AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

43ನೇ ವಯಸ್ಸಿನಲ್ಲೂ ತೋಳ್ಬಲ… ವಿಶ್ವ ದಾಖಲೆ ಬರೆದ ಅ್ಯಂಡರ್ಸನ್

James Anderson: ಇಂಗ್ಲೆಂಡ್ ಪರ 188 ಟೆಸ್ಟ್ ಪಂದ್ಯಗಳನ್ನಾಡಿರುವ 43ರ ಹರೆಯದ ಜೇಮ್ಸ್ ಅ್ಯಂಡರ್ಸನ್ (ಜಿಮ್ಮಿ) ಒಟ್ಟು 40037 ಎಸೆತಗಳನ್ನು ಎಸೆದಿದ್ದಾರೆ. ಈ ವೇಳೆ 18627 ರನ್ ನೀಡುವ ಮೂಲಕ ಒಟ್ಟು 704 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಟೆಸ್ಟ್ ಇತಿಹಾಸದಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ವೇಗದ ಬೌಲರ್ ಎಂಬ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ. ಇದೀಗ ಟೆಸ್ಟ್​ ನಿವೃತ್ತಿಯ ಬಳಿಕ ಫ್ರಾಂಚೈಸಿ ಲೀಗ್​ಗೆ ಎಂಟ್ರಿ ಕೊಟ್ಟು ಹೊಸ ಇತಿಹಾಸ ರಚಿಸಿದ್ದಾರೆ.

ಝಾಹಿರ್ ಯೂಸುಫ್
|

Updated on:Aug 07, 2025 | 10:12 AM

Share
ಇಂಗ್ಲೆಂಡ್​ನ ಸರ್ವಶ್ರೇಷ್ಠ ವೇಗಿ ಜೇಮ್ಸ್ ಅ್ಯಂಡರ್ಸನ್ (James Anderson) ದಿ ಹಂಡ್ರೆಡ್ ಲೀಗ್​​ಗೆ ಪಾದಾರ್ಪಣೆ ಮಾಡಿದ್ದಾರೆ. ಅದು ಸಹ 43ನೇ ವಯಸ್ಸಿನಲ್ಲಿ. ಈ ಮೂಲಕ ಫ್ರಾಂಚೈಸಿ ಲೀಗ್​ನಲ್ಲಿ ಪಾದಾರ್ಪಣೆ ಮಾಡಿದ ಅತ್ಯಂತ ಹಿರಿಯ ಆಟಗಾರ ಎಂಬ ಹೆಗ್ಗಳಿಕೆಯನ್ನು ಜೇಮ್ಸ್ ಅ್ಯಂಡರ್ಸನ್ ತಮ್ಮದಾಗಿಸಿಕೊಂಡಿದ್ದಾರೆ.

ಇಂಗ್ಲೆಂಡ್​ನ ಸರ್ವಶ್ರೇಷ್ಠ ವೇಗಿ ಜೇಮ್ಸ್ ಅ್ಯಂಡರ್ಸನ್ (James Anderson) ದಿ ಹಂಡ್ರೆಡ್ ಲೀಗ್​​ಗೆ ಪಾದಾರ್ಪಣೆ ಮಾಡಿದ್ದಾರೆ. ಅದು ಸಹ 43ನೇ ವಯಸ್ಸಿನಲ್ಲಿ. ಈ ಮೂಲಕ ಫ್ರಾಂಚೈಸಿ ಲೀಗ್​ನಲ್ಲಿ ಪಾದಾರ್ಪಣೆ ಮಾಡಿದ ಅತ್ಯಂತ ಹಿರಿಯ ಆಟಗಾರ ಎಂಬ ಹೆಗ್ಗಳಿಕೆಯನ್ನು ಜೇಮ್ಸ್ ಅ್ಯಂಡರ್ಸನ್ ತಮ್ಮದಾಗಿಸಿಕೊಂಡಿದ್ದಾರೆ.

1 / 5
ಮ್ಯಾಂಚೆಸ್ಟರ್​ನ ಓಲ್ಡ್​​ ಟ್ರಾಫೋರ್ಡ್ ಮೈದಾನದಲ್ಲಿ ನಡೆದ ಸದರ್ನ್​ ಬ್ರೇವ್ ವಿರುದ್ಧದ ಪಂದ್ಯದಲ್ಲಿ ಮ್ಯಾಂಚೆಸ್ಟರ್ ಒರಿಜಿನಲ್ಸ್ ಪರ ಕಣಕ್ಕಿಳಿಯುವ ಮೂಲಕ ಜೇಮ್ಸ್ ಅ್ಯಂಡರ್ಸನ್ ಈ ಸಾಧನೆ ಮಾಡಿದ್ದಾರೆ. ಈ ಸಾಧನೆಯೊಂದಿಗೆ ದಿ ಹಂಡ್ರೆಡ್ ಲೀಗ್​ನಲ್ಲಿ ಕಾಣಿಸಿಕೊಂಡ 2ನೇ ಹಿರಿಯ ಆಟಗಾರ ಎಂಬ ದಾಖಲೆಯನ್ನು ಸಹ ನಿರ್ಮಿಸಿದ್ದಾರೆ.

ಮ್ಯಾಂಚೆಸ್ಟರ್​ನ ಓಲ್ಡ್​​ ಟ್ರಾಫೋರ್ಡ್ ಮೈದಾನದಲ್ಲಿ ನಡೆದ ಸದರ್ನ್​ ಬ್ರೇವ್ ವಿರುದ್ಧದ ಪಂದ್ಯದಲ್ಲಿ ಮ್ಯಾಂಚೆಸ್ಟರ್ ಒರಿಜಿನಲ್ಸ್ ಪರ ಕಣಕ್ಕಿಳಿಯುವ ಮೂಲಕ ಜೇಮ್ಸ್ ಅ್ಯಂಡರ್ಸನ್ ಈ ಸಾಧನೆ ಮಾಡಿದ್ದಾರೆ. ಈ ಸಾಧನೆಯೊಂದಿಗೆ ದಿ ಹಂಡ್ರೆಡ್ ಲೀಗ್​ನಲ್ಲಿ ಕಾಣಿಸಿಕೊಂಡ 2ನೇ ಹಿರಿಯ ಆಟಗಾರ ಎಂಬ ದಾಖಲೆಯನ್ನು ಸಹ ನಿರ್ಮಿಸಿದ್ದಾರೆ.

2 / 5
ದಿ ಹಂಡ್ರೆಡ್ ಲೀಗ್​ನಲ್ಲಿ ಕಣಕ್ಕಿಳಿದ ಅತ್ಯಂತ ಹಿರಿಯ ಆಟಗಾರ ಎಂಬ ದಾಖಲೆ ಇಮ್ರಾನ್ ತಾಹಿರ್ ಹೆಸರಿನಲ್ಲಿದೆ. 2023 ರಲ್ಲಿ ಬರ್ಮಿಂಗ್​ಹ್ಯಾಮ್ ಫಿನಿಕ್ಸ್ ಪರ ಕಣಕ್ಕಿಳಿಯುವ ಮೂಲಕ ಸೌತ್ ಆಫ್ರಿಕಾ ಸ್ಪಿನ್ನರ್ ಈ ದಾಖಲೆ ಬರೆದಿದ್ದಾರೆ. ಈ ವೇಳೆ ಇಮ್ರಾನ್ ತಾಹಿರ್ ಅವರ ವಯಸ್ಸು 43 ವರ್ಷ, 149 ದಿನಗಳಾಗಿತ್ತು.

ದಿ ಹಂಡ್ರೆಡ್ ಲೀಗ್​ನಲ್ಲಿ ಕಣಕ್ಕಿಳಿದ ಅತ್ಯಂತ ಹಿರಿಯ ಆಟಗಾರ ಎಂಬ ದಾಖಲೆ ಇಮ್ರಾನ್ ತಾಹಿರ್ ಹೆಸರಿನಲ್ಲಿದೆ. 2023 ರಲ್ಲಿ ಬರ್ಮಿಂಗ್​ಹ್ಯಾಮ್ ಫಿನಿಕ್ಸ್ ಪರ ಕಣಕ್ಕಿಳಿಯುವ ಮೂಲಕ ಸೌತ್ ಆಫ್ರಿಕಾ ಸ್ಪಿನ್ನರ್ ಈ ದಾಖಲೆ ಬರೆದಿದ್ದಾರೆ. ಈ ವೇಳೆ ಇಮ್ರಾನ್ ತಾಹಿರ್ ಅವರ ವಯಸ್ಸು 43 ವರ್ಷ, 149 ದಿನಗಳಾಗಿತ್ತು.

3 / 5
ಇದೀಗ 43 ವರ್ಷ, 7 ದಿನಗಳ ವಯಸ್ಸಿನಲ್ಲಿ ದಿ ಹಂಡ್ರೆಡ್ ಲೀಗ್​ನಲ್ಲಿ ಕಾಣಿಸಿಕೊಳ್ಳುವ ಮೂಲಕ ಜೇಮ್ಸ್ ಅ್ಯಂಡರ್ಸನ್ 100 ಎಸೆತಗಳ ಟೂರ್ನಿ ಆಡಿದ 2ನೇ ಅತ್ಯಂತ ಹಿರಿಯ ಆಟಗಾರ ಎನಿಸಿಕೊಂಡಿದ್ದಾರೆ. ಅಲ್ಲದೆ ಫ್ರಾಂಚೈಸಿ ಲೀಗ್​ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ ವಿಶ್ವದ ಅತ್ಯಂತ ಹಿರಿಯ ಕ್ರಿಕೆಟಿಗ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ. ಅಂದರೆ ಇದಕ್ಕೂ ಮುನ್ನ ಅ್ಯಂಡರ್ಸನ್ ಯಾವುದೇ ಫ್ರಾಂಚೈಸಿ ಲೀಗ್ ಆಡಿರಲಿಲ್ಲ.

ಇದೀಗ 43 ವರ್ಷ, 7 ದಿನಗಳ ವಯಸ್ಸಿನಲ್ಲಿ ದಿ ಹಂಡ್ರೆಡ್ ಲೀಗ್​ನಲ್ಲಿ ಕಾಣಿಸಿಕೊಳ್ಳುವ ಮೂಲಕ ಜೇಮ್ಸ್ ಅ್ಯಂಡರ್ಸನ್ 100 ಎಸೆತಗಳ ಟೂರ್ನಿ ಆಡಿದ 2ನೇ ಅತ್ಯಂತ ಹಿರಿಯ ಆಟಗಾರ ಎನಿಸಿಕೊಂಡಿದ್ದಾರೆ. ಅಲ್ಲದೆ ಫ್ರಾಂಚೈಸಿ ಲೀಗ್​ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ ವಿಶ್ವದ ಅತ್ಯಂತ ಹಿರಿಯ ಕ್ರಿಕೆಟಿಗ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ. ಅಂದರೆ ಇದಕ್ಕೂ ಮುನ್ನ ಅ್ಯಂಡರ್ಸನ್ ಯಾವುದೇ ಫ್ರಾಂಚೈಸಿ ಲೀಗ್ ಆಡಿರಲಿಲ್ಲ.

4 / 5
ಇನ್ನು ಚೊಚ್ಚಲ ದಿ ಹಂಡ್ರೆಡ್ ಲೀಗ್ ಪಂದ್ಯವಾಡಿದ ಜೇಮ್ಸ್ ಅ್ಯಂಡರ್ಸನ್ ಒಟ್ಟು 20 ಎಸೆತಗಳನ್ನು ಎಸೆದಿದ್ದಾರೆ. ಈ ವೇಳೆ 36 ರನ್ ನೀಡಿದರೂ ಒಂದೇ ಒಂದು ವಿಕೆಟ್ ಪಡೆಯಲು ಸಾಧ್ಯವಾಗಿಲ್ಲ. ಇನ್ನು ಈ 20 ಎಸೆತಗಳಲ್ಲಿ 5 ಡಾಟ್ ಬಾಲ್ ಎಸೆಯುವಲ್ಲಿ ಸಫಲರಾಗಿದ್ದರು. ಹೀಗಾಗಿ ಅನುಭವಿ ವೇಗಿಯನ್ನು ಮುಂದಿನ ಪಂದ್ಯದಲ್ಲೂ ಕಣಕ್ಕಿಳಿಸುವ ಸಾಧ್ಯತೆಯಿದೆ.

ಇನ್ನು ಚೊಚ್ಚಲ ದಿ ಹಂಡ್ರೆಡ್ ಲೀಗ್ ಪಂದ್ಯವಾಡಿದ ಜೇಮ್ಸ್ ಅ್ಯಂಡರ್ಸನ್ ಒಟ್ಟು 20 ಎಸೆತಗಳನ್ನು ಎಸೆದಿದ್ದಾರೆ. ಈ ವೇಳೆ 36 ರನ್ ನೀಡಿದರೂ ಒಂದೇ ಒಂದು ವಿಕೆಟ್ ಪಡೆಯಲು ಸಾಧ್ಯವಾಗಿಲ್ಲ. ಇನ್ನು ಈ 20 ಎಸೆತಗಳಲ್ಲಿ 5 ಡಾಟ್ ಬಾಲ್ ಎಸೆಯುವಲ್ಲಿ ಸಫಲರಾಗಿದ್ದರು. ಹೀಗಾಗಿ ಅನುಭವಿ ವೇಗಿಯನ್ನು ಮುಂದಿನ ಪಂದ್ಯದಲ್ಲೂ ಕಣಕ್ಕಿಳಿಸುವ ಸಾಧ್ಯತೆಯಿದೆ.

5 / 5

Published On - 10:11 am, Thu, 7 August 25

Follow Us
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಮಂತ್ರಾಲಯಕ್ಕೆ ಭಕ್ತ ಸಾಗರ: 21 ದಿನಗಳಲ್ಲೇ ಬಂತು ಕೋಟಿ ಕೋಟಿ ಕಾಣಿಕೆ!
ಮಂತ್ರಾಲಯಕ್ಕೆ ಭಕ್ತ ಸಾಗರ: 21 ದಿನಗಳಲ್ಲೇ ಬಂತು ಕೋಟಿ ಕೋಟಿ ಕಾಣಿಕೆ!
ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು!
ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು!