AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL Retention 2025: ಮೂವರು ನಾಯಕರು ಸೇರಿದಂತೆ 6 ಸ್ಟಾರ್ ಆಟಗಾರರು ತಂಡದಿಂದ ಔಟ್

IPL Retention 2025:ಎಲ್ಲಾ 10 ಐಪಿಎಲ್ ತಂಡಗಳು ತಮ್ಮ ಧಾರಣ ಪಟ್ಟಿಯನ್ನು ಪ್ರಕಟಿಸಿವೆ. ರಿಷಬ್ ಪಂತ್, ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ಅರ್ಷದೀಪ್ ಸಿಂಗ್, ಜೋಸ್ ಬಟ್ಲರ್ ಮತ್ತು ಇಶಾನ್ ಕಿಶನ್ ಅವರಂತಹ ಪ್ರಮುಖ ಆಟಗಾರರನ್ನು ತಂಡಗಳು ಬಿಟ್ಟಿರುವುದು ಆಶ್ಚರ್ಯವನ್ನುಂಟು ಮಾಡಿದೆ. ಕೆಲವು ತಂಡಗಳು ಕಡಿಮೆ ಆಟಗಾರರನ್ನು ಉಳಿಸಿಕೊಂಡಿರುವುದು ಗಮನಾರ್ಹ.

ಪೃಥ್ವಿಶಂಕರ
|

Updated on: Oct 31, 2024 | 6:55 PM

Share
ಎಲ್ಲಾ 10 ಐಪಿಎಲ್ ತಂಡಗಳು ತಮ್ಮ ಧಾರಣ ಪಟ್ಟಿಯನ್ನು ಪ್ರಕಟಿಸಿವೆ. ತಾವು ಉಳಿಸಿಕೊಂಡಿರುವ ಪಟ್ಟಿಯನ್ನು ಪ್ರಕಟಿಸುವುದಕ್ಕೂ ಅಚ್ಚರಿಯ ನಿರ್ಧಾರಗಳನ್ನು ತೆಗೆದುಕೊಂಡಿರುವ ಕೆಲವು ಫ್ರಾಂಚೈಸಿಗಳು ತಮ್ಮ ತಂಡದಲ್ಲಿದ್ದ ಕೆಲವು ಸ್ಟಾರ್ ಆಟಗಾರನನ್ನು ತಂಡದಿಂದ ಕೈಬಿಟ್ಟಿವೆ. ಈ ಪಟ್ಟಿಯಲ್ಲಿ 6 ಆಟಗಾರರು ತಂಡದಿಂದ ಹೊರಬಿದ್ದಿರುವುದು ಅಭಿಮಾನಿಗಳಿಗೆ ಶಾಕ್ ನೀಡಿದೆ.

ಎಲ್ಲಾ 10 ಐಪಿಎಲ್ ತಂಡಗಳು ತಮ್ಮ ಧಾರಣ ಪಟ್ಟಿಯನ್ನು ಪ್ರಕಟಿಸಿವೆ. ತಾವು ಉಳಿಸಿಕೊಂಡಿರುವ ಪಟ್ಟಿಯನ್ನು ಪ್ರಕಟಿಸುವುದಕ್ಕೂ ಅಚ್ಚರಿಯ ನಿರ್ಧಾರಗಳನ್ನು ತೆಗೆದುಕೊಂಡಿರುವ ಕೆಲವು ಫ್ರಾಂಚೈಸಿಗಳು ತಮ್ಮ ತಂಡದಲ್ಲಿದ್ದ ಕೆಲವು ಸ್ಟಾರ್ ಆಟಗಾರನನ್ನು ತಂಡದಿಂದ ಕೈಬಿಟ್ಟಿವೆ. ಈ ಪಟ್ಟಿಯಲ್ಲಿ 6 ಆಟಗಾರರು ತಂಡದಿಂದ ಹೊರಬಿದ್ದಿರುವುದು ಅಭಿಮಾನಿಗಳಿಗೆ ಶಾಕ್ ನೀಡಿದೆ.

1 / 7
ರಿಷಬ್ ಪಂತ್: ಕಳೆದ 9 ವರ್ಷಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಜೀವಾಳವಾಗಿದ್ದ ರಿಷಬ್ ಪಂತ್ ಇದೇ ಮೊದಲ ಬಾರಿಗೆ ತಂಡದಿಂದ ಹೊರಬರಲು ನಿರ್ಧರಿಸಿದ್ದು, ಮುಂದಿನ ಆವೃತ್ತಿಯಿಂದ ಅವರು ಹೊಸ ತಂಡದಲ್ಲಿ ಆಡುವುದನ್ನು ಕಾಣಬಹುದು. ಪಂತ್​ರನ್ನು ತಂಡದಿಂದ ಕೈಬಿಟ್ಟಿರುವ ಡೆಲ್ಲಿ ಫ್ರಾಂಚೈಸಿ ಐದು ಆಟಗಾರರನ್ನು ತನ್ನಲ್ಲೇ ಉಳಿಸಿಕೊಂಡಿದೆ.

ರಿಷಬ್ ಪಂತ್: ಕಳೆದ 9 ವರ್ಷಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಜೀವಾಳವಾಗಿದ್ದ ರಿಷಬ್ ಪಂತ್ ಇದೇ ಮೊದಲ ಬಾರಿಗೆ ತಂಡದಿಂದ ಹೊರಬರಲು ನಿರ್ಧರಿಸಿದ್ದು, ಮುಂದಿನ ಆವೃತ್ತಿಯಿಂದ ಅವರು ಹೊಸ ತಂಡದಲ್ಲಿ ಆಡುವುದನ್ನು ಕಾಣಬಹುದು. ಪಂತ್​ರನ್ನು ತಂಡದಿಂದ ಕೈಬಿಟ್ಟಿರುವ ಡೆಲ್ಲಿ ಫ್ರಾಂಚೈಸಿ ಐದು ಆಟಗಾರರನ್ನು ತನ್ನಲ್ಲೇ ಉಳಿಸಿಕೊಂಡಿದೆ.

2 / 7
ಕೆಎಲ್ ರಾಹುಲ್: ತಂಡದಿಂದ ಹೊರಬಿದ್ದಿರುವ ಎರಡನೇಯ ಅಚ್ಚರಿಯ ಆಯ್ಕೆಯೆಂದರೆ, ಅದು ಕನ್ನಡಿಗ ಕೆಎಲ್ ರಾಹುಲ್. ವಾಸ್ತವವಾಗಿ ಕಳೆದ ಕೆಲವು ದಿನಗಳಿಂದ ರಾಹುಲ್​ ಬಗ್ಗೆ ಈ ರೀತಿಯ ಸುದ್ದಿಗಳು ಹರಿದಾಡುತ್ತಲೇ ಇದ್ದವು. ಇದೀಗ ಆ ಸುದ್ದಿ ನಿಜವಾಗಿದ್ದು, ಕನ್ನಡಿಗ ರಾಹುಲ್ ಲಕ್ನೋ ತಂಡದಿಂದ ಹೊರಬಿದ್ದಿದ್ದು, ಅವರೀಗ ಹರಾಜಿನಲ್ಲಿ ಯಾವ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂಬುದನ್ನು ಕಾದುನೋಡಬೇಕಿದೆ.

ಕೆಎಲ್ ರಾಹುಲ್: ತಂಡದಿಂದ ಹೊರಬಿದ್ದಿರುವ ಎರಡನೇಯ ಅಚ್ಚರಿಯ ಆಯ್ಕೆಯೆಂದರೆ, ಅದು ಕನ್ನಡಿಗ ಕೆಎಲ್ ರಾಹುಲ್. ವಾಸ್ತವವಾಗಿ ಕಳೆದ ಕೆಲವು ದಿನಗಳಿಂದ ರಾಹುಲ್​ ಬಗ್ಗೆ ಈ ರೀತಿಯ ಸುದ್ದಿಗಳು ಹರಿದಾಡುತ್ತಲೇ ಇದ್ದವು. ಇದೀಗ ಆ ಸುದ್ದಿ ನಿಜವಾಗಿದ್ದು, ಕನ್ನಡಿಗ ರಾಹುಲ್ ಲಕ್ನೋ ತಂಡದಿಂದ ಹೊರಬಿದ್ದಿದ್ದು, ಅವರೀಗ ಹರಾಜಿನಲ್ಲಿ ಯಾವ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂಬುದನ್ನು ಕಾದುನೋಡಬೇಕಿದೆ.

3 / 7
ಶ್ರೇಯಸ್ ಅಯ್ಯರ್: ಕಳೆದ ಆವೃತ್ತಿಯಲ್ಲಿ ಕೆಕೆಆರ್ ತಂಡದ ನಾಯಕತ್ವವಹಿಸಿ ತಂಡವನ್ನು ಚಾಂಪಿಯನ್‌ ಆಗಿ ಮಾಡಿದ್ದ ಶ್ರೇಯಸ್ ಅಯ್ಯರ್​ ಅವರನ್ನು ಕೆಕೆಆರ್ ಫ್ರಾಂಚೈಸಿ ತಂಡದಿಂದ ಕೈಬಿಟ್ಟಿದೆ. ಅಯ್ಯರ್ ಅವರನ್ನು ಹೊರಗಿಟ್ಟಿರುವ ಕೆಕೆಆರ್ 6 ಆಟಗಾರರನ್ನು ತಂಡದಲ್ಲಿ ಉಳಿಸಿಕೊಂಡಿದೆ.

ಶ್ರೇಯಸ್ ಅಯ್ಯರ್: ಕಳೆದ ಆವೃತ್ತಿಯಲ್ಲಿ ಕೆಕೆಆರ್ ತಂಡದ ನಾಯಕತ್ವವಹಿಸಿ ತಂಡವನ್ನು ಚಾಂಪಿಯನ್‌ ಆಗಿ ಮಾಡಿದ್ದ ಶ್ರೇಯಸ್ ಅಯ್ಯರ್​ ಅವರನ್ನು ಕೆಕೆಆರ್ ಫ್ರಾಂಚೈಸಿ ತಂಡದಿಂದ ಕೈಬಿಟ್ಟಿದೆ. ಅಯ್ಯರ್ ಅವರನ್ನು ಹೊರಗಿಟ್ಟಿರುವ ಕೆಕೆಆರ್ 6 ಆಟಗಾರರನ್ನು ತಂಡದಲ್ಲಿ ಉಳಿಸಿಕೊಂಡಿದೆ.

4 / 7
ಅರ್ಷದೀಪ್ ಸಿಂಗ್: ಪಂಜಾಬ್ ಕಿಂಗ್ಸ್ ತಂಡದ ಪ್ರಮುಖ ಬೌಲರ್ ಎನಿಸಿಕೊಂಡಿದ್ದ ಅರ್ಷದೀಪ್ ಸಿಂಗ್ ಅವರನ್ನು ತಂಡದಿಂದ ಹೊರಗಿಡುವ ಅಚ್ಚರಿಯ ನಿರ್ಧಾರವನ್ನು ಪಂಜಾಬ್ ಫ್ರಾಂಚೈಸಿ ಮಾಡಿದೆ. ಕೇವಲ ಇಬ್ಬರು ಆಟಗಾರರನ್ನು ಅತ್ಯಲ್ಪ ಮೊತ್ತಕ್ಕೆ ಉಳಿಸಿಕೊಂಡಿರುವ ಪಂಜಾಬ್, ಪರ್ಸ್​ನಲ್ಲಿ ಭಾರಿ ಮೊತ್ತವನ್ನು ಬಾಕಿ ಉಳಿಸಿಕೊಂಡಿದ್ದು, ಮೆಗಾ ಹರಾಜಿನಲ್ಲಿ ಸ್ಟಾರ್ ಆಟಗಾರರನ್ನು ಖರೀದಿಸಬಹುದು.

ಅರ್ಷದೀಪ್ ಸಿಂಗ್: ಪಂಜಾಬ್ ಕಿಂಗ್ಸ್ ತಂಡದ ಪ್ರಮುಖ ಬೌಲರ್ ಎನಿಸಿಕೊಂಡಿದ್ದ ಅರ್ಷದೀಪ್ ಸಿಂಗ್ ಅವರನ್ನು ತಂಡದಿಂದ ಹೊರಗಿಡುವ ಅಚ್ಚರಿಯ ನಿರ್ಧಾರವನ್ನು ಪಂಜಾಬ್ ಫ್ರಾಂಚೈಸಿ ಮಾಡಿದೆ. ಕೇವಲ ಇಬ್ಬರು ಆಟಗಾರರನ್ನು ಅತ್ಯಲ್ಪ ಮೊತ್ತಕ್ಕೆ ಉಳಿಸಿಕೊಂಡಿರುವ ಪಂಜಾಬ್, ಪರ್ಸ್​ನಲ್ಲಿ ಭಾರಿ ಮೊತ್ತವನ್ನು ಬಾಕಿ ಉಳಿಸಿಕೊಂಡಿದ್ದು, ಮೆಗಾ ಹರಾಜಿನಲ್ಲಿ ಸ್ಟಾರ್ ಆಟಗಾರರನ್ನು ಖರೀದಿಸಬಹುದು.

5 / 7
ಜೋಸ್ ಬಟ್ಲರ್: ರಾಜಸ್ಥಾನ್ ರಾಯಲ್ಸ್ ತಂಡದ ಅನುಭವಿ ಬ್ಯಾಟ್ಸ್‌ಮನ್ ಜೋಸ್ ಬಟ್ಲರ್​ ಕೂಡ ತಂಡದಿಂದ ಹೊರಬಿದ್ದಿದ್ದಾರೆ. ತಂಡದ ಬ್ಯಾಟಿಂಗ್‌ ಬೆನ್ನೇಲುಬಾಗಿದ್ದ ಬಟ್ಲರ್​ ಅವರನ್ನು ತಂಡದಿಂದ ಕೈಬಿಟ್ಟಿರುವ ಫ್ರಾಂಚೈಸಿ ಈಗಾಗಲೇ 6 ಆಟಗಾರರನ್ನು ತಂಡದಲ್ಲಿ ಉಳಿಸಿಕೊಂಡಿದೆ. ಇದರರ್ಥ ಬಟ್ಲರ್ ಹರಾಜಿನಲ್ಲಿ ಹೊಸ ತಂಡ ಸೇರುವ ಸಾಧ್ಯತೆಗಳಿವೆ.

ಜೋಸ್ ಬಟ್ಲರ್: ರಾಜಸ್ಥಾನ್ ರಾಯಲ್ಸ್ ತಂಡದ ಅನುಭವಿ ಬ್ಯಾಟ್ಸ್‌ಮನ್ ಜೋಸ್ ಬಟ್ಲರ್​ ಕೂಡ ತಂಡದಿಂದ ಹೊರಬಿದ್ದಿದ್ದಾರೆ. ತಂಡದ ಬ್ಯಾಟಿಂಗ್‌ ಬೆನ್ನೇಲುಬಾಗಿದ್ದ ಬಟ್ಲರ್​ ಅವರನ್ನು ತಂಡದಿಂದ ಕೈಬಿಟ್ಟಿರುವ ಫ್ರಾಂಚೈಸಿ ಈಗಾಗಲೇ 6 ಆಟಗಾರರನ್ನು ತಂಡದಲ್ಲಿ ಉಳಿಸಿಕೊಂಡಿದೆ. ಇದರರ್ಥ ಬಟ್ಲರ್ ಹರಾಜಿನಲ್ಲಿ ಹೊಸ ತಂಡ ಸೇರುವ ಸಾಧ್ಯತೆಗಳಿವೆ.

6 / 7
ಇಶಾನ್ ಕಿಶನ್: ಮುಂಬೈ ತಂಡದ ಆರಂಭಿಕ ಆಟಗಾರ ಹಾಗೂ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್ ಅವರನ್ನು ತಂಡದಿಂದ ಕೈಬಿಡುವ ಅಚ್ಚರಿಯ ನಿರ್ಧಾರವನ್ನ ಮುಂಬೈ ಫ್ರಾಂಚೈಸಿ ತೆಗೆದುಕೊಂಡಿದೆ. ಕಳೆದ ಕೆಲವು ಆವೃತ್ತಿಗಳಲ್ಲಿ ಕಿಶನ್ ಪ್ರದರ್ಶನ ಅಷ್ಟು ಉತ್ತಮವಾಗಿರಲಿಲ್ಲ. ಹೀಗಾಗಿ ಅವರನ್ನು ತಂಡದಿಂದ ಕೈಬಿಟ್ಟಿರುವ ಸಾಧ್ಯತೆಗಳು ಹೆಚ್ಚಾಗಿವೆ.

ಇಶಾನ್ ಕಿಶನ್: ಮುಂಬೈ ತಂಡದ ಆರಂಭಿಕ ಆಟಗಾರ ಹಾಗೂ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್ ಅವರನ್ನು ತಂಡದಿಂದ ಕೈಬಿಡುವ ಅಚ್ಚರಿಯ ನಿರ್ಧಾರವನ್ನ ಮುಂಬೈ ಫ್ರಾಂಚೈಸಿ ತೆಗೆದುಕೊಂಡಿದೆ. ಕಳೆದ ಕೆಲವು ಆವೃತ್ತಿಗಳಲ್ಲಿ ಕಿಶನ್ ಪ್ರದರ್ಶನ ಅಷ್ಟು ಉತ್ತಮವಾಗಿರಲಿಲ್ಲ. ಹೀಗಾಗಿ ಅವರನ್ನು ತಂಡದಿಂದ ಕೈಬಿಟ್ಟಿರುವ ಸಾಧ್ಯತೆಗಳು ಹೆಚ್ಚಾಗಿವೆ.

7 / 7
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!