AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ಇಲ್ಲ, ಪ್ಲೇಆಫ್ ಆಡಲಿರುವ 4 ತಂಡಗಳನ್ನು ಹೆಸರಿಸಿದ ಇರ್ಫಾನ್ ಪಠಾಣ್

IPL 2026 Playoffs: ಈ ಬಾರಿಯ ಐಪಿಎಲ್​ನಲ್ಲಿ ಪ್ಲೇಆಫ್​ ಆಡಲಿರುವ 4 ತಂಡಗಳನ್ನು ಇರ್ಫಾನ್ ಪಠಾಣ್ ಹೆಸರಿಸಿದ್ದಾರೆ. ಈ ನಾಲ್ಕು ತಂಡಗಳಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇಲ್ಲ ಎಂಬುದು ವಿಶೇಷ. ಅಂದರೆ ಇರ್ಫಾನ್ ಪಠಾಣ್ ಪ್ರಕಾರ, ಈ ಬಾರಿ ಆರ್​ಸಿಬಿ ಪ್ಲೇಆಫ್​ಗೇರುವುದಿಲ್ಲ.

ಝಾಹಿರ್ ಯೂಸುಫ್
|

Updated on: Apr 02, 2026 | 11:54 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭದ ಬೆನ್ನಲ್ಲೇ ಪ್ಲೇಆಫ್​ ಪ್ರೆಡಿಕ್ಷನ್ಸ್ ಶುರುವಾಗಿದೆ. ಈಗಾಗಲೇ ಅಂಬಾಟಿ ರಾಯುಡು ಹಾಗೂ ಮೊಹಮ್ಮದ್ ಶಮಿ ಈ ಸಲ ಪ್ಲೇಆಫ್​ಗೇರುವ ತಂಡಗಳನ್ನು ಹೆಸರಿಸಿದ್ದಾರೆ. ಇದೀಗ ಈ ಪಟ್ಟಿಗೆ ಟೀಮ್ ಇಂಡಿಯಾದ ಮಾಜಿ ಆಲ್​ರೌಂಡರ್​ ಇರ್ಫಾನ್ ಪಠಾಣ್ ಕೂಡ ಸೇರಿದ್ದಾರೆ. ಇರ್ಫಾನ್ ಪಠಾಣ್ ಪ್ರಕಾರ ಈ ಸಲ ಪ್ಲೇಆಫ್ ಆಡಲಿರುವ ತಂಡಗಳು ಈ ಕೆಳಗಿನಂತಿವೆ...

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭದ ಬೆನ್ನಲ್ಲೇ ಪ್ಲೇಆಫ್​ ಪ್ರೆಡಿಕ್ಷನ್ಸ್ ಶುರುವಾಗಿದೆ. ಈಗಾಗಲೇ ಅಂಬಾಟಿ ರಾಯುಡು ಹಾಗೂ ಮೊಹಮ್ಮದ್ ಶಮಿ ಈ ಸಲ ಪ್ಲೇಆಫ್​ಗೇರುವ ತಂಡಗಳನ್ನು ಹೆಸರಿಸಿದ್ದಾರೆ. ಇದೀಗ ಈ ಪಟ್ಟಿಗೆ ಟೀಮ್ ಇಂಡಿಯಾದ ಮಾಜಿ ಆಲ್​ರೌಂಡರ್​ ಇರ್ಫಾನ್ ಪಠಾಣ್ ಕೂಡ ಸೇರಿದ್ದಾರೆ. ಇರ್ಫಾನ್ ಪಠಾಣ್ ಪ್ರಕಾರ ಈ ಸಲ ಪ್ಲೇಆಫ್ ಆಡಲಿರುವ ತಂಡಗಳು ಈ ಕೆಳಗಿನಂತಿವೆ...

1 / 5
ಮುಂಬೈ ಇಂಡಿಯನ್ಸ್ (MI): ಹಾರ್ದಿಕ್ ಪಾಂಡ್ಯ ನಾಯಕತ್ವದ ಮುಂಬೈ ಇಂಡಿಯನ್ಸ್ ಪ್ಲೇಆಫ್​ಗೇರಲಿದೆ ಎಂದು ಇರ್ಫಾನ್ ಪಠಾಣ್ ಭವಿಷ್ಯ ನುಡಿದಿದ್ದಾರೆ. ಜಸ್​ಪ್ರೀತ್ ಬುಮ್ರಾ ಅವರ ಪುನರಾಗಮನವು ತಂಡಕ್ಕೆ ದೊಡ್ಡ ಶಕ್ತಿ ಎಂದು ಅಭಿಪ್ರಾಯಪಟ್ಟಿರುವ ಪಠಾಣ್, ರೋಹಿತ್ ಶರ್ಮಾ ಅವರ ಅನುಭವ ಮತ್ತು ಮಾರ್ಗದರ್ಶನದೊಂದಿಗೆ ಮುಂಬೈ ಪಡೆ ಪ್ಲೇಆಫ್​ಗೆ ಪ್ರವೇಶಿಸಲಿದೆ ಎಂದು ತಿಳಿಸಿದ್ದಾರೆ.

ಮುಂಬೈ ಇಂಡಿಯನ್ಸ್ (MI): ಹಾರ್ದಿಕ್ ಪಾಂಡ್ಯ ನಾಯಕತ್ವದ ಮುಂಬೈ ಇಂಡಿಯನ್ಸ್ ಪ್ಲೇಆಫ್​ಗೇರಲಿದೆ ಎಂದು ಇರ್ಫಾನ್ ಪಠಾಣ್ ಭವಿಷ್ಯ ನುಡಿದಿದ್ದಾರೆ. ಜಸ್​ಪ್ರೀತ್ ಬುಮ್ರಾ ಅವರ ಪುನರಾಗಮನವು ತಂಡಕ್ಕೆ ದೊಡ್ಡ ಶಕ್ತಿ ಎಂದು ಅಭಿಪ್ರಾಯಪಟ್ಟಿರುವ ಪಠಾಣ್, ರೋಹಿತ್ ಶರ್ಮಾ ಅವರ ಅನುಭವ ಮತ್ತು ಮಾರ್ಗದರ್ಶನದೊಂದಿಗೆ ಮುಂಬೈ ಪಡೆ ಪ್ಲೇಆಫ್​ಗೆ ಪ್ರವೇಶಿಸಲಿದೆ ಎಂದು ತಿಳಿಸಿದ್ದಾರೆ.

2 / 5
ಡೆಲ್ಲಿ ಕ್ಯಾಪಿಟಲ್ಸ್ (DC): ದೇಶೀಯ ಕ್ರಿಕೆಟ್‌ನಲ್ಲಿ ಉತ್ತಮ ಪ್ರದರ್ಶನ ನೀಡಿರುವ ಪೃಥ್ವಿ ಶಾ ಅವರು ಈ ಬಾರಿ ಏನನ್ನಾದರೂ ಸಾಧಿಸುವ ಛಲದಲ್ಲಿದ್ದಾರೆ, ಇದು ಡೆಲ್ಲಿ ಕ್ಯಾಪಿಟಲ್ಸ್​ ತಂಡಕ್ಕೆ ಪ್ಲಸ್ ಪಾಯಿಂಟ್ ಆಗಬಹುದು. ಅಲ್ಲದೆ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಅತ್ಯುತ್ತಮ ಆಟಗಾರರ ದಂಡೇ ಇದೆ. ಹೀಗಾಗಿ ಅಕ್ಷರ್ ಪಟೇಲ್ ಮುಂದಾಳತ್ವದ ಡಿಸಿ ಪಡೆ ಕೂಡ ಪ್ಲೇಆಫ್​ಗೆ ಎಂಟ್ರಿ ಕೊಡಲಿದೆ ಎಂದು ಇರ್ಫಾನ್ ಪಠಾಣ್ ಹೇಳಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್ (DC): ದೇಶೀಯ ಕ್ರಿಕೆಟ್‌ನಲ್ಲಿ ಉತ್ತಮ ಪ್ರದರ್ಶನ ನೀಡಿರುವ ಪೃಥ್ವಿ ಶಾ ಅವರು ಈ ಬಾರಿ ಏನನ್ನಾದರೂ ಸಾಧಿಸುವ ಛಲದಲ್ಲಿದ್ದಾರೆ, ಇದು ಡೆಲ್ಲಿ ಕ್ಯಾಪಿಟಲ್ಸ್​ ತಂಡಕ್ಕೆ ಪ್ಲಸ್ ಪಾಯಿಂಟ್ ಆಗಬಹುದು. ಅಲ್ಲದೆ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಅತ್ಯುತ್ತಮ ಆಟಗಾರರ ದಂಡೇ ಇದೆ. ಹೀಗಾಗಿ ಅಕ್ಷರ್ ಪಟೇಲ್ ಮುಂದಾಳತ್ವದ ಡಿಸಿ ಪಡೆ ಕೂಡ ಪ್ಲೇಆಫ್​ಗೆ ಎಂಟ್ರಿ ಕೊಡಲಿದೆ ಎಂದು ಇರ್ಫಾನ್ ಪಠಾಣ್ ಹೇಳಿದ್ದಾರೆ.

3 / 5
ಪಂಜಾಬ್ ಕಿಂಗ್ಸ್ (PBKS): ಶ್ರೇಯಸ್ ಅಯ್ಯರ್ ಕಳೆದ ಸೀಸನ್‌ನಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ್ದರು. ಈ ಬಾರಿ ಕೂಡ ಅಯ್ಯರ್ ಮುಂದಾಳತ್ವದಲ್ಲಿ ಪಂಜಾಬ್ ಪಡೆ ಉತ್ತಮ ಪ್ರದರ್ಶನ ನೀಡಲಿದೆ. ಈ ಮೂಲಕ ಪಂಜಾಬ್ ಕಿಂಗ್ಸ್ ಕೂಡ ಟಾಪ್-4 ನಲ್ಲಿ ಕಾಣಿಸಿಕೊಳ್ಳಲಿದೆ ಎಂದು ಇರ್ಫಾನ್ ಪಠಾಣ್ ಭವಿಷ್ಯ ನುಡಿದಿದ್ದಾರೆ.

ಪಂಜಾಬ್ ಕಿಂಗ್ಸ್ (PBKS): ಶ್ರೇಯಸ್ ಅಯ್ಯರ್ ಕಳೆದ ಸೀಸನ್‌ನಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ್ದರು. ಈ ಬಾರಿ ಕೂಡ ಅಯ್ಯರ್ ಮುಂದಾಳತ್ವದಲ್ಲಿ ಪಂಜಾಬ್ ಪಡೆ ಉತ್ತಮ ಪ್ರದರ್ಶನ ನೀಡಲಿದೆ. ಈ ಮೂಲಕ ಪಂಜಾಬ್ ಕಿಂಗ್ಸ್ ಕೂಡ ಟಾಪ್-4 ನಲ್ಲಿ ಕಾಣಿಸಿಕೊಳ್ಳಲಿದೆ ಎಂದು ಇರ್ಫಾನ್ ಪಠಾಣ್ ಭವಿಷ್ಯ ನುಡಿದಿದ್ದಾರೆ.

4 / 5
ರಾಜಸ್ಥಾನ್ ರಾಯಲ್ಸ್ (RR): ಆರ್​ಆರ್​ ತಂಡದ ಯುವ ಆರಂಭಿಕ ದಾಂಡಿಗ ವೈಭವ್ ಸೂರ್ಯವಂಶಿ ಅವರ ಪ್ರತಿಭೆಯ ಮೇಲೆ ಪಠಾಣ್ ಭರವಸೆ ವ್ಯಕ್ತಪಡಿಸಿದ್ದಾರೆ. ಈ ಯುವ ಆಟಗಾರ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಲಿದ್ದು, ಈ ಮೂಲಕ ರಾಜಸ್ಥಾನ್ ರಾಯಲ್ಸ್ ಕೂಡ ಈ ಬಾರಿ ಪ್ಲೇಆಫ್​ಗೇರಲಿದೆ ಎಂದು ಇರ್ಫಾನ್ ಪಠಾಣ್ ಹೇಳಿದ್ದಾರೆ.

ರಾಜಸ್ಥಾನ್ ರಾಯಲ್ಸ್ (RR): ಆರ್​ಆರ್​ ತಂಡದ ಯುವ ಆರಂಭಿಕ ದಾಂಡಿಗ ವೈಭವ್ ಸೂರ್ಯವಂಶಿ ಅವರ ಪ್ರತಿಭೆಯ ಮೇಲೆ ಪಠಾಣ್ ಭರವಸೆ ವ್ಯಕ್ತಪಡಿಸಿದ್ದಾರೆ. ಈ ಯುವ ಆಟಗಾರ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಲಿದ್ದು, ಈ ಮೂಲಕ ರಾಜಸ್ಥಾನ್ ರಾಯಲ್ಸ್ ಕೂಡ ಈ ಬಾರಿ ಪ್ಲೇಆಫ್​ಗೇರಲಿದೆ ಎಂದು ಇರ್ಫಾನ್ ಪಠಾಣ್ ಹೇಳಿದ್ದಾರೆ.

5 / 5
Follow Us
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!