AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ವೆಂಕಿ ಎಂಟ್ರಿಯಿಂದ ಕನ್ನಡಿಗನ ಸ್ಥಾನಕ್ಕೆ ಕುತ್ತು..!

IPL 2026 RCB Squad: ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಐಪಿಎಲ್ 2026ರ ಹರಾಜಿಗೂ ಮುನ್ನ 17 ಆಟಗಾರರನ್ನು ರಿಟೈನ್ ಮಾಡಿ ಕೊಂಡಿದ್ದರು. ಇದೀಗ ಮಿನಿ ಹರಾಜಿನ ಮೂಲಕ ಒಟ್ಟು 8 ಆಟಗಾರರನ್ನು ಖರೀದಿಸಿದೆ. ಈ ಮೂಲಕ ಐಪಿಎಲ್ ಸೀಸನ್-19 ಗಾಗಿ 25 ಸದಸ್ಯರ ಬಳಗವನ್ನು ರೂಪಿಸಿದೆ.

ಝಾಹಿರ್ ಯೂಸುಫ್
|

Updated on:Dec 17, 2025 | 11:59 AM

Share
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಮಧ್ಯಪ್ರದೇಶದ ಆಲ್​ರೌಂಡರ್ ವೆಂಕಟೇಶ್ ಅಯ್ಯರ್ (Venkatesh Iyer) ಎಂಟ್ರಿ ಕೊಟ್ಟಿದ್ದಾರೆ. ಅಬುಧಾಬಿಯಲ್ಲಿ ಮಂಗಳವಾರ (ಡಿ.16) ನಡೆದ ಐಪಿಎಲ್ ಮಿನಿ ಹರಾಜಿನ ಮೂಲಕ ಆರ್​ಸಿಬಿ ವೆಂಕಟೇಶ್ ಅವರನ್ನು 7 ಕೋಟಿ ರೂ.ಗೆ ಖರೀದಿಸಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಮಧ್ಯಪ್ರದೇಶದ ಆಲ್​ರೌಂಡರ್ ವೆಂಕಟೇಶ್ ಅಯ್ಯರ್ (Venkatesh Iyer) ಎಂಟ್ರಿ ಕೊಟ್ಟಿದ್ದಾರೆ. ಅಬುಧಾಬಿಯಲ್ಲಿ ಮಂಗಳವಾರ (ಡಿ.16) ನಡೆದ ಐಪಿಎಲ್ ಮಿನಿ ಹರಾಜಿನ ಮೂಲಕ ಆರ್​ಸಿಬಿ ವೆಂಕಟೇಶ್ ಅವರನ್ನು 7 ಕೋಟಿ ರೂ.ಗೆ ಖರೀದಿಸಿದೆ.

1 / 7
ಆಲ್​ರೌಂಡರ್ ಆಗಿರುವ ವೆಂಕಟೇಶ್ ಅಯ್ಯರ್ ಖರೀದಿಗೆ ಕಳೆದ ಸೀಸನ್​ನಲ್ಲೇ ಆರ್​ಸಿಬಿ ಪ್ರಯತ್ನಿಸಿತ್ತು. ಆದರೆ ಐಪಿಎಲ್​ 2026 ರಲ್ಲಿ ಅಯ್ಯರ್ 23.75 ಕೋಟಿ ರೂ.ಗೆ ಕೆಕೆಆರ್ ಪಾಲಾಗಿದ್ದರು. ಈ ಬಾರಿ ಕೇವಲ 7 ಕೋಟಿ ರೂ. ನೀಡುವ ಮೂಲಕ ಎಡಗೈ ದಾಂಡಿಗನನ್ನು ತಂಡಕ್ಕೆ ಕರೆತರುವಲ್ಲಿ ಆರ್​ಸಿಬಿ ಯಶಸ್ವಿಯಾಗಿದೆ.

ಆಲ್​ರೌಂಡರ್ ಆಗಿರುವ ವೆಂಕಟೇಶ್ ಅಯ್ಯರ್ ಖರೀದಿಗೆ ಕಳೆದ ಸೀಸನ್​ನಲ್ಲೇ ಆರ್​ಸಿಬಿ ಪ್ರಯತ್ನಿಸಿತ್ತು. ಆದರೆ ಐಪಿಎಲ್​ 2026 ರಲ್ಲಿ ಅಯ್ಯರ್ 23.75 ಕೋಟಿ ರೂ.ಗೆ ಕೆಕೆಆರ್ ಪಾಲಾಗಿದ್ದರು. ಈ ಬಾರಿ ಕೇವಲ 7 ಕೋಟಿ ರೂ. ನೀಡುವ ಮೂಲಕ ಎಡಗೈ ದಾಂಡಿಗನನ್ನು ತಂಡಕ್ಕೆ ಕರೆತರುವಲ್ಲಿ ಆರ್​ಸಿಬಿ ಯಶಸ್ವಿಯಾಗಿದೆ.

2 / 7
ಇತ್ತ ವೆಂಕಟೇಶ್ ಅಯ್ಯರ್ ಎಂಟ್ರಿಯೊಂದಿಗೆ ಆರ್​ಸಿಬಿ ತಂಡದ ಪ್ಲೇಯಿಂಗ್ ಇಲೆವೆನ್​ನಲ್ಲಿ ಒಂದು ಬದಲಾವಣೆ ಕಂಡು ಬರುವುದು ಖಚಿತ. ಏಕೆಂದರೆ ಆರ್​ಸಿಬಿ ತಂಡದ ಅಗ್ರ ಕ್ರಮಾಂಕದಲ್ಲಿ ಯಾವುದೇ ಆಲ್​ರೌಂಡರ್​ಗಳಿಲ್ಲ. ಆರಂಭಿಕರಾಗಿ ಕಣಕ್ಕಿಳಿಯುವ ಫಿಲ್ ಸಾಲ್ಟ್ ಹಾಗೂ ವಿರಾಟ್ ಕೊಹ್ಲಿ ಪರಿಪೂರ್ಣ ಬ್ಯಾಟರ್​ಗಳು.

ಇತ್ತ ವೆಂಕಟೇಶ್ ಅಯ್ಯರ್ ಎಂಟ್ರಿಯೊಂದಿಗೆ ಆರ್​ಸಿಬಿ ತಂಡದ ಪ್ಲೇಯಿಂಗ್ ಇಲೆವೆನ್​ನಲ್ಲಿ ಒಂದು ಬದಲಾವಣೆ ಕಂಡು ಬರುವುದು ಖಚಿತ. ಏಕೆಂದರೆ ಆರ್​ಸಿಬಿ ತಂಡದ ಅಗ್ರ ಕ್ರಮಾಂಕದಲ್ಲಿ ಯಾವುದೇ ಆಲ್​ರೌಂಡರ್​ಗಳಿಲ್ಲ. ಆರಂಭಿಕರಾಗಿ ಕಣಕ್ಕಿಳಿಯುವ ಫಿಲ್ ಸಾಲ್ಟ್ ಹಾಗೂ ವಿರಾಟ್ ಕೊಹ್ಲಿ ಪರಿಪೂರ್ಣ ಬ್ಯಾಟರ್​ಗಳು.

3 / 7
ಇನ್ನು ಮೂರನೇ ಮತ್ತು ನಾಲ್ಕನೇ ಕ್ರಮಾಂಕಗಳಲ್ಲಿ ಕಣಕ್ಕಿಳಿಯುವ ದೇವದತ್ ಪಡಿಕ್ಕಲ್ ಹಾಗೂ ರಜತ್ ಪಾಟಿದಾರ್ ಕೂಡ ಬ್ಯಾಟರ್​ಗಳು. ಇತ್ತ ವೆಂಟಕೇಶ್ ಅಯ್ಯರ್ ಕೂಡ ಅಗ್ರ ಕ್ರಮಾಂಕದ ಬ್ಯಾಟ್ಸ್​ಮನ್. ಹೀಗಾಗಿ ಟಾಪ್-4 ನಲ್ಲೇ ಅವರಿಗೆ ಸ್ಥಾನ ನೀಡಬೇಕಾಗುತ್ತದೆ.

ಇನ್ನು ಮೂರನೇ ಮತ್ತು ನಾಲ್ಕನೇ ಕ್ರಮಾಂಕಗಳಲ್ಲಿ ಕಣಕ್ಕಿಳಿಯುವ ದೇವದತ್ ಪಡಿಕ್ಕಲ್ ಹಾಗೂ ರಜತ್ ಪಾಟಿದಾರ್ ಕೂಡ ಬ್ಯಾಟರ್​ಗಳು. ಇತ್ತ ವೆಂಟಕೇಶ್ ಅಯ್ಯರ್ ಕೂಡ ಅಗ್ರ ಕ್ರಮಾಂಕದ ಬ್ಯಾಟ್ಸ್​ಮನ್. ಹೀಗಾಗಿ ಟಾಪ್-4 ನಲ್ಲೇ ಅವರಿಗೆ ಸ್ಥಾನ ನೀಡಬೇಕಾಗುತ್ತದೆ.

4 / 7
ಅತ್ತ ಆರ್​ಸಿಬಿ ತಂಡದ ಆರಂಭಿಕರು ಬದಲಾಗುವ ಸಾಧ್ಯತೆಯಿಲ್ಲ. ಮುಂದಿನ ಸೀಸನ್​ನಲ್ಲೂ ವಿರಾಟ್ ಕೊಹ್ಲಿ ಹಾಗೂ ಫಿಲ್ ಸಾಲ್ಟ್ ಮುಂದುವರೆಯಲಿದ್ದಾರೆ. ಇನ್ನು ನಾಯಕ ರಜತ್ ಪಾಟಿದಾರ್ ಕಣಕ್ಕಿಳಿಯುವುದು ಖಚಿತ. ಇದರ ನಡುವೆ ದೇವದತ್ ಪಡಿಕ್ಕಲ್ ಅವರನ್ನು ಹೊರಗಿಟ್ಟರೆ ಮಾತ್ರ ವೆಂಟಕೇಶ್ ಅಯ್ಯರ್ ಅವರನ್ನು ಕಣಕ್ಕಿಳಿಸಬಹುದು.

ಅತ್ತ ಆರ್​ಸಿಬಿ ತಂಡದ ಆರಂಭಿಕರು ಬದಲಾಗುವ ಸಾಧ್ಯತೆಯಿಲ್ಲ. ಮುಂದಿನ ಸೀಸನ್​ನಲ್ಲೂ ವಿರಾಟ್ ಕೊಹ್ಲಿ ಹಾಗೂ ಫಿಲ್ ಸಾಲ್ಟ್ ಮುಂದುವರೆಯಲಿದ್ದಾರೆ. ಇನ್ನು ನಾಯಕ ರಜತ್ ಪಾಟಿದಾರ್ ಕಣಕ್ಕಿಳಿಯುವುದು ಖಚಿತ. ಇದರ ನಡುವೆ ದೇವದತ್ ಪಡಿಕ್ಕಲ್ ಅವರನ್ನು ಹೊರಗಿಟ್ಟರೆ ಮಾತ್ರ ವೆಂಟಕೇಶ್ ಅಯ್ಯರ್ ಅವರನ್ನು ಕಣಕ್ಕಿಳಿಸಬಹುದು.

5 / 7
ಅಂದರೆ ಆರ್​ಸಿಬಿ ಪರ ವೆಂಕಟೇಶ್ ಅಯ್ಯರ್ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚು. ಇದರಿಂದ ದೇವದತ್ ಪಡಿಕ್ಕಲ್ ಅವಕಾಶ ವಂಚಿತರಾಗುವ ಸಾಧ್ಯತೆಗಳಿವೆ. ಏಕೆಂದರೆ ವೆಂಕಿ ಆಲ್​ರೌಂಡರ್ ಆಟಗಾರ. ಅವರ ಆಯ್ಕೆಯಿಂದ ಹೆಚ್ಚುವರಿ ಬೌಲರ್​ನ ಆಯ್ಕೆ ಕೂಡ ಆರ್​ಸಿಬಿ ತಂಡಕ್ಕೆ ಲಭ್ಯವಾಗಲಿದೆ. ಹೀಗಾಗಿ ವೆಂಕಟೇಶ್ ಅಯ್ಯರ್ ಎಂಟ್ರಿಯಿಂದಾಗಿ ದೇವದತ್ ಪಡಿಕ್ಕಲ್ ಸ್ಥಾನಕ್ಕೆ ಕುತ್ತು ಬರುವುದು ಖಚಿತ ಎಂದೇ ಹೇಳಬಹುದು.

ಅಂದರೆ ಆರ್​ಸಿಬಿ ಪರ ವೆಂಕಟೇಶ್ ಅಯ್ಯರ್ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚು. ಇದರಿಂದ ದೇವದತ್ ಪಡಿಕ್ಕಲ್ ಅವಕಾಶ ವಂಚಿತರಾಗುವ ಸಾಧ್ಯತೆಗಳಿವೆ. ಏಕೆಂದರೆ ವೆಂಕಿ ಆಲ್​ರೌಂಡರ್ ಆಟಗಾರ. ಅವರ ಆಯ್ಕೆಯಿಂದ ಹೆಚ್ಚುವರಿ ಬೌಲರ್​ನ ಆಯ್ಕೆ ಕೂಡ ಆರ್​ಸಿಬಿ ತಂಡಕ್ಕೆ ಲಭ್ಯವಾಗಲಿದೆ. ಹೀಗಾಗಿ ವೆಂಕಟೇಶ್ ಅಯ್ಯರ್ ಎಂಟ್ರಿಯಿಂದಾಗಿ ದೇವದತ್ ಪಡಿಕ್ಕಲ್ ಸ್ಥಾನಕ್ಕೆ ಕುತ್ತು ಬರುವುದು ಖಚಿತ ಎಂದೇ ಹೇಳಬಹುದು.

6 / 7
RCB ತಂಡ: ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಕೃನಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೋ ಶೆಫರ್ಡ್, ಜೇಕಬ್ ಬೆಥೆಲ್, ಜೋಶ್ ಹೇಝಲ್​ವುಡ್, ಯಶ್ ದಯಾಲ್, ಭುವನೇಶ್ವರ್ ಕುಮಾರ್, ನುವಾನ್ ತುಷಾರ, ರಾಸಿಖ್ ದಾರ್, ಅಭಿನಂದನ್ ಸಿಂಗ್, ಸುಯಶ್ ಶರ್ಮಾ, ವೆಂಕಟೇಶ್ ಅಯ್ಯರ್, ಜೋರ್ಡನ್ ಕಾಕ್ಸ್, ಜೇಕಬ್ ಡಫಿ, ವಿಕ್ಸಿ ಒಸ್ತ್ವಾಲ್,  ಕಾನಿಷ್ಕ್ ಚೌಹಾನ್, ಸತ್ವಿಕ್ ದೇಸ್ವಾಲ್, ಮಂಗೇಶ್ ಯಾದವ್, ವಿಹಾನ್ ಮಲ್ಹೋತ್ರ.

RCB ತಂಡ: ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಕೃನಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೋ ಶೆಫರ್ಡ್, ಜೇಕಬ್ ಬೆಥೆಲ್, ಜೋಶ್ ಹೇಝಲ್​ವುಡ್, ಯಶ್ ದಯಾಲ್, ಭುವನೇಶ್ವರ್ ಕುಮಾರ್, ನುವಾನ್ ತುಷಾರ, ರಾಸಿಖ್ ದಾರ್, ಅಭಿನಂದನ್ ಸಿಂಗ್, ಸುಯಶ್ ಶರ್ಮಾ, ವೆಂಕಟೇಶ್ ಅಯ್ಯರ್, ಜೋರ್ಡನ್ ಕಾಕ್ಸ್, ಜೇಕಬ್ ಡಫಿ, ವಿಕ್ಸಿ ಒಸ್ತ್ವಾಲ್,  ಕಾನಿಷ್ಕ್ ಚೌಹಾನ್, ಸತ್ವಿಕ್ ದೇಸ್ವಾಲ್, ಮಂಗೇಶ್ ಯಾದವ್, ವಿಹಾನ್ ಮಲ್ಹೋತ್ರ.

7 / 7

Published On - 11:55 am, Wed, 17 December 25

ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?