AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ishan Kishan: ರಿಷಭ್ ಪಂತ್ ಬ್ಯಾಟ್ ಹಿಡಿದು ಸ್ಫೋಟಕ ಬ್ಯಾಟಿಂಗ್ ನಡೆಸಿದ ಇಶಾನ್ ಕಿಶನ್: ಪಂದ್ಯದ ಬಳಿಕ ಏನಂದ್ರು ನೋಡಿ

IND vs WI 2nd Test: ಟಿ20 ಮಾದರಿಯಲ್ಲಿ ಸ್ಫೋಟಕ ಬ್ಯಾಟಿಂಗ್ ನಡೆಸಿದ ಕಿಶನ್ ಕೇವಲ 34 ಎಸೆತಗಳಲ್ಲಿ 4 ಫೋರ್, 2 ಸಿಕ್ಸರ್​ನಿಂದ ಅಜೇಯ 52 ರನ್ ಚಚ್ಚಿದರು. ಟೆಸ್ಟ್ ಕ್ರಿಕೆಟ್​ನಲ್ಲಿ ಇದು ಕಿಶನ್ ಅವರ ಚೊಚ್ಚಲ ಅರ್ಧಶತಕವಾಗಿದೆ.

Vinay Bhat
|

Updated on: Jul 24, 2023 | 8:38 AM

Share
ಕ್ವೀನ್ಸ್ ಪಾರ್ಕ್ ಓವಲ್​ನಲ್ಲಿ ನಡೆಯುತ್ತಿರುವ ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ ಅಂತಿಮ ಎರಡನೇ ಟೆಸ್ಟ್ ಪಂದ್ಯ ರೋಚಕತೆ ಸೃಷ್ಟಿಸಿದೆ. ಇಂದು ಕೊನೆಯ ದಿನದಾಟ ಮಾತ್ರ ಬಾಕಿ ಉಳಿದಿದ್ದು ಕೆರಿಬಿಯನ್ನರ ಗೆಲುವಿಗೆ 289 ರನ್​ಗಳ ಅವಶ್ಯಕತೆಯಿದ್ದರೆ, ಭಾರತದ ಜಯಕ್ಕೆ 8 ವಿಕೆಟ್​ಗಳು ಬೇಕಾಗಿದೆ.

ಕ್ವೀನ್ಸ್ ಪಾರ್ಕ್ ಓವಲ್​ನಲ್ಲಿ ನಡೆಯುತ್ತಿರುವ ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ ಅಂತಿಮ ಎರಡನೇ ಟೆಸ್ಟ್ ಪಂದ್ಯ ರೋಚಕತೆ ಸೃಷ್ಟಿಸಿದೆ. ಇಂದು ಕೊನೆಯ ದಿನದಾಟ ಮಾತ್ರ ಬಾಕಿ ಉಳಿದಿದ್ದು ಕೆರಿಬಿಯನ್ನರ ಗೆಲುವಿಗೆ 289 ರನ್​ಗಳ ಅವಶ್ಯಕತೆಯಿದ್ದರೆ, ಭಾರತದ ಜಯಕ್ಕೆ 8 ವಿಕೆಟ್​ಗಳು ಬೇಕಾಗಿದೆ.

1 / 7
ಮೊದಲ ಇನ್ನಿಂಗ್ಸ್​ನಲ್ಲಿ ವಿಂಡೀಸ್ ತಂಡವನ್ನು 255 ರನ್​ಗಳಿಗೆ ಆಲೌಟ್ ಮಾಡಿ ತನ್ನ ದ್ವಿತೀಯ ಇನ್ನಿಂಗ್ಸ್ ಶುರು ಮಾಡಿದ ಭಾರತ ಭರ್ಜರಿ ಬ್ಯಾಟಿಂಗ್ ನಡೆಸಿತು. 12 ಓವರ್ ಆಗುವ ಹೊತ್ತಿಗೆ ತಂಡದ ಮೊತ್ತ 100 ರ ಅಂಚಿಗೆ ಬಂದು ನಿಂತಿತು.

ಮೊದಲ ಇನ್ನಿಂಗ್ಸ್​ನಲ್ಲಿ ವಿಂಡೀಸ್ ತಂಡವನ್ನು 255 ರನ್​ಗಳಿಗೆ ಆಲೌಟ್ ಮಾಡಿ ತನ್ನ ದ್ವಿತೀಯ ಇನ್ನಿಂಗ್ಸ್ ಶುರು ಮಾಡಿದ ಭಾರತ ಭರ್ಜರಿ ಬ್ಯಾಟಿಂಗ್ ನಡೆಸಿತು. 12 ಓವರ್ ಆಗುವ ಹೊತ್ತಿಗೆ ತಂಡದ ಮೊತ್ತ 100 ರ ಅಂಚಿಗೆ ಬಂದು ನಿಂತಿತು.

2 / 7
ನಾಯಕ ರೋಹಿತ್ ಶರ್ಮಾ 44 ಎಸೆತಗಳಲ್ಲಿ 57 ರನ್ ಸಿಡಿಸಿದರೆ, ಯಶಸ್ವಿ ಜೈಸ್ವಾಲ್ 38 ರನ್ ಗಳಿಸಿದರು. ಬಳಿಕ ಶುರುವಾಗಿದ್ದು ಇಶಾನ್ ಕಿಶನ್ ಆಟ.

ನಾಯಕ ರೋಹಿತ್ ಶರ್ಮಾ 44 ಎಸೆತಗಳಲ್ಲಿ 57 ರನ್ ಸಿಡಿಸಿದರೆ, ಯಶಸ್ವಿ ಜೈಸ್ವಾಲ್ 38 ರನ್ ಗಳಿಸಿದರು. ಬಳಿಕ ಶುರುವಾಗಿದ್ದು ಇಶಾನ್ ಕಿಶನ್ ಆಟ.

3 / 7
ಟಿ20 ಮಾದರಿಯಲ್ಲಿ ಸ್ಫೋಟಕ ಬ್ಯಾಟಿಂಗ್ ನಡೆಸಿದ ಕಿಶನ್ ಕೇವಲ 34 ಎಸೆತಗಳಲ್ಲಿ 4 ಫೋರ್, 2 ಸಿಕ್ಸರ್​ನಿಂದ ಅಜೇಯ 52 ರನ್ ಚಚ್ಚಿದರು. ಟೆಸ್ಟ್ ಕ್ರಿಕೆಟ್​ನಲ್ಲಿ ಇದು ಕಿಶನ್ ಅವರ ಚೊಚ್ಚಲ ಅರ್ಧಶತಕವಾಗಿದೆ.

ಟಿ20 ಮಾದರಿಯಲ್ಲಿ ಸ್ಫೋಟಕ ಬ್ಯಾಟಿಂಗ್ ನಡೆಸಿದ ಕಿಶನ್ ಕೇವಲ 34 ಎಸೆತಗಳಲ್ಲಿ 4 ಫೋರ್, 2 ಸಿಕ್ಸರ್​ನಿಂದ ಅಜೇಯ 52 ರನ್ ಚಚ್ಚಿದರು. ಟೆಸ್ಟ್ ಕ್ರಿಕೆಟ್​ನಲ್ಲಿ ಇದು ಕಿಶನ್ ಅವರ ಚೊಚ್ಚಲ ಅರ್ಧಶತಕವಾಗಿದೆ.

4 / 7
ವಿಶೇಷ ಎಂದರೆ ಕಿಶನ್ ಅವರು ಥೇಟ್ ರಿಷಭ್ ಪಂತ್ ಮಾದರಿಯಲ್ಲಿ ಒಂದೇ ಕೈಯಲ್ಲಿ ಸಿಕ್ಸ್ ಸಿಡಿಸಿ ಅರ್ಧಶತಕ ಗಳಿಸಿದರು. ಮತ್ತೊಂದು ಅಚ್ಚರಿ ಎಂದರೆ ಕಿಶನ್ ಅವರು ಆಟವಾಡಿದ್ದು ಪಂತ್ ಅವರ ಬ್ಯಾಟ್​ನಲ್ಲಿ.

ವಿಶೇಷ ಎಂದರೆ ಕಿಶನ್ ಅವರು ಥೇಟ್ ರಿಷಭ್ ಪಂತ್ ಮಾದರಿಯಲ್ಲಿ ಒಂದೇ ಕೈಯಲ್ಲಿ ಸಿಕ್ಸ್ ಸಿಡಿಸಿ ಅರ್ಧಶತಕ ಗಳಿಸಿದರು. ಮತ್ತೊಂದು ಅಚ್ಚರಿ ಎಂದರೆ ಕಿಶನ್ ಅವರು ಆಟವಾಡಿದ್ದು ಪಂತ್ ಅವರ ಬ್ಯಾಟ್​ನಲ್ಲಿ.

5 / 7
ಇಶಾನ್ ಕಿಶನ್ ಆಡುತ್ತಿದ್ದ ಬ್ಯಾಟ್​ನಲ್ಲಿ RP 17 ಎಂದು ಬರೆದಿರುವುದು ಕಂಡು ಬಂದಿದೆ. ಇದು ರಿಷಭ್ ಪಂತ್ ಅವರ ಬ್ಯಾಟ್ ಆಗಿದೆ. ಪಂದ್ಯ ಮುಗಿದ ಬಳಿಕ ಮಾತನಾಡಿದ ಕಿಶನ್, ನಾನು ಇಲ್ಲಿಗೆ ಬರುವ ಮುನ್ನ ಎನ್​ಸಿಎಗೆ ತೆರಳಿದ್ದೆ. ಅಲ್ಲಿ ಪಂತ್​ರನ್ನು ಭೇಟಿ ಮಾಡಿದೆ. ಅವರು ಕೆಲ ಬ್ಯಾಟಿಂಗ್ ಟಿಪ್ಸ್ ನೀಡಿದರು ಎಂದಿದ್ದಾರೆ.

ಇಶಾನ್ ಕಿಶನ್ ಆಡುತ್ತಿದ್ದ ಬ್ಯಾಟ್​ನಲ್ಲಿ RP 17 ಎಂದು ಬರೆದಿರುವುದು ಕಂಡು ಬಂದಿದೆ. ಇದು ರಿಷಭ್ ಪಂತ್ ಅವರ ಬ್ಯಾಟ್ ಆಗಿದೆ. ಪಂದ್ಯ ಮುಗಿದ ಬಳಿಕ ಮಾತನಾಡಿದ ಕಿಶನ್, ನಾನು ಇಲ್ಲಿಗೆ ಬರುವ ಮುನ್ನ ಎನ್​ಸಿಎಗೆ ತೆರಳಿದ್ದೆ. ಅಲ್ಲಿ ಪಂತ್​ರನ್ನು ಭೇಟಿ ಮಾಡಿದೆ. ಅವರು ಕೆಲ ಬ್ಯಾಟಿಂಗ್ ಟಿಪ್ಸ್ ನೀಡಿದರು ಎಂದಿದ್ದಾರೆ.

6 / 7
ನಾನು ಮತ್ತು ರಿಷಭ್ ಪಂತ್ ಅಂಡರ್-19 ದಿನಗಳಿಂದ ಜೊತೆಗಿದ್ದೇವೆ. ನಮ್ಮ ನಡುವೆ ಉತ್ತಮ ಬಾಂಧವ್ಯವಿದೆ. ನಾನು ಹೇಗೆ ಆಡುತ್ತೇನೆ ಎಂಬುದು ಪಂತ್​ಗೆ ಚೆನ್ನಾಗಿ ತಿಳಿದಿದೆ. ನನ್ನ ಬ್ಯಾಟಿಂಗ್ ಕ್ರಮಾಂಕದ ಬಗ್ಗೆಯೂ ಪಂತ್ ಕೆಲ ಟಿಪ್ಸ್ ನೀಡಿದರು ಎಂದು ಇಶಾನ್ ಕಿಶನ್ ಹೇಳಿದ್ದಾರೆ.

ನಾನು ಮತ್ತು ರಿಷಭ್ ಪಂತ್ ಅಂಡರ್-19 ದಿನಗಳಿಂದ ಜೊತೆಗಿದ್ದೇವೆ. ನಮ್ಮ ನಡುವೆ ಉತ್ತಮ ಬಾಂಧವ್ಯವಿದೆ. ನಾನು ಹೇಗೆ ಆಡುತ್ತೇನೆ ಎಂಬುದು ಪಂತ್​ಗೆ ಚೆನ್ನಾಗಿ ತಿಳಿದಿದೆ. ನನ್ನ ಬ್ಯಾಟಿಂಗ್ ಕ್ರಮಾಂಕದ ಬಗ್ಗೆಯೂ ಪಂತ್ ಕೆಲ ಟಿಪ್ಸ್ ನೀಡಿದರು ಎಂದು ಇಶಾನ್ ಕಿಶನ್ ಹೇಳಿದ್ದಾರೆ.

7 / 7
Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
Follow Us
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ