AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಶಾನ್ ಕಿಶನ್​ಗೆ ಒಲಿದ ತಂಡದ ನಾಯಕತ್ವ

Ishan Kishan: ಟೀಮ್ ಇಂಡಿಯಾ ಪರ 2 ಟೆಸ್ಟ್ ಪಂದ್ಯಗಳನ್ನಾಡಿರುವ ಯುವ ಎಡಗೈ ದಾಂಡಿಗ ಇಶಾನ್ ಕಿಶನ್ ಇದೀಗ ರಣಜಿ ಟೂರ್ನಿಗಾಗಿ ಸಜ್ಜಾಗುತ್ತಿದ್ದಾರೆ. ಈ ಟೂರ್ನಿಯಲ್ಲಿ ಜಾರ್ಖಂಡ್ ಪರ ಕಣಕ್ಕಿಳಿಯಲಿರುವ ಇಶಾನ್ ಕಿಶನ್ ಭರ್ಜರಿ ಪ್ರದರ್ಶನ ನೀಡುವ ಮೂಲಕ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡುವ ವಿಶ್ವಾಸದಲ್ಲಿದ್ದಾರೆ.

ಝಾಹಿರ್ ಯೂಸುಫ್
|

Updated on: Sep 28, 2025 | 7:56 AM

Share
ಟೀಮ್ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶನ್ (Ishan Kishan) ಮುಂಬರುವ ರಣಜಿ ಟೂರ್ನಿಯಲ್ಲಿ ಜಾರ್ಖಂಡ್ ತಂಡವನ್ನು ಮುನ್ನಡೆಸಲಿದ್ದಾರೆ. ಅಕ್ಟೋಬರ್ 15 ರಿಂದ ರಣಜಿ ಪಂದ್ಯಾವಳಿ ಶುರುವಾಗಲಿದ್ದು, ಈ ಟೂರ್ನಿಯಲ್ಲಿ ಜಾರ್ಖಂಡ್ ತಂಡದ ವಿಕೆಟ್ ಕೀಪಿಂಗ್ ಜೊತೆ ನಾಯಕತ್ವದ ಜವಾಬ್ದಾರಿಯನ್ನು ಇಶಾನ್ ಕಿಶನ್ ನಿರ್ವಹಿಸಲಿದ್ದಾರೆ.

ಟೀಮ್ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶನ್ (Ishan Kishan) ಮುಂಬರುವ ರಣಜಿ ಟೂರ್ನಿಯಲ್ಲಿ ಜಾರ್ಖಂಡ್ ತಂಡವನ್ನು ಮುನ್ನಡೆಸಲಿದ್ದಾರೆ. ಅಕ್ಟೋಬರ್ 15 ರಿಂದ ರಣಜಿ ಪಂದ್ಯಾವಳಿ ಶುರುವಾಗಲಿದ್ದು, ಈ ಟೂರ್ನಿಯಲ್ಲಿ ಜಾರ್ಖಂಡ್ ತಂಡದ ವಿಕೆಟ್ ಕೀಪಿಂಗ್ ಜೊತೆ ನಾಯಕತ್ವದ ಜವಾಬ್ದಾರಿಯನ್ನು ಇಶಾನ್ ಕಿಶನ್ ನಿರ್ವಹಿಸಲಿದ್ದಾರೆ.

1 / 6
ಇದಕ್ಕೂ ಮುನ್ನ ಇಶಾನ್ ಕಿಶನ್ ಇರಾನಿ ಕಪ್ ಟೂರ್ನಿಗಾಗಿ ಶೇಷ ಭಾರತ ತಂಡಕ್ಕೆ ಆಯ್ಕೆಯಾಗಿದ್ದರು. ಅಕ್ಟೋಬರ್ 1 ರಿಂದ ಶುರುವಾಗಲಿರುವ ಹಾಲಿ ರಣಜಿ ಚಾಂಪಿಯನ್ ವಿದರ್ಭ ಹಾಗೂ ಶೇಷ ಭಾರತ ತಂಡದ ನಡುವಣ ಈ ಪಂದ್ಯದಲ್ಲಿ ಇಶಾನ್ ವಿಕೆಟ್ ಕೀಪರ್ ಆಗಿ ಕಾಣಿಸಿಕೊಳ್ಳಲಿದ್ದಾರೆ.

ಇದಕ್ಕೂ ಮುನ್ನ ಇಶಾನ್ ಕಿಶನ್ ಇರಾನಿ ಕಪ್ ಟೂರ್ನಿಗಾಗಿ ಶೇಷ ಭಾರತ ತಂಡಕ್ಕೆ ಆಯ್ಕೆಯಾಗಿದ್ದರು. ಅಕ್ಟೋಬರ್ 1 ರಿಂದ ಶುರುವಾಗಲಿರುವ ಹಾಲಿ ರಣಜಿ ಚಾಂಪಿಯನ್ ವಿದರ್ಭ ಹಾಗೂ ಶೇಷ ಭಾರತ ತಂಡದ ನಡುವಣ ಈ ಪಂದ್ಯದಲ್ಲಿ ಇಶಾನ್ ವಿಕೆಟ್ ಕೀಪರ್ ಆಗಿ ಕಾಣಿಸಿಕೊಳ್ಳಲಿದ್ದಾರೆ.

2 / 6
ಇದೀಗ ಮುಂಬರುವ ರಣಜಿ ಟೂರ್ನಿಗೆ ಜಾರ್ಖಂಡ್ ತಂಡದ ನಾಯಕರಾಗಿ ಆಯ್ಕೆಯಾಗಿದ್ದಾರೆ. ಈ ಅವಕಾಶಗಳನ್ನು ಬಳಸಿಕೊಳ್ಳುವ ಮೂಲಕ ಇಶಾನ್ ಮತ್ತೆ ಟೆಸ್ಟ್ ಕ್ರಿಕೆಟ್​ಗೆ ಮರಳಲು ಸಕಲ ಸಿದ್ಧತೆಗಳನ್ನು ಆರಂಭಿಸಿದ್ದಾರೆ. ಇದಕ್ಕೂ ಮುನ್ನ ಇಶಾನ್ ಕಿಶನ್ ಟೀಮ್ ಇಂಡಿಯಾ ಪರ 2 ಟೆಸ್ಟ್ ಪಂದ್ಯಗಳನ್ನಾಡಿದ್ದರು.

ಇದೀಗ ಮುಂಬರುವ ರಣಜಿ ಟೂರ್ನಿಗೆ ಜಾರ್ಖಂಡ್ ತಂಡದ ನಾಯಕರಾಗಿ ಆಯ್ಕೆಯಾಗಿದ್ದಾರೆ. ಈ ಅವಕಾಶಗಳನ್ನು ಬಳಸಿಕೊಳ್ಳುವ ಮೂಲಕ ಇಶಾನ್ ಮತ್ತೆ ಟೆಸ್ಟ್ ಕ್ರಿಕೆಟ್​ಗೆ ಮರಳಲು ಸಕಲ ಸಿದ್ಧತೆಗಳನ್ನು ಆರಂಭಿಸಿದ್ದಾರೆ. ಇದಕ್ಕೂ ಮುನ್ನ ಇಶಾನ್ ಕಿಶನ್ ಟೀಮ್ ಇಂಡಿಯಾ ಪರ 2 ಟೆಸ್ಟ್ ಪಂದ್ಯಗಳನ್ನಾಡಿದ್ದರು.

3 / 6
ಟೀಮ್ ಇಂಡಿಯಾ ಪರ ಟೆಸ್ಟ್​ನಲ್ಲಿ 3 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದ ಇಶಾನ್ ಒಂದು ಅರ್ಧಶತಕದೊಂದಿಗೆ ಒಟ್ಟು 78 ರನ್ ಕಲೆಹಾಕಿದ್ದರು. ಆದರೆ ವೆಸ್ಟ್ ಇಂಡೀಸ್ ವಿರುದ್ಧ ನಡೆದ ಈ ಸರಣಿಯ ಬಳಿಕ ಇಶಾನ್ ಕಿಶನ್ ಅವರನ್ನು ತಂಡದಿಂದ ಕೈ ಬಿಡಲಾಗಿತ್ತು. ಇದಾಗ್ಯೂ ಅವರು 2025 ರಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಕೊನೆಯ ಟೆಸ್ಟ್ ಪಂದ್ಯಕ್ಕೆ ರಿಷಭ್ ಪಂತ್ ಬದಲಿಯಾಗಿ ಆಯ್ಕೆಯಾಗಿದ್ದರು.

ಟೀಮ್ ಇಂಡಿಯಾ ಪರ ಟೆಸ್ಟ್​ನಲ್ಲಿ 3 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದ ಇಶಾನ್ ಒಂದು ಅರ್ಧಶತಕದೊಂದಿಗೆ ಒಟ್ಟು 78 ರನ್ ಕಲೆಹಾಕಿದ್ದರು. ಆದರೆ ವೆಸ್ಟ್ ಇಂಡೀಸ್ ವಿರುದ್ಧ ನಡೆದ ಈ ಸರಣಿಯ ಬಳಿಕ ಇಶಾನ್ ಕಿಶನ್ ಅವರನ್ನು ತಂಡದಿಂದ ಕೈ ಬಿಡಲಾಗಿತ್ತು. ಇದಾಗ್ಯೂ ಅವರು 2025 ರಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಕೊನೆಯ ಟೆಸ್ಟ್ ಪಂದ್ಯಕ್ಕೆ ರಿಷಭ್ ಪಂತ್ ಬದಲಿಯಾಗಿ ಆಯ್ಕೆಯಾಗಿದ್ದರು.

4 / 6
ಆದರೆ ಗಾಯದ ಕಾರಣ ಇಶಾನ್ ಕಿಶನ್ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದರು. ಇದೀಗ ಸಂಪೂರ್ಣ ಫಿಟ್​ನೆಸ್ ಸಾಧಿಸಿರುವ ಇಶಾನ್ ಶೇಷ ಭಾರತ ತಂಡಕ್ಕೆ ಆಯ್ಕೆಯಾಗಿದ್ದಾರೆ. ಅಲ್ಲದೆ ಮುಂಬರುವ ರಣಜಿ ಟೂರ್ನಿಯಲ್ಲಿ ಜಾರ್ಖಂಡ್ ತಂಡದ ನಾಯಕರಾಗಿ ಕಾಣಿಸಿಕೊಳ್ಳಲಿದ್ದಾರೆ.

ಆದರೆ ಗಾಯದ ಕಾರಣ ಇಶಾನ್ ಕಿಶನ್ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದರು. ಇದೀಗ ಸಂಪೂರ್ಣ ಫಿಟ್​ನೆಸ್ ಸಾಧಿಸಿರುವ ಇಶಾನ್ ಶೇಷ ಭಾರತ ತಂಡಕ್ಕೆ ಆಯ್ಕೆಯಾಗಿದ್ದಾರೆ. ಅಲ್ಲದೆ ಮುಂಬರುವ ರಣಜಿ ಟೂರ್ನಿಯಲ್ಲಿ ಜಾರ್ಖಂಡ್ ತಂಡದ ನಾಯಕರಾಗಿ ಕಾಣಿಸಿಕೊಳ್ಳಲಿದ್ದಾರೆ.

5 / 6
ಜಾರ್ಖಂಡ್ ತಂಡ: ಇಶಾನ್ ಕಿಶನ್ (ನಾಯಕ), ವಿರಾಟ್ ಸಿಂಗ್, ಶರಣದೀಪ್ ಸಿಂಗ್, ಶಿಖರ್ ಮೋಹನ್, ಕುಮಾರ್ ಕುಶಾಗ್ರಾ, ಕುಮಾರ್ ಸೂರಜ್, ಅನುಕುಲ್ ರಾಯ್, ಮನೀಷಿ, ವಿಕಾಸ್ ಕುಮಾರ್, ಜತಿನ್ ಕುಮಾರ್ ಪಾಂಡೆ, ವಿಕಾಸ್ ಸಿಂಗ್, ಆದಿತ್ಯ ಸಿಂಗ್, ಸಾಹಿಲ್ ರಾಜ್, ಶುಭಂ ಸಿಂಗ್, ಆರ್ಯಮನ್ ಸಿಂಗ್ ಮತ್ತು ರಿಶವ್ ರಾಜ್.

ಜಾರ್ಖಂಡ್ ತಂಡ: ಇಶಾನ್ ಕಿಶನ್ (ನಾಯಕ), ವಿರಾಟ್ ಸಿಂಗ್, ಶರಣದೀಪ್ ಸಿಂಗ್, ಶಿಖರ್ ಮೋಹನ್, ಕುಮಾರ್ ಕುಶಾಗ್ರಾ, ಕುಮಾರ್ ಸೂರಜ್, ಅನುಕುಲ್ ರಾಯ್, ಮನೀಷಿ, ವಿಕಾಸ್ ಕುಮಾರ್, ಜತಿನ್ ಕುಮಾರ್ ಪಾಂಡೆ, ವಿಕಾಸ್ ಸಿಂಗ್, ಆದಿತ್ಯ ಸಿಂಗ್, ಸಾಹಿಲ್ ರಾಜ್, ಶುಭಂ ಸಿಂಗ್, ಆರ್ಯಮನ್ ಸಿಂಗ್ ಮತ್ತು ರಿಶವ್ ರಾಜ್.

6 / 6
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ