AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ಭಾರತ ತಂಡದ ಭವಿಷ್ಯದ ಸೂಪರ್​ಸ್ಟಾರ್​ಗಳನ್ನು ಹೆಸರಿಸಿದ ಅನಿಲ್ ಕುಂಬ್ಳೆ

Team India: ಭಾರತ ತಂಡದಲ್ಲಿ ಹಲವು ಯುವ ಆಟಗಾರರಿದ್ದಾರೆ. ಇವರಲ್ಲಿ ಕೆಲ ಆಟಗಾರರು ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಹೀಗೆ ಅದ್ಭುತ ಪ್ರದರ್ಶನ ನೀಡಿ ಭರವಸೆ ಮೂಡಿಸಿರುವ ಇಬ್ಬರು ಆಟಗಾರರು ಭಾರತ ತಂಡದ ಭವಿಷ್ಯ ಸೂಪರ್ ಸ್ಟಾರ್ಸ್​ ಆಗಬಲ್ಲರು.

TV9 Web
| Updated By: ಝಾಹಿರ್ ಯೂಸುಫ್|

Updated on: Feb 04, 2023 | 8:30 PM

Share
ಟೀಮ್ ಇಂಡಿಯಾದ ಪ್ರಸ್ತುತ ಸೂಪರ್​ ಸ್ಟಾರ್ ಆಟಗಾರರಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಮೊಹಮ್ಮದ್ ಶಮಿ ನಿವೃತ್ತಿ ಅಂಚಿನಲ್ಲಿದ್ದಾರೆ. ಇವರ ವಿದಾಯದ ಬಳಿಕ ಭಾರತ ತಂಡವನ್ನು ಮತ್ತೊಂದು ಮಜಲಿಗೆ ಕೊಂಡೊಯ್ಯಬಲ್ಲ ಆಟಗಾರರು ಯಾರು ಎಂಬ ಪ್ರಶ್ನೆ ಆಗಾಗ್ಗೆ ಹುಟ್ಟಿಕೊಳ್ಳುತ್ತವೆ. ಇಂತಹ ಪ್ರಶ್ನೆಗಳಿಗೆ ಉತ್ತರ ನೀಡುವ ಪ್ರಯತ್ನ ಮಾಡಿದ್ದಾರೆ ಮಾಜಿ ಟೀಮ್ ಇಂಡಿಯಾ ಆಟಗಾರ ಅನಿಲ್ ಕುಂಬ್ಳೆ.

ಟೀಮ್ ಇಂಡಿಯಾದ ಪ್ರಸ್ತುತ ಸೂಪರ್​ ಸ್ಟಾರ್ ಆಟಗಾರರಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಮೊಹಮ್ಮದ್ ಶಮಿ ನಿವೃತ್ತಿ ಅಂಚಿನಲ್ಲಿದ್ದಾರೆ. ಇವರ ವಿದಾಯದ ಬಳಿಕ ಭಾರತ ತಂಡವನ್ನು ಮತ್ತೊಂದು ಮಜಲಿಗೆ ಕೊಂಡೊಯ್ಯಬಲ್ಲ ಆಟಗಾರರು ಯಾರು ಎಂಬ ಪ್ರಶ್ನೆ ಆಗಾಗ್ಗೆ ಹುಟ್ಟಿಕೊಳ್ಳುತ್ತವೆ. ಇಂತಹ ಪ್ರಶ್ನೆಗಳಿಗೆ ಉತ್ತರ ನೀಡುವ ಪ್ರಯತ್ನ ಮಾಡಿದ್ದಾರೆ ಮಾಜಿ ಟೀಮ್ ಇಂಡಿಯಾ ಆಟಗಾರ ಅನಿಲ್ ಕುಂಬ್ಳೆ.

1 / 6
ಚಿಟ್​ಚಾಟ್ ಕಾರ್ಯಕ್ರಮವೊಂದರಲ್ಲಿ ಈ ಬಗ್ಗೆ ಮಾತನಾಡಿದ ಅನಿಲ್ ಕುಂಬ್ಳೆ, ಪ್ರಸ್ತುತ ಭಾರತ ತಂಡದಲ್ಲಿ ಹಲವು ಯುವ ಆಟಗಾರರಿದ್ದಾರೆ. ಇವರಲ್ಲಿ ಕೆಲ ಆಟಗಾರರು ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಹೀಗೆ ಅದ್ಭುತ ಪ್ರದರ್ಶನ ನೀಡಿ ಭರವಸೆ ಮೂಡಿಸಿರುವ ಇಬ್ಬರು ಆಟಗಾರರು ಭಾರತ ತಂಡದ ಭವಿಷ್ಯ ಸೂಪರ್ ಸ್ಟಾರ್ಸ್​ ಆಗಬಲ್ಲರು. ಅವರೆಂದರೆ...

ಚಿಟ್​ಚಾಟ್ ಕಾರ್ಯಕ್ರಮವೊಂದರಲ್ಲಿ ಈ ಬಗ್ಗೆ ಮಾತನಾಡಿದ ಅನಿಲ್ ಕುಂಬ್ಳೆ, ಪ್ರಸ್ತುತ ಭಾರತ ತಂಡದಲ್ಲಿ ಹಲವು ಯುವ ಆಟಗಾರರಿದ್ದಾರೆ. ಇವರಲ್ಲಿ ಕೆಲ ಆಟಗಾರರು ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಹೀಗೆ ಅದ್ಭುತ ಪ್ರದರ್ಶನ ನೀಡಿ ಭರವಸೆ ಮೂಡಿಸಿರುವ ಇಬ್ಬರು ಆಟಗಾರರು ಭಾರತ ತಂಡದ ಭವಿಷ್ಯ ಸೂಪರ್ ಸ್ಟಾರ್ಸ್​ ಆಗಬಲ್ಲರು. ಅವರೆಂದರೆ...

2 / 6
ಇಶಾನ್ ಕಿಶನ್: ಟೀಮ್ ಇಂಡಿಯಾದ ಯುವ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಇಶಾನ್ ಕಿಶನ್ ಭಾರತದ ಭವಿಷ್ಯದ ತಾರೆಯಾಗಿ ಹೊರಹೊಮ್ಮಬಲ್ಲರು. ಕಳೆದ ವರ್ಷಾಂತ್ಯದಲ್ಲಿ ಏಕದಿನ ಕ್ರಿಕೆಟ್​ನಲ್ಲಿ ಯುವ ದಾಂಡಿಗ ದ್ವಿಶತಕ ಸಿಡಿಸಿ ಮಿಂಚಿದ್ದರು. ಇಶಾನ್​ಗೆ ಸಿಕ್ಕಿರುವ ಅವಕಾಶಗಳಲ್ಲಿ ಅದ್ಭುತ ಪ್ರದರ್ಶನವನ್ನೇ ನೀಡಿದ್ದಾರೆ. ಹೀಗಾಗಿ 24 ವರ್ಷದ ಇಶಾನ್ ಕಿಶನ್ ಭಾರತ ತಂಡದ ಮುಂಬರುವ ಸೂಪರ್ ಸ್ಟಾರ್ ಆಗಬಹುದು ಎಂದಿದ್ದಾರೆ ಅನಿಲ್ ಕುಂಬ್ಳೆ.

ಇಶಾನ್ ಕಿಶನ್: ಟೀಮ್ ಇಂಡಿಯಾದ ಯುವ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಇಶಾನ್ ಕಿಶನ್ ಭಾರತದ ಭವಿಷ್ಯದ ತಾರೆಯಾಗಿ ಹೊರಹೊಮ್ಮಬಲ್ಲರು. ಕಳೆದ ವರ್ಷಾಂತ್ಯದಲ್ಲಿ ಏಕದಿನ ಕ್ರಿಕೆಟ್​ನಲ್ಲಿ ಯುವ ದಾಂಡಿಗ ದ್ವಿಶತಕ ಸಿಡಿಸಿ ಮಿಂಚಿದ್ದರು. ಇಶಾನ್​ಗೆ ಸಿಕ್ಕಿರುವ ಅವಕಾಶಗಳಲ್ಲಿ ಅದ್ಭುತ ಪ್ರದರ್ಶನವನ್ನೇ ನೀಡಿದ್ದಾರೆ. ಹೀಗಾಗಿ 24 ವರ್ಷದ ಇಶಾನ್ ಕಿಶನ್ ಭಾರತ ತಂಡದ ಮುಂಬರುವ ಸೂಪರ್ ಸ್ಟಾರ್ ಆಗಬಹುದು ಎಂದಿದ್ದಾರೆ ಅನಿಲ್ ಕುಂಬ್ಳೆ.

3 / 6
ಅರ್ಷದೀಪ್ ಸಿಂಗ್: ಟೀಮ್ ಇಂಡಿಯಾದ ಎಡಗೈ ವೇಗಿ ಅರ್ಷದೀಪ್ ಸಿಂಗ್ ಕೂಡ ಭವಿಷ್ಯದಲ್ಲಿ ಪ್ರಜ್ವಲಿಸಲಿದ್ದಾರೆ ಎಂದು ಅನಿಲ್ ಕುಂಬ್ಳೆ ಅಭಿಪ್ರಾಯಪಟ್ಟಿದ್ದಾರೆ. ಅರ್ಷದೀಪ್ ಜೊತೆ ನಾನು ಪಂಜಾಬ್ ಕಿಂಗ್ಸ್​ನಲ್ಲಿ ಕಾರ್ಯ ನಿರ್ವಹಿಸಿದ್ದೇನೆ. ಆತ ನೀಡುತ್ತಿರುವ ಪ್ರದರ್ಶನ ಹಾಗೂ ಆತನ ಬೆಳವಣಿಗೆ ನೋಡಿದ್ರೆ ಖಂಡಿತವಾಗಿಯೂ ಅರ್ಷದೀಪ್ ಸಿಂಗ್ ಭವಿಷ್ಯದ ಸೂಪರ್​ ಸ್ಟಾರ್ ಆಗಿ ಹೊರಹೊಮ್ಮಲಿದ್ದಾರೆ ಎಂದೆನಿಸುತ್ತದೆ ಎಂದು ಅನಿಲ್ ಕುಂಬ್ಳೆ ಹೇಳಿದ್ದಾರೆ.

ಅರ್ಷದೀಪ್ ಸಿಂಗ್: ಟೀಮ್ ಇಂಡಿಯಾದ ಎಡಗೈ ವೇಗಿ ಅರ್ಷದೀಪ್ ಸಿಂಗ್ ಕೂಡ ಭವಿಷ್ಯದಲ್ಲಿ ಪ್ರಜ್ವಲಿಸಲಿದ್ದಾರೆ ಎಂದು ಅನಿಲ್ ಕುಂಬ್ಳೆ ಅಭಿಪ್ರಾಯಪಟ್ಟಿದ್ದಾರೆ. ಅರ್ಷದೀಪ್ ಜೊತೆ ನಾನು ಪಂಜಾಬ್ ಕಿಂಗ್ಸ್​ನಲ್ಲಿ ಕಾರ್ಯ ನಿರ್ವಹಿಸಿದ್ದೇನೆ. ಆತ ನೀಡುತ್ತಿರುವ ಪ್ರದರ್ಶನ ಹಾಗೂ ಆತನ ಬೆಳವಣಿಗೆ ನೋಡಿದ್ರೆ ಖಂಡಿತವಾಗಿಯೂ ಅರ್ಷದೀಪ್ ಸಿಂಗ್ ಭವಿಷ್ಯದ ಸೂಪರ್​ ಸ್ಟಾರ್ ಆಗಿ ಹೊರಹೊಮ್ಮಲಿದ್ದಾರೆ ಎಂದೆನಿಸುತ್ತದೆ ಎಂದು ಅನಿಲ್ ಕುಂಬ್ಳೆ ಹೇಳಿದ್ದಾರೆ.

4 / 6
ಟೀಮ್ ಇಂಡಿಯಾ ಪರ ಒಟ್ಟು 38 ಇನಿಂಗ್ಸ್ ಆಡಿರುವ ಇಶಾನ್ ಕಿಶನ್ 7 ಅರ್ಧಶತಕ, 1 ಶತಕ ಹಾಗೂ 1 ದ್ವಿಶತಕದೊಂದಿಗೆ ಒಟ್ಟು 1002 ರನ್​ ಕಲೆಹಾಕಿದ್ದಾರೆ.

ಟೀಮ್ ಇಂಡಿಯಾ ಪರ ಒಟ್ಟು 38 ಇನಿಂಗ್ಸ್ ಆಡಿರುವ ಇಶಾನ್ ಕಿಶನ್ 7 ಅರ್ಧಶತಕ, 1 ಶತಕ ಹಾಗೂ 1 ದ್ವಿಶತಕದೊಂದಿಗೆ ಒಟ್ಟು 1002 ರನ್​ ಕಲೆಹಾಕಿದ್ದಾರೆ.

5 / 6
ಇನ್ನು 2022 ರಲ್ಲಿ ಇಂಗ್ಲೆಂಡ್ ವಿರುದ್ಧದ ಪಂದ್ಯದ ಮೂಲಕ ಟೀಮ್ ಇಂಡಿಯಾಗೆ ಪದಾರ್ಪಣೆ ಮಾಡಿದ್ದ ಅರ್ಷದೀಪ್ ಸಿಂಗ್, ಇದುವರೆಗೆ 25 ಪಂದ್ಯಗಳಿಂದ ಒಟ್ಟು 39 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಹೀಗಾಗಿಯೇ ಈ ಇಬ್ಬರು ಆಟಗಾರರು ಭಾರತ ತಂಡದ ಭವಿಷ್ಯ ಸೂಪರ್ ಸ್ಟಾರ್ಸ್​ ಆಗಬಲ್ಲರು ಎಂದು ಅನಿಲ್ ಕುಂಬ್ಳೆ ಅಭಿಪ್ರಾಯಪಟ್ಟಿದ್ದಾರೆ.

ಇನ್ನು 2022 ರಲ್ಲಿ ಇಂಗ್ಲೆಂಡ್ ವಿರುದ್ಧದ ಪಂದ್ಯದ ಮೂಲಕ ಟೀಮ್ ಇಂಡಿಯಾಗೆ ಪದಾರ್ಪಣೆ ಮಾಡಿದ್ದ ಅರ್ಷದೀಪ್ ಸಿಂಗ್, ಇದುವರೆಗೆ 25 ಪಂದ್ಯಗಳಿಂದ ಒಟ್ಟು 39 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಹೀಗಾಗಿಯೇ ಈ ಇಬ್ಬರು ಆಟಗಾರರು ಭಾರತ ತಂಡದ ಭವಿಷ್ಯ ಸೂಪರ್ ಸ್ಟಾರ್ಸ್​ ಆಗಬಲ್ಲರು ಎಂದು ಅನಿಲ್ ಕುಂಬ್ಳೆ ಅಭಿಪ್ರಾಯಪಟ್ಟಿದ್ದಾರೆ.

6 / 6
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ