / 5
ಆದಾಗ್ಯೂ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಈ ಪಂದ್ಯದಲ್ಲಿ ನಿಧಾನಗತಿಯ ಓವರ್‌ ನಿಯಮವನ್ನು ಗುಜರಾತ್ ಟೈಟಾನ್ಸ್ ತಂಡ ಉಲ್ಲಂಘಿಸಿದೆ. ಹೀಗಾಗಿ ತಂಡದ ನಾಯಕ ಶುಭ್‌ಮನ್ ಗಿಲ್‌ಗೆ 12 ಲಕ್ಷ ರೂಪಾಯಿ ದಂಡ ವಿಧಿಸಿ ಬಿಸಿಸಿಐ ಆದೇಶ ಹೊರಡಿಸಿದೆ.

ಆದಾಗ್ಯೂ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಈ ಪಂದ್ಯದಲ್ಲಿ ನಿಧಾನಗತಿಯ ಓವರ್‌ ನಿಯಮವನ್ನು ಗುಜರಾತ್ ಟೈಟಾನ್ಸ್ ತಂಡ ಉಲ್ಲಂಘಿಸಿದೆ. ಹೀಗಾಗಿ ತಂಡದ ನಾಯಕ ಶುಭ್‌ಮನ್ ಗಿಲ್‌ಗೆ 12 ಲಕ್ಷ ರೂಪಾಯಿ ದಂಡ ವಿಧಿಸಿ ಬಿಸಿಸಿಐ ಆದೇಶ ಹೊರಡಿಸಿದೆ.

2 / 5
ಐಪಿಎಲ್ 2026 ರ 14 ನೇ ಪಂದ್ಯದಲ್ಲಿ ದೆಹಲಿ ಕ್ಯಾಪಿಟಲ್ಸ್ ವಿರುದ್ಧ ನಿಧಾನಗತಿಯ ಓವರ್ ದರಕ್ಕಾಗಿ ಗುಜರಾತ್ ನಾಯಕ ಗಿಲ್ ಅವರಿಗೆ ದಂಡ ವಿಧಿಸಲಾಗಿದೆ. ಇದು ಪ್ರಸಕ್ತ ಸೀಸನ್​ನಲ್ಲಿ ತಂಡವು ಐಪಿಎಲ್ ನೀತಿ ಸಂಹಿತೆ 2.22 ಅನ್ನು ಉಲ್ಲಂಘಿಸಿದ ಮೊದಲ ಪ್ರಕರಣವಾಗಿದ್ದು, ಇದರ ಪರಿಣಾಮವಾಗಿ ದಂಡ ವಿಧಿಸಲಾಗಿದೆ. ಗಿಲ್ ಅವರಿಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ ಎಂದು ಬಿಸಿಸಿಐ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಐಪಿಎಲ್ 2026 ರ 14 ನೇ ಪಂದ್ಯದಲ್ಲಿ ದೆಹಲಿ ಕ್ಯಾಪಿಟಲ್ಸ್ ವಿರುದ್ಧ ನಿಧಾನಗತಿಯ ಓವರ್ ದರಕ್ಕಾಗಿ ಗುಜರಾತ್ ನಾಯಕ ಗಿಲ್ ಅವರಿಗೆ ದಂಡ ವಿಧಿಸಲಾಗಿದೆ. ಇದು ಪ್ರಸಕ್ತ ಸೀಸನ್​ನಲ್ಲಿ ತಂಡವು ಐಪಿಎಲ್ ನೀತಿ ಸಂಹಿತೆ 2.22 ಅನ್ನು ಉಲ್ಲಂಘಿಸಿದ ಮೊದಲ ಪ್ರಕರಣವಾಗಿದ್ದು, ಇದರ ಪರಿಣಾಮವಾಗಿ ದಂಡ ವಿಧಿಸಲಾಗಿದೆ. ಗಿಲ್ ಅವರಿಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ ಎಂದು ಬಿಸಿಸಿಐ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

3 / 5
ಈ ರೀತಿಯಾಗಿ ಬಿಸಿಸಿಐನಿಂದ ದಂಡನೆಗೆ ಒಳಗಾಗುತ್ತಿರುವ ಮೊದಲ ನಾಯಕ ಶುಭ್​ಮನ್ ಗಿಲ್ ಅಲ್ಲ. ಗಿಲ್​ಗೂ ಮೊದಲು ಶ್ರೇಯಸ್ ಅಯ್ಯರ್ ಎರಡು ಬಾರಿ ಈ ಅಪರಾಧ ಮಾಡಿದ್ದಾರೆ. ಮೊದಲ ಬಾರಿಗೆ ಶ್ರೇಯಸ್ ಅಯ್ಯರ್ ಗೆ 12 ಲಕ್ಷ ರೂ. ದಂಡ ವಿಧಿಸಲಾಗಿತ್ತು. ಎರಡನೇ ಬಾರಿ ಅದನ್ನು 25 ಲಕ್ಷ ರೂ.ಗೆ ಹೆಚ್ಚಿಸಲಾಯಿತು. ಅಯ್ಯರ್ ಮತ್ತೆ ಈ ನಿಯಮ ಮುರಿದರೆ ಅವರನ್ನು ಒಂದು ಪಂದ್ಯದಿಂದ ಹೊರಗಿಡಲಾಗುತ್ತದೆ.

ಈ ರೀತಿಯಾಗಿ ಬಿಸಿಸಿಐನಿಂದ ದಂಡನೆಗೆ ಒಳಗಾಗುತ್ತಿರುವ ಮೊದಲ ನಾಯಕ ಶುಭ್​ಮನ್ ಗಿಲ್ ಅಲ್ಲ. ಗಿಲ್​ಗೂ ಮೊದಲು ಶ್ರೇಯಸ್ ಅಯ್ಯರ್ ಎರಡು ಬಾರಿ ಈ ಅಪರಾಧ ಮಾಡಿದ್ದಾರೆ. ಮೊದಲ ಬಾರಿಗೆ ಶ್ರೇಯಸ್ ಅಯ್ಯರ್ ಗೆ 12 ಲಕ್ಷ ರೂ. ದಂಡ ವಿಧಿಸಲಾಗಿತ್ತು. ಎರಡನೇ ಬಾರಿ ಅದನ್ನು 25 ಲಕ್ಷ ರೂ.ಗೆ ಹೆಚ್ಚಿಸಲಾಯಿತು. ಅಯ್ಯರ್ ಮತ್ತೆ ಈ ನಿಯಮ ಮುರಿದರೆ ಅವರನ್ನು ಒಂದು ಪಂದ್ಯದಿಂದ ಹೊರಗಿಡಲಾಗುತ್ತದೆ.

4 / 5
ಇನ್ನು ಈ ಪಂದ್ಯದ ವಿಚಾರಕ್ಕೆ ಬರುವುದಾದರೆ.. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟಾನ್ಸ್ ಶುಭಮನ್ ಗಿಲ್, ಜೋಸ್ ಬಟ್ಲರ್ ಮತ್ತು ವಾಷಿಂಗ್ಟನ್ ಸುಂದರ್ ಅವರ ಅರ್ಧಶತಕಗಳ ಸಹಾಯದಿಂದ 210 ರನ್‌ಗಳ ಬೃಹತ್ ಸ್ಕೋರ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ಕೊನೆಯ ಎಸೆತದಲ್ಲಿ 1 ರನ್​ಗಳ ವೀರೋಚಿತ ಸೋಲು ಅನುಭವಿಸಿತು.

ಇನ್ನು ಈ ಪಂದ್ಯದ ವಿಚಾರಕ್ಕೆ ಬರುವುದಾದರೆ.. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟಾನ್ಸ್ ಶುಭಮನ್ ಗಿಲ್, ಜೋಸ್ ಬಟ್ಲರ್ ಮತ್ತು ವಾಷಿಂಗ್ಟನ್ ಸುಂದರ್ ಅವರ ಅರ್ಧಶತಕಗಳ ಸಹಾಯದಿಂದ 210 ರನ್‌ಗಳ ಬೃಹತ್ ಸ್ಕೋರ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ಕೊನೆಯ ಎಸೆತದಲ್ಲಿ 1 ರನ್​ಗಳ ವೀರೋಚಿತ ಸೋಲು ಅನುಭವಿಸಿತು.

5 / 5
Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?