AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: 42 ಪಂದ್ಯಗಳ ನಂತರ ಸನ್‌ರೈಸರ್ಸ್ ತಂಡಕ್ಕೆ ಅಂಬ್ರಿಶ್ ಆಗಮನ

IPL 2026: ಐಪಿಎಲ್ 2026 ಗಾಗಿ ಸನ್‌ರೈಸರ್ಸ್ ಹೈದರಾಬಾದ್ ತಂಡಕ್ಕೆ ಯುವ ಆಲ್‌ರೌಂಡರ್ ಆರ್‌ಎಸ್ ಅಂಬ್ರಿಶ್ ಸೇರ್ಪಡೆಯಾಗಿದ್ದಾರೆ. ಶಿವಂ ಮಾವಿ ಗಾಯಗೊಂಡ ಕಾರಣ ಅವರ ಬದಲಿಗೆ ಅಂಬ್ರಿಶ್‌ಗೆ ಅವಕಾಶ ದೊರೆತಿದೆ. ಅಂಡರ್-19 ವಿಶ್ವಕಪ್ ಗೆದ್ದ ತಂಡದ ಸದಸ್ಯರಾಗಿದ್ದ ಅಂಬ್ರಿಶ್ ಬೌಲಿಂಗ್‌ನಲ್ಲಿ ಮಿಂಚಿದ್ದರು. ಐಪಿಎಲ್‌ನಲ್ಲಿ ಅವರ ಚೊಚ್ಚಲ ಟಿ20 ಪಂದ್ಯ ಆಡುವ ನಿರೀಕ್ಷೆಯಿದ್ದು, ಕೂಚ್ ಬೆಹಾರ್ ಟ್ರೋಫಿ ವಿಜೇತ ನಾಯಕನಾಗಿ ಗಮನ ಸೆಳೆದಿದ್ದಾರೆ.

ಪೃಥ್ವಿಶಂಕರ
|

Updated on: May 01, 2026 | 7:33 PM

Share
ಐಪಿಎಲ್ 2026 ರಲ್ಲಿ ಸೋಲು ಗೆಲುವಿನ ಸಮಾನ ರುಚಿ ನೋಡಿರುವ ಸನ್‌ರೈಸರ್ಸ್ ಹೈದರಾಬಾದ್ ತಂಡ, ಖಾಯಂ ನಾಯಕ ಪ್ಯಾಟ್ ಕಮ್ಮಿನ್ಸ್ ಬಂದ ಬಳಿಕ ಸತತ ಎರಡು ಪಂದ್ಯಗಳನ್ನು ಗೆದ್ದು ಆತ್ಮವಿಶ್ವಾಸದ ಅಲೆಯಲ್ಲಿ ಬೀಗುತ್ತಿದೆ. ಈ ನಡುವೆ ಈ ತಂಡಕ್ಕೆ ಹೊಸ ಆಟಗಾರನ ಆಗಮನವಾಗಿದೆ. ಆ ಆಟಗಾರನ ಹೆಸರು ಆರ್‌ಎಸ್ ಅಂಬ್ರಿಶ್.

ಐಪಿಎಲ್ 2026 ರಲ್ಲಿ ಸೋಲು ಗೆಲುವಿನ ಸಮಾನ ರುಚಿ ನೋಡಿರುವ ಸನ್‌ರೈಸರ್ಸ್ ಹೈದರಾಬಾದ್ ತಂಡ, ಖಾಯಂ ನಾಯಕ ಪ್ಯಾಟ್ ಕಮ್ಮಿನ್ಸ್ ಬಂದ ಬಳಿಕ ಸತತ ಎರಡು ಪಂದ್ಯಗಳನ್ನು ಗೆದ್ದು ಆತ್ಮವಿಶ್ವಾಸದ ಅಲೆಯಲ್ಲಿ ಬೀಗುತ್ತಿದೆ. ಈ ನಡುವೆ ಈ ತಂಡಕ್ಕೆ ಹೊಸ ಆಟಗಾರನ ಆಗಮನವಾಗಿದೆ. ಆ ಆಟಗಾರನ ಹೆಸರು ಆರ್‌ಎಸ್ ಅಂಬ್ರಿಶ್.

1 / 5
ವಾಸ್ತವವಾಗಿ ಸನ್‌ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ, ವೇಗಿ ಶಿವಂ ಮಾವಿ ಬದಲಿಗೆ ಆರ್‌ಎಸ್ ಅಂಬ್ರಿಶ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ. ಅಂಬ್ರಿಶ್ ಒಬ್ಬ ಆಲ್‌ರೌಂಡರ್ ಆಗಿದ್ದು, ಬಲಗೈ ಮಧ್ಯಮ ವೇಗಿ ಮತ್ತು ಎಡಗೈ ಬ್ಯಾಟ್ಸ್‌ಮನ್ ಆಗಿದ್ದಾರೆ. ಆರ್‌ಎಸ್ ಅಂಬ್ರಿಶ್ ಅಂಡರ್ -19 ವಿಶ್ವಕಪ್ ಗೆದ್ದ ಟೀಂ ಇಂಡಿಯಾದ ಭಾಗವಾಗಿದ್ದರು.

ವಾಸ್ತವವಾಗಿ ಸನ್‌ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ, ವೇಗಿ ಶಿವಂ ಮಾವಿ ಬದಲಿಗೆ ಆರ್‌ಎಸ್ ಅಂಬ್ರಿಶ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ. ಅಂಬ್ರಿಶ್ ಒಬ್ಬ ಆಲ್‌ರೌಂಡರ್ ಆಗಿದ್ದು, ಬಲಗೈ ಮಧ್ಯಮ ವೇಗಿ ಮತ್ತು ಎಡಗೈ ಬ್ಯಾಟ್ಸ್‌ಮನ್ ಆಗಿದ್ದಾರೆ. ಆರ್‌ಎಸ್ ಅಂಬ್ರಿಶ್ ಅಂಡರ್ -19 ವಿಶ್ವಕಪ್ ಗೆದ್ದ ಟೀಂ ಇಂಡಿಯಾದ ಭಾಗವಾಗಿದ್ದರು.

2 / 5
ಅಂಡರ್ -19 ವಿಶ್ವಕಪ್‌ನಲ್ಲಿ ಅವರು ತಮ್ಮ ಬೌಲಿಂಗ್‌ನಿಂದ ಎಲ್ಲರ ಹೃದಯ ಗೆದ್ದಿದ್ದ ಅಂಬ್ರಿಶ್, ಆಡಿದ 7 ಪಂದ್ಯಗಳಲ್ಲಿ 11 ವಿಕೆಟ್‌ಗಳನ್ನು ಕಬಳಿಸಿದ್ದರು. ತಮಿಳುನಾಡಿನವರಾಗಿರುವ ಅಂಬ್ರಿಶ್ ಕಳೆದ ವರ್ಷ ಪ್ರಥಮ ದರ್ಜೆ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದರು. ಇಲ್ಲಿಯವರೆಗೆ ಕೇವಲ ಎರಡು ಪ್ರಥಮ ದರ್ಜೆ ಪಂದ್ಯಗಳನ್ನು ಆಡಿರುವ ಅವರು 43 ರನ್ ಜೊತೆಗೆ ಎರಡು ವಿಕೆಟ್‌ಗಳನ್ನು ಪಡೆದಿದ್ದಾರೆ.

ಅಂಡರ್ -19 ವಿಶ್ವಕಪ್‌ನಲ್ಲಿ ಅವರು ತಮ್ಮ ಬೌಲಿಂಗ್‌ನಿಂದ ಎಲ್ಲರ ಹೃದಯ ಗೆದ್ದಿದ್ದ ಅಂಬ್ರಿಶ್, ಆಡಿದ 7 ಪಂದ್ಯಗಳಲ್ಲಿ 11 ವಿಕೆಟ್‌ಗಳನ್ನು ಕಬಳಿಸಿದ್ದರು. ತಮಿಳುನಾಡಿನವರಾಗಿರುವ ಅಂಬ್ರಿಶ್ ಕಳೆದ ವರ್ಷ ಪ್ರಥಮ ದರ್ಜೆ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದರು. ಇಲ್ಲಿಯವರೆಗೆ ಕೇವಲ ಎರಡು ಪ್ರಥಮ ದರ್ಜೆ ಪಂದ್ಯಗಳನ್ನು ಆಡಿರುವ ಅವರು 43 ರನ್ ಜೊತೆಗೆ ಎರಡು ವಿಕೆಟ್‌ಗಳನ್ನು ಪಡೆದಿದ್ದಾರೆ.

3 / 5
ಕುತೂಹಲಕಾರಿಯಾಗಿ, ಅಂಬ್ರಿಶ್ ಇನ್ನೂ ಟಿ20 ಪಂದ್ಯವನ್ನು ಆಡಿಲ್ಲ. ಐಪಿಎಲ್‌ನಲ್ಲಿ ಅವಕಾಶ ಸಿಕ್ಕರೆ , ಅದು ಅವರ ಚೊಚ್ಚಲ ಟಿ20 ಪಂದ್ಯವಾಗಲಿದೆ. ಶಿವಂ ಮಾವಿ ತೊಡೆಸಂದು ಗಾಯದಿಂದ ಬಳಲುತ್ತಿದ್ದ ಕಾರಣ ಅಂಬ್ರಿಶ್, 30 ಲಕ್ಷ ರೂ ಮೂಲ ಬೆಲೆಯೊಂದಿಗೆ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಸೇರಿಕೊಂಡಿದ್ದಾರೆ.

ಕುತೂಹಲಕಾರಿಯಾಗಿ, ಅಂಬ್ರಿಶ್ ಇನ್ನೂ ಟಿ20 ಪಂದ್ಯವನ್ನು ಆಡಿಲ್ಲ. ಐಪಿಎಲ್‌ನಲ್ಲಿ ಅವಕಾಶ ಸಿಕ್ಕರೆ , ಅದು ಅವರ ಚೊಚ್ಚಲ ಟಿ20 ಪಂದ್ಯವಾಗಲಿದೆ. ಶಿವಂ ಮಾವಿ ತೊಡೆಸಂದು ಗಾಯದಿಂದ ಬಳಲುತ್ತಿದ್ದ ಕಾರಣ ಅಂಬ್ರಿಶ್, 30 ಲಕ್ಷ ರೂ ಮೂಲ ಬೆಲೆಯೊಂದಿಗೆ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಸೇರಿಕೊಂಡಿದ್ದಾರೆ.

4 / 5
ಅಂಬ್ರಿಶ್, ಕೂಚ್ ಬೆಹಾರ್ ಟ್ರೋಫಿಯಲ್ಲಿ ತಮಿಳುನಾಡು ತಂಡವನ್ನು ಮುನ್ನಡೆಸಿದ್ದಾರೆ ಎಂಬುದು ಗಮನಿಸಬೇಕಾದ ಸಂಗತಿ. ಅಂಬ್ರಿಶ್ ನಾಯಕತ್ವದಲ್ಲಿ, ತಮಿಳುನಾಡು 33 ವರ್ಷಗಳ ನಂತರ ಕೂಚ್ ಬೆಹಾರ್ ಟ್ರೋಫಿಯನ್ನು ಗೆದ್ದುಕೊಂಡಿತು. ಇದೀಗ ಸನ್​ರೈಸರ್ಸ್​ ತಂಡವನ್ನು ಸೇರಿಕೊಂಡಿರುವ ಅಂಬ್ರಿಶ್​ಗೆ ಮಿಲಿಯನ್ ಡಾಲರ್ ಟೂರ್ನಿ ಐಪಿಎಲ್‌ನಲ್ಲಿ ಆಡುವ ಅವಕಾಶ ಸಿಗುತ್ತದ ಎಂಬುದನ್ನು ಕಾದುನೋಡಬೇಕಿದೆ.

ಅಂಬ್ರಿಶ್, ಕೂಚ್ ಬೆಹಾರ್ ಟ್ರೋಫಿಯಲ್ಲಿ ತಮಿಳುನಾಡು ತಂಡವನ್ನು ಮುನ್ನಡೆಸಿದ್ದಾರೆ ಎಂಬುದು ಗಮನಿಸಬೇಕಾದ ಸಂಗತಿ. ಅಂಬ್ರಿಶ್ ನಾಯಕತ್ವದಲ್ಲಿ, ತಮಿಳುನಾಡು 33 ವರ್ಷಗಳ ನಂತರ ಕೂಚ್ ಬೆಹಾರ್ ಟ್ರೋಫಿಯನ್ನು ಗೆದ್ದುಕೊಂಡಿತು. ಇದೀಗ ಸನ್​ರೈಸರ್ಸ್​ ತಂಡವನ್ನು ಸೇರಿಕೊಂಡಿರುವ ಅಂಬ್ರಿಶ್​ಗೆ ಮಿಲಿಯನ್ ಡಾಲರ್ ಟೂರ್ನಿ ಐಪಿಎಲ್‌ನಲ್ಲಿ ಆಡುವ ಅವಕಾಶ ಸಿಗುತ್ತದ ಎಂಬುದನ್ನು ಕಾದುನೋಡಬೇಕಿದೆ.

5 / 5
Follow Us
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ
ನಿಧಿ ಆಸೆಗೆ ತಾಯಿಯನ್ನೇ ಬಲಿ ಕೊಡಲು ಯತ್ನ!: ಚಾಮರಾಜನಗರದಲ್ಲಿ ಶಾಕಿಂಗ್ ಘಟನೆ
ನಿಧಿ ಆಸೆಗೆ ತಾಯಿಯನ್ನೇ ಬಲಿ ಕೊಡಲು ಯತ್ನ!: ಚಾಮರಾಜನಗರದಲ್ಲಿ ಶಾಕಿಂಗ್ ಘಟನೆ
ಎಕ್ಸಿಟ್ ಪೋಲ್ ಬೆನ್ನಲ್ಲೇ ಬಾಂಗ್ಲಾದೇಶಕ್ಕೆ ನಡುಕ
ಎಕ್ಸಿಟ್ ಪೋಲ್ ಬೆನ್ನಲ್ಲೇ ಬಾಂಗ್ಲಾದೇಶಕ್ಕೆ ನಡುಕ
ಮಳೆ ಬಂದು ನಿಂತರೂ 2 ದಿನದಿಂದ ನಡೆಯುತ್ತಲೇ ಇದೆ ಅಂಡರ್ ಪಾಸ್ ಕ್ಲೀನ್ ಕಾರ್ಯ
ಮಳೆ ಬಂದು ನಿಂತರೂ 2 ದಿನದಿಂದ ನಡೆಯುತ್ತಲೇ ಇದೆ ಅಂಡರ್ ಪಾಸ್ ಕ್ಲೀನ್ ಕಾರ್ಯ
‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ
‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ
ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರ ಹುಚ್ಚಾಟ! ವಿಡಿಯೋ ವೈರಲ್
ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರ ಹುಚ್ಚಾಟ! ವಿಡಿಯೋ ವೈರಲ್