AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

James Anderson: 15 ವರ್ಷಗಳ ಬಳಿಕ ಟಿ20 ಕ್ರಿಕೆಟ್​ಗೆ ಆಡಲು ಜೇಮ್ಸ್ ಅ್ಯಂಡರ್ಸನ್ ಇಂಗಿತ

James Anderson: ಟೆಸ್ಟ್ ಕ್ರಿಕೆಟ್​ನ ಸರ್ವಶ್ರೇಷ್ಠ ವೇಗಿ ಎನಿಸಿಕೊಂಡಿರುವ ಜೇಮ್ಸ್ ಅ್ಯಂಡರ್ಸನ್ ಇಂಗ್ಲೆಂಡ್ ಪರ ಕೇವಲ 19 ಟಿ20 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 18 ವಿಕೆಟ್ ಕಬಳಿಸಿದ್ದಾರೆ. ಇನ್ನು 2009 ರಲ್ಲಿ ಸೌತ್ ಆಫ್ರಿಕಾ ವಿರುದ್ಧ ಕೊನೆಯ ಬಾರಿ ಟಿ20 ಪಂದ್ಯವಾಡಿದ್ದ ಅ್ಯಂಡರ್ಸನ್ ಆ ಬಳಿಕ ಚುಟುಕು ಕ್ರಿಕೆಟ್​ನಲ್ಲಿ ಕಣಕ್ಕಿಳಿದಿರಲಿಲ್ಲ. ಇದೀಗ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ಫ್ರಾಂಚೈಸಿ ಲೀಗ್​ನತ್ತ ಮುಖ ಮಾಡಲು ಉತ್ಸುಕರಾಗಿದ್ದಾರೆ.

ಝಾಹಿರ್ ಯೂಸುಫ್
|

Updated on: Aug 14, 2024 | 12:44 PM

Share
ಇಂಗ್ಲೆಂಡ್​ನ ಸರ್ವಶ್ರೇಷ್ಠ ಬೌಲರ್​ ಜೇಮ್ಸ್ ಅ್ಯಂಡರ್ಸನ್ ಕೊನೆಯ ಬಾರಿ ಟಿ20 ಪಂದ್ಯವಾಡಿದ್ದು 2009 ರಲ್ಲಿ. ಇದೀಗ 15 ವರ್ಷಗಳ ಬಳಿಕ ಮತ್ತೆ ಟಿ20 ಕ್ರಿಕೆಟ್ ಆಡುವ ಇಂಗಿತ ವ್ಯಕ್ತಪಡಿಸಿದ್ದಾರೆ. ಅದು ಸಹ ತಮ್ಮ 42ನೇ ವಯಸ್ಸಿನಲ್ಲಿ ಎಂಬುದು ವಿಶೇಷ.

ಇಂಗ್ಲೆಂಡ್​ನ ಸರ್ವಶ್ರೇಷ್ಠ ಬೌಲರ್​ ಜೇಮ್ಸ್ ಅ್ಯಂಡರ್ಸನ್ ಕೊನೆಯ ಬಾರಿ ಟಿ20 ಪಂದ್ಯವಾಡಿದ್ದು 2009 ರಲ್ಲಿ. ಇದೀಗ 15 ವರ್ಷಗಳ ಬಳಿಕ ಮತ್ತೆ ಟಿ20 ಕ್ರಿಕೆಟ್ ಆಡುವ ಇಂಗಿತ ವ್ಯಕ್ತಪಡಿಸಿದ್ದಾರೆ. ಅದು ಸಹ ತಮ್ಮ 42ನೇ ವಯಸ್ಸಿನಲ್ಲಿ ಎಂಬುದು ವಿಶೇಷ.

1 / 5
ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ ದಿ ಹಂಡ್ರೆಡ್ ಲೀಗ್ ವೀಕ್ಷಿಸುತ್ತಿದ್ದೇನೆ. ಈ ಲೀಗ್​ನಲ್ಲಿ ಒಬ್ಬ ಬೌಲರ್​ಗೆ ಕೇವಲ 20 ಎಸೆತಗಳು ಮಾತ್ರ ಇದೆ. ವಿಶೇಷ ಎಂದರೆ ಮೊದಲ 20 ಎಸೆತಗಳಲ್ಲಿ ಚೆಂಡು ಸ್ವಿಂಗ್ ಪಡೆಯುತ್ತಿರುವುದನ್ನು ನಾನು ಗಮನಿಸಿದ್ದೇನೆ. ನಾನು ಸಹ ಅದನ್ನು ಮಾಡಬಲ್ಲೆ ಎಂದು ಜೇಮ್ಸ್ ಅ್ಯಂಡರ್ಸನ್ ಹೇಳಿದ್ದಾರೆ.

ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ ದಿ ಹಂಡ್ರೆಡ್ ಲೀಗ್ ವೀಕ್ಷಿಸುತ್ತಿದ್ದೇನೆ. ಈ ಲೀಗ್​ನಲ್ಲಿ ಒಬ್ಬ ಬೌಲರ್​ಗೆ ಕೇವಲ 20 ಎಸೆತಗಳು ಮಾತ್ರ ಇದೆ. ವಿಶೇಷ ಎಂದರೆ ಮೊದಲ 20 ಎಸೆತಗಳಲ್ಲಿ ಚೆಂಡು ಸ್ವಿಂಗ್ ಪಡೆಯುತ್ತಿರುವುದನ್ನು ನಾನು ಗಮನಿಸಿದ್ದೇನೆ. ನಾನು ಸಹ ಅದನ್ನು ಮಾಡಬಲ್ಲೆ ಎಂದು ಜೇಮ್ಸ್ ಅ್ಯಂಡರ್ಸನ್ ಹೇಳಿದ್ದಾರೆ.

2 / 5
ಈ ಹೇಳಿಕೆಯೊಂದಿಗೆ, ಚುಟುಕು ಮಾದರಿಯ ಕ್ರಿಕೆಟ್​ನಲ್ಲಿ ಅತ್ಯುತ್ತಮ ಬೌಲಿಂಗ್ ಮಾಡಬಲ್ಲೆ ಎಂಬ ವಿಶ್ವಾಸವನ್ನು ಅ್ಯಂಡರ್ಸನ್ ತಿಳಿಸಿದ್ದಾರೆ. ಈ ಮೂಲಕ ಇಂಗ್ಲೆಂಡ್ ವೇಗಿ ಮತ್ತೆ ಸ್ಪರ್ಧಾತ್ಮಕ ಕ್ರಿಕೆಟ್​ಗೆ ಮರಳುವ ಇಂಗಿತ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಮುಂಬರುವ ದಿನಗಳಲ್ಲಿ ಅ್ಯಂಡರ್ಸನ್ ದಿ ಹಂಡ್ರೆಡ್ ಲೀಗ್ ಅಥವಾ ಇತರೆ ಫ್ರಾಂಚೈಸಿ ಲೀಗ್​ನಲ್ಲಿ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

ಈ ಹೇಳಿಕೆಯೊಂದಿಗೆ, ಚುಟುಕು ಮಾದರಿಯ ಕ್ರಿಕೆಟ್​ನಲ್ಲಿ ಅತ್ಯುತ್ತಮ ಬೌಲಿಂಗ್ ಮಾಡಬಲ್ಲೆ ಎಂಬ ವಿಶ್ವಾಸವನ್ನು ಅ್ಯಂಡರ್ಸನ್ ತಿಳಿಸಿದ್ದಾರೆ. ಈ ಮೂಲಕ ಇಂಗ್ಲೆಂಡ್ ವೇಗಿ ಮತ್ತೆ ಸ್ಪರ್ಧಾತ್ಮಕ ಕ್ರಿಕೆಟ್​ಗೆ ಮರಳುವ ಇಂಗಿತ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಮುಂಬರುವ ದಿನಗಳಲ್ಲಿ ಅ್ಯಂಡರ್ಸನ್ ದಿ ಹಂಡ್ರೆಡ್ ಲೀಗ್ ಅಥವಾ ಇತರೆ ಫ್ರಾಂಚೈಸಿ ಲೀಗ್​ನಲ್ಲಿ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

3 / 5
ಸದ್ಯ ಜೇಮ್ಸ್ ಅ್ಯಂಡರ್ಸನ್ ಇಂಗ್ಲೆಂಡ್ ತಂಡದ ಬೌಲಿಂಗ್ ಕೋಚ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ ಇನ್ನುಳಿದ ಸಮಯದಲ್ಲಿ ಲೀಗ್ ಕ್ರಿಕೆಟ್ ಆಡುವ ಇರಾದೆಯಲ್ಲಿದ್ದಾರೆ. ಅಂದರೆ ಇಂಗ್ಲೆಂಡ್ ತಂಡವು ಸೀಮಿತ ಓವರ್​ಗಳ ಸರಣಿ ಆಡುವ ವೇಳೆ ಜೇಮ್ಸ್ ಅ್ಯಂಡರ್ಸನ್ ಸಂಪೂರ್ಣ ಫ್ರೀಯಾಗಿರಲಿದ್ದು, ಹೀಗಾಗಿ ಚುಟುಕು ಕ್ರಿಕೆಟ್​ನತ್ತ ಮುಖ ಮಾಡಲು ಇಚ್ಛಿಸಿದ್ದಾರೆ.

ಸದ್ಯ ಜೇಮ್ಸ್ ಅ್ಯಂಡರ್ಸನ್ ಇಂಗ್ಲೆಂಡ್ ತಂಡದ ಬೌಲಿಂಗ್ ಕೋಚ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ ಇನ್ನುಳಿದ ಸಮಯದಲ್ಲಿ ಲೀಗ್ ಕ್ರಿಕೆಟ್ ಆಡುವ ಇರಾದೆಯಲ್ಲಿದ್ದಾರೆ. ಅಂದರೆ ಇಂಗ್ಲೆಂಡ್ ತಂಡವು ಸೀಮಿತ ಓವರ್​ಗಳ ಸರಣಿ ಆಡುವ ವೇಳೆ ಜೇಮ್ಸ್ ಅ್ಯಂಡರ್ಸನ್ ಸಂಪೂರ್ಣ ಫ್ರೀಯಾಗಿರಲಿದ್ದು, ಹೀಗಾಗಿ ಚುಟುಕು ಕ್ರಿಕೆಟ್​ನತ್ತ ಮುಖ ಮಾಡಲು ಇಚ್ಛಿಸಿದ್ದಾರೆ.

4 / 5
ಇಂಗ್ಲೆಂಡ್ ಪರ 188 ಟೆಸ್ಟ್ ಪಂದ್ಯಗಳನ್ನಾಡಿರುವ 42ರ ಹರೆಯದ ಜೇಮ್ಸ್ ಅ್ಯಂಡರ್ಸನ್ (ಜಿಮ್ಮಿ) ಒಟ್ಟು 40037 ಎಸೆತಗಳನ್ನು ಎಸೆದಿದ್ದಾರೆ. ಈ ವೇಳೆ 18627 ರನ್ ನೀಡುವ ಮೂಲಕ ಒಟ್ಟು 704 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಟೆಸ್ಟ್ ಇತಿಹಾಸದಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ವೇಗದ ಬೌಲರ್ ಎಂಬ ವಿಶ್ವ ದಾಖಲೆಯನ್ನು ನಿರ್ಮಿಸಿ ನಿವೃತ್ತಿ ಘೋಷಿಸಿದ್ದಾರೆ.

ಇಂಗ್ಲೆಂಡ್ ಪರ 188 ಟೆಸ್ಟ್ ಪಂದ್ಯಗಳನ್ನಾಡಿರುವ 42ರ ಹರೆಯದ ಜೇಮ್ಸ್ ಅ್ಯಂಡರ್ಸನ್ (ಜಿಮ್ಮಿ) ಒಟ್ಟು 40037 ಎಸೆತಗಳನ್ನು ಎಸೆದಿದ್ದಾರೆ. ಈ ವೇಳೆ 18627 ರನ್ ನೀಡುವ ಮೂಲಕ ಒಟ್ಟು 704 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಟೆಸ್ಟ್ ಇತಿಹಾಸದಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ವೇಗದ ಬೌಲರ್ ಎಂಬ ವಿಶ್ವ ದಾಖಲೆಯನ್ನು ನಿರ್ಮಿಸಿ ನಿವೃತ್ತಿ ಘೋಷಿಸಿದ್ದಾರೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ