AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC T20 Ranking: ಟಿ20 ರ‍್ಯಾಂಕಿಂಗ್​ನಲ್ಲಿ ಇತಿಹಾಸ ನಿರ್ಮಿಸಿದ ಇಶಾನ್ ಕಿಶನ್

ICC T20 Ranking: ಐಸಿಸಿ ಟಿ20 ಬ್ಯಾಟಿಂಗ್ ಶ್ರೇಯಾಂಕದಲ್ಲಿ ಇಶಾನ್ ಕಿಶನ್ ನಂಬರ್ 1 ಸ್ಥಾನವನ್ನು ಉಳಿಸಿಕೊಂಡಿದ್ದಾರೆ, 916 ರೇಟಿಂಗ್ ಪಾಯಿಂಟ್ ಗಳಿಸಿ ವಿರಾಟ್ ಕೊಹ್ಲಿ ಮತ್ತು ಸೂರ್ಯಕುಮಾರ್ ಯಾದವ್ ಅವರ ದಾಖಲೆಗಳನ್ನು ಹಿಂದಿಕ್ಕಿದ್ದಾರೆ. ಆದಾಗ್ಯೂ, ಅಭಿಷೇಕ್ ಶರ್ಮಾ 931 ಪಾಯಿಂಟ್‌ಗಳೊಂದಿಗೆ ಸಾರ್ವಕಾಲಿಕ ಅತಿ ಹೆಚ್ಚು ರೇಟಿಂಗ್ ಹೊಂದಿರುವ ದಾಖಲೆ ಕಾಯ್ದುಕೊಂಡಿದ್ದಾರೆ. ನಾಲ್ಕು ಭಾರತೀಯ ಬ್ಯಾಟ್ಸ್‌ಮನ್‌ಗಳು ಅಗ್ರ ಐದರಲ್ಲಿರುವುದು ಭಾರತೀಯ ಕ್ರಿಕೆಟ್‌ನ ಪ್ರಾಬಲ್ಯವನ್ನು ತೋರಿಸುತ್ತದೆ.

ಪೃಥ್ವಿಶಂಕರ
|

Updated on:Jul 29, 2026 | 8:53 PM

Share
ಐಸಿಸಿ ಇಂದು ಬಿಡುಗಡೆ ಮಾಡಿರುವ ಟಿ20 ಬ್ಯಾಟಿಂಗ್ ಶ್ರೇಯಾಂಕದಲ್ಲಿ ಟೀಂ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್ ನಂಬರ್ 1 ಸ್ಥಾನದಲ್ಲಿ ಮುಂದುವರೆದಿದ್ದಾರೆ. 916 ರೇಟಿಂಗ್ ಪಾಯಿಂಟ್​ಗಳೊಂದಿಗೆ ಕಿಶನ್ ಮತ್ತೊಂದು ಮಹತ್ವದ ಮೈಲಿಗಲ್ಲನ್ನು ಸಾಧಿಸಿದ್ದಾರೆ. ಐಸಿಸಿ ಟಿ20 ಶ್ರೇಯಾಂಕದಲ್ಲಿ ಅಭಿಷೇಕ್ ಶರ್ಮಾ ನಂತರ ಅತಿ ಹೆಚ್ಚು ರೇಟಿಂಗ್ ಪಾಯಿಂಟ್ ಪಡೆದ ಮೂರನೇ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ(PC-PTI).

ಐಸಿಸಿ ಇಂದು ಬಿಡುಗಡೆ ಮಾಡಿರುವ ಟಿ20 ಬ್ಯಾಟಿಂಗ್ ಶ್ರೇಯಾಂಕದಲ್ಲಿ ಟೀಂ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್ ನಂಬರ್ 1 ಸ್ಥಾನದಲ್ಲಿ ಮುಂದುವರೆದಿದ್ದಾರೆ. 916 ರೇಟಿಂಗ್ ಪಾಯಿಂಟ್​ಗಳೊಂದಿಗೆ ಕಿಶನ್ ಮತ್ತೊಂದು ಮಹತ್ವದ ಮೈಲಿಗಲ್ಲನ್ನು ಸಾಧಿಸಿದ್ದಾರೆ. ಐಸಿಸಿ ಟಿ20 ಶ್ರೇಯಾಂಕದಲ್ಲಿ ಅಭಿಷೇಕ್ ಶರ್ಮಾ ನಂತರ ಅತಿ ಹೆಚ್ಚು ರೇಟಿಂಗ್ ಪಾಯಿಂಟ್ ಪಡೆದ ಮೂರನೇ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ(PC-PTI).

1 / 5
ಪ್ರಸ್ತುತ ಟಿ20 ಶ್ರೇಯಾಂಕದಲ್ಲಿ ಅಭಿಷೇಕ್ ಶರ್ಮಾ 3 ನೇ ಸ್ಥಾನಕ್ಕೆ ಕುಸಿದಿದ್ದಾರೆ. ಆದಾಗ್ಯೂ, ಟಿ20 ರ್ಯಾಂಕಿಂಗ್​ನಲ್ಲಿ ಅತಿ ಹೆಚ್ಚು ರೇಟಿಂಗ್ ಪಾಯಿಂಟ್‌ಗಳನ್ನು ಪಡೆದ ದಾಖಲೆ ಅವರ ಹೆಸರಿನಲ್ಲೇ ಇದೆ. ಇಂಗ್ಲೆಂಡ್‌ನ ಡೇವಿಡ್ ಮಲನ್ ಈ ಪಟ್ಟಿಯಲ್ಲಿ 2 ನೇ ಸ್ಥಾನದಲ್ಲಿದ್ದರೆ, ಇಶಾನ್ ಕಿಶನ್ 3 ನೇ ಸ್ಥಾನದಲ್ಲಿದ್ದಾರೆ. ಗಮನಾರ್ಹವಾಗಿ, ನಾಲ್ಕು ಭಾರತೀಯ ಆಟಗಾರರು ಅಗ್ರ ಐದರಲ್ಲಿದ್ದಾರೆ, ಡೇವಿಡ್ ಮಲನ್ ಈ ಪಟ್ಟಿಯಲ್ಲಿರುವ ಏಕೈಕ ಭಾರತೀಯೇತರ ಆಟಗಾರ(PC-PTI).

ಪ್ರಸ್ತುತ ಟಿ20 ಶ್ರೇಯಾಂಕದಲ್ಲಿ ಅಭಿಷೇಕ್ ಶರ್ಮಾ 3 ನೇ ಸ್ಥಾನಕ್ಕೆ ಕುಸಿದಿದ್ದಾರೆ. ಆದಾಗ್ಯೂ, ಟಿ20 ರ್ಯಾಂಕಿಂಗ್​ನಲ್ಲಿ ಅತಿ ಹೆಚ್ಚು ರೇಟಿಂಗ್ ಪಾಯಿಂಟ್‌ಗಳನ್ನು ಪಡೆದ ದಾಖಲೆ ಅವರ ಹೆಸರಿನಲ್ಲೇ ಇದೆ. ಇಂಗ್ಲೆಂಡ್‌ನ ಡೇವಿಡ್ ಮಲನ್ ಈ ಪಟ್ಟಿಯಲ್ಲಿ 2 ನೇ ಸ್ಥಾನದಲ್ಲಿದ್ದರೆ, ಇಶಾನ್ ಕಿಶನ್ 3 ನೇ ಸ್ಥಾನದಲ್ಲಿದ್ದಾರೆ. ಗಮನಾರ್ಹವಾಗಿ, ನಾಲ್ಕು ಭಾರತೀಯ ಆಟಗಾರರು ಅಗ್ರ ಐದರಲ್ಲಿದ್ದಾರೆ, ಡೇವಿಡ್ ಮಲನ್ ಈ ಪಟ್ಟಿಯಲ್ಲಿರುವ ಏಕೈಕ ಭಾರತೀಯೇತರ ಆಟಗಾರ(PC-PTI).

2 / 5
ಇನ್ನು ಅತಿ ಹೆಚ್ಚು ರೇಟಿಂಗ್‌ ಪಾಯಿಂಟ್‌ಗಳನ್ನು ಹೊಂದಿದ ಭಾರತೀಯ ಆಟಗಾರರ ಪಟ್ಟಿಯಲ್ಲಿ ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್ ಮತ್ತು ವಿರಾಟ್ ಕೊಹ್ಲಿಯನ್ನೂ ಹಿಂದಿಕ್ಕಿದ್ದಾರೆ. ವಿರಾಟ್ ಅವರ ಅತ್ಯುತ್ತಮ ಟಿ20 ರೇಟಿಂಗ್ ಪಾಯಿಂಟ್ ಒಟ್ಟು 909 ಆಗಿದ್ದರೆ, ಸೂರ್ಯ 912 ರೇಟಿಂಗ್ ಪಾಯಿಂಟ್ ಗಳಿಸಿದ್ದರು. ಇಶಾನ್ ಈಗ ಇಬ್ಬರನ್ನೂ ಹಿಂದಿಕ್ಕಿದ್ದಾರೆ(PC-PTI).

ಇನ್ನು ಅತಿ ಹೆಚ್ಚು ರೇಟಿಂಗ್‌ ಪಾಯಿಂಟ್‌ಗಳನ್ನು ಹೊಂದಿದ ಭಾರತೀಯ ಆಟಗಾರರ ಪಟ್ಟಿಯಲ್ಲಿ ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್ ಮತ್ತು ವಿರಾಟ್ ಕೊಹ್ಲಿಯನ್ನೂ ಹಿಂದಿಕ್ಕಿದ್ದಾರೆ. ವಿರಾಟ್ ಅವರ ಅತ್ಯುತ್ತಮ ಟಿ20 ರೇಟಿಂಗ್ ಪಾಯಿಂಟ್ ಒಟ್ಟು 909 ಆಗಿದ್ದರೆ, ಸೂರ್ಯ 912 ರೇಟಿಂಗ್ ಪಾಯಿಂಟ್ ಗಳಿಸಿದ್ದರು. ಇಶಾನ್ ಈಗ ಇಬ್ಬರನ್ನೂ ಹಿಂದಿಕ್ಕಿದ್ದಾರೆ(PC-PTI).

3 / 5
ಆದಾಗ್ಯೂ ಅಭಿಷೇಕ್ ಶರ್ಮಾ 931 ರೇಟಿಂಗ್ ಪಾಯಿಂಟ್​​ಗಳೊಂದಿಗೆ ಟಿ20 ಶ್ರೇಯಾಂಕದಲ್ಲಿ ಅತಿ ಹೆಚ್ಚು ರೇಟಿಂಗ್ ಪಾಯಿಂಟ್ ಪಡೆದಿರುವ ಆಟಗಾರನೆನಿಸಿಕೊಂಡಿದ್ದಾರೆ. ಅಭಿಷೇಕ್ ಶರ್ಮಾ ಸುಮಾರು 11 ತಿಂಗಳುಗಳ ಕಾಲ ಅಂತರರಾಷ್ಟ್ರೀಯ ಟಿ20 ಬ್ಯಾಟಿಂಗ್ ಶ್ರೇಯಾಂಕದಲ್ಲಿ ನಂಬರ್ 1 ಸ್ಥಾನವನ್ನು ಹೊಂದಿದ್ದರು. ಕಳೆದ ವರ್ಷ ಜುಲೈನಲ್ಲಿ ಅಭಿಷೇಕ್ ಅಗ್ರಸ್ಥಾನಕ್ಕೇರಿದ್ದರು(PC-PTI).

ಆದಾಗ್ಯೂ ಅಭಿಷೇಕ್ ಶರ್ಮಾ 931 ರೇಟಿಂಗ್ ಪಾಯಿಂಟ್​​ಗಳೊಂದಿಗೆ ಟಿ20 ಶ್ರೇಯಾಂಕದಲ್ಲಿ ಅತಿ ಹೆಚ್ಚು ರೇಟಿಂಗ್ ಪಾಯಿಂಟ್ ಪಡೆದಿರುವ ಆಟಗಾರನೆನಿಸಿಕೊಂಡಿದ್ದಾರೆ. ಅಭಿಷೇಕ್ ಶರ್ಮಾ ಸುಮಾರು 11 ತಿಂಗಳುಗಳ ಕಾಲ ಅಂತರರಾಷ್ಟ್ರೀಯ ಟಿ20 ಬ್ಯಾಟಿಂಗ್ ಶ್ರೇಯಾಂಕದಲ್ಲಿ ನಂಬರ್ 1 ಸ್ಥಾನವನ್ನು ಹೊಂದಿದ್ದರು. ಕಳೆದ ವರ್ಷ ಜುಲೈನಲ್ಲಿ ಅಭಿಷೇಕ್ ಅಗ್ರಸ್ಥಾನಕ್ಕೇರಿದ್ದರು(PC-PTI).

4 / 5
ಈ ತಿಂಗಳ ಆರಂಭದಲ್ಲಿ ಇಶಾನ್ ಕಿಶನ್ ಅಗ್ರಸ್ಥಾನಕ್ಕೇರುವ ಮೂಲಕ ಅಭಿಷೇಕ್ ಅವರನ್ನು ಹಿಂದಿಕ್ಕಿದರು. ಜಿಂಬಾಬ್ವೆ ಪ್ರವಾಸದ ವೇಳೆ ಇಶಾನ್ ಕಿಶನ್ ಆಡಿದ ಮೂರು ಟಿ20 ಪಂದ್ಯಗಳಲ್ಲಿ 48.33 ಸರಾಸರಿಯಲ್ಲಿ 145 ರನ್ ಗಳಿಸಿದರು. ಅವರ ಸ್ಟ್ರೈಕ್ ರೇಟ್ 154 ಕ್ಕಿಂತ ಹೆಚ್ಚಿತ್ತು. ಈ ಸರಣಿಯಲ್ಲಿ ಅವರ ಪ್ರದರ್ಶನವು ಅವರ ರೇಟಿಂಗ್ ಪಾಯಿಂಟ್‌ಗಳಲ್ಲಿ ಹೆಚ್ಚಳಕ್ಕೆ ಕಾರಣವಾಗಿದೆ(PC-PTI).

ಈ ತಿಂಗಳ ಆರಂಭದಲ್ಲಿ ಇಶಾನ್ ಕಿಶನ್ ಅಗ್ರಸ್ಥಾನಕ್ಕೇರುವ ಮೂಲಕ ಅಭಿಷೇಕ್ ಅವರನ್ನು ಹಿಂದಿಕ್ಕಿದರು. ಜಿಂಬಾಬ್ವೆ ಪ್ರವಾಸದ ವೇಳೆ ಇಶಾನ್ ಕಿಶನ್ ಆಡಿದ ಮೂರು ಟಿ20 ಪಂದ್ಯಗಳಲ್ಲಿ 48.33 ಸರಾಸರಿಯಲ್ಲಿ 145 ರನ್ ಗಳಿಸಿದರು. ಅವರ ಸ್ಟ್ರೈಕ್ ರೇಟ್ 154 ಕ್ಕಿಂತ ಹೆಚ್ಚಿತ್ತು. ಈ ಸರಣಿಯಲ್ಲಿ ಅವರ ಪ್ರದರ್ಶನವು ಅವರ ರೇಟಿಂಗ್ ಪಾಯಿಂಟ್‌ಗಳಲ್ಲಿ ಹೆಚ್ಚಳಕ್ಕೆ ಕಾರಣವಾಗಿದೆ(PC-PTI).

5 / 5

Published On - 8:52 pm, Wed, 29 July 26

Follow Us
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ