Gautam Gambhir: ಟೀಮ್ ಇಂಡಿಯಾ ಕೋಚ್ ಆಗಿ ಗೌತಮ್ ಗಂಭೀರ್ ನೇಮಕ: ವರದಿ

Gautam Gambhir: ಐಪಿಎಲ್​ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಮೂರನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಮೂರು ಬಾರಿ ಕೂಡ ಗೌತಮ್ ಗಂಭೀರ್ ಕೆಕೆಆರ್ ತಂಡದ ಭಾಗವಾಗಿದ್ದರು ಎಂಬುದು ವಿಶೇಷ. ಅಂದರೆ 2012 ಮತ್ತು 2014 ರಲ್ಲಿ ಗಂಭೀರ್ ನಾಯಕತ್ವದಲ್ಲಿ ಕೆಕೆಆರ್ ಚಾಂಪಿಯನ್ ಪಟ್ಟಕ್ಕೇರಿದರೆ, 2024 ರಲ್ಲಿ ಗೌತಿ ಅವರ ಮಾರ್ಗದರ್ಶನದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಟ್ರೋಫಿ ಮುಡಿಗೇರಿಸಿಕೊಂಡಿದೆ. ಹೀಗಾಗಿಯೇ ಟಿ20 ವಿಶ್ವಕಪ್​ ಬಳಿಕ ರಾಹುಲ್ ದ್ರಾವಿಡ್ ಅವರ ಉತ್ತರಾಧಿಕಾರಿಯಾಗಿ ಗೌತಮ್ ಗಂಭೀರ್ ಅವರನ್ನು ನೇಮಿಸಲು ಬಿಸಿಸಿಐ ಆಸಕ್ತಿವಹಿಸಿದೆ.

|

Updated on: May 29, 2024 | 7:22 AM

ಭಾರತ ತಂಡದ ಮುಖ್ಯ ತರಬೇತುದಾರರಾಗಿ ಗೌತಮ್ ಗಂಭೀರ್ (Gautam Gambhir) ನೇಮಕವಾಗುವುದು ಬಹುತೇಕ ಖಚಿತವಾಗಿದೆ. ಐಪಿಎಲ್ 2024 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಚಾಂಪಿಯನ್ ಪಟ್ಟಕ್ಕೇರಿದ ಬೆನ್ನಲ್ಲೇ ಗಂಭೀರ್ ಅವರನ್ನು ಮುಖ್ಯ ಕೋಚ್ ಆಗಿ ನೇಮಕ ಮಾಡಲಾಗಿದೆ ಎಂದು ಐಪಿಎಲ್​ ಮಾಲೀಕರೊಬ್ಬರು ಖಚಿತಪಡಿಸಿದ್ದಾರೆ ಎಂದು ವರದಿಯಾಗಿದೆ.

ಭಾರತ ತಂಡದ ಮುಖ್ಯ ತರಬೇತುದಾರರಾಗಿ ಗೌತಮ್ ಗಂಭೀರ್ (Gautam Gambhir) ನೇಮಕವಾಗುವುದು ಬಹುತೇಕ ಖಚಿತವಾಗಿದೆ. ಐಪಿಎಲ್ 2024 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಚಾಂಪಿಯನ್ ಪಟ್ಟಕ್ಕೇರಿದ ಬೆನ್ನಲ್ಲೇ ಗಂಭೀರ್ ಅವರನ್ನು ಮುಖ್ಯ ಕೋಚ್ ಆಗಿ ನೇಮಕ ಮಾಡಲಾಗಿದೆ ಎಂದು ಐಪಿಎಲ್​ ಮಾಲೀಕರೊಬ್ಬರು ಖಚಿತಪಡಿಸಿದ್ದಾರೆ ಎಂದು ವರದಿಯಾಗಿದೆ.

1 / 5
ಇದರೊಂದಿಗೆ ರಾಹುಲ್ ದ್ರಾವಿಡ್ ಉತ್ತರಾಧಿಕಾರಿಯಾಗಿ ಗೌತಮ್ ಗಂಭೀರ್ ಕಾಣಿಸಿಕೊಳ್ಳುವುದು ಖಚಿತವಾದಂತಾಗಿದೆ. ಇದಕ್ಕೂ ಮುನ್ನವೇ ಟೀಮ್ ಇಂಡಿಯಾದ ಕೋಚ್ ಆಗಿ ಭಾರತೀಯರೊಬ್ಬರು ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಸುಳಿವು ನೀಡಿದ್ದರು.

ಇದರೊಂದಿಗೆ ರಾಹುಲ್ ದ್ರಾವಿಡ್ ಉತ್ತರಾಧಿಕಾರಿಯಾಗಿ ಗೌತಮ್ ಗಂಭೀರ್ ಕಾಣಿಸಿಕೊಳ್ಳುವುದು ಖಚಿತವಾದಂತಾಗಿದೆ. ಇದಕ್ಕೂ ಮುನ್ನವೇ ಟೀಮ್ ಇಂಡಿಯಾದ ಕೋಚ್ ಆಗಿ ಭಾರತೀಯರೊಬ್ಬರು ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಸುಳಿವು ನೀಡಿದ್ದರು.

2 / 5
ಭಾರತೀಯ ಕ್ರಿಕೆಟ್ ರಚನೆಯ ಬಗ್ಗೆ ಆಳವಾದ ತಿಳುವಳಿಕೆಯನ್ನು ಹೊಂದಿರುವ ವ್ಯಕ್ತಿಗಳನ್ನು ಗುರುತಿಸುವಲ್ಲಿ ನಾವು ಗಮನಹರಿಸಿದ್ದೇವೆ. ಟೀಮ್ ಇಂಡಿಯಾವನ್ನು ಮುಂದಿನ ಹಂತಕ್ಕೆ ಏರಿಸಲು ನಮ್ಮ ಕೋಚ್ ನಮ್ಮ ದೇಶೀಯ ಕ್ರಿಕೆಟ್ ಚೌಕಟ್ಟಿನ ಬಗ್ಗೆ ಆಳವಾದ ಜ್ಞಾನವನ್ನು ಹೊಂದಿರುವುದು ಬಹಳ ಮುಖ್ಯ. ಹೀಗಾಗಿ ಭಾರತೀಯರನ್ನು ಕೋಚ್ ಆಗಿ ನೇಮಕ ಮಾಡಲು ಬಯಸಿದ್ದೇವೆ ಎಂದು ಜಯ್ ಶಾ ತಿಳಿಸಿದ್ದರು.

ಭಾರತೀಯ ಕ್ರಿಕೆಟ್ ರಚನೆಯ ಬಗ್ಗೆ ಆಳವಾದ ತಿಳುವಳಿಕೆಯನ್ನು ಹೊಂದಿರುವ ವ್ಯಕ್ತಿಗಳನ್ನು ಗುರುತಿಸುವಲ್ಲಿ ನಾವು ಗಮನಹರಿಸಿದ್ದೇವೆ. ಟೀಮ್ ಇಂಡಿಯಾವನ್ನು ಮುಂದಿನ ಹಂತಕ್ಕೆ ಏರಿಸಲು ನಮ್ಮ ಕೋಚ್ ನಮ್ಮ ದೇಶೀಯ ಕ್ರಿಕೆಟ್ ಚೌಕಟ್ಟಿನ ಬಗ್ಗೆ ಆಳವಾದ ಜ್ಞಾನವನ್ನು ಹೊಂದಿರುವುದು ಬಹಳ ಮುಖ್ಯ. ಹೀಗಾಗಿ ಭಾರತೀಯರನ್ನು ಕೋಚ್ ಆಗಿ ನೇಮಕ ಮಾಡಲು ಬಯಸಿದ್ದೇವೆ ಎಂದು ಜಯ್ ಶಾ ತಿಳಿಸಿದ್ದರು.

3 / 5
ಇದರ ಬೆನ್ನಲ್ಲೇ ಐಪಿಎಲ್ ಫೈನಲ್ ಪಂದ್ಯದ ಬಳಿಕ ಜಯ್ ಶಾ ಹಾಗೂ ಗೌತಮ್ ಗಂಭೀರ್ ಮಾತುಕತೆ ನಡೆಸುತ್ತಿರುವ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ವೈರಲ್ ಬೆನ್ನಲ್ಲೇ ಜಿಜಿ ಟೀಮ್ ಇಂಡಿಯಾ ಕೋಚ್ ಆಗಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು.

ಇದರ ಬೆನ್ನಲ್ಲೇ ಐಪಿಎಲ್ ಫೈನಲ್ ಪಂದ್ಯದ ಬಳಿಕ ಜಯ್ ಶಾ ಹಾಗೂ ಗೌತಮ್ ಗಂಭೀರ್ ಮಾತುಕತೆ ನಡೆಸುತ್ತಿರುವ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ವೈರಲ್ ಬೆನ್ನಲ್ಲೇ ಜಿಜಿ ಟೀಮ್ ಇಂಡಿಯಾ ಕೋಚ್ ಆಗಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು.

4 / 5
ಇದೀಗ ಭಾರತದ ಮುಖ್ಯ ಕೋಚ್ ಹುದ್ದೆಗೆ ಗೌತಮ್ ಗಂಭೀರ್ ಅವರ ನೇಮಕವನ್ನು ಐಪಿಎಲ್ ಮಾಲೀಕರು ಖಚಿತಪಡಿಸಿದ್ದಾರೆ. ಅಲ್ಲದೆ ಈ ಬಗ್ಗೆ ಶೀಘ್ರದಲ್ಲೇ ಅಧಿಕೃತ ಘೋಷಣೆ ಮಾಡಲಿದ್ದಾರೆ ಎಂದು ಕ್ರಿಕ್​ಬಝ್​ ವರದಿಯಲ್ಲಿ ಹೇಳಲಾಗಿದೆ. ಹೀಗಾಗಿ ಟೀಮ್ ಇಂಡಿಯಾದ ಮುಂದಿನ ಕೋಚ್ ಆಗಿ ಜಿಜಿ (ಗೌತಮ್ ಗಂಭೀರ್) ಕಾಣಿಸಿಕೊಳ್ಳುವುದು ಬಹುತೇಕ ಖಚಿತ ಎಂದೇ ಹೇಳಬಹುದು.

ಇದೀಗ ಭಾರತದ ಮುಖ್ಯ ಕೋಚ್ ಹುದ್ದೆಗೆ ಗೌತಮ್ ಗಂಭೀರ್ ಅವರ ನೇಮಕವನ್ನು ಐಪಿಎಲ್ ಮಾಲೀಕರು ಖಚಿತಪಡಿಸಿದ್ದಾರೆ. ಅಲ್ಲದೆ ಈ ಬಗ್ಗೆ ಶೀಘ್ರದಲ್ಲೇ ಅಧಿಕೃತ ಘೋಷಣೆ ಮಾಡಲಿದ್ದಾರೆ ಎಂದು ಕ್ರಿಕ್​ಬಝ್​ ವರದಿಯಲ್ಲಿ ಹೇಳಲಾಗಿದೆ. ಹೀಗಾಗಿ ಟೀಮ್ ಇಂಡಿಯಾದ ಮುಂದಿನ ಕೋಚ್ ಆಗಿ ಜಿಜಿ (ಗೌತಮ್ ಗಂಭೀರ್) ಕಾಣಿಸಿಕೊಳ್ಳುವುದು ಬಹುತೇಕ ಖಚಿತ ಎಂದೇ ಹೇಳಬಹುದು.

5 / 5
Follow us
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ