AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: 2 ವರ್ಷಗಳ ಬಳಿಕ ಟೀಮ್ ಇಂಡಿಯಾಗೆ ಇಶಾನ್ ಕಿಶನ್ ಎಂಟ್ರಿ?

India vs England Test: ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯ ಕೊನೆಯ ಪಂದ್ಯವು ಜುಲೈ 31 ರಿಂದ ಶುರುವಾಗಲಿದೆ. ಈ ಪಂದ್ಯಕ್ಕೆ ಟೀಮ್ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಅಲಭ್ಯರಾಗಿದ್ದಾರೆ. ಗಾಯಗೊಂಡಿರುವ ಪಂತ್ ಬದಲಿಗೆ ಇದೀಗ ಐದನೇ ಪಂದ್ಯಕ್ಕೆ ಇಶಾನ್ ಕಿಶನ್ ಅವರನ್ನು ಕರೆಸಿಕೊಳ್ಳಲು ನಿರ್ಧರಿಸಲಾಗಿದೆ.

ಝಾಹಿರ್ ಯೂಸುಫ್
|

Updated on:Jul 24, 2025 | 2:34 PM

Share
ಭಾರತ ಮತ್ತು ಇಂಗ್ಲೆಂಡ್ ನಡುವಣ 5ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಇಶಾನ್ ಕಿಶನ್ ಟೀಮ್ ಇಂಡಿಯಾವನ್ನು ಕೂಡಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಭಾರತ ತಂಡದ ವಿಕೆಟ್ ಕೀಪರ್ ರಿಷಭ್ ಪಂತ್ ಗಾಯಗೊಂಡು ಸರಣಿಯಿಂದ ಹೊರಬಿದ್ದಿದ್ದು, ಅವರ ಬದಲಿಯಾಗಿ ಇಶಾನ್ ಅವರನ್ನು ತಂಡಕ್ಕೆ ಸೇರ್ಪಡೆಗೊಳಿಸಲು ನಿರ್ಧರಿಸಲಾಗಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿದೆ.

ಭಾರತ ಮತ್ತು ಇಂಗ್ಲೆಂಡ್ ನಡುವಣ 5ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಇಶಾನ್ ಕಿಶನ್ ಟೀಮ್ ಇಂಡಿಯಾವನ್ನು ಕೂಡಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಭಾರತ ತಂಡದ ವಿಕೆಟ್ ಕೀಪರ್ ರಿಷಭ್ ಪಂತ್ ಗಾಯಗೊಂಡು ಸರಣಿಯಿಂದ ಹೊರಬಿದ್ದಿದ್ದು, ಅವರ ಬದಲಿಯಾಗಿ ಇಶಾನ್ ಅವರನ್ನು ತಂಡಕ್ಕೆ ಸೇರ್ಪಡೆಗೊಳಿಸಲು ನಿರ್ಧರಿಸಲಾಗಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿದೆ.

1 / 5
ಇಶಾನ್ ಕಿಶನ್ ಈ ಹಿಂದೆ ಟೀಮ್ ಇಂಡಿಯಾ ಪರ 2  ಟೆಸ್ಟ್ ಪಂದ್ಯಗಳನ್ನಾಡಿದ್ದರು. ಈ ವೇಳೆ 3 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದ ಅವರು ಒಂದು ಅರ್ಧಶತಕದೊಂದಿಗೆ 78 ರನ್ ಕಲೆಹಾಕಿದ್ದರು. ವೆಸ್ಟ್ ಇಂಡೀಸ್ ವಿರುದ್ಧ ನಡೆದ ಈ ಸರಣಿಯ ಬಳಿಕ ಇಶಾನ್ ಕಿಶನ್ ಅವರನ್ನು ತಂಡದಿಂದ ಕೈ ಬಿಡಲಾಗಿತ್ತು.

ಇಶಾನ್ ಕಿಶನ್ ಈ ಹಿಂದೆ ಟೀಮ್ ಇಂಡಿಯಾ ಪರ 2  ಟೆಸ್ಟ್ ಪಂದ್ಯಗಳನ್ನಾಡಿದ್ದರು. ಈ ವೇಳೆ 3 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದ ಅವರು ಒಂದು ಅರ್ಧಶತಕದೊಂದಿಗೆ 78 ರನ್ ಕಲೆಹಾಕಿದ್ದರು. ವೆಸ್ಟ್ ಇಂಡೀಸ್ ವಿರುದ್ಧ ನಡೆದ ಈ ಸರಣಿಯ ಬಳಿಕ ಇಶಾನ್ ಕಿಶನ್ ಅವರನ್ನು ತಂಡದಿಂದ ಕೈ ಬಿಡಲಾಗಿತ್ತು.

2 / 5
ಅಲ್ಲದೆ 2023ರ ಬಳಿಕ ಇಶಾನ್ ಕಿಶನ್ ಟೀಮ್ ಇಂಡಿಯಾ ಪರ ಯಾವುದೇ ಪಂದ್ಯವಾಡಿಲ್ಲ. ಇದೀಗ 2 ವರ್ಷಗಳ ಬಳಿಕ ಯುವ ಎಡಗೈ ದಾಂಡಿಗನಿಗೆ ಭಾರತ ತಂಡದಲ್ಲಿ ಚಾನ್ಸ್ ಸಿಗುವ ಸಾಧ್ಯತೆಯಿದೆ. ಅದರಂತೆ ಭಾರತ-ಇಂಗ್ಲೆಂಡ್ ನಡುವಣ 5ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಇಶಾನ್ ಟೀಮ್ ಇಂಡಿಯಾವನ್ನು ಕೂಡಿಕೊಳ್ಳಲಿದ್ದಾರೆ.

ಅಲ್ಲದೆ 2023ರ ಬಳಿಕ ಇಶಾನ್ ಕಿಶನ್ ಟೀಮ್ ಇಂಡಿಯಾ ಪರ ಯಾವುದೇ ಪಂದ್ಯವಾಡಿಲ್ಲ. ಇದೀಗ 2 ವರ್ಷಗಳ ಬಳಿಕ ಯುವ ಎಡಗೈ ದಾಂಡಿಗನಿಗೆ ಭಾರತ ತಂಡದಲ್ಲಿ ಚಾನ್ಸ್ ಸಿಗುವ ಸಾಧ್ಯತೆಯಿದೆ. ಅದರಂತೆ ಭಾರತ-ಇಂಗ್ಲೆಂಡ್ ನಡುವಣ 5ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಇಶಾನ್ ಟೀಮ್ ಇಂಡಿಯಾವನ್ನು ಕೂಡಿಕೊಳ್ಳಲಿದ್ದಾರೆ.

3 / 5
ಭಾರತ ಮತ್ತು ಇಂಗ್ಲೆಂಡ್ ನಡುವಣ 5ನೇ ಟೆಸ್ಟ್ ಪಂದ್ಯವು ಜುಲೈ 31 ರಿಂದ ಶುರುವಾಗಲಿದೆ. ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ರಿಷಭ್ ಪಂತ್ ಅಲಭ್ಯರಾಗಿದ್ದಾರೆ. ಹೀಗಾಗಿ ಧ್ರುವ್ ಜುರೇಲ್ ಜೊತೆ ಹೆಚ್ಚುವರಿ ವಿಕೆಟ್ ಕೀಪರ್ ಬ್ಯಾಟರ್ ಆಗಿ ಇಶಾನ್ ಕಿಶನ್ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

ಭಾರತ ಮತ್ತು ಇಂಗ್ಲೆಂಡ್ ನಡುವಣ 5ನೇ ಟೆಸ್ಟ್ ಪಂದ್ಯವು ಜುಲೈ 31 ರಿಂದ ಶುರುವಾಗಲಿದೆ. ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ರಿಷಭ್ ಪಂತ್ ಅಲಭ್ಯರಾಗಿದ್ದಾರೆ. ಹೀಗಾಗಿ ಧ್ರುವ್ ಜುರೇಲ್ ಜೊತೆ ಹೆಚ್ಚುವರಿ ವಿಕೆಟ್ ಕೀಪರ್ ಬ್ಯಾಟರ್ ಆಗಿ ಇಶಾನ್ ಕಿಶನ್ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

4 / 5
ಭಾರತ ಟೆಸ್ಟ್ ತಂಡ: ಶುಭ್​ಮನ್ ಗಿಲ್ (ನಾಯಕ), ರಿಷಭ್ ಪಂತ್ (ಉಪನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ಅಭಿಮನ್ಯು ಈಶ್ವರನ್, ಕರುಣ್ ನಾಯರ್,  ರವೀಂದ್ರ ಜಡೇಜಾ, ಧ್ರುವ್ ಜುರೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಆಕಾಶ್ ದೀಪ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಅನ್ಶುಲ್ ಕಂಬೋಜ್.

ಭಾರತ ಟೆಸ್ಟ್ ತಂಡ: ಶುಭ್​ಮನ್ ಗಿಲ್ (ನಾಯಕ), ರಿಷಭ್ ಪಂತ್ (ಉಪನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ಅಭಿಮನ್ಯು ಈಶ್ವರನ್, ಕರುಣ್ ನಾಯರ್,  ರವೀಂದ್ರ ಜಡೇಜಾ, ಧ್ರುವ್ ಜುರೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಆಕಾಶ್ ದೀಪ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಅನ್ಶುಲ್ ಕಂಬೋಜ್.

5 / 5

Published On - 1:55 pm, Thu, 24 July 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ