AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಒಂದು ಪಂದ್ಯವನ್ನು ಸೋಲದ ನಾಯಕ ಇಶಾನ್ ಕಿಶನ್

ಪೂರ್ವ ವಲಯ ತಂಡ 13 ವರ್ಷಗಳ ನಂತರ ದುಲೀಪ್ ಟ್ರೋಫಿ 2026 ಫೈನಲ್​ಗೆ ಪ್ರವೇಶಿಸಿದೆ. ನಾಯಕ ಇಶಾನ್ ಕಿಶನ್ ಅವರ ಅಜೇಯ ನಾಯಕತ್ವ ತಂಡದ ಈ ಸಾಧನೆಗೆ ಪ್ರಮುಖ ಕಾರಣ. ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 8 ವರ್ಷಗಳಿಂದ ತಂಡವನ್ನು ಮುನ್ನಡೆಸಿರುವ ಕಿಶನ್, ಇದುವರೆಗೆ ಒಂದೂ ಪಂದ್ಯ ಸೋತಿಲ್ಲ. ಸೆಮಿಫೈನಲ್‌ನಲ್ಲಿ ಕೇಂದ್ರ ವಲಯವನ್ನು ಸೋಲಿಸಿ ಫೈನಲ್​ಗೇರಿದ ಪೂರ್ವ ವಲಯ ತಂಡ, ಈಗ ಪ್ರಶಸ್ತಿ ಗೆಲ್ಲುವ ವಿಶ್ವಾಸದಲ್ಲಿದೆ.

ಪೃಥ್ವಿಶಂಕರ
|

Updated on: Sep 02, 2026 | 3:03 PM

Share
ದೇಶಿ ಟೂರ್ನಿ 2026 ರ ದುಲೀಪ್ ಟ್ರೋಫಿ ಇದೀಗ ಫೈನಲ್ ಹಂತಕ್ಕೆ ಬಂದು ನಿಂತಿದೆ. ಭಾನುವಾರ ನಡೆಯಲಿರುವ ಫೈನಲ್ ಪಂದ್ಯಕ್ಕೆ ಮೊದಲ ತಂಡವಾಗಿ ಪೂರ್ವ ವಲಯ ತಂಡ ಅರ್ಹತೆ ಪಡೆದುಕೊಂಡಿದೆ. ಇಶಾನ್ ಕಿಶನ್ ನಾಯಕತ್ವದಲ್ಲಿ ಭರ್ಜರಿ ಪ್ರದರ್ಶನ ನೀಡಿದ ಪೂರ್ವ ವಲಯ ತಂಡ ಸೆಮಿಫೈನಲ್ ಪಂದ್ಯದಲ್ಲಿ ಕೇಂದ್ರ ವಲಯ ತಂಡವನ್ನು 4 ವಿಕೆಟ್​ಗಳಿಂದ ಮಣಿಸಿ ಫೈನಲ್​ಗೇರಿದೆ(PC-PTI).

ದೇಶಿ ಟೂರ್ನಿ 2026 ರ ದುಲೀಪ್ ಟ್ರೋಫಿ ಇದೀಗ ಫೈನಲ್ ಹಂತಕ್ಕೆ ಬಂದು ನಿಂತಿದೆ. ಭಾನುವಾರ ನಡೆಯಲಿರುವ ಫೈನಲ್ ಪಂದ್ಯಕ್ಕೆ ಮೊದಲ ತಂಡವಾಗಿ ಪೂರ್ವ ವಲಯ ತಂಡ ಅರ್ಹತೆ ಪಡೆದುಕೊಂಡಿದೆ. ಇಶಾನ್ ಕಿಶನ್ ನಾಯಕತ್ವದಲ್ಲಿ ಭರ್ಜರಿ ಪ್ರದರ್ಶನ ನೀಡಿದ ಪೂರ್ವ ವಲಯ ತಂಡ ಸೆಮಿಫೈನಲ್ ಪಂದ್ಯದಲ್ಲಿ ಕೇಂದ್ರ ವಲಯ ತಂಡವನ್ನು 4 ವಿಕೆಟ್​ಗಳಿಂದ ಮಣಿಸಿ ಫೈನಲ್​ಗೇರಿದೆ(PC-PTI).

1 / 5
ಈ ಮೂಲಕ ಪೂರ್ವ ವಲಯ ತಂಡ ಬರೋಬ್ಬರಿ 13 ವರ್ಷಗಳ ನಂತರ ದುಲೀಪ್ ಟ್ರೋಫಿ ಫೈನಲ್​ ಆಡುವ ಅವಕಾಶ ಪಡೆದುಕೊಂಡಿದೆ. ತಂಡದ ಈ ಐತಿಹಾಸಿಕ ಸಾಧನೆಯಲ್ಲಿ ನಾಯಕ ಇಶಾನ್ ಕಿಶನ್ ಅವರ ಪಾತ್ರ ಅಪಾರವಾಗಿದೆ. ಮೊದಲಿಗೆ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಈಶಾನ್ಯ ವಲಯ ತಂಡವನ್ನು ಇನ್ನಿಂಗ್ಸ್ ಮತ್ತು 210 ರನ್​ಗಳಿಂದ ಮಣಿಸಿದ್ದ ಕಿಶನ್ ಪಡೆ ಇದೀಗ ಸೆಮಿಫೈನಲ್​ನಲ್ಲೂ ತನ್ನ ಅಜೇಯ ಓಟವನ್ನು ಮುಂದುವರೆಸಿದೆ(PC-PTI).

ಈ ಮೂಲಕ ಪೂರ್ವ ವಲಯ ತಂಡ ಬರೋಬ್ಬರಿ 13 ವರ್ಷಗಳ ನಂತರ ದುಲೀಪ್ ಟ್ರೋಫಿ ಫೈನಲ್​ ಆಡುವ ಅವಕಾಶ ಪಡೆದುಕೊಂಡಿದೆ. ತಂಡದ ಈ ಐತಿಹಾಸಿಕ ಸಾಧನೆಯಲ್ಲಿ ನಾಯಕ ಇಶಾನ್ ಕಿಶನ್ ಅವರ ಪಾತ್ರ ಅಪಾರವಾಗಿದೆ. ಮೊದಲಿಗೆ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಈಶಾನ್ಯ ವಲಯ ತಂಡವನ್ನು ಇನ್ನಿಂಗ್ಸ್ ಮತ್ತು 210 ರನ್​ಗಳಿಂದ ಮಣಿಸಿದ್ದ ಕಿಶನ್ ಪಡೆ ಇದೀಗ ಸೆಮಿಫೈನಲ್​ನಲ್ಲೂ ತನ್ನ ಅಜೇಯ ಓಟವನ್ನು ಮುಂದುವರೆಸಿದೆ(PC-PTI).

2 / 5
ಈ ಗೆಲುವಿನೊಂದಿಗೆ ಇಶಾನ್ ಕಿಶನ್ ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ ನಾಯಕನಾಗಿ ತಮ್ಮ ಅಜೇಯ ಓಟವನ್ನು ಮುಂದುವರೆಸಿದ್ದಾರೆ. ಇಶಾನ್ ಕಿಶನ್ ಕಳೆದ 8 ವರ್ಷಗಳಿಂದ ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ ತಂಡದ ನಾಯಕತ್ವದ ಜವಾಬ್ದಾರಿ ಹೊತ್ತಿದ್ದಾರೆ. ಅವರ ನಾಯಕತ್ವದಲ್ಲಿ ತಂಡ ಒಂದೇ ಒಂದು ಪಂದ್ಯವನ್ನು ಸೋತಿಲ್ಲ(PC-PTI).

ಈ ಗೆಲುವಿನೊಂದಿಗೆ ಇಶಾನ್ ಕಿಶನ್ ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ ನಾಯಕನಾಗಿ ತಮ್ಮ ಅಜೇಯ ಓಟವನ್ನು ಮುಂದುವರೆಸಿದ್ದಾರೆ. ಇಶಾನ್ ಕಿಶನ್ ಕಳೆದ 8 ವರ್ಷಗಳಿಂದ ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ ತಂಡದ ನಾಯಕತ್ವದ ಜವಾಬ್ದಾರಿ ಹೊತ್ತಿದ್ದಾರೆ. ಅವರ ನಾಯಕತ್ವದಲ್ಲಿ ತಂಡ ಒಂದೇ ಒಂದು ಪಂದ್ಯವನ್ನು ಸೋತಿಲ್ಲ(PC-PTI).

3 / 5
ಇಶಾನ್ ಕಿಶನ್ ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ ಇದುವರೆಗೆ 15 ಪಂದ್ಯಗಳಲ್ಲಿ ತಂಡದ ನಾಯಕತ್ವವಹಿಸಿದ್ದಾರೆ. ಇದರಲ್ಲಿ ತಂಡವು 8 ಪಂದ್ಯಗಳನ್ನು ಗೆದ್ದಿದ್ದರೆ, 7 ಪಂದ್ಯಗಳನ್ನು ಡ್ರಾ ಮಾಡಿಕೊಂಡಿದೆ. ಕಿಶನ್ 2018 ರಲ್ಲಿ ಮೊದಲ ಬಾರಿಗೆ ಜಾರ್ಖಂಡ್ ತಂಡದ ನಾಯಕತ್ವವಹಿಸಿದ್ದರು. ಆ ಪಂದ್ಯದಲ್ಲಿ ಜಾರ್ಖಂಡ್ ತಂಡವು ಅಸ್ಸಾಂ ವಿರುದ್ಧದ ಪಂದ್ಯವನ್ನು ಡ್ರಾ ಮಾಡಿಕೊಂಡಿತ್ತು(PC-PTI).

ಇಶಾನ್ ಕಿಶನ್ ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ ಇದುವರೆಗೆ 15 ಪಂದ್ಯಗಳಲ್ಲಿ ತಂಡದ ನಾಯಕತ್ವವಹಿಸಿದ್ದಾರೆ. ಇದರಲ್ಲಿ ತಂಡವು 8 ಪಂದ್ಯಗಳನ್ನು ಗೆದ್ದಿದ್ದರೆ, 7 ಪಂದ್ಯಗಳನ್ನು ಡ್ರಾ ಮಾಡಿಕೊಂಡಿದೆ. ಕಿಶನ್ 2018 ರಲ್ಲಿ ಮೊದಲ ಬಾರಿಗೆ ಜಾರ್ಖಂಡ್ ತಂಡದ ನಾಯಕತ್ವವಹಿಸಿದ್ದರು. ಆ ಪಂದ್ಯದಲ್ಲಿ ಜಾರ್ಖಂಡ್ ತಂಡವು ಅಸ್ಸಾಂ ವಿರುದ್ಧದ ಪಂದ್ಯವನ್ನು ಡ್ರಾ ಮಾಡಿಕೊಂಡಿತ್ತು(PC-PTI).

4 / 5
ನಂತರ ಹರಿಯಾಣ ವಿರುದ್ಧದ ಪಂದ್ಯವನ್ನು ಗೆದ್ದುಕೊಳ್ಳುವ ಮೂಲಕ ಕಿಶನ್ ತಮ್ಮ ಗೆಲುವಿನ ಖಾತೆ ತೆರೆದಿದ್ದರು. ಅಂದಿನಿಂದ ಇಂದಿನವರೆಗೆ ಕಿಶನ್ ನಾಯಕತ್ವದಲ್ಲಿ ತಂಡಕ್ಕೆ ಸೋಲು ಎದುರಾಗದಿರುವುದು ಅವರ ಚಾಣಾಕ್ಷ ನಾಯಕತ್ವಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಅವರ ಈ ಅಂಕಿಅಂಶಗಳನ್ನು ಗಮನಿಸಿದರೆ ದುಲೀಪ್ ಟ್ರೋಫಿ ಫೈನಲ್ ಗೆಲುವು ಕೂಡ ಪೂರ್ವ ವಲಯ ತಂಡದ್ದೇ ಎನ್ನಬಹುದು(PC-PTI).

ನಂತರ ಹರಿಯಾಣ ವಿರುದ್ಧದ ಪಂದ್ಯವನ್ನು ಗೆದ್ದುಕೊಳ್ಳುವ ಮೂಲಕ ಕಿಶನ್ ತಮ್ಮ ಗೆಲುವಿನ ಖಾತೆ ತೆರೆದಿದ್ದರು. ಅಂದಿನಿಂದ ಇಂದಿನವರೆಗೆ ಕಿಶನ್ ನಾಯಕತ್ವದಲ್ಲಿ ತಂಡಕ್ಕೆ ಸೋಲು ಎದುರಾಗದಿರುವುದು ಅವರ ಚಾಣಾಕ್ಷ ನಾಯಕತ್ವಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಅವರ ಈ ಅಂಕಿಅಂಶಗಳನ್ನು ಗಮನಿಸಿದರೆ ದುಲೀಪ್ ಟ್ರೋಫಿ ಫೈನಲ್ ಗೆಲುವು ಕೂಡ ಪೂರ್ವ ವಲಯ ತಂಡದ್ದೇ ಎನ್ನಬಹುದು(PC-PTI).

5 / 5
Follow Us
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಹೊಸ ಗೃಹಬಳಕೆ ಸಂಪರ್ಕ ಸಿಗದೆ ಗ್ರಾಹಕರ ಆಕ್ರೋಶ
ಹೊಸ ಗೃಹಬಳಕೆ ಸಂಪರ್ಕ ಸಿಗದೆ ಗ್ರಾಹಕರ ಆಕ್ರೋಶ
ಬ್ಯಾಂಕ್​ಗಳಲ್ಲಿ ಕನ್ನಡಿಗರನ್ನೇ ಕೆಲಸಕ್ಕೆ ನೇಮಿಸಿ: ಸಚಿವ ತಂಗಡಗಿ
ಬ್ಯಾಂಕ್​ಗಳಲ್ಲಿ ಕನ್ನಡಿಗರನ್ನೇ ಕೆಲಸಕ್ಕೆ ನೇಮಿಸಿ: ಸಚಿವ ತಂಗಡಗಿ
ಬೆಂಗಳೂರಿನಲ್ಲಿ ಸಿಕ್ಕಿಬಿದ್ದ 31 ಬಾಂಗ್ಲಾದೇಶೀಯರ ಗಡಿಪಾರು
ಬೆಂಗಳೂರಿನಲ್ಲಿ ಸಿಕ್ಕಿಬಿದ್ದ 31 ಬಾಂಗ್ಲಾದೇಶೀಯರ ಗಡಿಪಾರು