AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ವೆಂಕಿ ಎಂಟ್ರಿಯಿಂದ ಕನ್ನಡಿಗನ ಸ್ಥಾನಕ್ಕೆ ಕುತ್ತು..!

IPL 2026 RCB Squad: ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಐಪಿಎಲ್ 2026ರ ಹರಾಜಿಗೂ ಮುನ್ನ 17 ಆಟಗಾರರನ್ನು ರಿಟೈನ್ ಮಾಡಿ ಕೊಂಡಿದ್ದರು. ಇದೀಗ ಮಿನಿ ಹರಾಜಿನ ಮೂಲಕ ಒಟ್ಟು 8 ಆಟಗಾರರನ್ನು ಖರೀದಿಸಿದೆ. ಈ ಮೂಲಕ ಐಪಿಎಲ್ ಸೀಸನ್-19 ಗಾಗಿ 25 ಸದಸ್ಯರ ಬಳಗವನ್ನು ರೂಪಿಸಿದೆ.

ಝಾಹಿರ್ ಯೂಸುಫ್
|

Updated on:Dec 17, 2025 | 11:59 AM

Share
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಮಧ್ಯಪ್ರದೇಶದ ಆಲ್​ರೌಂಡರ್ ವೆಂಕಟೇಶ್ ಅಯ್ಯರ್ (Venkatesh Iyer) ಎಂಟ್ರಿ ಕೊಟ್ಟಿದ್ದಾರೆ. ಅಬುಧಾಬಿಯಲ್ಲಿ ಮಂಗಳವಾರ (ಡಿ.16) ನಡೆದ ಐಪಿಎಲ್ ಮಿನಿ ಹರಾಜಿನ ಮೂಲಕ ಆರ್​ಸಿಬಿ ವೆಂಕಟೇಶ್ ಅವರನ್ನು 7 ಕೋಟಿ ರೂ.ಗೆ ಖರೀದಿಸಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಮಧ್ಯಪ್ರದೇಶದ ಆಲ್​ರೌಂಡರ್ ವೆಂಕಟೇಶ್ ಅಯ್ಯರ್ (Venkatesh Iyer) ಎಂಟ್ರಿ ಕೊಟ್ಟಿದ್ದಾರೆ. ಅಬುಧಾಬಿಯಲ್ಲಿ ಮಂಗಳವಾರ (ಡಿ.16) ನಡೆದ ಐಪಿಎಲ್ ಮಿನಿ ಹರಾಜಿನ ಮೂಲಕ ಆರ್​ಸಿಬಿ ವೆಂಕಟೇಶ್ ಅವರನ್ನು 7 ಕೋಟಿ ರೂ.ಗೆ ಖರೀದಿಸಿದೆ.

1 / 7
ಆಲ್​ರೌಂಡರ್ ಆಗಿರುವ ವೆಂಕಟೇಶ್ ಅಯ್ಯರ್ ಖರೀದಿಗೆ ಕಳೆದ ಸೀಸನ್​ನಲ್ಲೇ ಆರ್​ಸಿಬಿ ಪ್ರಯತ್ನಿಸಿತ್ತು. ಆದರೆ ಐಪಿಎಲ್​ 2026 ರಲ್ಲಿ ಅಯ್ಯರ್ 23.75 ಕೋಟಿ ರೂ.ಗೆ ಕೆಕೆಆರ್ ಪಾಲಾಗಿದ್ದರು. ಈ ಬಾರಿ ಕೇವಲ 7 ಕೋಟಿ ರೂ. ನೀಡುವ ಮೂಲಕ ಎಡಗೈ ದಾಂಡಿಗನನ್ನು ತಂಡಕ್ಕೆ ಕರೆತರುವಲ್ಲಿ ಆರ್​ಸಿಬಿ ಯಶಸ್ವಿಯಾಗಿದೆ.

ಆಲ್​ರೌಂಡರ್ ಆಗಿರುವ ವೆಂಕಟೇಶ್ ಅಯ್ಯರ್ ಖರೀದಿಗೆ ಕಳೆದ ಸೀಸನ್​ನಲ್ಲೇ ಆರ್​ಸಿಬಿ ಪ್ರಯತ್ನಿಸಿತ್ತು. ಆದರೆ ಐಪಿಎಲ್​ 2026 ರಲ್ಲಿ ಅಯ್ಯರ್ 23.75 ಕೋಟಿ ರೂ.ಗೆ ಕೆಕೆಆರ್ ಪಾಲಾಗಿದ್ದರು. ಈ ಬಾರಿ ಕೇವಲ 7 ಕೋಟಿ ರೂ. ನೀಡುವ ಮೂಲಕ ಎಡಗೈ ದಾಂಡಿಗನನ್ನು ತಂಡಕ್ಕೆ ಕರೆತರುವಲ್ಲಿ ಆರ್​ಸಿಬಿ ಯಶಸ್ವಿಯಾಗಿದೆ.

2 / 7
ಇತ್ತ ವೆಂಕಟೇಶ್ ಅಯ್ಯರ್ ಎಂಟ್ರಿಯೊಂದಿಗೆ ಆರ್​ಸಿಬಿ ತಂಡದ ಪ್ಲೇಯಿಂಗ್ ಇಲೆವೆನ್​ನಲ್ಲಿ ಒಂದು ಬದಲಾವಣೆ ಕಂಡು ಬರುವುದು ಖಚಿತ. ಏಕೆಂದರೆ ಆರ್​ಸಿಬಿ ತಂಡದ ಅಗ್ರ ಕ್ರಮಾಂಕದಲ್ಲಿ ಯಾವುದೇ ಆಲ್​ರೌಂಡರ್​ಗಳಿಲ್ಲ. ಆರಂಭಿಕರಾಗಿ ಕಣಕ್ಕಿಳಿಯುವ ಫಿಲ್ ಸಾಲ್ಟ್ ಹಾಗೂ ವಿರಾಟ್ ಕೊಹ್ಲಿ ಪರಿಪೂರ್ಣ ಬ್ಯಾಟರ್​ಗಳು.

ಇತ್ತ ವೆಂಕಟೇಶ್ ಅಯ್ಯರ್ ಎಂಟ್ರಿಯೊಂದಿಗೆ ಆರ್​ಸಿಬಿ ತಂಡದ ಪ್ಲೇಯಿಂಗ್ ಇಲೆವೆನ್​ನಲ್ಲಿ ಒಂದು ಬದಲಾವಣೆ ಕಂಡು ಬರುವುದು ಖಚಿತ. ಏಕೆಂದರೆ ಆರ್​ಸಿಬಿ ತಂಡದ ಅಗ್ರ ಕ್ರಮಾಂಕದಲ್ಲಿ ಯಾವುದೇ ಆಲ್​ರೌಂಡರ್​ಗಳಿಲ್ಲ. ಆರಂಭಿಕರಾಗಿ ಕಣಕ್ಕಿಳಿಯುವ ಫಿಲ್ ಸಾಲ್ಟ್ ಹಾಗೂ ವಿರಾಟ್ ಕೊಹ್ಲಿ ಪರಿಪೂರ್ಣ ಬ್ಯಾಟರ್​ಗಳು.

3 / 7
ಇನ್ನು ಮೂರನೇ ಮತ್ತು ನಾಲ್ಕನೇ ಕ್ರಮಾಂಕಗಳಲ್ಲಿ ಕಣಕ್ಕಿಳಿಯುವ ದೇವದತ್ ಪಡಿಕ್ಕಲ್ ಹಾಗೂ ರಜತ್ ಪಾಟಿದಾರ್ ಕೂಡ ಬ್ಯಾಟರ್​ಗಳು. ಇತ್ತ ವೆಂಟಕೇಶ್ ಅಯ್ಯರ್ ಕೂಡ ಅಗ್ರ ಕ್ರಮಾಂಕದ ಬ್ಯಾಟ್ಸ್​ಮನ್. ಹೀಗಾಗಿ ಟಾಪ್-4 ನಲ್ಲೇ ಅವರಿಗೆ ಸ್ಥಾನ ನೀಡಬೇಕಾಗುತ್ತದೆ.

ಇನ್ನು ಮೂರನೇ ಮತ್ತು ನಾಲ್ಕನೇ ಕ್ರಮಾಂಕಗಳಲ್ಲಿ ಕಣಕ್ಕಿಳಿಯುವ ದೇವದತ್ ಪಡಿಕ್ಕಲ್ ಹಾಗೂ ರಜತ್ ಪಾಟಿದಾರ್ ಕೂಡ ಬ್ಯಾಟರ್​ಗಳು. ಇತ್ತ ವೆಂಟಕೇಶ್ ಅಯ್ಯರ್ ಕೂಡ ಅಗ್ರ ಕ್ರಮಾಂಕದ ಬ್ಯಾಟ್ಸ್​ಮನ್. ಹೀಗಾಗಿ ಟಾಪ್-4 ನಲ್ಲೇ ಅವರಿಗೆ ಸ್ಥಾನ ನೀಡಬೇಕಾಗುತ್ತದೆ.

4 / 7
ಅತ್ತ ಆರ್​ಸಿಬಿ ತಂಡದ ಆರಂಭಿಕರು ಬದಲಾಗುವ ಸಾಧ್ಯತೆಯಿಲ್ಲ. ಮುಂದಿನ ಸೀಸನ್​ನಲ್ಲೂ ವಿರಾಟ್ ಕೊಹ್ಲಿ ಹಾಗೂ ಫಿಲ್ ಸಾಲ್ಟ್ ಮುಂದುವರೆಯಲಿದ್ದಾರೆ. ಇನ್ನು ನಾಯಕ ರಜತ್ ಪಾಟಿದಾರ್ ಕಣಕ್ಕಿಳಿಯುವುದು ಖಚಿತ. ಇದರ ನಡುವೆ ದೇವದತ್ ಪಡಿಕ್ಕಲ್ ಅವರನ್ನು ಹೊರಗಿಟ್ಟರೆ ಮಾತ್ರ ವೆಂಟಕೇಶ್ ಅಯ್ಯರ್ ಅವರನ್ನು ಕಣಕ್ಕಿಳಿಸಬಹುದು.

ಅತ್ತ ಆರ್​ಸಿಬಿ ತಂಡದ ಆರಂಭಿಕರು ಬದಲಾಗುವ ಸಾಧ್ಯತೆಯಿಲ್ಲ. ಮುಂದಿನ ಸೀಸನ್​ನಲ್ಲೂ ವಿರಾಟ್ ಕೊಹ್ಲಿ ಹಾಗೂ ಫಿಲ್ ಸಾಲ್ಟ್ ಮುಂದುವರೆಯಲಿದ್ದಾರೆ. ಇನ್ನು ನಾಯಕ ರಜತ್ ಪಾಟಿದಾರ್ ಕಣಕ್ಕಿಳಿಯುವುದು ಖಚಿತ. ಇದರ ನಡುವೆ ದೇವದತ್ ಪಡಿಕ್ಕಲ್ ಅವರನ್ನು ಹೊರಗಿಟ್ಟರೆ ಮಾತ್ರ ವೆಂಟಕೇಶ್ ಅಯ್ಯರ್ ಅವರನ್ನು ಕಣಕ್ಕಿಳಿಸಬಹುದು.

5 / 7
ಅಂದರೆ ಆರ್​ಸಿಬಿ ಪರ ವೆಂಕಟೇಶ್ ಅಯ್ಯರ್ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚು. ಇದರಿಂದ ದೇವದತ್ ಪಡಿಕ್ಕಲ್ ಅವಕಾಶ ವಂಚಿತರಾಗುವ ಸಾಧ್ಯತೆಗಳಿವೆ. ಏಕೆಂದರೆ ವೆಂಕಿ ಆಲ್​ರೌಂಡರ್ ಆಟಗಾರ. ಅವರ ಆಯ್ಕೆಯಿಂದ ಹೆಚ್ಚುವರಿ ಬೌಲರ್​ನ ಆಯ್ಕೆ ಕೂಡ ಆರ್​ಸಿಬಿ ತಂಡಕ್ಕೆ ಲಭ್ಯವಾಗಲಿದೆ. ಹೀಗಾಗಿ ವೆಂಕಟೇಶ್ ಅಯ್ಯರ್ ಎಂಟ್ರಿಯಿಂದಾಗಿ ದೇವದತ್ ಪಡಿಕ್ಕಲ್ ಸ್ಥಾನಕ್ಕೆ ಕುತ್ತು ಬರುವುದು ಖಚಿತ ಎಂದೇ ಹೇಳಬಹುದು.

ಅಂದರೆ ಆರ್​ಸಿಬಿ ಪರ ವೆಂಕಟೇಶ್ ಅಯ್ಯರ್ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚು. ಇದರಿಂದ ದೇವದತ್ ಪಡಿಕ್ಕಲ್ ಅವಕಾಶ ವಂಚಿತರಾಗುವ ಸಾಧ್ಯತೆಗಳಿವೆ. ಏಕೆಂದರೆ ವೆಂಕಿ ಆಲ್​ರೌಂಡರ್ ಆಟಗಾರ. ಅವರ ಆಯ್ಕೆಯಿಂದ ಹೆಚ್ಚುವರಿ ಬೌಲರ್​ನ ಆಯ್ಕೆ ಕೂಡ ಆರ್​ಸಿಬಿ ತಂಡಕ್ಕೆ ಲಭ್ಯವಾಗಲಿದೆ. ಹೀಗಾಗಿ ವೆಂಕಟೇಶ್ ಅಯ್ಯರ್ ಎಂಟ್ರಿಯಿಂದಾಗಿ ದೇವದತ್ ಪಡಿಕ್ಕಲ್ ಸ್ಥಾನಕ್ಕೆ ಕುತ್ತು ಬರುವುದು ಖಚಿತ ಎಂದೇ ಹೇಳಬಹುದು.

6 / 7
RCB ತಂಡ: ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಕೃನಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೋ ಶೆಫರ್ಡ್, ಜೇಕಬ್ ಬೆಥೆಲ್, ಜೋಶ್ ಹೇಝಲ್​ವುಡ್, ಯಶ್ ದಯಾಲ್, ಭುವನೇಶ್ವರ್ ಕುಮಾರ್, ನುವಾನ್ ತುಷಾರ, ರಾಸಿಖ್ ದಾರ್, ಅಭಿನಂದನ್ ಸಿಂಗ್, ಸುಯಶ್ ಶರ್ಮಾ, ವೆಂಕಟೇಶ್ ಅಯ್ಯರ್, ಜೋರ್ಡನ್ ಕಾಕ್ಸ್, ಜೇಕಬ್ ಡಫಿ, ವಿಕ್ಸಿ ಒಸ್ತ್ವಾಲ್,  ಕಾನಿಷ್ಕ್ ಚೌಹಾನ್, ಸತ್ವಿಕ್ ದೇಸ್ವಾಲ್, ಮಂಗೇಶ್ ಯಾದವ್, ವಿಹಾನ್ ಮಲ್ಹೋತ್ರ.

RCB ತಂಡ: ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಕೃನಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೋ ಶೆಫರ್ಡ್, ಜೇಕಬ್ ಬೆಥೆಲ್, ಜೋಶ್ ಹೇಝಲ್​ವುಡ್, ಯಶ್ ದಯಾಲ್, ಭುವನೇಶ್ವರ್ ಕುಮಾರ್, ನುವಾನ್ ತುಷಾರ, ರಾಸಿಖ್ ದಾರ್, ಅಭಿನಂದನ್ ಸಿಂಗ್, ಸುಯಶ್ ಶರ್ಮಾ, ವೆಂಕಟೇಶ್ ಅಯ್ಯರ್, ಜೋರ್ಡನ್ ಕಾಕ್ಸ್, ಜೇಕಬ್ ಡಫಿ, ವಿಕ್ಸಿ ಒಸ್ತ್ವಾಲ್,  ಕಾನಿಷ್ಕ್ ಚೌಹಾನ್, ಸತ್ವಿಕ್ ದೇಸ್ವಾಲ್, ಮಂಗೇಶ್ ಯಾದವ್, ವಿಹಾನ್ ಮಲ್ಹೋತ್ರ.

7 / 7

Published On - 11:55 am, Wed, 17 December 25

ಎಐನಿಂದಾಗುವ ಅಪಾಯಗಳ ತಗ್ಗಿಸುವ ಉಪಾಯ ಕಂಡುಕೊಳ್ಳಬೇಕು: ಅಶ್ವಿನಿ ವೈಷ್ಣವ್
ಎಐನಿಂದಾಗುವ ಅಪಾಯಗಳ ತಗ್ಗಿಸುವ ಉಪಾಯ ಕಂಡುಕೊಳ್ಳಬೇಕು: ಅಶ್ವಿನಿ ವೈಷ್ಣವ್
ಎಐ ಇಂಪ್ಯಾಕ್ಟ್​ ಶೃಂಗಸಭೆ: ವಿಶ್ವನಾಯಕರೊಂದಿಗೆ ಪ್ರಧಾನಿ ಮೋದಿ ಮಾತುಕತೆ
ಎಐ ಇಂಪ್ಯಾಕ್ಟ್​ ಶೃಂಗಸಭೆ: ವಿಶ್ವನಾಯಕರೊಂದಿಗೆ ಪ್ರಧಾನಿ ಮೋದಿ ಮಾತುಕತೆ
ಬೆಂಗಳೂರಿನಲ್ಲಿ ಕಸದ ಸಮಸ್ಯೆ: ನಿಂತಲ್ಲೇ ನಿಂತ ತ್ಯಾಜ್ಯ ಸಂಗ್ರಹಣೆ ವಾಹನಗಳು
ಬೆಂಗಳೂರಿನಲ್ಲಿ ಕಸದ ಸಮಸ್ಯೆ: ನಿಂತಲ್ಲೇ ನಿಂತ ತ್ಯಾಜ್ಯ ಸಂಗ್ರಹಣೆ ವಾಹನಗಳು
KSRTC ಬಸ್​​ನ ಟಿಕೆಟ್ ಮೆಷಿನ್​​ನನ್ನೇ ಕದ್ದೊಯ್ದ ಕಳ್ಳ!
KSRTC ಬಸ್​​ನ ಟಿಕೆಟ್ ಮೆಷಿನ್​​ನನ್ನೇ ಕದ್ದೊಯ್ದ ಕಳ್ಳ!
ಮೆಜೆಸ್ಟಿಕ್ ರೈಲ್ವೆ ಪಾರ್ಕಿಂಗ್ ಲಾಟ್‌ನಲ್ಲಿ ಕಾರಿಗೆ ಬೆಂಕಿ
ಮೆಜೆಸ್ಟಿಕ್ ರೈಲ್ವೆ ಪಾರ್ಕಿಂಗ್ ಲಾಟ್‌ನಲ್ಲಿ ಕಾರಿಗೆ ಬೆಂಕಿ
‘ಯಾವನು ಕೇಳಿದ ನಿಮ್ಮ ಕಮೆಂಟ್?’; ರವಿಚಂದ್ರನ್ ಗರಂ ಆಗಿದ್ದು ಯಾರ ಬಗ್ಗೆ?
‘ಯಾವನು ಕೇಳಿದ ನಿಮ್ಮ ಕಮೆಂಟ್?’; ರವಿಚಂದ್ರನ್ ಗರಂ ಆಗಿದ್ದು ಯಾರ ಬಗ್ಗೆ?
ವೇಗವಾಗಿ ಬಂದು ಕಾಲುವೆಗೆ ಉರುಳಿದ ಕಾರು
ವೇಗವಾಗಿ ಬಂದು ಕಾಲುವೆಗೆ ಉರುಳಿದ ಕಾರು
ವಧುವಿನ ಮೇಲೆ ಹೂವಿನಂತೆ ಬರೋಬ್ಬರಿ 8 ಕೋಟಿ ರೂ. ನಗದು ಚೆಲ್ಲಿದ ವರ
ವಧುವಿನ ಮೇಲೆ ಹೂವಿನಂತೆ ಬರೋಬ್ಬರಿ 8 ಕೋಟಿ ರೂ. ನಗದು ಚೆಲ್ಲಿದ ವರ
ಮಕ್ಕಳು ಮಾತನಾಡುವಾಗ ತೊದಲುತ್ತಿದ್ರೆ ಜ್ಯೋತಿಷ್ಯ ಪ್ರಕಾರ ಇದೇ ಕಾರಣ
ಮಕ್ಕಳು ಮಾತನಾಡುವಾಗ ತೊದಲುತ್ತಿದ್ರೆ ಜ್ಯೋತಿಷ್ಯ ಪ್ರಕಾರ ಇದೇ ಕಾರಣ
ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು
ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು