AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL Auction 2025: ಕಡಿಮೆ ಮೊತ್ತಕ್ಕೆ ಆರು ಆಟಗಾರರನ್ನು ಖರೀದಿಸಿದ ಆರ್​ಸಿಬಿ

RCB IPL Auction 2025: ಐಪಿಎಲ್ ಮೆಗಾ ಹರಾಜಿನ ಮೊದಲ ದಿನ ಆರ್​ಸಿಬಿ ಒಟ್ಟು 6 ಆಟಗಾರರನ್ನು ಖರೀದಿಸಿತು. ಇದರಲ್ಲಿ ಮೂವರು ಆಟಗಾರರು ವಿದೇಶಿಗರಾದರೆ... ಉಳಿದ ಮೂವರು ಭಾರತೀಯ ಆಟಗಾರರಾಗಿದ್ದಾರೆ. ಬೇರೆ ತಂಡಗಳಿಗೆ ಹೊಲಿಸಿದರೆ, ಆರ್​ಸಿಬಿ ಯಾವುದೇ ಆಟಗಾರನಿಗೂ ದುಬಾರಿ ಬೆಲೆ ನೀಡಲಿಲ್ಲ.

ಪೃಥ್ವಿಶಂಕರ
|

Updated on: Nov 24, 2024 | 11:25 PM

Share
ಐಪಿಎಲ್ ಮೆಗಾ ಹರಾಜಿನ ಮೊದಲ ದಿನ ಆರ್​ಸಿಬಿ ಒಟ್ಟು 6 ಆಟಗಾರರನ್ನು ಖರೀದಿಸಿತು. ಇದರಲ್ಲಿ ಮೂವರು ಆಟಗಾರರು ವಿದೇಶಿಗರಾದರೆ... ಉಳಿದ ಮೂವರು ಭಾರತೀಯ ಆಟಗಾರರಾಗಿದ್ದಾರೆ. ಬೇರೆ ತಂಡಗಳಿಗೆ ಹೊಲಿಸಿದರೆ, ಆರ್​ಸಿಬಿ ಯಾವುದೇ ಆಟಗಾರನಿಗೂ ದುಬಾರಿ ಬೆಲೆ ನೀಡಲಿಲ್ಲ.

ಐಪಿಎಲ್ ಮೆಗಾ ಹರಾಜಿನ ಮೊದಲ ದಿನ ಆರ್​ಸಿಬಿ ಒಟ್ಟು 6 ಆಟಗಾರರನ್ನು ಖರೀದಿಸಿತು. ಇದರಲ್ಲಿ ಮೂವರು ಆಟಗಾರರು ವಿದೇಶಿಗರಾದರೆ... ಉಳಿದ ಮೂವರು ಭಾರತೀಯ ಆಟಗಾರರಾಗಿದ್ದಾರೆ. ಬೇರೆ ತಂಡಗಳಿಗೆ ಹೊಲಿಸಿದರೆ, ಆರ್​ಸಿಬಿ ಯಾವುದೇ ಆಟಗಾರನಿಗೂ ದುಬಾರಿ ಬೆಲೆ ನೀಡಲಿಲ್ಲ.

1 / 7
ಆರ್​ಸಿಬಿಯ ಮೊದಲ ಖರೀದಿಯಾಗಿ ಇಂಗ್ಲೆಂಡ್‌ನ ಸ್ಫೋಟಕ ಆಲ್‌ರೌಂಡರ್ ಲಿಯಾಮ್ ಲಿವಿಂಗ್​ಸ್ಟೋನ್ ತಂಡವನ್ನು ಸೇರಿಕೊಂಡರು. ಅವರನ್ನು ಆರ್​ಸಿಬಿ 8.75 ಕೋಟಿ ನೀಡಿ ಖರೀದಿ ಮಾಡಿದೆ.

ಆರ್​ಸಿಬಿಯ ಮೊದಲ ಖರೀದಿಯಾಗಿ ಇಂಗ್ಲೆಂಡ್‌ನ ಸ್ಫೋಟಕ ಆಲ್‌ರೌಂಡರ್ ಲಿಯಾಮ್ ಲಿವಿಂಗ್​ಸ್ಟೋನ್ ತಂಡವನ್ನು ಸೇರಿಕೊಂಡರು. ಅವರನ್ನು ಆರ್​ಸಿಬಿ 8.75 ಕೋಟಿ ನೀಡಿ ಖರೀದಿ ಮಾಡಿದೆ.

2 / 7
ಎರಡನೇ ಆಯ್ಕೆಯಾಗಿ ಮತ್ತೊಬ್ಬ ಇಂಗ್ಲೆಂಡ್‌ ಪ್ಲೇಯರ್​ ಅನ್ನು ಖರೀದಿಸಿದ ಆರ್​ಸಿಬಿ, ಈ ಬಾರಿ ಸ್ಫೋಟಕ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಪಿಲ್ ಸಾಲ್ಟ್ ಅವರನ್ನು 11.50 ಕೋಟಿ ನೀಡಿ ತನ್ನ ಖಾತೆಗೆ ಹಾಕಿಕೊಳ್ಳುವಲ್ಲಿ ಯಶಸ್ವಿಯಾಯಿತು.

ಎರಡನೇ ಆಯ್ಕೆಯಾಗಿ ಮತ್ತೊಬ್ಬ ಇಂಗ್ಲೆಂಡ್‌ ಪ್ಲೇಯರ್​ ಅನ್ನು ಖರೀದಿಸಿದ ಆರ್​ಸಿಬಿ, ಈ ಬಾರಿ ಸ್ಫೋಟಕ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಪಿಲ್ ಸಾಲ್ಟ್ ಅವರನ್ನು 11.50 ಕೋಟಿ ನೀಡಿ ತನ್ನ ಖಾತೆಗೆ ಹಾಕಿಕೊಳ್ಳುವಲ್ಲಿ ಯಶಸ್ವಿಯಾಯಿತು.

3 / 7
ಮೂರನೇ ಆಯ್ಕೆಯಾಗಿ ಭಾರತದ ವಿಕೆಟ್​ಕೀಪರ್ ಬ್ಯಾಟ್ಸ್‌ಮನ್ ಜಿತೇಶ್ ಶರ್ಮಾ ಅವರನ್ನು ಆರ್​ಸಿಬಿ ಖರೀದಿಸಿತು. ಮೆಗಾ ಹರಾಜಿನಲ್ಲಿ ಜಿತೇಶ್ ಶರ್ಮಾ ಅವರನ್ನು ಖರೀದಿಸಲು ಲಕ್ನೋ, ಸಿಎಸ್​ಕೆ, ಡೆಲ್ಲಿ ಕ್ಯಾಪಿಟಲ್ಸ್ ಸೇರಿದಂತೆ ಇತರ ಫ್ರಾಂಚೈಸಿಗಳು ಮುಗಿಬಿದ್ದಿದ್ದವು. ಆದರೆ ಅಂತಿಮವಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಜಿತೇಶ್ ಶರ್ಮಾ ಅವರನ್ನು 11 ಕೋಟಿಗೆ ಖರೀದಿಸಿತು.

ಮೂರನೇ ಆಯ್ಕೆಯಾಗಿ ಭಾರತದ ವಿಕೆಟ್​ಕೀಪರ್ ಬ್ಯಾಟ್ಸ್‌ಮನ್ ಜಿತೇಶ್ ಶರ್ಮಾ ಅವರನ್ನು ಆರ್​ಸಿಬಿ ಖರೀದಿಸಿತು. ಮೆಗಾ ಹರಾಜಿನಲ್ಲಿ ಜಿತೇಶ್ ಶರ್ಮಾ ಅವರನ್ನು ಖರೀದಿಸಲು ಲಕ್ನೋ, ಸಿಎಸ್​ಕೆ, ಡೆಲ್ಲಿ ಕ್ಯಾಪಿಟಲ್ಸ್ ಸೇರಿದಂತೆ ಇತರ ಫ್ರಾಂಚೈಸಿಗಳು ಮುಗಿಬಿದ್ದಿದ್ದವು. ಆದರೆ ಅಂತಿಮವಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಜಿತೇಶ್ ಶರ್ಮಾ ಅವರನ್ನು 11 ಕೋಟಿಗೆ ಖರೀದಿಸಿತು.

4 / 7
ನಾಲ್ಕನೇ ಆಟಗಾರನಾಗಿ ಆಸ್ಟ್ರೇಲಿಯಾದ ಸ್ಟಾರ್ ಬೌಲರ್ ಜೋಶ್ ಹೇಜಲ್‌ವುಡ್ ಮತ್ತೊಮ್ಮೆ ಆರ್​ಸಿಬಿ ತಂಡವನ್ನು ಸೇರಿಕೊಂಡಿದ್ದಾರೆ. 2023 ರ ಆವೃತ್ತಿಯಲ್ಲಿ ಆರ್​ಸಿಬಿ ಪರ ಆಡಿದ್ದ ಹೇಜಲ್‌ವುಡ್ 2 ಕೋಟಿ ಮೂಲ ಬೆಲೆಗೆ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದರು. ಅಂತಿಮವಾಗಿ ಅವರನ್ನು ಆರ್​ಸಿಬಿ 12.50 ಕೋಟಿಗೆ ಖರೀದಿಸಿದೆ.

ನಾಲ್ಕನೇ ಆಟಗಾರನಾಗಿ ಆಸ್ಟ್ರೇಲಿಯಾದ ಸ್ಟಾರ್ ಬೌಲರ್ ಜೋಶ್ ಹೇಜಲ್‌ವುಡ್ ಮತ್ತೊಮ್ಮೆ ಆರ್​ಸಿಬಿ ತಂಡವನ್ನು ಸೇರಿಕೊಂಡಿದ್ದಾರೆ. 2023 ರ ಆವೃತ್ತಿಯಲ್ಲಿ ಆರ್​ಸಿಬಿ ಪರ ಆಡಿದ್ದ ಹೇಜಲ್‌ವುಡ್ 2 ಕೋಟಿ ಮೂಲ ಬೆಲೆಗೆ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದರು. ಅಂತಿಮವಾಗಿ ಅವರನ್ನು ಆರ್​ಸಿಬಿ 12.50 ಕೋಟಿಗೆ ಖರೀದಿಸಿದೆ.

5 / 7
ಐದನೇ ಆಯ್ಕೆಯಾಗಿ ಭಾರತದ ಬೌಲರ್​ ಕಡೆ ಮುಖ ಮಾಡಿದ ಆರ್​ಸಿಬಿ ಕಳೆದ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡಿದ್ದ ರಾಸಿಕ್ ದರ್ ಅವರನ್ನು 6 ಕೋಟಿ ನೋಡಿ ಖರೀದಿಸಿತು. ಇದರೊಂದಿಗೆ ಆರ್​ಸಿಬಿ ಪಾಳಯದ ವೇಗಿಗಳ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.

ಐದನೇ ಆಯ್ಕೆಯಾಗಿ ಭಾರತದ ಬೌಲರ್​ ಕಡೆ ಮುಖ ಮಾಡಿದ ಆರ್​ಸಿಬಿ ಕಳೆದ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡಿದ್ದ ರಾಸಿಕ್ ದರ್ ಅವರನ್ನು 6 ಕೋಟಿ ನೋಡಿ ಖರೀದಿಸಿತು. ಇದರೊಂದಿಗೆ ಆರ್​ಸಿಬಿ ಪಾಳಯದ ವೇಗಿಗಳ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.

6 / 7
ದಿನದ ಕೊನೆಯ ಖರೀದಿಯಾಗಿ ಕಳೆದ ಬಾರಿ ಕೆಕೆಆರ್ ತಂಡದ ಪ್ರಮುಖ ಸ್ಪಿನ್ನರ್​ಗಳಲ್ಲಿ ಒಬ್ಬರಾಗಿ ಕಾಣಿಸಿಕೊಂಡಿದ್ದ ಭಾರತದ ಸ್ಪಿನ್ನರ್ ಸುಯೇಶ್ ಶರ್ಮಾ ಅವರನ್ನು ಆರ್​ಸಿಬಿ 2.2 ಕೋಟಿ ರೂ. ನೀಡಿ ತನ್ನ ಬತ್ತಳಿಕೆಗೆ ಹಾಕಿಕೊಂಡಿದೆ.

ದಿನದ ಕೊನೆಯ ಖರೀದಿಯಾಗಿ ಕಳೆದ ಬಾರಿ ಕೆಕೆಆರ್ ತಂಡದ ಪ್ರಮುಖ ಸ್ಪಿನ್ನರ್​ಗಳಲ್ಲಿ ಒಬ್ಬರಾಗಿ ಕಾಣಿಸಿಕೊಂಡಿದ್ದ ಭಾರತದ ಸ್ಪಿನ್ನರ್ ಸುಯೇಶ್ ಶರ್ಮಾ ಅವರನ್ನು ಆರ್​ಸಿಬಿ 2.2 ಕೋಟಿ ರೂ. ನೀಡಿ ತನ್ನ ಬತ್ತಳಿಕೆಗೆ ಹಾಕಿಕೊಂಡಿದೆ.

7 / 7
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್