AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವಕಪ್​ನಲ್ಲಿ ಸೆಮಿಫೈನಲ್​ ಆಡಲಿರುವ 4 ತಂಡಗಳನ್ನು ಹೆಸರಿಸಿದ ಇರ್ಫಾನ್ ಪಠಾಣ್

ODI World Cup 2023: ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಅಕ್ಟೋಬರ್ 5 ರಿಂದ ಶುರುವಾಗಲಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ.

TV9 Web
| Edited By: |

Updated on:Sep 25, 2023 | 11:01 PM

Share
ಏಕದಿನ ವಿಶ್ವಕಪ್​ಗೆ ದಿನಗಣನೆ ಶುರುವಾಗಿದೆ. ಅಕ್ಟೋಬರ್ 5 ರಿಂದ ಆರಂಭವಾಗಲಿರುವ ಕ್ರಿಕೆಟ್ ಮಹಾಸಮರದ ಕುರಿತಾದ ಚರ್ಚೆಗಳು ಜೋರಾಗಿದೆ. ಅದರಲ್ಲೂ ಈ ಬಾರಿ ಭಾರತದಲ್ಲಿ ಟೂರ್ನಿ ನಡೆಯುತ್ತಿರುವುದರಿಂದ ಟೀಮ್ ಇಂಡಿಯಾ ಅಭಿಮಾನಿಗಳ ನಿರೀಕ್ಷೆ ದುಪ್ಪಟ್ಟಾಗಿದೆ.

ಏಕದಿನ ವಿಶ್ವಕಪ್​ಗೆ ದಿನಗಣನೆ ಶುರುವಾಗಿದೆ. ಅಕ್ಟೋಬರ್ 5 ರಿಂದ ಆರಂಭವಾಗಲಿರುವ ಕ್ರಿಕೆಟ್ ಮಹಾಸಮರದ ಕುರಿತಾದ ಚರ್ಚೆಗಳು ಜೋರಾಗಿದೆ. ಅದರಲ್ಲೂ ಈ ಬಾರಿ ಭಾರತದಲ್ಲಿ ಟೂರ್ನಿ ನಡೆಯುತ್ತಿರುವುದರಿಂದ ಟೀಮ್ ಇಂಡಿಯಾ ಅಭಿಮಾನಿಗಳ ನಿರೀಕ್ಷೆ ದುಪ್ಪಟ್ಟಾಗಿದೆ.

1 / 6
ಅತ್ತ ಟೀಮ್ ಇಂಡಿಯಾದ ಮಾಜಿ ಆಲ್​ರೌಂಡರ್ ಇರ್ಫಾನ್ ಪಠಾಣ್ ಕೂಡ ಈ ಸಲ ಭಾರತ ಮತ್ತೆ ಚಾಂಪಿಯನ್ ಪಟ್ಟ ಅಲಂಕರಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದರ ಜೊತೆಗೆ ಈ ಬಾರಿ ಸೆಮಿಫೈನಲ್ ಆಡಲಿರುವ 4 ತಂಡಗಳನ್ನೂ ಸಹ ಹೆಸರಿಸಿದ್ದಾರೆ.

ಅತ್ತ ಟೀಮ್ ಇಂಡಿಯಾದ ಮಾಜಿ ಆಲ್​ರೌಂಡರ್ ಇರ್ಫಾನ್ ಪಠಾಣ್ ಕೂಡ ಈ ಸಲ ಭಾರತ ಮತ್ತೆ ಚಾಂಪಿಯನ್ ಪಟ್ಟ ಅಲಂಕರಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದರ ಜೊತೆಗೆ ಈ ಬಾರಿ ಸೆಮಿಫೈನಲ್ ಆಡಲಿರುವ 4 ತಂಡಗಳನ್ನೂ ಸಹ ಹೆಸರಿಸಿದ್ದಾರೆ.

2 / 6
ಇರ್ಫಾನ್ ಪಠಾಣ್ ಪ್ರಕಾರ, ಈ ಬಾರಿ ಟೀಮ್ ಇಂಡಿಯಾ ಸೆಮಿಫೈನಲ್ ಹಂತಕ್ಕೇರುವುದು ಖಚಿತ. ಏಕಂದರೆ ಬಲಿಷ್ಠ ತಂಡವಾಗಿ ಗುರುತಿಸಿಕೊಂಡಿರುವ ಟೀಮ್ ಇಂಡಿಯಾದಿಂದ ತವರಿನಲ್ಲಿ ಭರ್ಜರಿ ಪ್ರದರ್ಶನ ನಿರೀಕ್ಷಿಸಬಹುದು. ಹೀಗಾಗಿ ನಾಕೌಟ್ ಹಂತಕ್ಕೇರುವುದರಲ್ಲಿ  ಅನುಮಾನ ಬೇಡ ಎಂದಿದ್ದಾರೆ ಪಠಾಣ್.

ಇರ್ಫಾನ್ ಪಠಾಣ್ ಪ್ರಕಾರ, ಈ ಬಾರಿ ಟೀಮ್ ಇಂಡಿಯಾ ಸೆಮಿಫೈನಲ್ ಹಂತಕ್ಕೇರುವುದು ಖಚಿತ. ಏಕಂದರೆ ಬಲಿಷ್ಠ ತಂಡವಾಗಿ ಗುರುತಿಸಿಕೊಂಡಿರುವ ಟೀಮ್ ಇಂಡಿಯಾದಿಂದ ತವರಿನಲ್ಲಿ ಭರ್ಜರಿ ಪ್ರದರ್ಶನ ನಿರೀಕ್ಷಿಸಬಹುದು. ಹೀಗಾಗಿ ನಾಕೌಟ್ ಹಂತಕ್ಕೇರುವುದರಲ್ಲಿ ಅನುಮಾನ ಬೇಡ ಎಂದಿದ್ದಾರೆ ಪಠಾಣ್.

3 / 6
ಇನ್ನು ಅತ್ಯುತ್ತಮ ಆಟಗಾರರನ್ನು ಒಳಗೊಂಡಿರುವ ಸೌತ್ ಆಫ್ರಿಕಾ ತಂಡದಿಂದ ಕೂಡ ಈ ಬಾರಿ ಉತ್ತಮ ಪ್ರದರ್ಶನವನ್ನು ನಿರೀಕ್ಷಿಸಬಹುದು. ಹೀಗಾಗಿ ದಕ್ಷಿಣ ಆಫ್ರಿಕಾ ಕೂಡ ಸೆಮೀಸ್​ನಲ್ಲಿ ಕಣಕ್ಕಿಳಿಯುವುದನ್ನು ಎದುರು ನೋಡಬಹುದು ಎಂದಿದ್ದಾರೆ.

ಇನ್ನು ಅತ್ಯುತ್ತಮ ಆಟಗಾರರನ್ನು ಒಳಗೊಂಡಿರುವ ಸೌತ್ ಆಫ್ರಿಕಾ ತಂಡದಿಂದ ಕೂಡ ಈ ಬಾರಿ ಉತ್ತಮ ಪ್ರದರ್ಶನವನ್ನು ನಿರೀಕ್ಷಿಸಬಹುದು. ಹೀಗಾಗಿ ದಕ್ಷಿಣ ಆಫ್ರಿಕಾ ಕೂಡ ಸೆಮೀಸ್​ನಲ್ಲಿ ಕಣಕ್ಕಿಳಿಯುವುದನ್ನು ಎದುರು ನೋಡಬಹುದು ಎಂದಿದ್ದಾರೆ.

4 / 6
ಹಾಲಿ ಚಾಂಪಿಯನ್ ಇಂಗ್ಲೆಂಡ್ ಕೂಡ ಅತ್ಯುತ್ತಮ ಬಳಗವನ್ನು ಹೊಂದಿದ್ದು, ಹೀಗಾಗಿ ಜೋಸ್ ಬಟ್ಲರ್ ಪಡೆಯಿಂದ ಭರ್ಜರಿ ಪ್ರದರ್ಶನ ನಿರೀಕ್ಷಿಸಬಹುದು. ಅಲ್ಲದೆ ಇಂಗ್ಲೆಂಡ್ ತಂಡ ಸೆಮಿಫೈನಲ್​ಗೆ ಪ್ರವೇಶಿಸಲಿದೆ ಎಂದು ಇರ್ಫಾನ್ ಪಠಾಣ್ ತಿಳಿಸಿದ್ದಾರೆ.

ಹಾಲಿ ಚಾಂಪಿಯನ್ ಇಂಗ್ಲೆಂಡ್ ಕೂಡ ಅತ್ಯುತ್ತಮ ಬಳಗವನ್ನು ಹೊಂದಿದ್ದು, ಹೀಗಾಗಿ ಜೋಸ್ ಬಟ್ಲರ್ ಪಡೆಯಿಂದ ಭರ್ಜರಿ ಪ್ರದರ್ಶನ ನಿರೀಕ್ಷಿಸಬಹುದು. ಅಲ್ಲದೆ ಇಂಗ್ಲೆಂಡ್ ತಂಡ ಸೆಮಿಫೈನಲ್​ಗೆ ಪ್ರವೇಶಿಸಲಿದೆ ಎಂದು ಇರ್ಫಾನ್ ಪಠಾಣ್ ತಿಳಿಸಿದ್ದಾರೆ.

5 / 6
ಹಾಗೆಯೇ ಆಸ್ಟ್ರೇಲಿಯಾ ತಂಡ ಕೂಡ ಸೆಮಿಫೈನಲ್​​ಗೆ ಪ್ರವೇಶಿಸಲಿದೆ. ಏಕೆಂದರೆ ಐಸಿಸಿ ಟೂರ್ನಿಗಳಲ್ಲಿ ಆಸೀಸ್ ಪಡೆ ಉತ್ತಮ ಪ್ರದರ್ಶನ ನೀಡುತ್ತಾ ಬಂದಿದೆ. ಹೀಗಾಗಿ ಆಸ್ಟ್ರೇಲಿಯಾ ಕೂಡ ಟಾಪ್-4 ನಲ್ಲಿ ಕಾಣಿಸಿಕೊಳ್ಳಲಿದೆ ಎಂದು ಇರ್ಫಾನ್ ಪಠಾಣ್ ತಿಳಿಸಿದ್ದಾರೆ.

ಹಾಗೆಯೇ ಆಸ್ಟ್ರೇಲಿಯಾ ತಂಡ ಕೂಡ ಸೆಮಿಫೈನಲ್​​ಗೆ ಪ್ರವೇಶಿಸಲಿದೆ. ಏಕೆಂದರೆ ಐಸಿಸಿ ಟೂರ್ನಿಗಳಲ್ಲಿ ಆಸೀಸ್ ಪಡೆ ಉತ್ತಮ ಪ್ರದರ್ಶನ ನೀಡುತ್ತಾ ಬಂದಿದೆ. ಹೀಗಾಗಿ ಆಸ್ಟ್ರೇಲಿಯಾ ಕೂಡ ಟಾಪ್-4 ನಲ್ಲಿ ಕಾಣಿಸಿಕೊಳ್ಳಲಿದೆ ಎಂದು ಇರ್ಫಾನ್ ಪಠಾಣ್ ತಿಳಿಸಿದ್ದಾರೆ.

6 / 6

Published On - 10:56 pm, Mon, 25 September 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್