AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಭೀರ ಆರೋಪ ಹೊರಿಸಿ ತಂಡ ತೊರೆದ ಶಶಾಂಕ್ ಸಿಂಗ್

Shashank Singh's Big Move: ಐಪಿಎಲ್ ಸ್ಟಾರ್ ಆಲ್‌ರೌಂಡರ್ ಶಶಾಂಕ್ ಸಿಂಗ್ ಛತ್ತೀಸ್‌ಗಢ ತೊರೆದು ಪುದುಚೇರಿ ಸೇರಲು ನಿರ್ಧರಿಸಿದ್ದಾರೆ. ಗಾಯದ ಸಂದರ್ಭದಲ್ಲಿ ಬೆಂಬಲ ಸಿಗದಿರುವುದು ಮತ್ತು ಕ್ರಿಕೆಟ್ ಸಂಘದಿಂದಾದ ನಿರಾಕರಣೆ ಇದಕ್ಕೆ ಪ್ರಮುಖ ಕಾರಣ. 2026-27ರ ಸೀಸನ್‌ನಿಂದ ಪುದುಚೇರಿ ಪರ ಆಡಲಿರುವ ಶಶಾಂಕ್, ವೈಟ್-ಬಾಲ್ ಕ್ರಿಕೆಟ್ ಮತ್ತು ಬೌಲಿಂಗ್ ಸುಧಾರಣೆಯತ್ತ ಗಮನ ಹರಿಸುವುದಾಗಿ ತಿಳಿಸಿದ್ದಾರೆ. ಈ ನಿರ್ಧಾರ ಅವರ ವೃತ್ತಿಜೀವನಕ್ಕೆ ಹೊಸ ತಿರುವು ನೀಡಲಿದೆ.

ಪೃಥ್ವಿಶಂಕರ
|

Updated on: Aug 03, 2026 | 10:18 PM

Share
ಐಪಿಎಲ್‌ನಲ್ಲಿ ಪಂಜಾಬ್ ಕಿಂಗ್ಸ್ ತಂಡದ ಪರ ಆಡುವ ಸ್ಟಾರ್ ಆಲ್‌ರೌಂಡರ್ ಶಶಾಂಕ್ ಸಿಂಗ್ ದೇಶೀಯ ಕ್ರಿಕೆಟ್‌ನಲ್ಲಿ ತಂಡವನ್ನು ಬದಲಿಸುವ ನಿರ್ಧಾರ ತೆಗೆದುಕೊಂಡಿದ್ದಾರೆ. ಇಲ್ಲಿಯವರೆಗೆ ಛತ್ತೀಸ್‌ಗಢ ಪರ ದೇಶಿಯ ಕ್ರಿಕೆಟ್ ಆಡುತ್ತಿದ್ದ ಶಶಾಂಕ್ ಸಿಂಗ್ ಇದೀಗ ಛತ್ತೀಸ್‌ಗಢವನ್ನು ತೊರೆದು 2026-27ರ ಸೀಸನ್​ನಿಂದ ಪುದುಚೇರಿ ಪರ ಆಡುವ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಛತ್ತೀಸ್‌ಗಢ ರಾಜ್ಯ ಕ್ರಿಕೆಟ್ ಸಂಘದಿಂದ ನಿರಾಕ್ಷೇಪಣಾ ಪ್ರಮಾಣಪತ್ರ ಪಡೆದಿರುವುದಾಗಿ ಶಶಾಂಕ್ ಹೇಳಿದ್ದಾರೆ(PC-PTI).

ಐಪಿಎಲ್‌ನಲ್ಲಿ ಪಂಜಾಬ್ ಕಿಂಗ್ಸ್ ತಂಡದ ಪರ ಆಡುವ ಸ್ಟಾರ್ ಆಲ್‌ರೌಂಡರ್ ಶಶಾಂಕ್ ಸಿಂಗ್ ದೇಶೀಯ ಕ್ರಿಕೆಟ್‌ನಲ್ಲಿ ತಂಡವನ್ನು ಬದಲಿಸುವ ನಿರ್ಧಾರ ತೆಗೆದುಕೊಂಡಿದ್ದಾರೆ. ಇಲ್ಲಿಯವರೆಗೆ ಛತ್ತೀಸ್‌ಗಢ ಪರ ದೇಶಿಯ ಕ್ರಿಕೆಟ್ ಆಡುತ್ತಿದ್ದ ಶಶಾಂಕ್ ಸಿಂಗ್ ಇದೀಗ ಛತ್ತೀಸ್‌ಗಢವನ್ನು ತೊರೆದು 2026-27ರ ಸೀಸನ್​ನಿಂದ ಪುದುಚೇರಿ ಪರ ಆಡುವ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಛತ್ತೀಸ್‌ಗಢ ರಾಜ್ಯ ಕ್ರಿಕೆಟ್ ಸಂಘದಿಂದ ನಿರಾಕ್ಷೇಪಣಾ ಪ್ರಮಾಣಪತ್ರ ಪಡೆದಿರುವುದಾಗಿ ಶಶಾಂಕ್ ಹೇಳಿದ್ದಾರೆ(PC-PTI).

1 / 5
ಈ ಬಗ್ಗೆ ಟೈಮ್ಸ್ ಆಫ್ ಇಂಡಿಯಾ ಜೊತೆ ಮಾತನಾಡಿರುವ ಶಶಾಂಕ್, ‘ಹೌದು, ನಾನು ಛತ್ತೀಸ್‌ಗಢ ತೊರೆಯುತ್ತಿದ್ದೇನೆ. ನಾನು ಛತ್ತೀಸ್‌ಗಢ ರಾಜ್ಯ ಕ್ರಿಕೆಟ್ ಸಂಘದಿಂದ ಎನ್‌ಒಸಿ ಪಡೆದಿದ್ದೇನೆ ಮತ್ತು 2026-27ರ ಆವೃತ್ತಿಯಿಂದ ಪುದುಚೇರಿ ಪರ ಆಡುತ್ತೇನೆ. ಕಳೆದ ಆವೃತ್ತಿಯಲ್ಲಿ, ನಾನು ಗಂಭೀರ ಭುಜ ಮತ್ತು ಬೆರಳಿನ ಗಾಯಗಳಿಂದ ಬಳಲುತ್ತಿದ್ದೆ, ಆದರೆ ಛತ್ತೀಸ್‌ಗಢ ರಾಜ್ಯ ಕ್ರಿಕೆಟ್ ಸಂಘವು ಆ ಕಷ್ಟದ ಸಮಯದಲ್ಲಿ ನನಗೆ ಯಾವುದೇ ಬೆಂಬಲ ನೀಡಲಿಲ್ಲ(PC-PTI).

ಈ ಬಗ್ಗೆ ಟೈಮ್ಸ್ ಆಫ್ ಇಂಡಿಯಾ ಜೊತೆ ಮಾತನಾಡಿರುವ ಶಶಾಂಕ್, ‘ಹೌದು, ನಾನು ಛತ್ತೀಸ್‌ಗಢ ತೊರೆಯುತ್ತಿದ್ದೇನೆ. ನಾನು ಛತ್ತೀಸ್‌ಗಢ ರಾಜ್ಯ ಕ್ರಿಕೆಟ್ ಸಂಘದಿಂದ ಎನ್‌ಒಸಿ ಪಡೆದಿದ್ದೇನೆ ಮತ್ತು 2026-27ರ ಆವೃತ್ತಿಯಿಂದ ಪುದುಚೇರಿ ಪರ ಆಡುತ್ತೇನೆ. ಕಳೆದ ಆವೃತ್ತಿಯಲ್ಲಿ, ನಾನು ಗಂಭೀರ ಭುಜ ಮತ್ತು ಬೆರಳಿನ ಗಾಯಗಳಿಂದ ಬಳಲುತ್ತಿದ್ದೆ, ಆದರೆ ಛತ್ತೀಸ್‌ಗಢ ರಾಜ್ಯ ಕ್ರಿಕೆಟ್ ಸಂಘವು ಆ ಕಷ್ಟದ ಸಮಯದಲ್ಲಿ ನನಗೆ ಯಾವುದೇ ಬೆಂಬಲ ನೀಡಲಿಲ್ಲ(PC-PTI).

2 / 5
ಅಲ್ಲದೆ ದೇಶಿಯ ಸೀಸನ್ ಮುಗಿದ ನಂತರ, ಛತ್ತೀಸ್‌ಗಢ ಕ್ರಿಕೆಟ್ ಪ್ರೀಮಿಯರ್ ಲೀಗ್ 2026 ರ ಆಟಗಾರರ ಪಟ್ಟಿಯಲ್ಲಿ ನನ್ನ ಹೆಸರನ್ನು ಸೇರಿಸಲಾಗಿಲ್ಲ. ಇದಲ್ಲದೆ, ಬೆಂಗಳೂರಿನಲ್ಲಿ ನಡೆದ ಪೂರ್ವ-ಸೀಸನ್ ಶಿಬಿರಕ್ಕೆ ಹೋದ ಛತ್ತೀಸ್‌ಗಢ ತಂಡದಲ್ಲಿ ನನ್ನ ಹೆಸರನ್ನು ಸೇರಿಸಲಾಗಿಲ್ಲ. ನನ್ನನ್ನು ಏಕೆ ಆಯ್ಕೆ ಮಾಡಲಿಲ್ಲ ಎಂದು ನಾನು ಕೇಳಿದೆ, ಆದರೆ ಯಾವುದೇ ಉತ್ತರ ಸಿಗಲಿಲ್ಲ(PC-PTI).

ಅಲ್ಲದೆ ದೇಶಿಯ ಸೀಸನ್ ಮುಗಿದ ನಂತರ, ಛತ್ತೀಸ್‌ಗಢ ಕ್ರಿಕೆಟ್ ಪ್ರೀಮಿಯರ್ ಲೀಗ್ 2026 ರ ಆಟಗಾರರ ಪಟ್ಟಿಯಲ್ಲಿ ನನ್ನ ಹೆಸರನ್ನು ಸೇರಿಸಲಾಗಿಲ್ಲ. ಇದಲ್ಲದೆ, ಬೆಂಗಳೂರಿನಲ್ಲಿ ನಡೆದ ಪೂರ್ವ-ಸೀಸನ್ ಶಿಬಿರಕ್ಕೆ ಹೋದ ಛತ್ತೀಸ್‌ಗಢ ತಂಡದಲ್ಲಿ ನನ್ನ ಹೆಸರನ್ನು ಸೇರಿಸಲಾಗಿಲ್ಲ. ನನ್ನನ್ನು ಏಕೆ ಆಯ್ಕೆ ಮಾಡಲಿಲ್ಲ ಎಂದು ನಾನು ಕೇಳಿದೆ, ಆದರೆ ಯಾವುದೇ ಉತ್ತರ ಸಿಗಲಿಲ್ಲ(PC-PTI).

3 / 5
ನಾನು ಐಪಿಎಲ್‌ನಲ್ಲಿ ಮಾತ್ರ ಆಡಲು ಬಯಸುವುದಾಗಿಯೂ ಮತ್ತು ನನಗೆ ಛತ್ತೀಸ್‌ಗಢ ಪರ ದೇಶೀಯ ಕ್ರಿಕೆಟ್ ಆಡುವುದಕ್ಕೆ ಆಸಕ್ತಿ ಇಲ್ಲ ಎಂದು ನನ್ನ ಮೇಲೆ ಆರೋಪ ಹೊರಿಸಲಾಯಿತು. ಸತ್ಯವೆಂದರೆ, ಕಳೆದ ವರ್ಷವಷ್ಟೇ, ಬಿಸಿಸಿಐ, 2023-24 ದೇಶೀಯ ಸೀಮಿತ ಓವರ್‌ಗಳ ಸೀಸನ್​ನ ಅತ್ಯುತ್ತಮ ಆಲ್‌ರೌಂಡರ್ ಆಗಿ ಲಾಲಾ ಅಮರನಾಥ್ ಪ್ರಶಸ್ತಿಯನ್ನು ನೀಡಿ ಗೌರವಿಸಿತು(PC-PTI).

ನಾನು ಐಪಿಎಲ್‌ನಲ್ಲಿ ಮಾತ್ರ ಆಡಲು ಬಯಸುವುದಾಗಿಯೂ ಮತ್ತು ನನಗೆ ಛತ್ತೀಸ್‌ಗಢ ಪರ ದೇಶೀಯ ಕ್ರಿಕೆಟ್ ಆಡುವುದಕ್ಕೆ ಆಸಕ್ತಿ ಇಲ್ಲ ಎಂದು ನನ್ನ ಮೇಲೆ ಆರೋಪ ಹೊರಿಸಲಾಯಿತು. ಸತ್ಯವೆಂದರೆ, ಕಳೆದ ವರ್ಷವಷ್ಟೇ, ಬಿಸಿಸಿಐ, 2023-24 ದೇಶೀಯ ಸೀಮಿತ ಓವರ್‌ಗಳ ಸೀಸನ್​ನ ಅತ್ಯುತ್ತಮ ಆಲ್‌ರೌಂಡರ್ ಆಗಿ ಲಾಲಾ ಅಮರನಾಥ್ ಪ್ರಶಸ್ತಿಯನ್ನು ನೀಡಿ ಗೌರವಿಸಿತು(PC-PTI).

4 / 5
ಈ ಆವೃತ್ತಿಯಿಂದ ಪುದುಚೇರಿ ಪರ ದೇಶಿಯ ಕ್ರಿಕೆಟ್ ಆಡಲಿರುವ ಶಶಾಂಕ್ ಸಿಂಗ್ ವೈಟ್-ಬಾಲ್ ಕ್ರಿಕೆಟ್‌ನತ್ತ ಹೆಚ್ಚು ಗಮನಹರಿಸುವುದಾಗಿ ತಿಳಿಸಿದ್ದಾರೆ. ವರದಿಗಳ ಪ್ರಕಾರ, ಶಶಾಂಕ್ ಈ ಆವೃತ್ತಿಯಲ್ಲಿ ರೆಡ್-ಬಾಲ್ ಕ್ರಿಕೆಟ್‌ನಿಂದ ವಿರಾಮ ತೆಗೆದುಕೊಂಡು ತಮ್ಮ ಬೌಲಿಂಗ್ ಅನ್ನು ಸುಧಾರಿಸುವುದರ ಮೇಲೆ ಕೆಲಸ ಮಾಡಲಿದ್ದಾರೆ ಎಂದು ವರದಿಯಾಗಿದೆ(PC-PTI).

ಈ ಆವೃತ್ತಿಯಿಂದ ಪುದುಚೇರಿ ಪರ ದೇಶಿಯ ಕ್ರಿಕೆಟ್ ಆಡಲಿರುವ ಶಶಾಂಕ್ ಸಿಂಗ್ ವೈಟ್-ಬಾಲ್ ಕ್ರಿಕೆಟ್‌ನತ್ತ ಹೆಚ್ಚು ಗಮನಹರಿಸುವುದಾಗಿ ತಿಳಿಸಿದ್ದಾರೆ. ವರದಿಗಳ ಪ್ರಕಾರ, ಶಶಾಂಕ್ ಈ ಆವೃತ್ತಿಯಲ್ಲಿ ರೆಡ್-ಬಾಲ್ ಕ್ರಿಕೆಟ್‌ನಿಂದ ವಿರಾಮ ತೆಗೆದುಕೊಂಡು ತಮ್ಮ ಬೌಲಿಂಗ್ ಅನ್ನು ಸುಧಾರಿಸುವುದರ ಮೇಲೆ ಕೆಲಸ ಮಾಡಲಿದ್ದಾರೆ ಎಂದು ವರದಿಯಾಗಿದೆ(PC-PTI).

5 / 5
Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ