AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಶಾನ್ ಕಿಶನ್​ಗೆ ಒಲಿದ ತಂಡದ ನಾಯಕತ್ವ

Ishan Kishan: ಟೀಮ್ ಇಂಡಿಯಾ ಪರ 2 ಟೆಸ್ಟ್ ಪಂದ್ಯಗಳನ್ನಾಡಿರುವ ಯುವ ಎಡಗೈ ದಾಂಡಿಗ ಇಶಾನ್ ಕಿಶನ್ ಇದೀಗ ರಣಜಿ ಟೂರ್ನಿಗಾಗಿ ಸಜ್ಜಾಗುತ್ತಿದ್ದಾರೆ. ಈ ಟೂರ್ನಿಯಲ್ಲಿ ಜಾರ್ಖಂಡ್ ಪರ ಕಣಕ್ಕಿಳಿಯಲಿರುವ ಇಶಾನ್ ಕಿಶನ್ ಭರ್ಜರಿ ಪ್ರದರ್ಶನ ನೀಡುವ ಮೂಲಕ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡುವ ವಿಶ್ವಾಸದಲ್ಲಿದ್ದಾರೆ.

ಝಾಹಿರ್ ಯೂಸುಫ್
|

Updated on: Sep 28, 2025 | 7:56 AM

Share
ಟೀಮ್ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶನ್ (Ishan Kishan) ಮುಂಬರುವ ರಣಜಿ ಟೂರ್ನಿಯಲ್ಲಿ ಜಾರ್ಖಂಡ್ ತಂಡವನ್ನು ಮುನ್ನಡೆಸಲಿದ್ದಾರೆ. ಅಕ್ಟೋಬರ್ 15 ರಿಂದ ರಣಜಿ ಪಂದ್ಯಾವಳಿ ಶುರುವಾಗಲಿದ್ದು, ಈ ಟೂರ್ನಿಯಲ್ಲಿ ಜಾರ್ಖಂಡ್ ತಂಡದ ವಿಕೆಟ್ ಕೀಪಿಂಗ್ ಜೊತೆ ನಾಯಕತ್ವದ ಜವಾಬ್ದಾರಿಯನ್ನು ಇಶಾನ್ ಕಿಶನ್ ನಿರ್ವಹಿಸಲಿದ್ದಾರೆ.

ಟೀಮ್ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶನ್ (Ishan Kishan) ಮುಂಬರುವ ರಣಜಿ ಟೂರ್ನಿಯಲ್ಲಿ ಜಾರ್ಖಂಡ್ ತಂಡವನ್ನು ಮುನ್ನಡೆಸಲಿದ್ದಾರೆ. ಅಕ್ಟೋಬರ್ 15 ರಿಂದ ರಣಜಿ ಪಂದ್ಯಾವಳಿ ಶುರುವಾಗಲಿದ್ದು, ಈ ಟೂರ್ನಿಯಲ್ಲಿ ಜಾರ್ಖಂಡ್ ತಂಡದ ವಿಕೆಟ್ ಕೀಪಿಂಗ್ ಜೊತೆ ನಾಯಕತ್ವದ ಜವಾಬ್ದಾರಿಯನ್ನು ಇಶಾನ್ ಕಿಶನ್ ನಿರ್ವಹಿಸಲಿದ್ದಾರೆ.

1 / 6
ಇದಕ್ಕೂ ಮುನ್ನ ಇಶಾನ್ ಕಿಶನ್ ಇರಾನಿ ಕಪ್ ಟೂರ್ನಿಗಾಗಿ ಶೇಷ ಭಾರತ ತಂಡಕ್ಕೆ ಆಯ್ಕೆಯಾಗಿದ್ದರು. ಅಕ್ಟೋಬರ್ 1 ರಿಂದ ಶುರುವಾಗಲಿರುವ ಹಾಲಿ ರಣಜಿ ಚಾಂಪಿಯನ್ ವಿದರ್ಭ ಹಾಗೂ ಶೇಷ ಭಾರತ ತಂಡದ ನಡುವಣ ಈ ಪಂದ್ಯದಲ್ಲಿ ಇಶಾನ್ ವಿಕೆಟ್ ಕೀಪರ್ ಆಗಿ ಕಾಣಿಸಿಕೊಳ್ಳಲಿದ್ದಾರೆ.

ಇದಕ್ಕೂ ಮುನ್ನ ಇಶಾನ್ ಕಿಶನ್ ಇರಾನಿ ಕಪ್ ಟೂರ್ನಿಗಾಗಿ ಶೇಷ ಭಾರತ ತಂಡಕ್ಕೆ ಆಯ್ಕೆಯಾಗಿದ್ದರು. ಅಕ್ಟೋಬರ್ 1 ರಿಂದ ಶುರುವಾಗಲಿರುವ ಹಾಲಿ ರಣಜಿ ಚಾಂಪಿಯನ್ ವಿದರ್ಭ ಹಾಗೂ ಶೇಷ ಭಾರತ ತಂಡದ ನಡುವಣ ಈ ಪಂದ್ಯದಲ್ಲಿ ಇಶಾನ್ ವಿಕೆಟ್ ಕೀಪರ್ ಆಗಿ ಕಾಣಿಸಿಕೊಳ್ಳಲಿದ್ದಾರೆ.

2 / 6
ಇದೀಗ ಮುಂಬರುವ ರಣಜಿ ಟೂರ್ನಿಗೆ ಜಾರ್ಖಂಡ್ ತಂಡದ ನಾಯಕರಾಗಿ ಆಯ್ಕೆಯಾಗಿದ್ದಾರೆ. ಈ ಅವಕಾಶಗಳನ್ನು ಬಳಸಿಕೊಳ್ಳುವ ಮೂಲಕ ಇಶಾನ್ ಮತ್ತೆ ಟೆಸ್ಟ್ ಕ್ರಿಕೆಟ್​ಗೆ ಮರಳಲು ಸಕಲ ಸಿದ್ಧತೆಗಳನ್ನು ಆರಂಭಿಸಿದ್ದಾರೆ. ಇದಕ್ಕೂ ಮುನ್ನ ಇಶಾನ್ ಕಿಶನ್ ಟೀಮ್ ಇಂಡಿಯಾ ಪರ 2 ಟೆಸ್ಟ್ ಪಂದ್ಯಗಳನ್ನಾಡಿದ್ದರು.

ಇದೀಗ ಮುಂಬರುವ ರಣಜಿ ಟೂರ್ನಿಗೆ ಜಾರ್ಖಂಡ್ ತಂಡದ ನಾಯಕರಾಗಿ ಆಯ್ಕೆಯಾಗಿದ್ದಾರೆ. ಈ ಅವಕಾಶಗಳನ್ನು ಬಳಸಿಕೊಳ್ಳುವ ಮೂಲಕ ಇಶಾನ್ ಮತ್ತೆ ಟೆಸ್ಟ್ ಕ್ರಿಕೆಟ್​ಗೆ ಮರಳಲು ಸಕಲ ಸಿದ್ಧತೆಗಳನ್ನು ಆರಂಭಿಸಿದ್ದಾರೆ. ಇದಕ್ಕೂ ಮುನ್ನ ಇಶಾನ್ ಕಿಶನ್ ಟೀಮ್ ಇಂಡಿಯಾ ಪರ 2 ಟೆಸ್ಟ್ ಪಂದ್ಯಗಳನ್ನಾಡಿದ್ದರು.

3 / 6
ಟೀಮ್ ಇಂಡಿಯಾ ಪರ ಟೆಸ್ಟ್​ನಲ್ಲಿ 3 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದ ಇಶಾನ್ ಒಂದು ಅರ್ಧಶತಕದೊಂದಿಗೆ ಒಟ್ಟು 78 ರನ್ ಕಲೆಹಾಕಿದ್ದರು. ಆದರೆ ವೆಸ್ಟ್ ಇಂಡೀಸ್ ವಿರುದ್ಧ ನಡೆದ ಈ ಸರಣಿಯ ಬಳಿಕ ಇಶಾನ್ ಕಿಶನ್ ಅವರನ್ನು ತಂಡದಿಂದ ಕೈ ಬಿಡಲಾಗಿತ್ತು. ಇದಾಗ್ಯೂ ಅವರು 2025 ರಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಕೊನೆಯ ಟೆಸ್ಟ್ ಪಂದ್ಯಕ್ಕೆ ರಿಷಭ್ ಪಂತ್ ಬದಲಿಯಾಗಿ ಆಯ್ಕೆಯಾಗಿದ್ದರು.

ಟೀಮ್ ಇಂಡಿಯಾ ಪರ ಟೆಸ್ಟ್​ನಲ್ಲಿ 3 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದ ಇಶಾನ್ ಒಂದು ಅರ್ಧಶತಕದೊಂದಿಗೆ ಒಟ್ಟು 78 ರನ್ ಕಲೆಹಾಕಿದ್ದರು. ಆದರೆ ವೆಸ್ಟ್ ಇಂಡೀಸ್ ವಿರುದ್ಧ ನಡೆದ ಈ ಸರಣಿಯ ಬಳಿಕ ಇಶಾನ್ ಕಿಶನ್ ಅವರನ್ನು ತಂಡದಿಂದ ಕೈ ಬಿಡಲಾಗಿತ್ತು. ಇದಾಗ್ಯೂ ಅವರು 2025 ರಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಕೊನೆಯ ಟೆಸ್ಟ್ ಪಂದ್ಯಕ್ಕೆ ರಿಷಭ್ ಪಂತ್ ಬದಲಿಯಾಗಿ ಆಯ್ಕೆಯಾಗಿದ್ದರು.

4 / 6
ಆದರೆ ಗಾಯದ ಕಾರಣ ಇಶಾನ್ ಕಿಶನ್ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದರು. ಇದೀಗ ಸಂಪೂರ್ಣ ಫಿಟ್​ನೆಸ್ ಸಾಧಿಸಿರುವ ಇಶಾನ್ ಶೇಷ ಭಾರತ ತಂಡಕ್ಕೆ ಆಯ್ಕೆಯಾಗಿದ್ದಾರೆ. ಅಲ್ಲದೆ ಮುಂಬರುವ ರಣಜಿ ಟೂರ್ನಿಯಲ್ಲಿ ಜಾರ್ಖಂಡ್ ತಂಡದ ನಾಯಕರಾಗಿ ಕಾಣಿಸಿಕೊಳ್ಳಲಿದ್ದಾರೆ.

ಆದರೆ ಗಾಯದ ಕಾರಣ ಇಶಾನ್ ಕಿಶನ್ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದರು. ಇದೀಗ ಸಂಪೂರ್ಣ ಫಿಟ್​ನೆಸ್ ಸಾಧಿಸಿರುವ ಇಶಾನ್ ಶೇಷ ಭಾರತ ತಂಡಕ್ಕೆ ಆಯ್ಕೆಯಾಗಿದ್ದಾರೆ. ಅಲ್ಲದೆ ಮುಂಬರುವ ರಣಜಿ ಟೂರ್ನಿಯಲ್ಲಿ ಜಾರ್ಖಂಡ್ ತಂಡದ ನಾಯಕರಾಗಿ ಕಾಣಿಸಿಕೊಳ್ಳಲಿದ್ದಾರೆ.

5 / 6
ಜಾರ್ಖಂಡ್ ತಂಡ: ಇಶಾನ್ ಕಿಶನ್ (ನಾಯಕ), ವಿರಾಟ್ ಸಿಂಗ್, ಶರಣದೀಪ್ ಸಿಂಗ್, ಶಿಖರ್ ಮೋಹನ್, ಕುಮಾರ್ ಕುಶಾಗ್ರಾ, ಕುಮಾರ್ ಸೂರಜ್, ಅನುಕುಲ್ ರಾಯ್, ಮನೀಷಿ, ವಿಕಾಸ್ ಕುಮಾರ್, ಜತಿನ್ ಕುಮಾರ್ ಪಾಂಡೆ, ವಿಕಾಸ್ ಸಿಂಗ್, ಆದಿತ್ಯ ಸಿಂಗ್, ಸಾಹಿಲ್ ರಾಜ್, ಶುಭಂ ಸಿಂಗ್, ಆರ್ಯಮನ್ ಸಿಂಗ್ ಮತ್ತು ರಿಶವ್ ರಾಜ್.

ಜಾರ್ಖಂಡ್ ತಂಡ: ಇಶಾನ್ ಕಿಶನ್ (ನಾಯಕ), ವಿರಾಟ್ ಸಿಂಗ್, ಶರಣದೀಪ್ ಸಿಂಗ್, ಶಿಖರ್ ಮೋಹನ್, ಕುಮಾರ್ ಕುಶಾಗ್ರಾ, ಕುಮಾರ್ ಸೂರಜ್, ಅನುಕುಲ್ ರಾಯ್, ಮನೀಷಿ, ವಿಕಾಸ್ ಕುಮಾರ್, ಜತಿನ್ ಕುಮಾರ್ ಪಾಂಡೆ, ವಿಕಾಸ್ ಸಿಂಗ್, ಆದಿತ್ಯ ಸಿಂಗ್, ಸಾಹಿಲ್ ರಾಜ್, ಶುಭಂ ಸಿಂಗ್, ಆರ್ಯಮನ್ ಸಿಂಗ್ ಮತ್ತು ರಿಶವ್ ರಾಜ್.

6 / 6
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಬಿಡದಿ ಟೌನ್‌ಶಿಪ್‌ ವಿವಾದ: ಕಾನೂನಾತ್ಮಕ ಹೋರಾಟ ಮಾಡ್ತೇವೆ; ಕುಮಾರಸ್ವಾಮಿ
ಬಿಡದಿ ಟೌನ್‌ಶಿಪ್‌ ವಿವಾದ: ಕಾನೂನಾತ್ಮಕ ಹೋರಾಟ ಮಾಡ್ತೇವೆ; ಕುಮಾರಸ್ವಾಮಿ
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ