AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL Auction 2025: ಆರ್​ಸಿಬಿ ಟಾರ್ಗೆಟ್ ಲಿಸ್ಟ್​ನಲ್ಲಿ 7 ಆಟಗಾರರು

RCB IPL Auction 2025: ಈ ಬಾರಿಯ ಮೆಗಾ ಹರಾಜಿನಲ್ಲಿ ಆರ್​ಸಿಬಿಯ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಏಕೆಂದರೆ ತಂಡದಲ್ಲಿ ಕೇವಲ 3 ಆಟಗಾರರಿದ್ದು, ಉಳಿದ ಸ್ಲಾಟ್​ಗಳಿಗೆ ಯಾರ್ಯಾರು ಭರ್ತಿಯಾಗಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ. ಈ ನಡುವೆ ಆರ್​ಸಿಬಿ ಈ 7 ಆಟಗಾರರನ್ನು ಖರೀದಿಸಲು ಮುಂದಾಗುವ ಸಾಧ್ಯತೆಗಳಿವೆ.

ಪೃಥ್ವಿಶಂಕರ
|

Updated on: Nov 23, 2024 | 7:48 PM

Share
ಐಪಿಎಲ್ ಮೆಗಾ ಹರಾಜಿಗೆ ವೇದಿಕೆ ಸಿದ್ಧವಾಗಿದೆ. ಎಲ್ಲಾ 10 ಫ್ರಾಂಚೈಸಿಗಳು ಸಕಲ ತಂತ್ರಗಳೊಂದಿಗೆ ಯಾರ್ಯಾರನ್ನು ತಮ್ಮ ಖಾತೆಗೆ ಹಾಕಿಕೊಳ್ಳಬೇಕು ಎಂಬ ಲೆಕ್ಕಾಚಾರವನ್ನು ಅಂತಿಮಗೊಳಿಸಿಕೊಂಡಿವೆ. ಆ 10 ಫ್ರಾಂಚೈಸಿಗಳ ಪೈಕಿ ಆರ್​ಸಿಬಿ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಏಕೆಂದರೆ ತಂಡದಲ್ಲಿ ಕೇವಲ 3 ಆಟಗಾರರಿದ್ದು, ಉಳಿದ ಸ್ಲಾಟ್​ಗಳಿಗೆ ಯಾರ್ಯಾರು ಭರ್ತಿಯಾಗಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ. ಈ ನಡುವೆ ಆರ್​ಸಿಬಿ ಈ 7 ಆಟಗಾರರನ್ನು ಖರೀದಿಸಲು ಮುಂದಾಗುವ ಸಾಧ್ಯತೆಗಳಿವೆ.

ಐಪಿಎಲ್ ಮೆಗಾ ಹರಾಜಿಗೆ ವೇದಿಕೆ ಸಿದ್ಧವಾಗಿದೆ. ಎಲ್ಲಾ 10 ಫ್ರಾಂಚೈಸಿಗಳು ಸಕಲ ತಂತ್ರಗಳೊಂದಿಗೆ ಯಾರ್ಯಾರನ್ನು ತಮ್ಮ ಖಾತೆಗೆ ಹಾಕಿಕೊಳ್ಳಬೇಕು ಎಂಬ ಲೆಕ್ಕಾಚಾರವನ್ನು ಅಂತಿಮಗೊಳಿಸಿಕೊಂಡಿವೆ. ಆ 10 ಫ್ರಾಂಚೈಸಿಗಳ ಪೈಕಿ ಆರ್​ಸಿಬಿ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಏಕೆಂದರೆ ತಂಡದಲ್ಲಿ ಕೇವಲ 3 ಆಟಗಾರರಿದ್ದು, ಉಳಿದ ಸ್ಲಾಟ್​ಗಳಿಗೆ ಯಾರ್ಯಾರು ಭರ್ತಿಯಾಗಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ. ಈ ನಡುವೆ ಆರ್​ಸಿಬಿ ಈ 7 ಆಟಗಾರರನ್ನು ಖರೀದಿಸಲು ಮುಂದಾಗುವ ಸಾಧ್ಯತೆಗಳಿವೆ.

1 / 8
ಆರ್​ಸಿಬಿಯ ಮೊದಲ ಆಯ್ಕೆಯಾಗಿ ಕೆಎಲ್ ರಾಹುಲ್ ಹೆಸರಿರುವುದು ಖಚಿತ ಎಂದು ಹೇಳಲಾಗುತ್ತಿದೆ. ಹೇಳಿ ಕೇಳಿ ಕನ್ನಡದ ಹುಡುಗನಾಗಿರುವ ರಾಹುಲ್ ಖರೀದಿಗೆ ಆರ್​ಸಿಬಿ ಮುಂದಾಗಬಹುದು. ಅಲ್ಲದೆ ಈ ಹಿಂದೆ ಆರ್​​ಸಿಬಿ ಪರ ಆಡಿರುವ ರಾಹುಲ್, ಮತ್ತೆ ತಂಡ ಸೇರಿಕೊಳ್ಳುವ ಇಂಗಿತ ವ್ಯಕ್ತಪಡಿಸಿರುವುದು ಕೂಡ ಇದಕ್ಕೆ ಪೂರಕವಾಗಿದೆ.

ಆರ್​ಸಿಬಿಯ ಮೊದಲ ಆಯ್ಕೆಯಾಗಿ ಕೆಎಲ್ ರಾಹುಲ್ ಹೆಸರಿರುವುದು ಖಚಿತ ಎಂದು ಹೇಳಲಾಗುತ್ತಿದೆ. ಹೇಳಿ ಕೇಳಿ ಕನ್ನಡದ ಹುಡುಗನಾಗಿರುವ ರಾಹುಲ್ ಖರೀದಿಗೆ ಆರ್​ಸಿಬಿ ಮುಂದಾಗಬಹುದು. ಅಲ್ಲದೆ ಈ ಹಿಂದೆ ಆರ್​​ಸಿಬಿ ಪರ ಆಡಿರುವ ರಾಹುಲ್, ಮತ್ತೆ ತಂಡ ಸೇರಿಕೊಳ್ಳುವ ಇಂಗಿತ ವ್ಯಕ್ತಪಡಿಸಿರುವುದು ಕೂಡ ಇದಕ್ಕೆ ಪೂರಕವಾಗಿದೆ.

2 / 8
ರಾಹುಲ್​ಗಿಂತ ಮುಂಚಿತವಾಗಿ ರಿಷಬ್ ಪಂತ್ ಹರಾಜಿಗೆ ಬರುವ ಕಾರಣ ಆರ್​ಸಿಬಿ, ಪಂತ್​ ಮೇಲು ಕಣ್ಣಿಟ್ಟಿದೆ. ಪಂತ್ ಆಗಮನದಿಂದ ತಂಡಕ್ಕೆ ಮೂರು ಉಪಯೋಗಗಳಾಗಲಿದ್ದು, ವಿಕೆಟ್ ಕೀಪರ್ ಜೊತೆಗೆ ನಾಯಕನ ಆಯ್ಕೆಯೂ ಸಿಗಲಿದೆ. ಹೀಗಾಗಿ ಪಂತ್​ ಕೂಡ ಆರ್​ಸಿಬಿ ಟಾರ್ಗೆಟ್ ಲಿಸ್ಟ್​ನಲ್ಲಿದ್ದಾರೆ.

ರಾಹುಲ್​ಗಿಂತ ಮುಂಚಿತವಾಗಿ ರಿಷಬ್ ಪಂತ್ ಹರಾಜಿಗೆ ಬರುವ ಕಾರಣ ಆರ್​ಸಿಬಿ, ಪಂತ್​ ಮೇಲು ಕಣ್ಣಿಟ್ಟಿದೆ. ಪಂತ್ ಆಗಮನದಿಂದ ತಂಡಕ್ಕೆ ಮೂರು ಉಪಯೋಗಗಳಾಗಲಿದ್ದು, ವಿಕೆಟ್ ಕೀಪರ್ ಜೊತೆಗೆ ನಾಯಕನ ಆಯ್ಕೆಯೂ ಸಿಗಲಿದೆ. ಹೀಗಾಗಿ ಪಂತ್​ ಕೂಡ ಆರ್​ಸಿಬಿ ಟಾರ್ಗೆಟ್ ಲಿಸ್ಟ್​ನಲ್ಲಿದ್ದಾರೆ.

3 / 8
ಆರ್​ಸಿಬಿಯ ಮಾಜಿ ನಾಯಕ ಫಾಫ್ ಡು ಪ್ಲೆಸಿಸ್‌ ಕೂಡ ಮತ್ತೆ ಆರ್​ಸಿಬಿಗೆ ಸೇರುವ ಸಾಧ್ಯತೆಗಳಿವೆ. ನಾಯನಾಗಿ ಫಾಫ್ ಫೇಲ್ ಆಗಿದ್ದರೂ ಆಟಗಾರನಾಗಿ ಅವರ ಪ್ರದರ್ಶನ ಅಮೋಘವಾಗಿದೆ. ಹೀಗಾಗಿ ಆರ್​ಸಿಬಿ ಬಳಿ ಮೂರು ಆರ್​ಟಿಎಮ್ ಕಾರ್ಡ್​ ಇರುವ ಕಾರಣ, ಫಾಫ್ ಮೇಲೆ ಆರ್​ಸಿಬಿ ಅದನ್ನು ಬಳಸುವ ಸಾಧ್ಯತೆಗಳಿವೆ.

ಆರ್​ಸಿಬಿಯ ಮಾಜಿ ನಾಯಕ ಫಾಫ್ ಡು ಪ್ಲೆಸಿಸ್‌ ಕೂಡ ಮತ್ತೆ ಆರ್​ಸಿಬಿಗೆ ಸೇರುವ ಸಾಧ್ಯತೆಗಳಿವೆ. ನಾಯನಾಗಿ ಫಾಫ್ ಫೇಲ್ ಆಗಿದ್ದರೂ ಆಟಗಾರನಾಗಿ ಅವರ ಪ್ರದರ್ಶನ ಅಮೋಘವಾಗಿದೆ. ಹೀಗಾಗಿ ಆರ್​ಸಿಬಿ ಬಳಿ ಮೂರು ಆರ್​ಟಿಎಮ್ ಕಾರ್ಡ್​ ಇರುವ ಕಾರಣ, ಫಾಫ್ ಮೇಲೆ ಆರ್​ಸಿಬಿ ಅದನ್ನು ಬಳಸುವ ಸಾಧ್ಯತೆಗಳಿವೆ.

4 / 8
ಡು ಪ್ಲೆಸಿಸ್‌ನಂತೆ, ಜ್ಯಾಕ್ಸ್ ಕೂಡ ಈ ಮೊದಲ  ಆರ್​ಸಿಬಿ ಪರ ಆಡಿದ್ದಾರೆ. ಅಲ್ಲದೆ ಅವರು ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಸ್ಫೋಟಕ ಶತಕ ಬಾರಿಸುವ ಮೂಲಕ ಎಲ್ಲರನ್ನು ಬೆರಗುಗೊಳಿಸಿದ್ದರು. ಇದರ ಜೊತೆಗೆ ಆಫ್-ಸ್ಪಿನ್ ಬೌಲಿಂಗ್ ಮಾಡುವ ಸಾಮರ್ಥ್ಯವನ್ನು ಹೊಂದಿರುವ ಜ್ಯಾಕ್ಸ್, ಆರ್​ಸಿಬಿಯಲ್ಲಿ ಮ್ಯಾಕ್ಸ್‌ವೆಲ್ ಸ್ಥಾನವನ್ನು ತುಂಬಬಹುದು.

ಡು ಪ್ಲೆಸಿಸ್‌ನಂತೆ, ಜ್ಯಾಕ್ಸ್ ಕೂಡ ಈ ಮೊದಲ ಆರ್​ಸಿಬಿ ಪರ ಆಡಿದ್ದಾರೆ. ಅಲ್ಲದೆ ಅವರು ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಸ್ಫೋಟಕ ಶತಕ ಬಾರಿಸುವ ಮೂಲಕ ಎಲ್ಲರನ್ನು ಬೆರಗುಗೊಳಿಸಿದ್ದರು. ಇದರ ಜೊತೆಗೆ ಆಫ್-ಸ್ಪಿನ್ ಬೌಲಿಂಗ್ ಮಾಡುವ ಸಾಮರ್ಥ್ಯವನ್ನು ಹೊಂದಿರುವ ಜ್ಯಾಕ್ಸ್, ಆರ್​ಸಿಬಿಯಲ್ಲಿ ಮ್ಯಾಕ್ಸ್‌ವೆಲ್ ಸ್ಥಾನವನ್ನು ತುಂಬಬಹುದು.

5 / 8
ಪಂಜಾಬ್ ಪರ ಐಪಿಎಲ್​ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಅರ್ಷದೀಪ್ ಸಿಂಗ್ ಈ ಬಾರಿ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಭಾರತ ಟಿ20 ತಂಡದ ಪ್ರಮುಖ ಬೌಲರ್ ಆಗಿ ಗುರುತಿಸಿಕೊಂಡಿರುವ ಅರ್ಷದೀಪ್, ಆರ್​ಸಿಬಿಗೆ ಬಂದರೆ ತಂಡದ ಬೌಲಿಂಗ್ ವಿಭಾಗ ಮತ್ತಷ್ಟು ಉತ್ತಮವಾಗಲಿದೆ.

ಪಂಜಾಬ್ ಪರ ಐಪಿಎಲ್​ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಅರ್ಷದೀಪ್ ಸಿಂಗ್ ಈ ಬಾರಿ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಭಾರತ ಟಿ20 ತಂಡದ ಪ್ರಮುಖ ಬೌಲರ್ ಆಗಿ ಗುರುತಿಸಿಕೊಂಡಿರುವ ಅರ್ಷದೀಪ್, ಆರ್​ಸಿಬಿಗೆ ಬಂದರೆ ತಂಡದ ಬೌಲಿಂಗ್ ವಿಭಾಗ ಮತ್ತಷ್ಟು ಉತ್ತಮವಾಗಲಿದೆ.

6 / 8
ಕಳೆದ ಆವೃತ್ತಿಯಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪರ ಆಡಿದ್ದ ಆಸೀಸ್ ಆಲ್‌ರೌಂಡರ್ ಮಾರ್ಕಸ್ ಸ್ಟೊಯಿನಿಸ್ ಮೇಲು ಆರ್​ಸಿಬಿ ಕಣ್ಣಿಟ್ಟಿದೆ. ಸ್ಟೊಯಿನಿಸ್ ಆಗಮನದಿಂದ ತಂಡದ ಕೆಳ ಕ್ರಮಾಂಕ ಬಲಿಷ್ಠವಾಗುವುದಲ್ಲದೆ ಬೌಲಿಂಗ್ ಆಯ್ಕೆಯೂ ಸಿಗಲಿದೆ. ಅಲ್ಲದೆ ಈ ಹಿಂದೆ ಆರ್​ಸಿಬಿ ಪರ ಆಡಿರುವ ಸ್ಟೊಯಿನಿಸ್ ಖರೀದಿಗೆ ಆರ್​ಸಿಬಿ ಮುಂದಾಗಬಹುದು.

ಕಳೆದ ಆವೃತ್ತಿಯಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪರ ಆಡಿದ್ದ ಆಸೀಸ್ ಆಲ್‌ರೌಂಡರ್ ಮಾರ್ಕಸ್ ಸ್ಟೊಯಿನಿಸ್ ಮೇಲು ಆರ್​ಸಿಬಿ ಕಣ್ಣಿಟ್ಟಿದೆ. ಸ್ಟೊಯಿನಿಸ್ ಆಗಮನದಿಂದ ತಂಡದ ಕೆಳ ಕ್ರಮಾಂಕ ಬಲಿಷ್ಠವಾಗುವುದಲ್ಲದೆ ಬೌಲಿಂಗ್ ಆಯ್ಕೆಯೂ ಸಿಗಲಿದೆ. ಅಲ್ಲದೆ ಈ ಹಿಂದೆ ಆರ್​ಸಿಬಿ ಪರ ಆಡಿರುವ ಸ್ಟೊಯಿನಿಸ್ ಖರೀದಿಗೆ ಆರ್​ಸಿಬಿ ಮುಂದಾಗಬಹುದು.

7 / 8
ಕಳೆದ ಕೆಲವು ಆವೃತ್ತಿಗಳಲ್ಲಿ ಆರ್​ಸಿಬಿಗೆ ಪ್ರಮುಖವಾಗಿ ಕಾಡಿದ್ದು, ಒಬ್ಬ ಉತ್ತಮ ಸ್ಪಿನ್ನರ್​ನ ಕೊರತೆ. 2022 ರ ಮೆಗಾ ಹರಾಜಿನಲ್ಲಿ ಆರ್​ಸಿಬಿಯಿಂದ ರಾಜಸ್ಥಾನ ತಂಡಕ್ಕೆ ಯುಜ್ವೇಂದ್ರ ಚಹಾಲ್ ಹೋದ ಬಳಿಕ ಆ ಸ್ಥಾನವನ್ನು ತುಂಬಲು ಇದುವರೆಗು ಯಾರಿಗೂ ಸಾಧ್ಯವಾಗಿಲ್ಲ. ಹೀಗಾಗಿ ಚಹಾಲ್ ಮತ್ತೊಮ್ಮೆ ಆರ್​ಸಿಬಿ ಪಾಳಯವನ್ನು ಸೇರಬಹುದು ಎನ್ನಲಾಗುತ್ತಿದೆ.

ಕಳೆದ ಕೆಲವು ಆವೃತ್ತಿಗಳಲ್ಲಿ ಆರ್​ಸಿಬಿಗೆ ಪ್ರಮುಖವಾಗಿ ಕಾಡಿದ್ದು, ಒಬ್ಬ ಉತ್ತಮ ಸ್ಪಿನ್ನರ್​ನ ಕೊರತೆ. 2022 ರ ಮೆಗಾ ಹರಾಜಿನಲ್ಲಿ ಆರ್​ಸಿಬಿಯಿಂದ ರಾಜಸ್ಥಾನ ತಂಡಕ್ಕೆ ಯುಜ್ವೇಂದ್ರ ಚಹಾಲ್ ಹೋದ ಬಳಿಕ ಆ ಸ್ಥಾನವನ್ನು ತುಂಬಲು ಇದುವರೆಗು ಯಾರಿಗೂ ಸಾಧ್ಯವಾಗಿಲ್ಲ. ಹೀಗಾಗಿ ಚಹಾಲ್ ಮತ್ತೊಮ್ಮೆ ಆರ್​ಸಿಬಿ ಪಾಳಯವನ್ನು ಸೇರಬಹುದು ಎನ್ನಲಾಗುತ್ತಿದೆ.

8 / 8
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ