ನಿವೃತ್ತಿ ಬಳಿಕ 42ನೇ ವಯಸ್ಸಿನಲ್ಲಿ ಮತ್ತೆ ಕಣಕ್ಕಿಳಿಯಲು ಅ್ಯಂಡರ್ಸನ್ ಸಜ್ಜು

James Anderson: ಜೇಮ್ಸ್​ ಅ್ಯಂಡರ್ಸನ್ ಟೆಸ್ಟ್ ಕ್ರಿಕೆಟ್​ನಲ್ಲಿ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಅವುಗಳಲ್ಲೊಂದು 40 ಸಾವಿರ ಬಾಲ್​​ಗಳ ದಾಖಲೆ. ಅ್ಯಂಡರ್ಸನ್ ತಮ್ಮ ಟೆಸ್ಟ್​ ಕೆರಿಯರ್ ನಲ್ಲಿ ಒಟ್ಟು 40037 ಎಸೆತಗಳನ್ನು ಎಸೆಯುವ ಮೂಲಕ, ಟೆಸ್ಟ್​ನಲ್ಲಿ 40 ಸಾವಿರಕ್ಕೂ ಅಧಿಕ ಎಸೆತಗಳನ್ನು ಎಸೆದ ವಿಶ್ವದ ಏಕೈಕ ವೇಗದ ಬೌಲರ್ ಎನಿಸಿಕೊಂಡಿದ್ದಾರೆ.

ಝಾಹಿರ್ ಯೂಸುಫ್
|

Updated on: Jan 14, 2025 | 1:00 PM

ವಿಶ್ವ ಕ್ರಿಕೆಟ್ ಕಂಡಂತಹ ಅಪ್ರತಿಮ ವೇಗದ ಬೌಲರ್ ಜೇಮ್ಸ್ ಅ್ಯಂಡರ್ಸನ್ (James Anderson) ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿ 7 ತಿಂಗಳುಗಳಾಗಿವೆ. ಈ ವಿದಾಯದ ಬೆನ್ನಲ್ಲೇ ಅವರು ಇಂಗ್ಲೆಂಡ್ ತಂಡದ ಬೌಲಿಂಗ್ ಕೋಚ್ ಆಗಿ ಹೊಸ ಇನಿಂಗ್ಸ್ ಆರಂಭಿಸಿದ್ದರು. ಆದರೀಗ ತಮ್ಮ 42ನೇ ವಯಸ್ಸಿನಲ್ಲಿ ಸ್ಪರ್ಧಾತ್ಮಕ ಕ್ರಿಕೆಟ್​ಗೆ ಮರಳಲು ಮುಂದಾಗಿದ್ದಾರೆ.

ವಿಶ್ವ ಕ್ರಿಕೆಟ್ ಕಂಡಂತಹ ಅಪ್ರತಿಮ ವೇಗದ ಬೌಲರ್ ಜೇಮ್ಸ್ ಅ್ಯಂಡರ್ಸನ್ (James Anderson) ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿ 7 ತಿಂಗಳುಗಳಾಗಿವೆ. ಈ ವಿದಾಯದ ಬೆನ್ನಲ್ಲೇ ಅವರು ಇಂಗ್ಲೆಂಡ್ ತಂಡದ ಬೌಲಿಂಗ್ ಕೋಚ್ ಆಗಿ ಹೊಸ ಇನಿಂಗ್ಸ್ ಆರಂಭಿಸಿದ್ದರು. ಆದರೀಗ ತಮ್ಮ 42ನೇ ವಯಸ್ಸಿನಲ್ಲಿ ಸ್ಪರ್ಧಾತ್ಮಕ ಕ್ರಿಕೆಟ್​ಗೆ ಮರಳಲು ಮುಂದಾಗಿದ್ದಾರೆ.

1 / 5
ಹೌದು, ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿರುವ ಜೇಮ್ಸ್ ಅ್ಯಂಡರ್ಸನ್ ಮುಂಬರುವ ಕೌಂಟಿ ಚಾಂಪಿಯನ್​​​ಶಿಪ್​ನಲ್ಲಿ ಕಣಕ್ಕಿಳಿಯಲಿದ್ದಾರೆ. ಇದಕ್ಕಾಗಿ ಲಂಕಾಶೈರ್ ತಂಡದ ಜೊತೆ ಒಂದು ವರ್ಷದ ಒಪ್ಪಂದವನ್ನು ಸಹ ಮಾಡಿಕೊಂಡಿದ್ದಾರೆ.

ಹೌದು, ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿರುವ ಜೇಮ್ಸ್ ಅ್ಯಂಡರ್ಸನ್ ಮುಂಬರುವ ಕೌಂಟಿ ಚಾಂಪಿಯನ್​​​ಶಿಪ್​ನಲ್ಲಿ ಕಣಕ್ಕಿಳಿಯಲಿದ್ದಾರೆ. ಇದಕ್ಕಾಗಿ ಲಂಕಾಶೈರ್ ತಂಡದ ಜೊತೆ ಒಂದು ವರ್ಷದ ಒಪ್ಪಂದವನ್ನು ಸಹ ಮಾಡಿಕೊಂಡಿದ್ದಾರೆ.

2 / 5
ಈ ಒಪ್ಪಂದದ ಪ್ರಕಾರ, ಜೇಮ್ಸ್ ಅ್ಯಂಡರ್ಸನ್ ಮುಂಬರುವ ಕೌಂಟಿ ಚಾಂಪಿಯನ್​ಶಿಪ್​ನಲ್ಲಿ ಪ್ರಥಮ ದರ್ಜೆ ಪಂದ್ಯಗಳನ್ನಾಡಲಿದ್ದಾರೆ. ಅಲ್ಲದೆ ವಿಟಾಲ್ಟಿ ಟಿ20 ಬ್ಲಾಸ್ಟ್‌ ಟೂರ್ನಿಯಲ್ಲೂ ಲಂಕಾಶೈರ್ ಪರ ಕಣಕ್ಕಿಳಿಯಲಿದ್ದಾರೆ. ಈ ಮೂಲಕ ಸ್ಪರ್ಧಾತ್ಮಕ ಕ್ರಿಕೆಟ್​ನಲ್ಲಿ ಮುಂದುವರೆಯಲು ಜಿಮ್ಮಿ ಅ್ಯಡರ್ಸನ್ ನಿರ್ಧರಿಸಿದ್ದಾರೆ.

ಈ ಒಪ್ಪಂದದ ಪ್ರಕಾರ, ಜೇಮ್ಸ್ ಅ್ಯಂಡರ್ಸನ್ ಮುಂಬರುವ ಕೌಂಟಿ ಚಾಂಪಿಯನ್​ಶಿಪ್​ನಲ್ಲಿ ಪ್ರಥಮ ದರ್ಜೆ ಪಂದ್ಯಗಳನ್ನಾಡಲಿದ್ದಾರೆ. ಅಲ್ಲದೆ ವಿಟಾಲ್ಟಿ ಟಿ20 ಬ್ಲಾಸ್ಟ್‌ ಟೂರ್ನಿಯಲ್ಲೂ ಲಂಕಾಶೈರ್ ಪರ ಕಣಕ್ಕಿಳಿಯಲಿದ್ದಾರೆ. ಈ ಮೂಲಕ ಸ್ಪರ್ಧಾತ್ಮಕ ಕ್ರಿಕೆಟ್​ನಲ್ಲಿ ಮುಂದುವರೆಯಲು ಜಿಮ್ಮಿ ಅ್ಯಡರ್ಸನ್ ನಿರ್ಧರಿಸಿದ್ದಾರೆ.

3 / 5
ಜೇಮ್ಸ್ ಅ್ಯಂಡರ್ಸನ್ 2001 ರಲ್ಲಿ ಲಂಕಾಶೈರ್​ ಪರ ಪ್ರಥಮ ದರ್ಜೆ ಪಂದ್ಯವಾಡುವ ಮೂಲಕ ಕೆರಿಯರ್ ಆರಂಭಿಸಿದ್ದರು. ಅಲ್ಲದೆ ಕಳೆದ ವರ್ಷ ಇದೇ ತಂಡದ ಪರ ಕೊನೆಯ ಪ್ರಥಮ ದರ್ಜೆ ಪಂದ್ಯವಾಡಿದ್ದರು. ಈ ವೇಳೆ ನಾಟಿಂಗ್‌ಹ್ಯಾಮ್‌ಶೈರ್ ವಿರುದ್ಧ 35 ರನ್‌ಗಳಿಗೆ 7 ವಿಕೆಟ್ ಪಡೆದು ಮಿಂಚಿದ್ದರು. ಇದೀಗ ಲಂಕಾಶೈರ್ ತಂಡದ ಪರವೇ ಮತ್ತೆ ಕಣಕ್ಕಿಳಿಯುವ ಮೂಲಕ ಹಳೆಯ ಇನಿಂಗ್ಸ್ ಮುಂದುವರೆಸಲು ಜಿಮ್ಮಿ ನಿರ್ಧರಿಸಿದ್ದಾರೆ.

ಜೇಮ್ಸ್ ಅ್ಯಂಡರ್ಸನ್ 2001 ರಲ್ಲಿ ಲಂಕಾಶೈರ್​ ಪರ ಪ್ರಥಮ ದರ್ಜೆ ಪಂದ್ಯವಾಡುವ ಮೂಲಕ ಕೆರಿಯರ್ ಆರಂಭಿಸಿದ್ದರು. ಅಲ್ಲದೆ ಕಳೆದ ವರ್ಷ ಇದೇ ತಂಡದ ಪರ ಕೊನೆಯ ಪ್ರಥಮ ದರ್ಜೆ ಪಂದ್ಯವಾಡಿದ್ದರು. ಈ ವೇಳೆ ನಾಟಿಂಗ್‌ಹ್ಯಾಮ್‌ಶೈರ್ ವಿರುದ್ಧ 35 ರನ್‌ಗಳಿಗೆ 7 ವಿಕೆಟ್ ಪಡೆದು ಮಿಂಚಿದ್ದರು. ಇದೀಗ ಲಂಕಾಶೈರ್ ತಂಡದ ಪರವೇ ಮತ್ತೆ ಕಣಕ್ಕಿಳಿಯುವ ಮೂಲಕ ಹಳೆಯ ಇನಿಂಗ್ಸ್ ಮುಂದುವರೆಸಲು ಜಿಮ್ಮಿ ನಿರ್ಧರಿಸಿದ್ದಾರೆ.

4 / 5
ಅಂದಹಾಗೆ ಇಂಗ್ಲೆಂಡ್ ಪರ 188 ಟೆಸ್ಟ್ ಜೇಮ್ಸ್ ಅ್ಯಂಡರ್ಸನ್ (ಜಿಮ್ಮಿ) ಒಟ್ಟು 40037 ಎಸೆತಗಳನ್ನು ಎಸೆದಿದ್ದಾರೆ. ಈ ವೇಳೆ 18627 ರನ್ ನೀಡುವ ಮೂಲಕ ಒಟ್ಟು 704 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಟೆಸ್ಟ್ ಇತಿಹಾಸದಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ವೇಗದ ಬೌಲರ್ ಎಂಬ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ. ಈಗಾಗಲೇ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿರುವ ಜಿಮ್ಮಿ ಮತ್ತೆ ಕೌಂಟಿ ಕ್ರಿಕೆಟ್​ನಲ್ಲಿ ಕಣಕ್ಕಿಳಿಯಲು ನಿರ್ಧರಿಸಿರುವುದೇ ಅಚ್ಚರಿ.

ಅಂದಹಾಗೆ ಇಂಗ್ಲೆಂಡ್ ಪರ 188 ಟೆಸ್ಟ್ ಜೇಮ್ಸ್ ಅ್ಯಂಡರ್ಸನ್ (ಜಿಮ್ಮಿ) ಒಟ್ಟು 40037 ಎಸೆತಗಳನ್ನು ಎಸೆದಿದ್ದಾರೆ. ಈ ವೇಳೆ 18627 ರನ್ ನೀಡುವ ಮೂಲಕ ಒಟ್ಟು 704 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಟೆಸ್ಟ್ ಇತಿಹಾಸದಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ವೇಗದ ಬೌಲರ್ ಎಂಬ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ. ಈಗಾಗಲೇ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿರುವ ಜಿಮ್ಮಿ ಮತ್ತೆ ಕೌಂಟಿ ಕ್ರಿಕೆಟ್​ನಲ್ಲಿ ಕಣಕ್ಕಿಳಿಯಲು ನಿರ್ಧರಿಸಿರುವುದೇ ಅಚ್ಚರಿ.

5 / 5
Follow us
ದುಷ್ಕೃತ್ಯ ನಿಲ್ಲಿಸಿ ಮುಖ್ಯವಾಹಿನಿಗೆ ಬರುವ ಪ್ರಯತ್ನದಲ್ಲಿದ್ದ ಬಾಗಪ್ಪ
ದುಷ್ಕೃತ್ಯ ನಿಲ್ಲಿಸಿ ಮುಖ್ಯವಾಹಿನಿಗೆ ಬರುವ ಪ್ರಯತ್ನದಲ್ಲಿದ್ದ ಬಾಗಪ್ಪ
ದೇವರ ಗುಡಿ ಕಟ್ಟಿ ಪಾಪ ತೊಳೆದುಕೊಳ್ಳಲು ಮುಂದಾಗಿದ್ದ ಬಾಗಪ್ಪ ಹರಿಜನ!
ದೇವರ ಗುಡಿ ಕಟ್ಟಿ ಪಾಪ ತೊಳೆದುಕೊಳ್ಳಲು ಮುಂದಾಗಿದ್ದ ಬಾಗಪ್ಪ ಹರಿಜನ!
ಹೈದರಾಬಾದ್: ದೇವಾಲಯದ ಗರ್ಭಗುಡಿಗೊಳಗೆ ಮಾಂಸ ಪತ್ತೆ
ಹೈದರಾಬಾದ್: ದೇವಾಲಯದ ಗರ್ಭಗುಡಿಗೊಳಗೆ ಮಾಂಸ ಪತ್ತೆ
ರೌಡಿಶೀಟರ್ ಬಾಗಪ್ಪ ಹರಿಜನ್ ಹತ್ತಕ್ಕೂ ಹೆಚ್ಚು ಪ್ರಕರಣಗಳಲ್ಲಿ ಅರೋಪಿಯಾಗಿದ್ದ
ರೌಡಿಶೀಟರ್ ಬಾಗಪ್ಪ ಹರಿಜನ್ ಹತ್ತಕ್ಕೂ ಹೆಚ್ಚು ಪ್ರಕರಣಗಳಲ್ಲಿ ಅರೋಪಿಯಾಗಿದ್ದ
ಎಐ ಆ್ಯಪ್​ಗಳ ಲೋಪ ಎತ್ತಿತೋರಿಸಿದ ಮೋದಿ
ಎಐ ಆ್ಯಪ್​ಗಳ ಲೋಪ ಎತ್ತಿತೋರಿಸಿದ ಮೋದಿ
ಊಹಾಪೋಹಗಳನ್ನು ನೆಚ್ಚಿಕೊಂಡು ಸುದ್ದಿಗಳನ್ನು ಬಿತ್ತರಿಸಬೇಡಿ: ಖರ್ಗೆ
ಊಹಾಪೋಹಗಳನ್ನು ನೆಚ್ಚಿಕೊಂಡು ಸುದ್ದಿಗಳನ್ನು ಬಿತ್ತರಿಸಬೇಡಿ: ಖರ್ಗೆ
ತುಮಕೂರು: ಸರ್ಕಾರಿ ವಸತಿ ನಿಲಯದ 20 ವಿದ್ಯಾರ್ಥಿಗಳು ಅಸ್ವಸ್ಥ
ತುಮಕೂರು: ಸರ್ಕಾರಿ ವಸತಿ ನಿಲಯದ 20 ವಿದ್ಯಾರ್ಥಿಗಳು ಅಸ್ವಸ್ಥ
ಕೆಪಿಸಿಸಿ ಅಧ್ಯಕ್ಷ ಬದಲಾವಣೆಯ ಸುಳಿವು ನೀಡಿದ ಮಲ್ಲಿಕಾರ್ಜುನ್​ ಖರ್ಗೆ
ಕೆಪಿಸಿಸಿ ಅಧ್ಯಕ್ಷ ಬದಲಾವಣೆಯ ಸುಳಿವು ನೀಡಿದ ಮಲ್ಲಿಕಾರ್ಜುನ್​ ಖರ್ಗೆ
ತನ್ನ ಸಹೋದರ ರವಿ ಹತ್ಯೆಯ ಸೇಡನ್ನು ಪ್ರಕಾಶ್ @ಪಿಂಟೂ ತೀರಿಸಿಕೊಂಡನೇ?
ತನ್ನ ಸಹೋದರ ರವಿ ಹತ್ಯೆಯ ಸೇಡನ್ನು ಪ್ರಕಾಶ್ @ಪಿಂಟೂ ತೀರಿಸಿಕೊಂಡನೇ?
ಕುಂಭಮೇಳದಲ್ಲಿ ಭಾಗಿಯಾಗುವ ಅಗತ್ಯವಿಲ್ಲ ಅಂದಿದ್ಯಾಕೆ ಶಿವಕುಮಾರ್?
ಕುಂಭಮೇಳದಲ್ಲಿ ಭಾಗಿಯಾಗುವ ಅಗತ್ಯವಿಲ್ಲ ಅಂದಿದ್ಯಾಕೆ ಶಿವಕುಮಾರ್?