AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಭಾರತದ ಮುಂದೆ ತಲೆಬಾಗಿದ ಬಾಂಗ್ಲಾದೇಶ; ಐಪಿಎಲ್ ಪ್ರಸಾರಕ್ಕೆ ಅಸ್ತು

Bangladesh Lifts IPL Broadcast Ban: ಹಿಂದಿನ ಬಾಂಗ್ಲಾದೇಶ ಸರ್ಕಾರವು ಮುಸ್ತಾಫಿಜುರ್ ರೆಹಮಾನ್ ಅವರನ್ನು ಐಪಿಎಲ್‌ನಿಂದ ಹೊರಹಾಕಿದ್ದಕ್ಕೆ ಪ್ರತಿಕ್ರಿಯೆಯಾಗಿ ಐಪಿಎಲ್ ಪ್ರಸಾರವನ್ನು ನಿಷೇಧಿಸಿತ್ತು. ಇದೀಗ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಭಾರತ-ಬಾಂಗ್ಲಾದೇಶ ಸಂಬಂಧ ಸುಧಾರಿಸುವ ನಿಟ್ಟಿನಲ್ಲಿ ಐಪಿಎಲ್ ಪ್ರಸಾರಕ್ಕೆ ಅನುಮತಿ ನೀಡಿದೆ. ಮಾರ್ಚ್ 28 ರಿಂದ ಆರಂಭವಾಗುವ 2026ರ ಐಪಿಎಲ್ ಪಂದ್ಯಾವಳಿಯನ್ನು ಬಾಂಗ್ಲಾದೇಶದಲ್ಲಿ ಸ್ಟಾರ್ ಸ್ಪೋರ್ಟ್ಸ್ ಸೇರಿದಂತೆ ಯಾವುದೇ ಪ್ರಸಾರಕರು ಅರ್ಜಿ ಸಲ್ಲಿಸಿ ಪ್ರಸಾರ ಮಾಡಬಹುದು.

ಪೃಥ್ವಿಶಂಕರ
|

Updated on: Mar 28, 2026 | 3:32 PM

Share
ಬಾಂಗ್ಲಾದೇಶ ಕ್ರಿಕೆಟ್ ತಂಡದ ವೇಗದ ಬೌಲರ್ ಮುಸ್ತಾಫಿಜುರ್ ರೆಹಮಾನ್ ಅವರನ್ನು ಐಪಿಎಲ್​ನಿಂದ ಹೊರಹಾಕಿದ್ದಕ್ಕೆ ಆಕ್ರೋಶಗೊಂಡಿದ್ದ ಅಂದಿನ ಬಾಂಗ್ಲಾದೇಶ ಮಧ್ಯಂತರ ಸರ್ಕಾರ, ಬಾಂಗ್ಲಾದೇಶದಲ್ಲಿ ಐಪಿಎಲ್ ಪ್ರಸಾರವನ್ನು ನಿಷೇಧಿಸಿತ್ತು. ಆದರೀಗ ಬಾಂಗ್ಲಾದೇಶದಲ್ಲಿ ಹೊಸ ಸರ್ಕಾರಕ್ಕೆ ಅಸ್ತಿತ್ವಕ್ಕೆ ಬಂದಿದ್ದು, ದೇಶದಲ್ಲಿ ಐಪಿಎಲ್ ಪ್ರಸಾರಕ್ಕೆ ಅನುವು ಮಾಡಿಕೊಟ್ಟಿದೆ.

ಬಾಂಗ್ಲಾದೇಶ ಕ್ರಿಕೆಟ್ ತಂಡದ ವೇಗದ ಬೌಲರ್ ಮುಸ್ತಾಫಿಜುರ್ ರೆಹಮಾನ್ ಅವರನ್ನು ಐಪಿಎಲ್​ನಿಂದ ಹೊರಹಾಕಿದ್ದಕ್ಕೆ ಆಕ್ರೋಶಗೊಂಡಿದ್ದ ಅಂದಿನ ಬಾಂಗ್ಲಾದೇಶ ಮಧ್ಯಂತರ ಸರ್ಕಾರ, ಬಾಂಗ್ಲಾದೇಶದಲ್ಲಿ ಐಪಿಎಲ್ ಪ್ರಸಾರವನ್ನು ನಿಷೇಧಿಸಿತ್ತು. ಆದರೀಗ ಬಾಂಗ್ಲಾದೇಶದಲ್ಲಿ ಹೊಸ ಸರ್ಕಾರಕ್ಕೆ ಅಸ್ತಿತ್ವಕ್ಕೆ ಬಂದಿದ್ದು, ದೇಶದಲ್ಲಿ ಐಪಿಎಲ್ ಪ್ರಸಾರಕ್ಕೆ ಅನುವು ಮಾಡಿಕೊಟ್ಟಿದೆ.

1 / 5
2026 ರ ಐಪಿಎಲ್ ಮಾರ್ಚ್​ 28 ರಿಂದ ಆರಂಭವಾಗುತ್ತಿದ್ದು, ಲೀಗ್ ಆರಂಭಕ್ಕೂ ಮುನ್ನ ಬಾಂಗ್ಲಾದೇಶ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ. ಬಾಂಗ್ಲಾದೇಶ ಸರ್ಕಾರದ ಮಾಹಿತಿ ಮತ್ತು ಪ್ರಸಾರ ಸಚಿವ ಜಹೀರ್ ಉದ್ದೀನ್ ಸ್ವಪನ್ ಈ ಬಗ್ಗೆ ಹೇಳಿಕೆ ನೀಡಿದ್ದು, ‘ಐಪಿಎಲ್ ಪ್ರಸಾರದ ಮೇಲೆ ಯಾವುದೇ ನಿಷೇಧವಿಲ್ಲ. ಯಾವುದೇ ಪ್ರಸಾರ ಕಂಪನಿ ಅಥವಾ ಚಾನೆಲ್ ಐಪಿಎಲ್ ಪ್ರಸಾರಕ್ಕಾಗಿ ತಮಗೆ ಅರ್ಜಿ ಸಲ್ಲಿಸಿದರೆ ನಾವು ಐಪಿಎಲ್ ಪ್ರಸಾರಕ್ಕೆ ಅನುಮತಿ ನೀಡುವುದಾಗಿ ತಿಳಿಸಿದ್ದಾರೆ.

2026 ರ ಐಪಿಎಲ್ ಮಾರ್ಚ್​ 28 ರಿಂದ ಆರಂಭವಾಗುತ್ತಿದ್ದು, ಲೀಗ್ ಆರಂಭಕ್ಕೂ ಮುನ್ನ ಬಾಂಗ್ಲಾದೇಶ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ. ಬಾಂಗ್ಲಾದೇಶ ಸರ್ಕಾರದ ಮಾಹಿತಿ ಮತ್ತು ಪ್ರಸಾರ ಸಚಿವ ಜಹೀರ್ ಉದ್ದೀನ್ ಸ್ವಪನ್ ಈ ಬಗ್ಗೆ ಹೇಳಿಕೆ ನೀಡಿದ್ದು, ‘ಐಪಿಎಲ್ ಪ್ರಸಾರದ ಮೇಲೆ ಯಾವುದೇ ನಿಷೇಧವಿಲ್ಲ. ಯಾವುದೇ ಪ್ರಸಾರ ಕಂಪನಿ ಅಥವಾ ಚಾನೆಲ್ ಐಪಿಎಲ್ ಪ್ರಸಾರಕ್ಕಾಗಿ ತಮಗೆ ಅರ್ಜಿ ಸಲ್ಲಿಸಿದರೆ ನಾವು ಐಪಿಎಲ್ ಪ್ರಸಾರಕ್ಕೆ ಅನುಮತಿ ನೀಡುವುದಾಗಿ ತಿಳಿಸಿದ್ದಾರೆ.

2 / 5
ಐಪಿಎಲ್‌ನ ಅಧಿಕೃತ ಪ್ರಸಾರಕರಾದ ಸ್ಟಾರ್ ಸ್ಪೋರ್ಟ್ಸ್ ಬಾಂಗ್ಲಾದೇಶದಲ್ಲಿ ಈ ಪಂದ್ಯಾವಳಿಯನ್ನು ಪ್ರಸಾರ ಮಾಡಲು ಬಯಸಿದರೆ, ಬಾಂಗ್ಲಾದೇಶದ ಮಾಹಿತಿ ಮತ್ತು ಪ್ರಸಾರ ಇಲಾಖೆಗೆ ಅರ್ಜಿ ಸಲ್ಲಿಸಿ, ಅಧಿಕೃತ ಒಪ್ಪಿಗೆ ಪಡೆದುಕೊಳ್ಳಬಹುದಾಗಿದೆ.

ಐಪಿಎಲ್‌ನ ಅಧಿಕೃತ ಪ್ರಸಾರಕರಾದ ಸ್ಟಾರ್ ಸ್ಪೋರ್ಟ್ಸ್ ಬಾಂಗ್ಲಾದೇಶದಲ್ಲಿ ಈ ಪಂದ್ಯಾವಳಿಯನ್ನು ಪ್ರಸಾರ ಮಾಡಲು ಬಯಸಿದರೆ, ಬಾಂಗ್ಲಾದೇಶದ ಮಾಹಿತಿ ಮತ್ತು ಪ್ರಸಾರ ಇಲಾಖೆಗೆ ಅರ್ಜಿ ಸಲ್ಲಿಸಿ, ಅಧಿಕೃತ ಒಪ್ಪಿಗೆ ಪಡೆದುಕೊಳ್ಳಬಹುದಾಗಿದೆ.

3 / 5
ಮೇಲೆ ಹೇಳಿದಂತೆ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯವನ್ನು ಕಂಡಿಸಿ, ಬಾಂಗ್ಲಾದೇಶ ಆಟಗಾರರನ್ನು ಐಪಿಎಲ್​ನಿಂದ ನಿಷೇಧಿಸುವ ಕೆಲಸವನ್ನು ಬಿಸಿಸಿಐ ಮಾಡಿತ್ತು. ಅದರಂತೆ ಕೆಕೆಆರ್ ತಂಡದಲ್ಲಿದ್ದ ಏಕೈಕ ಬಾಂಗ್ಲಾದೇಶ ಆಟಗಾರ ಮುಸ್ತಾಫಿಜುರ್ ರೆಹಮಾನ್ ಅವರನ್ನು ಐಪಿಎಲ್​ನಿಂದ ಹೊರಹಾಕಲಾಗಿತ್ತು. ಇದರಿಂದ ಕೆರಳಿದ್ದ ಬಾಂಗ್ಲಾದೇಶ ಸರ್ಕಾರ, ಐಪಿಎಲ್ ಪ್ರಸಾರವನ್ನು ನಿಷೇಧಿಸಿತ್ತು. ಇದರ ಜೊತೆಗೆ ಬಾಂಗ್ಲಾದೇಶ ತಂಡದ ಟಿ20 ವಿಶ್ವಕಪ್ ಪಂದ್ಯಗಳನ್ನು ಭಾರತದ ಹೊರಗೆ ಆಯೋಜಿಸುವಂತೆ ಐಸಿಸಿ ಬಳಿ ಮನವಿ ಮಾಡಿತ್ತು.

ಮೇಲೆ ಹೇಳಿದಂತೆ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯವನ್ನು ಕಂಡಿಸಿ, ಬಾಂಗ್ಲಾದೇಶ ಆಟಗಾರರನ್ನು ಐಪಿಎಲ್​ನಿಂದ ನಿಷೇಧಿಸುವ ಕೆಲಸವನ್ನು ಬಿಸಿಸಿಐ ಮಾಡಿತ್ತು. ಅದರಂತೆ ಕೆಕೆಆರ್ ತಂಡದಲ್ಲಿದ್ದ ಏಕೈಕ ಬಾಂಗ್ಲಾದೇಶ ಆಟಗಾರ ಮುಸ್ತಾಫಿಜುರ್ ರೆಹಮಾನ್ ಅವರನ್ನು ಐಪಿಎಲ್​ನಿಂದ ಹೊರಹಾಕಲಾಗಿತ್ತು. ಇದರಿಂದ ಕೆರಳಿದ್ದ ಬಾಂಗ್ಲಾದೇಶ ಸರ್ಕಾರ, ಐಪಿಎಲ್ ಪ್ರಸಾರವನ್ನು ನಿಷೇಧಿಸಿತ್ತು. ಇದರ ಜೊತೆಗೆ ಬಾಂಗ್ಲಾದೇಶ ತಂಡದ ಟಿ20 ವಿಶ್ವಕಪ್ ಪಂದ್ಯಗಳನ್ನು ಭಾರತದ ಹೊರಗೆ ಆಯೋಜಿಸುವಂತೆ ಐಸಿಸಿ ಬಳಿ ಮನವಿ ಮಾಡಿತ್ತು.

4 / 5
ಆದರೆ ಬಾಂಗ್ಲಾದೇಶ ಸರ್ಕಾರದ ಈ ಮನವಿಯನ್ನು ಐಸಿಸಿ ತಿರಸ್ಕರಿಸಿತ್ತು. ಹೀಗಾಗಿ ಬಾಂಗ್ಲಾದೇಶ ಸರ್ಕಾರ ತನ್ನ ತಂಡದ ಹೆಸರನ್ನು ಟಿ20 ವಿಶ್ವಕಪ್​ನಿಂದ ಹಿಂಪಡೆದಿತ್ತು. ಇದೀಗ ಬಾಂಗ್ಲಾದೇಶದಲ್ಲಿ ಹೊಸ ಸರ್ಕಾರ ರಚನೆಯಾಗಿದ್ದು, ಹದಗೆಡುತ್ತಿರುವ ಭಾರತ-ಬಾಂಗ್ಲಾದೇಶ ಸಂಬಂಧವನ್ನು ಪುನಃಸ್ಥಾಪಿಸಲು ಮುಂದಾಗಿದೆ. ಅದಕ್ಕೆ ಪೂರಕವಾಗಿ ಐಪಿಎಲ್ ಪ್ರಸಾರಕ್ಕೆ ಗ್ರೀನ್ ಸಿಗ್ನಲ್ ನೀಡಿದೆ.

ಆದರೆ ಬಾಂಗ್ಲಾದೇಶ ಸರ್ಕಾರದ ಈ ಮನವಿಯನ್ನು ಐಸಿಸಿ ತಿರಸ್ಕರಿಸಿತ್ತು. ಹೀಗಾಗಿ ಬಾಂಗ್ಲಾದೇಶ ಸರ್ಕಾರ ತನ್ನ ತಂಡದ ಹೆಸರನ್ನು ಟಿ20 ವಿಶ್ವಕಪ್​ನಿಂದ ಹಿಂಪಡೆದಿತ್ತು. ಇದೀಗ ಬಾಂಗ್ಲಾದೇಶದಲ್ಲಿ ಹೊಸ ಸರ್ಕಾರ ರಚನೆಯಾಗಿದ್ದು, ಹದಗೆಡುತ್ತಿರುವ ಭಾರತ-ಬಾಂಗ್ಲಾದೇಶ ಸಂಬಂಧವನ್ನು ಪುನಃಸ್ಥಾಪಿಸಲು ಮುಂದಾಗಿದೆ. ಅದಕ್ಕೆ ಪೂರಕವಾಗಿ ಐಪಿಎಲ್ ಪ್ರಸಾರಕ್ಕೆ ಗ್ರೀನ್ ಸಿಗ್ನಲ್ ನೀಡಿದೆ.

5 / 5
Follow Us
ರಾಹುಲ್ ಗಾಂಧಿ ವಿಪಕ್ಷ ನಾಯಕನಾಗಲು ಯೋಗ್ಯರಲ್ಲ; ಚಿರಾಗ್ ಪಾಸ್ವಾನ್ ಟೀಕೆ
ರಾಹುಲ್ ಗಾಂಧಿ ವಿಪಕ್ಷ ನಾಯಕನಾಗಲು ಯೋಗ್ಯರಲ್ಲ; ಚಿರಾಗ್ ಪಾಸ್ವಾನ್ ಟೀಕೆ
ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ: ಲಾಯರ್ ಹೇಳಿದ್ದಿಷ್ಟು
ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ: ಲಾಯರ್ ಹೇಳಿದ್ದಿಷ್ಟು
ಶಿಕ್ಷೆ ಪ್ರಕಟವಾಗುತ್ತಿದ್ದಂತೆಯೇ ಸ್ಫೋಟಕ ವಿಚಾರ ಬಿಚ್ಚಿಟ್ಟ ಹೋರಾಟಗಾರ
ಶಿಕ್ಷೆ ಪ್ರಕಟವಾಗುತ್ತಿದ್ದಂತೆಯೇ ಸ್ಫೋಟಕ ವಿಚಾರ ಬಿಚ್ಚಿಟ್ಟ ಹೋರಾಟಗಾರ
ದರ್ಶನ್ ಅಂದು ಆ ಮಾತು ಹೇಳಲು ಬಿಡಲಿಲ್ಲ: ಮಾಜಿ ಮ್ಯಾನೇಜರ್
ದರ್ಶನ್ ಅಂದು ಆ ಮಾತು ಹೇಳಲು ಬಿಡಲಿಲ್ಲ: ಮಾಜಿ ಮ್ಯಾನೇಜರ್
ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ನನ್ನ ಮಾತು ಸತ್ಯವಾಗಿದೆ ಎಂದ BSY
ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ನನ್ನ ಮಾತು ಸತ್ಯವಾಗಿದೆ ಎಂದ BSY
ರಾಹುಲ್ ಗಾಂಧಿಯ ಭಾಷಣವೇ ದೊಡ್ಡ ತಲೆನೋವು; ಕಂಗನಾ ರಣಾವತ್ ಟೀಕೆ
ರಾಹುಲ್ ಗಾಂಧಿಯ ಭಾಷಣವೇ ದೊಡ್ಡ ತಲೆನೋವು; ಕಂಗನಾ ರಣಾವತ್ ಟೀಕೆ
ಜಮಖಂಡಿ ಕಾರಾಗೃಹಕ್ಕೆ ಎಡಿಜಿಪಿ ಭೇಟಿ: ಏನೇನೆಲ್ಲ ಪರಿಶೀಲಿಸಿದ್ರು ನೋಡಿ
ಜಮಖಂಡಿ ಕಾರಾಗೃಹಕ್ಕೆ ಎಡಿಜಿಪಿ ಭೇಟಿ: ಏನೇನೆಲ್ಲ ಪರಿಶೀಲಿಸಿದ್ರು ನೋಡಿ
ಗಾಜಿಯಾಬಾದ್‌ನಲ್ಲಿ ಗುಡಿಸಲುಗಳು ಬೆಂಕಿಗಾಹುತಿ; ಪೆಟಾದಿಂದ ಪ್ರಾಣಿಗಳ ರಕ್ಷಣೆ
ಗಾಜಿಯಾಬಾದ್‌ನಲ್ಲಿ ಗುಡಿಸಲುಗಳು ಬೆಂಕಿಗಾಹುತಿ; ಪೆಟಾದಿಂದ ಪ್ರಾಣಿಗಳ ರಕ್ಷಣೆ
ಮೈಮೇಲೆ ಸೊಳ್ಳೆ ಪರದೆ ಹಾಕಿಕೊಂಡು ನೈಟ್ ಡ್ಯೂಟಿ ಮಾಡಿದ ಸೆಕ್ಯೂರಿಟಿ ಗಾರ್ಡ್
ಮೈಮೇಲೆ ಸೊಳ್ಳೆ ಪರದೆ ಹಾಕಿಕೊಂಡು ನೈಟ್ ಡ್ಯೂಟಿ ಮಾಡಿದ ಸೆಕ್ಯೂರಿಟಿ ಗಾರ್ಡ್
ಪ್ರಧಾನಿ ಮೋದಿ ಮತ್ತು ನನಗೆ ಇಬ್ರಿಗೂ ‘ಹೆಂಡತಿ’ ಕಾಟ ಇಲ್ಲ : ರಾಹುಲ್ ಗಾಂಧಿ
ಪ್ರಧಾನಿ ಮೋದಿ ಮತ್ತು ನನಗೆ ಇಬ್ರಿಗೂ ‘ಹೆಂಡತಿ’ ಕಾಟ ಇಲ್ಲ : ರಾಹುಲ್ ಗಾಂಧಿ