AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: RCBಗೆ ವಿದಾಯ ಹೇಳಲು ವಿರಾಟ್ ಕೊಹ್ಲಿ ಪ್ಲ್ಯಾನ್?

Virat Kohli: ಇಂಡಿಯನ್ ಪ್ರೀಮಿಯರ್ ಲೀಗ್ 2025 ರ ಮೂಲಕ ವಿರಾಟ್ ಕೊಹ್ಲಿ ತಮ್ಮ 18 ವರ್ಷಗಳ ಟ್ರೋಫಿ ಎತ್ತಿ ಹಿಡಿಯುವ ಕನಸನ್ನು ಈಡೇರಿಸಿಕೊಂಡಿದ್ದಾರೆ. ತಮ್ಮ ಬಹುಕಾಲದ ಆಸೆಯನ್ನು ಈಡೇರಿಸಿಕೊಂಡಿರುವ ಕಿಂಗ್ ಕೊಹ್ಲಿ ಇದೀಗ ಚುಟುಕು ಕ್ರಿಕೆಟ್ ಕೆರಿಯರ್ ಅಂತ್ಯಗೊಳಿಸಲು ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಝಾಹಿರ್ ಯೂಸುಫ್
|

Updated on: Oct 13, 2025 | 9:28 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಸಿದ್ಧತೆಗಳ ನಡುವೆಯೇ ವಿರಾಟ್ ಕೊಹ್ಲಿ (Virat Kohli) ಐಪಿಎಲ್​ಗೆ ವಿದಾಯ ಹೇಳುವ ಸಾಧ್ಯತೆಯಿದೆ ಎಂಬ ಸುದ್ದಿಯೊಂದು ಹೊರಬಿದ್ದಿದೆ. ಅಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಗುಡ್ ಬೈ ಹೇಳುವ ಮೂಲಕ ಕಿಂಗ್ ಕೊಹ್ಲಿ ಐಪಿಎಲ್​ ಕೆರಿಯರ್ ಅಂತ್ಯಗೊಳಿಸಲು ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ.

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಸಿದ್ಧತೆಗಳ ನಡುವೆಯೇ ವಿರಾಟ್ ಕೊಹ್ಲಿ (Virat Kohli) ಐಪಿಎಲ್​ಗೆ ವಿದಾಯ ಹೇಳುವ ಸಾಧ್ಯತೆಯಿದೆ ಎಂಬ ಸುದ್ದಿಯೊಂದು ಹೊರಬಿದ್ದಿದೆ. ಅಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಗುಡ್ ಬೈ ಹೇಳುವ ಮೂಲಕ ಕಿಂಗ್ ಕೊಹ್ಲಿ ಐಪಿಎಲ್​ ಕೆರಿಯರ್ ಅಂತ್ಯಗೊಳಿಸಲು ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ.

1 / 5
ಐಪಿಎಲ್ ಸೀಸನ್-19 ಗೂ ಮುಂಚಿತವಾಗಿ ವಿರಾಟ್ ಕೊಹ್ಲಿ ಪ್ರಮುಖ ಕಂಪನಿಯೊಂದಿಗೆ ತಮ್ಮ ಒಪ್ಪಂದವನ್ನು ನವೀಕರಿಸಲು ನಿರಾಕರಿಸಿದ್ದಾರೆ. ಈ ಒಪ್ಪಂದವನ್ನು ಐಪಿಎಲ್ 2026 ರ ಮೊದಲು ನವೀಕರಿಸಬೇಕಿತ್ತು. ಆದರೆ ಆರ್​ಸಿಬಿ ಸ್ಟಾರ್ ಆಟಗಾರ ಹಾಗೆ ಮಾಡದಿರುವುದು ಇದೀಗ ಅನುಮಾನಕ್ಕೆ ಕಾರಣವಾಗಿದೆ.

ಐಪಿಎಲ್ ಸೀಸನ್-19 ಗೂ ಮುಂಚಿತವಾಗಿ ವಿರಾಟ್ ಕೊಹ್ಲಿ ಪ್ರಮುಖ ಕಂಪನಿಯೊಂದಿಗೆ ತಮ್ಮ ಒಪ್ಪಂದವನ್ನು ನವೀಕರಿಸಲು ನಿರಾಕರಿಸಿದ್ದಾರೆ. ಈ ಒಪ್ಪಂದವನ್ನು ಐಪಿಎಲ್ 2026 ರ ಮೊದಲು ನವೀಕರಿಸಬೇಕಿತ್ತು. ಆದರೆ ಆರ್​ಸಿಬಿ ಸ್ಟಾರ್ ಆಟಗಾರ ಹಾಗೆ ಮಾಡದಿರುವುದು ಇದೀಗ ಅನುಮಾನಕ್ಕೆ ಕಾರಣವಾಗಿದೆ.

2 / 5
ಆರ್​ಸಿಬಿ ಜೊತೆ ಸಂಪರ್ಕ ಹೊಂದಿರುವ ಕಂಪೆನಿಯೊಂದರ ಜೊತೆ ವಿರಾಟ್ ಕೊಹ್ಲಿ ಹೊಸ ಒಪ್ಪಂದವನ್ನು ನವೀಕರಿಸಿಲ್ಲ. ಕೊಹ್ಲಿಯ ಈ ನಡೆಗೆ ಕಾರಣವೇನು ಎಂಬುದು ಇನ್ನೂ ಸಹ ಬಹಿರಂಗವಾಗಿಲ್ಲ. ಆದರೆ ಇಂತಹದೊಂದು ನಿರ್ಧಾರವು ಇದೀಗ ಎಲ್ಲರನ್ನು ಆಶ್ಚರ್ಯಗೊಳಿಸಿದೆ.

ಆರ್​ಸಿಬಿ ಜೊತೆ ಸಂಪರ್ಕ ಹೊಂದಿರುವ ಕಂಪೆನಿಯೊಂದರ ಜೊತೆ ವಿರಾಟ್ ಕೊಹ್ಲಿ ಹೊಸ ಒಪ್ಪಂದವನ್ನು ನವೀಕರಿಸಿಲ್ಲ. ಕೊಹ್ಲಿಯ ಈ ನಡೆಗೆ ಕಾರಣವೇನು ಎಂಬುದು ಇನ್ನೂ ಸಹ ಬಹಿರಂಗವಾಗಿಲ್ಲ. ಆದರೆ ಇಂತಹದೊಂದು ನಿರ್ಧಾರವು ಇದೀಗ ಎಲ್ಲರನ್ನು ಆಶ್ಚರ್ಯಗೊಳಿಸಿದೆ.

3 / 5
ಅಂದರೆ ವಿರಾಟ್ ಕೊಹ್ಲಿ ನಿವೃತ್ತಿಯ ಬಗ್ಗೆ ಯೋಚಿಸುತ್ತಿದ್ದು, ಹೀಗಾಗಿಯೇ ಪ್ರಮುಖ ಕಂಪೆನಿ ಜೊತೆ ಒಪ್ಪಂದ ಮಾಡಿಕೊಂಡಿಲ್ಲ ಎನ್ನಲಾಗುತ್ತಿದೆ. ಈಗಾಗಲೇ ಟೆಸ್ಟ್ ಹಾಗೂ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿರುವ ಕೊಹ್ಲಿ ಸದ್ಯ ಏಕದಿನ ಕ್ರಿಕೆಟ್​ನಲ್ಲಿ ಮಾತ್ರ ಮುಂದುವರೆಯುತ್ತಿದ್ದಾರೆ.

Vk (17)

4 / 5
ಮುಂಬರುವ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಬಳಿಕ ಕಿಂಗ್ ಕೊಹ್ಲಿ ಒಡಿಐ ಕ್ರಿಕೆಟ್​ಗೂ ವಿದಾಯ ಹೇಳಲಿದ್ದಾರೆ ಎನ್ನಲಾಗುತ್ತಿದೆ. ಇದರ ನಡುವೆ ಐಪಿಎಲ್​ಗೂ ಗುಡ್ ಬೈ ಹೇಳುವ ಇರಾದೆಯಲ್ಲಿದ್ದಾರೆ ಎಂಬ ಮಾತುಗಳು ಕೂಡ ಕೇಳಿ ಬರುತ್ತಿದೆ. ಅಂದರೆ ಈ ಬಾರಿಯ ಐಪಿಎಲ್ ಮೂಲಕ ವಿರಾಟ್ ಕೊಹ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದೊಂದಿಗಿನ 19 ವರ್ಷಗಳ ಪಯಣವನ್ನು ಅಂತ್ಯಗೊಳಿಸುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.

ಮುಂಬರುವ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಬಳಿಕ ಕಿಂಗ್ ಕೊಹ್ಲಿ ಒಡಿಐ ಕ್ರಿಕೆಟ್​ಗೂ ವಿದಾಯ ಹೇಳಲಿದ್ದಾರೆ ಎನ್ನಲಾಗುತ್ತಿದೆ. ಇದರ ನಡುವೆ ಐಪಿಎಲ್​ಗೂ ಗುಡ್ ಬೈ ಹೇಳುವ ಇರಾದೆಯಲ್ಲಿದ್ದಾರೆ ಎಂಬ ಮಾತುಗಳು ಕೂಡ ಕೇಳಿ ಬರುತ್ತಿದೆ. ಅಂದರೆ ಈ ಬಾರಿಯ ಐಪಿಎಲ್ ಮೂಲಕ ವಿರಾಟ್ ಕೊಹ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದೊಂದಿಗಿನ 19 ವರ್ಷಗಳ ಪಯಣವನ್ನು ಅಂತ್ಯಗೊಳಿಸುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.

5 / 5
Follow Us
ಶಾಸಕರ ಅಸಮಾಧಾನದ ನಡುವೆ ದೆಹಲಿಗೆ ಹಾರಿದ ಸಿಎಂ ಡಿ.ಕೆ ಶಿವಕುಮಾರ್
ಶಾಸಕರ ಅಸಮಾಧಾನದ ನಡುವೆ ದೆಹಲಿಗೆ ಹಾರಿದ ಸಿಎಂ ಡಿ.ಕೆ ಶಿವಕುಮಾರ್
ಚಲಿಸುತ್ತಿದ್ದಾಗಲೇ ಟೈರ್ ಬ್ಲಾಸ್ಟ್: ಗದ್ದೆಗೆ ನುಗ್ಗಿದ KSRTC ಬಸ್​​
ಚಲಿಸುತ್ತಿದ್ದಾಗಲೇ ಟೈರ್ ಬ್ಲಾಸ್ಟ್: ಗದ್ದೆಗೆ ನುಗ್ಗಿದ KSRTC ಬಸ್​​
ಸಚಿವರ ಪಟ್ಟಿ ಬದಲಾಗಿದ್ದು ಕಾಂಗ್ರೆಸ್ ಇತಿಹಾಸದಲ್ಲಿ ಇದೇ ಮೊದಲು: ರಾಜಣ್ಣ
ಸಚಿವರ ಪಟ್ಟಿ ಬದಲಾಗಿದ್ದು ಕಾಂಗ್ರೆಸ್ ಇತಿಹಾಸದಲ್ಲಿ ಇದೇ ಮೊದಲು: ರಾಜಣ್ಣ
ಯತೀಂದ್ರಗೆ ಮತ್ತೊಂದು ಜಾಕ್​​ ಪಾಟ್, ಸಿದ್ದರಾಮಯ್ಯ ಮುನಿಸು ತಣಿಸುವ ಪ್ರಯತ್ನ
ಯತೀಂದ್ರಗೆ ಮತ್ತೊಂದು ಜಾಕ್​​ ಪಾಟ್, ಸಿದ್ದರಾಮಯ್ಯ ಮುನಿಸು ತಣಿಸುವ ಪ್ರಯತ್ನ
‘ಖಾಕಿ’ ಧರಿಸಿದರೆ ಜೋಶ್ ಬರುತ್ತೆ: ಪೊಲೀಸರ ಬಗ್ಗೆ ಡಾಲಿ ಧನಂಜಯ್ ಮಾತು
‘ಖಾಕಿ’ ಧರಿಸಿದರೆ ಜೋಶ್ ಬರುತ್ತೆ: ಪೊಲೀಸರ ಬಗ್ಗೆ ಡಾಲಿ ಧನಂಜಯ್ ಮಾತು
GBDA ಯೋಜನೆ ಕುರಿತು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂದೇಶ
GBDA ಯೋಜನೆ ಕುರಿತು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂದೇಶ
‘ನನ್ನ ಕನಸನ್ನು ಹೆಗಲ ಮೇಲೆ ಹೊತ್ತುಕೊಂಡ ಯಶ್: ಗೀತು ಮೋಹನ್​​ದಾಸ್ ಭಾವುಕ
‘ನನ್ನ ಕನಸನ್ನು ಹೆಗಲ ಮೇಲೆ ಹೊತ್ತುಕೊಂಡ ಯಶ್: ಗೀತು ಮೋಹನ್​​ದಾಸ್ ಭಾವುಕ
ಟೆಕ್ಕಿ ಅದ್ವೈತ್ ಶಿವಗಂಗೆ ಬೆಟ್ಟ ಏರುತ್ತಿರುವ ಸಿಸಿಟಿವಿ ದೃಶ್ಯಾವಳಿ ಪತ್ತೆ!
ಟೆಕ್ಕಿ ಅದ್ವೈತ್ ಶಿವಗಂಗೆ ಬೆಟ್ಟ ಏರುತ್ತಿರುವ ಸಿಸಿಟಿವಿ ದೃಶ್ಯಾವಳಿ ಪತ್ತೆ!
ಆಗಸ್ಟ್ 10 ರಿಂದ 16 ರವರೆಗಿನ ದ್ವಾದಶ ರಾಶಿಗಳ ಸಂಪೂರ್ಣ ವಾರಭವಿಷ್ಯ ಇಲ್ಲಿದೆ
ಆಗಸ್ಟ್ 10 ರಿಂದ 16 ರವರೆಗಿನ ದ್ವಾದಶ ರಾಶಿಗಳ ಸಂಪೂರ್ಣ ವಾರಭವಿಷ್ಯ ಇಲ್ಲಿದೆ
ಚಾಮುಂಡೇಶ್ವರಿ ದರ್ಶನ ಪಡೆದ ಕೇಂದ್ರ ಸಚಿವ ಹೆಚ್​​ಡಿಕೆ
ಚಾಮುಂಡೇಶ್ವರಿ ದರ್ಶನ ಪಡೆದ ಕೇಂದ್ರ ಸಚಿವ ಹೆಚ್​​ಡಿಕೆ