AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಪಿಎಲ್​ನಲ್ಲಿ ‘ಹ್ಯಾಟ್ರಿಕ್’ ಟ್ರೋಫಿ ಗೆದ್ದ ಮೂವರು ಆಟಗಾರರು ಯಾರು ಗೊತ್ತಾ?

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಸತತವಾಗಿ 2 ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದು ಕೇವಲ ಮೂರು ತಂಡಗಳು ಮಾತ್ರ. ಈ ಸಾಧನೆ ಮಾಡಿದ ಮೊದಲ ತಂಡ ಚೆನ್ನೈ ಸೂಪರ್ ಕಿಂಗ್ಸ್, ಇದಾದ ಬಳಿಕ ಮುಂಬೈ ಇಂಡಿಯನ್ಸ್ ಈ ದಾಖಲೆಯನ್ನು ಸರಿಗಟ್ಟಿದ್ದರು. ಇದೀಗ ಆರ್​ಸಿಬಿ ಕೂಡ ಬ್ಯಾಕ್ ಟು ಬ್ಯಾಕ್ ಚಾಂಪಿಯನ್ ಪಟ್ಟ ಅಲಂಕರಿಸಿದ್ದಾರೆ. ಈ ಚಾಂಪಿಯನ್ ಪಟ್ಟದೊಂದಿಗೆ ಆರ್​ಸಿಬಿ ತಂಡದ ಇಬ್ಬರು ಆಟಗಾರರು ವಿಶೇಷ ದಾಖಲೆ ಬರೆದಿದ್ದಾರೆ.

ಝಾಹಿರ್ ಯೂಸುಫ್
|

Updated on: Jun 02, 2026 | 2:43 PM

Share
ಇಂಡಿಯನ್ ಪ್ರೀಮಿಯರ್ ಲೀಗ್​ ಇತಿಹಾಸದಲ್ಲಿ ಅತೀ ಹೆಚ್ಚು ಬಾರಿ ಟ್ರೋಫಿ ಗೆದ್ದ ದಾಖಲೆ ರೋಹಿತ್ ಶರ್ಮಾ ಹಾಗೂ ಅಂಬಾಟಿ ರಾಯುಡು ಹೆಸರಿನಲ್ಲಿದೆ. ಈ ಇಬ್ಬರು ಆಟಗಾರರು ತಲಾ 6 ಬಾರಿ ಐಪಿಎಲ್ ಟ್ರೋಫಿ ಎತ್ತಿ ಹಿಡಿದಿದ್ದಾರೆ. ಇದಾಗ್ಯೂ ಇಬ್ಬರಿಗೆ ಹ್ಯಾಟ್ರಿಕ್ ಟ್ರೋಫಿ ಗೆಲ್ಲುವ ಭಾಗ್ಯ ಲಭಿಸಿಲ್ಲ. (PC: IPL)

ಇಂಡಿಯನ್ ಪ್ರೀಮಿಯರ್ ಲೀಗ್​ ಇತಿಹಾಸದಲ್ಲಿ ಅತೀ ಹೆಚ್ಚು ಬಾರಿ ಟ್ರೋಫಿ ಗೆದ್ದ ದಾಖಲೆ ರೋಹಿತ್ ಶರ್ಮಾ ಹಾಗೂ ಅಂಬಾಟಿ ರಾಯುಡು ಹೆಸರಿನಲ್ಲಿದೆ. ಈ ಇಬ್ಬರು ಆಟಗಾರರು ತಲಾ 6 ಬಾರಿ ಐಪಿಎಲ್ ಟ್ರೋಫಿ ಎತ್ತಿ ಹಿಡಿದಿದ್ದಾರೆ. ಇದಾಗ್ಯೂ ಇಬ್ಬರಿಗೆ ಹ್ಯಾಟ್ರಿಕ್ ಟ್ರೋಫಿ ಗೆಲ್ಲುವ ಭಾಗ್ಯ ಲಭಿಸಿಲ್ಲ. (PC: IPL)

1 / 5
ಅಂದರೆ ಸತತವಾಗಿ ಮೂರು ಬಾರಿ ಟ್ರೋಫಿ ಗೆದ್ದು "ಹ್ಯಾಟ್ರಿಕ್ ಪ್ರಶಸ್ತಿ" ಮುಡಿಗೇರಿಸಿಕೊಂಡ ಅಪರೂಪದ ಸಾಧನೆ ಮಾಡಲು ರೋಹಿತ್ ಶರ್ಮಾ ಹಾಗೂ ಅಂಬಾಟಿ ರಾಯುಡುಗೆ ಸಾಧ್ಯವಾಗಿಲ್ಲ. ಈ ಸಾಧನೆ ಮಾಡಿರುವುದು ಕೇವಲ ಮೂವರು ಆಟಗಾರರು ಮಾತ್ರ. ಅವರೆಂದರೆ... (PC: IPL)

ಅಂದರೆ ಸತತವಾಗಿ ಮೂರು ಬಾರಿ ಟ್ರೋಫಿ ಗೆದ್ದು "ಹ್ಯಾಟ್ರಿಕ್ ಪ್ರಶಸ್ತಿ" ಮುಡಿಗೇರಿಸಿಕೊಂಡ ಅಪರೂಪದ ಸಾಧನೆ ಮಾಡಲು ರೋಹಿತ್ ಶರ್ಮಾ ಹಾಗೂ ಅಂಬಾಟಿ ರಾಯುಡುಗೆ ಸಾಧ್ಯವಾಗಿಲ್ಲ. ಈ ಸಾಧನೆ ಮಾಡಿರುವುದು ಕೇವಲ ಮೂವರು ಆಟಗಾರರು ಮಾತ್ರ. ಅವರೆಂದರೆ... (PC: IPL)

2 / 5
ಕರ್ಣ್ ಶರ್ಮಾ: ಐಪಿಎಲ್ ಇತಿಹಾಸದಲ್ಲಿ ಸತತವಾಗಿ ಮೂರು ಬಾರಿ ಟ್ರೋಫಿ ಗೆದ್ದ ಮೊದಲ ಆಟಗಾರ ಕರ್ಣ್ ಶರ್ಮಾ. ಸನ್‌ರೈಸರ್ಸ್ ಹೈದರಾಬಾದ್ (2016), ಮುಂಬೈ ಇಂಡಿಯನ್ಸ್ (2017), ಚೆನ್ನೈ ಸೂಪರ್ ಕಿಂಗ್ಸ್ (2018) ಪರ ಕಣಕ್ಕಿಳಿದು ಚಾಂಪಿಯನ್ ಪಟ್ಟ ಅಲಂಕರಿಸುವ ಮೂಲಕ ಹ್ಯಾಟ್ರಿಕ್ ಟ್ರೋಫಿ ಗೆದ್ದ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. (PC: IPL)

ಕರ್ಣ್ ಶರ್ಮಾ: ಐಪಿಎಲ್ ಇತಿಹಾಸದಲ್ಲಿ ಸತತವಾಗಿ ಮೂರು ಬಾರಿ ಟ್ರೋಫಿ ಗೆದ್ದ ಮೊದಲ ಆಟಗಾರ ಕರ್ಣ್ ಶರ್ಮಾ. ಸನ್‌ರೈಸರ್ಸ್ ಹೈದರಾಬಾದ್ (2016), ಮುಂಬೈ ಇಂಡಿಯನ್ಸ್ (2017), ಚೆನ್ನೈ ಸೂಪರ್ ಕಿಂಗ್ಸ್ (2018) ಪರ ಕಣಕ್ಕಿಳಿದು ಚಾಂಪಿಯನ್ ಪಟ್ಟ ಅಲಂಕರಿಸುವ ಮೂಲಕ ಹ್ಯಾಟ್ರಿಕ್ ಟ್ರೋಫಿ ಗೆದ್ದ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. (PC: IPL)

3 / 5
ಫಿಲ್ ಸಾಲ್ಟ್: ಕರ್ಣ್  ಶರ್ಮಾ ಬಳಿಕ ಈ ಸಾಧನೆ ಮಾಡಿದ್ದು ಫಿಲ್ ಸಾಲ್ಟ್. 2024 ರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಪರ ಕಣಕ್ಕಿಳಿದು ಟ್ರೋಫಿ ಎತ್ತಿ ಹಿಡಿದಿದ್ದ ಸಾಲ್ಟ್, ಆ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು (2025, 2026) ಪರ ಎರಡು ಟ್ರೋಫಿ ಗೆದ್ದಿದ್ದಾರೆ. ಈ ಮೂಲಕ ಐಪಿಎಲ್​ನಲ್ಲಿ ಹ್ಯಾಟ್ರಿಕ್ ಟ್ರೋಫಿ ಸಾಧನೆ ಮಾಡಿದ್ದಾರೆ. (PC: IPL)

ಫಿಲ್ ಸಾಲ್ಟ್: ಕರ್ಣ್  ಶರ್ಮಾ ಬಳಿಕ ಈ ಸಾಧನೆ ಮಾಡಿದ್ದು ಫಿಲ್ ಸಾಲ್ಟ್. 2024 ರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಪರ ಕಣಕ್ಕಿಳಿದು ಟ್ರೋಫಿ ಎತ್ತಿ ಹಿಡಿದಿದ್ದ ಸಾಲ್ಟ್, ಆ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು (2025, 2026) ಪರ ಎರಡು ಟ್ರೋಫಿ ಗೆದ್ದಿದ್ದಾರೆ. ಈ ಮೂಲಕ ಐಪಿಎಲ್​ನಲ್ಲಿ ಹ್ಯಾಟ್ರಿಕ್ ಟ್ರೋಫಿ ಸಾಧನೆ ಮಾಡಿದ್ದಾರೆ. (PC: IPL)

4 / 5
ಸುಯಶ್ ಶರ್ಮಾ: ಫಿಲ್ ಸಾಲ್ಟ್ ಜೊತೆ ಐಪಿಎಲ್​ ಹ್ಯಾಟ್ರಿಕ್ ಟ್ರೋಫಿ ಸಾಧನೆ ಮಾಡಿದ ಮತ್ತೋರ್ವ ಆಟಗಾರ ಸುಯಶ್ ಶರ್ಮಾ. ಕೋಲ್ಕತ್ತಾ ನೈಟ್ ರೈಡರ್ಸ್ (2024) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (2025, 2026) ಪರ ಕಣಕ್ಕಿಳಿದು ಮೂರು ವರ್ಷ ಟ್ರೋಫಿ ಎತ್ತಿ ಹಿಡಿದ ಹೆಗ್ಗಳಿಕೆಯನ್ನು ಸುಯಶ್ ತಮ್ಮದಾಗಿಸಿಕೊಂಡಿದ್ದಾರೆ. (PC: IPL)

ಸುಯಶ್ ಶರ್ಮಾ: ಫಿಲ್ ಸಾಲ್ಟ್ ಜೊತೆ ಐಪಿಎಲ್​ ಹ್ಯಾಟ್ರಿಕ್ ಟ್ರೋಫಿ ಸಾಧನೆ ಮಾಡಿದ ಮತ್ತೋರ್ವ ಆಟಗಾರ ಸುಯಶ್ ಶರ್ಮಾ. ಕೋಲ್ಕತ್ತಾ ನೈಟ್ ರೈಡರ್ಸ್ (2024) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (2025, 2026) ಪರ ಕಣಕ್ಕಿಳಿದು ಮೂರು ವರ್ಷ ಟ್ರೋಫಿ ಎತ್ತಿ ಹಿಡಿದ ಹೆಗ್ಗಳಿಕೆಯನ್ನು ಸುಯಶ್ ತಮ್ಮದಾಗಿಸಿಕೊಂಡಿದ್ದಾರೆ. (PC: IPL)

5 / 5
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಕೊನೆಗೂ ಖಾತೆ ವಹಿಸಿಕೊಂಡ ಸಚಿವ ಕೃಷ್ಣ ಭೈರೇಗೌಡ: ಜಿಬಿಎ ಕಚೇರಿಯಲ್ಲಿ ಸಭೆ
ಕೊನೆಗೂ ಖಾತೆ ವಹಿಸಿಕೊಂಡ ಸಚಿವ ಕೃಷ್ಣ ಭೈರೇಗೌಡ: ಜಿಬಿಎ ಕಚೇರಿಯಲ್ಲಿ ಸಭೆ
ಹುಬ್ಬಳ್ಳಿ ಭಂಡಿವಾಡದಲ್ಲಿ ಹತ್ತೇ ನಿಮಿಷದಲ್ಲಿ ಉಳೀತು ಇನ್ನೂರು ಮಕ್ಕಳ ಜೀವ
ಹುಬ್ಬಳ್ಳಿ ಭಂಡಿವಾಡದಲ್ಲಿ ಹತ್ತೇ ನಿಮಿಷದಲ್ಲಿ ಉಳೀತು ಇನ್ನೂರು ಮಕ್ಕಳ ಜೀವ
ಒಬ್ಬೊಬ್ರಿಗೆ ಕೊಡ್ತೀನಿ ನೋಡಿ; ಸಮಂತಾ ಎಚ್ಚರಿಕೆ ನೀಡಿದ್ದು ಯಾರಿಗೆ?
ಒಬ್ಬೊಬ್ರಿಗೆ ಕೊಡ್ತೀನಿ ನೋಡಿ; ಸಮಂತಾ ಎಚ್ಚರಿಕೆ ನೀಡಿದ್ದು ಯಾರಿಗೆ?
ಎಸಿಎಫ್​​ ಮನೆಯಲ್ಲಿ ಖಜಾನೆ ಕಂಡು ಲೋಕಾಯಕ್ತ ಅಧಿಕಾರಿಗಳೇ ಶಾಕ್​​
ಎಸಿಎಫ್​​ ಮನೆಯಲ್ಲಿ ಖಜಾನೆ ಕಂಡು ಲೋಕಾಯಕ್ತ ಅಧಿಕಾರಿಗಳೇ ಶಾಕ್​​
ಮೈಸೂರು ಪಬ್​​ ದುರಂತ ಕೇಸ್​​ಗೆ ಟ್ವಿಸ್ಟ್​​: ಕೇಳಿಬಂತು ಸ್ಫೋಟಕ ಆರೋಪ
ಮೈಸೂರು ಪಬ್​​ ದುರಂತ ಕೇಸ್​​ಗೆ ಟ್ವಿಸ್ಟ್​​: ಕೇಳಿಬಂತು ಸ್ಫೋಟಕ ಆರೋಪ
ಮೇಲ್ಛಾವಣಿ ಕುಸಿತದಿಂದ ಜೀವ ಭಯದಲ್ಲೇ ಸರ್ಕಾರಿ ಶಾಲೆಗೆ ಬರುತ್ತಿರುವ ಮಕ್ಕಳು
ಮೇಲ್ಛಾವಣಿ ಕುಸಿತದಿಂದ ಜೀವ ಭಯದಲ್ಲೇ ಸರ್ಕಾರಿ ಶಾಲೆಗೆ ಬರುತ್ತಿರುವ ಮಕ್ಕಳು
ಸೋಲುವ ಪಂದ್ಯವನ್ನು ಟೈ ಮಾಡಿ, ಆಮೇಲೆ ಸೋತ ಟೀಮ್ ಇಂಡಿಯಾ
ಸೋಲುವ ಪಂದ್ಯವನ್ನು ಟೈ ಮಾಡಿ, ಆಮೇಲೆ ಸೋತ ಟೀಮ್ ಇಂಡಿಯಾ
ಈ ರಾಶಿಯವರಿಗಿಂದು ಹಣದ ವಿಷಯದಲ್ಲಿ ಆತುರದ ನಿರ್ಧಾರ ಬೇಡ
ಈ ರಾಶಿಯವರಿಗಿಂದು ಹಣದ ವಿಷಯದಲ್ಲಿ ಆತುರದ ನಿರ್ಧಾರ ಬೇಡ
ಗರುಡ ಪುರಾಣದ ಪ್ರಕಾರ ಊಟ ಎಲ್ಲಿ ಮಾಡಬೇಕು, ಎಲ್ಲಿ ಮಾಡಬಾರದು? ಫಲಗಳೇನು?
ಗರುಡ ಪುರಾಣದ ಪ್ರಕಾರ ಊಟ ಎಲ್ಲಿ ಮಾಡಬೇಕು, ಎಲ್ಲಿ ಮಾಡಬಾರದು? ಫಲಗಳೇನು?
2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಸಾರಥ್ಯ?ಇದಕ್ಕೆ ಅವರು ಹೇಳಿದ್ದೇನು?
2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಸಾರಥ್ಯ?ಇದಕ್ಕೆ ಅವರು ಹೇಳಿದ್ದೇನು?