ICC Awards: ಐಸಿಸಿಯಿಂದ ವಿಶೇಷ ಗೌರವಕ್ಕೆ ಭಾಜನರಾದ ಜಸ್ಪ್ರೀತ್ ಬುಮ್ರಾ, ಸ್ಮೃತಿ ಮಂಧಾನ..!

ICC Player Of The Month Awards: 2024ರ ಟಿ20 ವಿಶ್ವಕಪ್‌ನಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಭಾರತದ ಅನುಭವಿ ಬೌಲರ್ ಜಸ್ಪ್ರೀತ್ ಬುಮ್ರಾ ಐಸಿಸಿ ಜೂನ್ ತಿಂಗಳ ಆಟಗಾರ ಗೌರವಕ್ಕೆ ಭಾಜನರಾಗಿದ್ದಾರೆ. ಇತ್ತ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಮತ್ತು ಟೆಸ್ಟ್ ಪಂದ್ಯಗಳಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಸ್ಮೃತಿ ಮಂಧಾನ ಅವರಿಗೂ ಈ ಪ್ರಶಸ್ತಿ ಲಭಿಸಿದೆ.

|

Updated on: Jul 11, 2024 | 8:46 PM

2024ರ ಟಿ20 ವಿಶ್ವಕಪ್‌ನಲ್ಲಿ ಭಾರತದ ಅನುಭವಿ ಬೌಲರ್ ಜಸ್ಪ್ರೀತ್ ಬುಮ್ರಾ ಅದ್ಭುತ ಪ್ರದರ್ಶನ ನೀಡುವ ಮೂಲಕ ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅವರ ಈ ಪ್ರದರ್ಶನಕ್ಕಾಗಿ ಐಸಿಸಿಯಿಂದ ಪಂದ್ಯಾವಳಿಯ ಆಟಗಾರ ಪ್ರಶಸ್ತಿಯನ್ನು ಸಹ ಪಡೆದರು. ಇದೀಗ ಬುಮ್ರಾ, ಐಸಿಸಿ ಜೂನ್ ತಿಂಗಳ ಆಟಗಾರ ಗೌರವಕ್ಕೆ ಭಾಜನರಾಗಿದ್ದಾರೆ.

2024ರ ಟಿ20 ವಿಶ್ವಕಪ್‌ನಲ್ಲಿ ಭಾರತದ ಅನುಭವಿ ಬೌಲರ್ ಜಸ್ಪ್ರೀತ್ ಬುಮ್ರಾ ಅದ್ಭುತ ಪ್ರದರ್ಶನ ನೀಡುವ ಮೂಲಕ ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅವರ ಈ ಪ್ರದರ್ಶನಕ್ಕಾಗಿ ಐಸಿಸಿಯಿಂದ ಪಂದ್ಯಾವಳಿಯ ಆಟಗಾರ ಪ್ರಶಸ್ತಿಯನ್ನು ಸಹ ಪಡೆದರು. ಇದೀಗ ಬುಮ್ರಾ, ಐಸಿಸಿ ಜೂನ್ ತಿಂಗಳ ಆಟಗಾರ ಗೌರವಕ್ಕೆ ಭಾಜನರಾಗಿದ್ದಾರೆ.

1 / 6
ಈ ಮೂಲಕ ಬುಮ್ರಾ ಐಸಿಸಿ ತಿಂಗಳ ಆಟಗಾರ ಪ್ರಶಸ್ತಿ ಪಡೆದ ಎರಡನೇ ಭಾರತೀಯ ಬೌಲರ್ ಎನಿಸಿಕೊಂಡಿದ್ದಾರೆ. ಬುಮ್ರಾಗೂ ಮೊದಲು ಈ ಗೌರವವನ್ನು ಭುವನೇಶ್ವರ್ ಕುಮಾರ್ ಸ್ವೀಕರಿಸಿದ್ದರು. ಅವರಿಗೆ ಜನವರಿ 2021 ರಲ್ಲಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಇದೀಗ ಈ ಪಟ್ಟಿಯಲ್ಲಿ ಬುಮ್ರಾ ಹೆಸರೂ ಸೇರಿಕೊಂಡಿದೆ.

ಈ ಮೂಲಕ ಬುಮ್ರಾ ಐಸಿಸಿ ತಿಂಗಳ ಆಟಗಾರ ಪ್ರಶಸ್ತಿ ಪಡೆದ ಎರಡನೇ ಭಾರತೀಯ ಬೌಲರ್ ಎನಿಸಿಕೊಂಡಿದ್ದಾರೆ. ಬುಮ್ರಾಗೂ ಮೊದಲು ಈ ಗೌರವವನ್ನು ಭುವನೇಶ್ವರ್ ಕುಮಾರ್ ಸ್ವೀಕರಿಸಿದ್ದರು. ಅವರಿಗೆ ಜನವರಿ 2021 ರಲ್ಲಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಇದೀಗ ಈ ಪಟ್ಟಿಯಲ್ಲಿ ಬುಮ್ರಾ ಹೆಸರೂ ಸೇರಿಕೊಂಡಿದೆ.

2 / 6
2024 ರ ಟಿ20 ವಿಶ್ವಕಪ್‌ನಲ್ಲಿ ಜಸ್ಪ್ರೀತ್ ಬುಮ್ರಾ 'ಪ್ಲೇಯರ್ ಆಫ್ ದಿ ಟೂರ್ನಮೆಂಟ್' ಆಗಿ ಆಯ್ಕೆಯಾಗಿದ್ದು, ಈ ಪಂದ್ಯಾವಳಿಯುದ್ದಕ್ಕೂ ಅವರು ಅದ್ಭುತವಾಗಿ ಬೌಲಿಂಗ್ ಮಾಡಿದ್ದರು. ಬುಮ್ರಾ ಆಡಿದ 8 ಪಂದ್ಯಗಳಲ್ಲಿ 8.27 ರ ಸರಾಸರಿಯಲ್ಲಿ 15 ವಿಕೆಟ್ಗಳನ್ನು ಪಡೆದಿದ್ದರು. ಈ ಅವಧಿಯಲ್ಲಿ, ಅವರು ಒಟ್ಟು 29.4 ಓವರ್‌ಗಳನ್ನು ಬೌಲ್ ಮಾಡಿ ಕೇವಲ 4.18 ರ ಎಕಾನಮಿಯಲ್ಲಿ ರನ್ ಬಿಟ್ಟುಕೊಟ್ಟಿದ್ದರು.

2024 ರ ಟಿ20 ವಿಶ್ವಕಪ್‌ನಲ್ಲಿ ಜಸ್ಪ್ರೀತ್ ಬುಮ್ರಾ 'ಪ್ಲೇಯರ್ ಆಫ್ ದಿ ಟೂರ್ನಮೆಂಟ್' ಆಗಿ ಆಯ್ಕೆಯಾಗಿದ್ದು, ಈ ಪಂದ್ಯಾವಳಿಯುದ್ದಕ್ಕೂ ಅವರು ಅದ್ಭುತವಾಗಿ ಬೌಲಿಂಗ್ ಮಾಡಿದ್ದರು. ಬುಮ್ರಾ ಆಡಿದ 8 ಪಂದ್ಯಗಳಲ್ಲಿ 8.27 ರ ಸರಾಸರಿಯಲ್ಲಿ 15 ವಿಕೆಟ್ಗಳನ್ನು ಪಡೆದಿದ್ದರು. ಈ ಅವಧಿಯಲ್ಲಿ, ಅವರು ಒಟ್ಟು 29.4 ಓವರ್‌ಗಳನ್ನು ಬೌಲ್ ಮಾಡಿ ಕೇವಲ 4.18 ರ ಎಕಾನಮಿಯಲ್ಲಿ ರನ್ ಬಿಟ್ಟುಕೊಟ್ಟಿದ್ದರು.

3 / 6
ಪ್ರಶಸ್ತಿ ಗೆದ್ದ ನಂತರ ಈ ಬಗ್ಗೆ ಪ್ರತಿಕ್ರಿಯಿಸಿರುವ ಜಸ್ಪ್ರೀತ್ ಬುಮ್ರಾ, ‘ಈ ಪ್ರಶಸ್ತಿ ಗೆದ್ದಿರುವುದಕ್ಕೆ ನನಗೆ ತುಂಬಾ ಸಂತೋಷವಾಗಿದೆ. ನನಗೆ ಅದೃಷ್ಟದ ವಿಷಯವಾಗಿದ್ದು, ಕೆಲವು ವಾರಗಳು ನನಗೆ ಬಹಳ ಸ್ಮರಣೀಯವಾಗಿವೆ. ಟಿ20 ವಿಶ್ವಕಪ್ ಟೂರ್ನಿಯಲ್ಲಿ ಅದ್ಬುತ ಪ್ರದರ್ಶನ ನೀಡಿ ಟ್ರೋಫಿ ಎತ್ತಿ ಹಿಡಿದಿದ್ದು ವಿಶೇಷವಾಗಿತ್ತು ಎಂದಿದ್ದಾರೆ.

ಪ್ರಶಸ್ತಿ ಗೆದ್ದ ನಂತರ ಈ ಬಗ್ಗೆ ಪ್ರತಿಕ್ರಿಯಿಸಿರುವ ಜಸ್ಪ್ರೀತ್ ಬುಮ್ರಾ, ‘ಈ ಪ್ರಶಸ್ತಿ ಗೆದ್ದಿರುವುದಕ್ಕೆ ನನಗೆ ತುಂಬಾ ಸಂತೋಷವಾಗಿದೆ. ನನಗೆ ಅದೃಷ್ಟದ ವಿಷಯವಾಗಿದ್ದು, ಕೆಲವು ವಾರಗಳು ನನಗೆ ಬಹಳ ಸ್ಮರಣೀಯವಾಗಿವೆ. ಟಿ20 ವಿಶ್ವಕಪ್ ಟೂರ್ನಿಯಲ್ಲಿ ಅದ್ಬುತ ಪ್ರದರ್ಶನ ನೀಡಿ ಟ್ರೋಫಿ ಎತ್ತಿ ಹಿಡಿದಿದ್ದು ವಿಶೇಷವಾಗಿತ್ತು ಎಂದಿದ್ದಾರೆ.

4 / 6
ಇವರಲ್ಲದೆ ಸ್ಮೃತಿ ಮಂಧಾನ ಕೂಡ ಈ ಗೌರವಕ್ಕೆ ಭಾಜನರಾಗಿದ್ದಾರೆ. ಮಹಿಳಾ ಕ್ರಿಕೆಟ್ ತಂಡದ ಅನುಭವಿ ಆಟಗಾರ್ತಿ ಮಂಧಾನಾಗೆ ಐಸಿಸಿ ಜೂನ್ ತಿಂಗಳ ಆಟಗಾರ್ತಿ ಪ್ರಶಸ್ತಿ ನೀಡಿ ಗೌರವಿಸಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಮತ್ತು ಟೆಸ್ಟ್ ಪಂದ್ಯಗಳಲ್ಲಿ ಅವರ ಪ್ರದರ್ಶನಕ್ಕಾಗಿ ಈ ಪ್ರಶಸ್ತಿ ಲಭಿಸಿದೆ.

ಇವರಲ್ಲದೆ ಸ್ಮೃತಿ ಮಂಧಾನ ಕೂಡ ಈ ಗೌರವಕ್ಕೆ ಭಾಜನರಾಗಿದ್ದಾರೆ. ಮಹಿಳಾ ಕ್ರಿಕೆಟ್ ತಂಡದ ಅನುಭವಿ ಆಟಗಾರ್ತಿ ಮಂಧಾನಾಗೆ ಐಸಿಸಿ ಜೂನ್ ತಿಂಗಳ ಆಟಗಾರ್ತಿ ಪ್ರಶಸ್ತಿ ನೀಡಿ ಗೌರವಿಸಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಮತ್ತು ಟೆಸ್ಟ್ ಪಂದ್ಯಗಳಲ್ಲಿ ಅವರ ಪ್ರದರ್ಶನಕ್ಕಾಗಿ ಈ ಪ್ರಶಸ್ತಿ ಲಭಿಸಿದೆ.

5 / 6
ದಕ್ಷಿಣ ಆಫ್ರಿಕಾ ವಿರುದ್ಧ ಮೂರು ಏಕದಿನ ಪಂದ್ಯಗಳಲ್ಲಿ ಸ್ಮೃತಿ ಕ್ರಮವಾಗಿ 117, 136, 90 ರನ್ ಬಾರಿಸಿದ್ದರು. ಈ ಮೂಲಕ ಪ್ಲೇಯರ್ ಆಫ್ ದಿ ಸಿರೀಸ್ ಪ್ರಶಸ್ತಿಗೂ ಭಾಜನರಾಗಿದ್ದರು. ಹಾಗೆಯೇ ನಡೆದ ಏಕೈಕ ಟೆಸ್ಟ್ ಪಂದ್ಯದಲ್ಲಿ ಸ್ಮೃತಿ 149 ರನ್​ಗಳ ಗೆಲುವಿನ ಇನ್ನಿಂಗ್ಸ್ ಆಡಿದ್ದರು.

ದಕ್ಷಿಣ ಆಫ್ರಿಕಾ ವಿರುದ್ಧ ಮೂರು ಏಕದಿನ ಪಂದ್ಯಗಳಲ್ಲಿ ಸ್ಮೃತಿ ಕ್ರಮವಾಗಿ 117, 136, 90 ರನ್ ಬಾರಿಸಿದ್ದರು. ಈ ಮೂಲಕ ಪ್ಲೇಯರ್ ಆಫ್ ದಿ ಸಿರೀಸ್ ಪ್ರಶಸ್ತಿಗೂ ಭಾಜನರಾಗಿದ್ದರು. ಹಾಗೆಯೇ ನಡೆದ ಏಕೈಕ ಟೆಸ್ಟ್ ಪಂದ್ಯದಲ್ಲಿ ಸ್ಮೃತಿ 149 ರನ್​ಗಳ ಗೆಲುವಿನ ಇನ್ನಿಂಗ್ಸ್ ಆಡಿದ್ದರು.

6 / 6
Follow us
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್