AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC Rankings: ಐಸಿಸಿ ರ‍್ಯಾಂಕಿಂಗ್​ನಲ್ಲಿ ಜಸ್​ಪ್ರೀತ್ ಬುಮ್ರಾಗೆ ದಾಖಲೆಯ ರೇಟಿಂಗ್

ICC Test Rankings: ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಮೂರು ಪಂದ್ಯಗಳಿಂದ 21 ವಿಕೆಟ್ ಕಬಳಿಸಿರುವ ಜಸ್​ಪ್ರೀತ್ ಬುಮ್ರಾ ಐಸಿಸಿ ಟೆಸ್ಟ್ ಬೌಲರ್​​ಗಳ ಶ್ರೇಯಾಂಕದಲ್ಲಿ ಅಗ್ರಸ್ಥಾನ ಅಲಂಕರಿಸಿದ್ದಾರೆ. ಅದು ಕೂಡ ರವಿಚಂದ್ರನ್ ಅಶ್ವಿನ್ ಅವರ ಸರ್ವಶ್ರೇಷ್ಠ ಸಾಧನೆಯನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ.

ಝಾಹಿರ್ ಯೂಸುಫ್
|

Updated on: Dec 26, 2024 | 9:08 AM

Share
ಐಸಿಸಿ ಟೆಸ್ಟ್ ಬೌಲರ್​​ಗಳ ನೂತನ ರ‍್ಯಾಂಕಿಂಗ್ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿ ಅಗ್ರಸ್ಥಾನದಲ್ಲಿ ಕಾಣಿಸಿಕೊಂಡಿರುವುದು ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ. ಅದು ಕೂಡ 904 ಅಂಕಗಳನ್ನು ಪಡೆಯುವ ಮೂಲಕ ಎಂಬುದೇ ವಿಶೇಷ.

ಐಸಿಸಿ ಟೆಸ್ಟ್ ಬೌಲರ್​​ಗಳ ನೂತನ ರ‍್ಯಾಂಕಿಂಗ್ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿ ಅಗ್ರಸ್ಥಾನದಲ್ಲಿ ಕಾಣಿಸಿಕೊಂಡಿರುವುದು ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ. ಅದು ಕೂಡ 904 ಅಂಕಗಳನ್ನು ಪಡೆಯುವ ಮೂಲಕ ಎಂಬುದೇ ವಿಶೇಷ.

1 / 5
ಈ ಮೂಲಕ ಐಸಿಸಿ ರ‍್ಯಾಂಕಿಂಗ್​ ಇತಿಹಾಸದಲ್ಲಿ 900+ ಅಂಕಗಳನ್ನು ಪಡೆದ ಭಾರತದ 2ನೇ ಬೌಲರ್ ಎಂಬ ದಾಖಲೆಯನ್ನು ಜಸ್​ಪ್ರೀತ್ ಬುಮ್ರಾ ತಮ್ಮದಾಗಿಸಿಕೊಂಡಿದ್ದಾರೆ. ಅದು ಸಹ ಟೀಮ್ ಇಂಡಿಯಾದ ಮಾಜಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರ ಸರ್ವಶ್ರೇಷ್ಠ ರೇಟಿಂಗ್ ಸಾಧನೆಯನ್ನು ಸರಿಗಟ್ಟುವ ಮೂಲಕ ಈ ಸಾಧನೆ ಮೆರೆದಿದ್ದಾರೆ.

ಈ ಮೂಲಕ ಐಸಿಸಿ ರ‍್ಯಾಂಕಿಂಗ್​ ಇತಿಹಾಸದಲ್ಲಿ 900+ ಅಂಕಗಳನ್ನು ಪಡೆದ ಭಾರತದ 2ನೇ ಬೌಲರ್ ಎಂಬ ದಾಖಲೆಯನ್ನು ಜಸ್​ಪ್ರೀತ್ ಬುಮ್ರಾ ತಮ್ಮದಾಗಿಸಿಕೊಂಡಿದ್ದಾರೆ. ಅದು ಸಹ ಟೀಮ್ ಇಂಡಿಯಾದ ಮಾಜಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರ ಸರ್ವಶ್ರೇಷ್ಠ ರೇಟಿಂಗ್ ಸಾಧನೆಯನ್ನು ಸರಿಗಟ್ಟುವ ಮೂಲಕ ಈ ಸಾಧನೆ ಮೆರೆದಿದ್ದಾರೆ.

2 / 5
2016 ರಲ್ಲಿ ರವಿಚಂದ್ರನ್ ಅಶ್ವಿನ್ ಟೆಸ್ಟ್​ ರ‍್ಯಾಂಕಿಂಗ್​ನಲ್ಲಿ ಬರೋಬ್ಬರಿ 904 ಅಂಕಗಳನ್ನು ಕಲೆಹಾಕಿದ್ದರು. ಈ ಮೂಲಕ ಟೆಸ್ಟ್ ಕ್ರಿಕೆಟ್​ ಇತಿಹಾಸದಲ್ಲಿ ಅತ್ಯಧಿಕ ರೇಟಿಂಗ್ ಪಡೆದ ಭಾರತೀಯ ಬೌಲರ್ ಎನಿಸಿಕೊಂಡಿದ್ದರು. ಇದೀಗ ಈ ದಾಖಲೆಯನ್ನು ಬುಮ್ರಾ ಸರಿಗಟ್ಟಿದ್ದಾರೆ.

2016 ರಲ್ಲಿ ರವಿಚಂದ್ರನ್ ಅಶ್ವಿನ್ ಟೆಸ್ಟ್​ ರ‍್ಯಾಂಕಿಂಗ್​ನಲ್ಲಿ ಬರೋಬ್ಬರಿ 904 ಅಂಕಗಳನ್ನು ಕಲೆಹಾಕಿದ್ದರು. ಈ ಮೂಲಕ ಟೆಸ್ಟ್ ಕ್ರಿಕೆಟ್​ ಇತಿಹಾಸದಲ್ಲಿ ಅತ್ಯಧಿಕ ರೇಟಿಂಗ್ ಪಡೆದ ಭಾರತೀಯ ಬೌಲರ್ ಎನಿಸಿಕೊಂಡಿದ್ದರು. ಇದೀಗ ಈ ದಾಖಲೆಯನ್ನು ಬುಮ್ರಾ ಸರಿಗಟ್ಟಿದ್ದಾರೆ.

3 / 5
ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶಿಸಿರುವ ಜಸ್​ಪ್ರೀತ್ ಬುಮ್ರಾ ಇದೀಗ ಐಸಿಸಿ ಟೆಸ್ಟ್ ಬೌಲರ್​​ ರ‍್ಯಾಂಕಿಂಗ್​ನಲ್ಲಿ  904 ರೇಟಿಂಗ್ ಪಡೆದಿದ್ದು, ಈ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅಲ್ಲದೆ ಇನ್ನೊಂದು ಅಂಕ ಪಡೆದರೆ ಟೆಸ್ಟ್​ನಲ್ಲಿ ಅತ್ಯಧಿಕ ರೇಟಿಂಗ್ ಪಡೆದ ಭಾರತೀಯ ಬೌಲರ್ ಎನಿಸಿಕೊಳ್ಳಲಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶಿಸಿರುವ ಜಸ್​ಪ್ರೀತ್ ಬುಮ್ರಾ ಇದೀಗ ಐಸಿಸಿ ಟೆಸ್ಟ್ ಬೌಲರ್​​ ರ‍್ಯಾಂಕಿಂಗ್​ನಲ್ಲಿ 904 ರೇಟಿಂಗ್ ಪಡೆದಿದ್ದು, ಈ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅಲ್ಲದೆ ಇನ್ನೊಂದು ಅಂಕ ಪಡೆದರೆ ಟೆಸ್ಟ್​ನಲ್ಲಿ ಅತ್ಯಧಿಕ ರೇಟಿಂಗ್ ಪಡೆದ ಭಾರತೀಯ ಬೌಲರ್ ಎನಿಸಿಕೊಳ್ಳಲಿದ್ದಾರೆ.

4 / 5
ಇನ್ನು ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತೀ ಹೆಚ್ಚು ರೇಟಿಂಗ್ ಪಡೆದ ಬೌಲರ್ ದಾಖಲೆ ಇಂಗ್ಲೆಂಡ್ ಬೌಲರ್​ ಸಿಡ್ನಿ ಬಾರ್ನ್ಸ್ ಹೆಸರಿನಲ್ಲಿದೆ. 1914 ರಲ್ಲಿ 932 ರೇಟಿಂಗ್ ಪಡೆಯುವ ಮೂಲಕ ಈ ಸಾಧನೆ ಮಾಡಿದ್ದಾರೆ. ಈ ದಾಖಲೆಯನ್ನು ಮುರಿಯಲು ಜಸ್​ಪ್ರೀತ್ ಬುಮ್ರಾಗೆ ಉತ್ತಮ ಅವಕಾಶವಿದ್ದು, ಅದಕ್ಕಾಗಿ ಮುಂಬರುವ ಟೆಸ್ಟ್ ಸರಣಿಗಳಲ್ಲಿ ಅತ್ಯುತ್ತಮ ಪ್ರದರ್ಶನವನ್ನು ಮುಂದುವರೆಸಬೇಕಿದೆ.

ಇನ್ನು ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತೀ ಹೆಚ್ಚು ರೇಟಿಂಗ್ ಪಡೆದ ಬೌಲರ್ ದಾಖಲೆ ಇಂಗ್ಲೆಂಡ್ ಬೌಲರ್​ ಸಿಡ್ನಿ ಬಾರ್ನ್ಸ್ ಹೆಸರಿನಲ್ಲಿದೆ. 1914 ರಲ್ಲಿ 932 ರೇಟಿಂಗ್ ಪಡೆಯುವ ಮೂಲಕ ಈ ಸಾಧನೆ ಮಾಡಿದ್ದಾರೆ. ಈ ದಾಖಲೆಯನ್ನು ಮುರಿಯಲು ಜಸ್​ಪ್ರೀತ್ ಬುಮ್ರಾಗೆ ಉತ್ತಮ ಅವಕಾಶವಿದ್ದು, ಅದಕ್ಕಾಗಿ ಮುಂಬರುವ ಟೆಸ್ಟ್ ಸರಣಿಗಳಲ್ಲಿ ಅತ್ಯುತ್ತಮ ಪ್ರದರ್ಶನವನ್ನು ಮುಂದುವರೆಸಬೇಕಿದೆ.

5 / 5
Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್