Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs IRE: ನಾಯಕನಾಗಿ ಮೊದಲ ಪಂದ್ಯದಲ್ಲೇ ದಾಖಲೆ ಬರೆದ ಜಸ್ಪ್ರೀತ್ ಬುಮ್ರಾ..!

Jasprit Bumrah: ವಾಸ್ತವವಾಗಿ ಟೀಂ ಇಂಡಿಯಾ ಪರ ಮೊದಲು ದಾಳಿಗಿಳಿದ ಬುಮ್ರಾ ಮೊದಲ ಓವರ್​ನಲ್ಲಿಯೇ 2 ವಿಕೆಟ್ ಉರುಳಿಸಿದರು. ಮೊದಲ ಓವರ್‌ನಲ್ಲಿ ಕೇವಲ 4 ರನ್‌ಗಳಿಗೆ 2 ವಿಕೆಟ್‌ಗಳನ್ನು ಕಬಳಿಸುವ ಮೂಲಕ ಬುಮ್ರಾ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಬಾಚಿಕೊಂಡರು. ಇದರೊಂದಿಗೆ ನಾಯಕತ್ವ ವಹಿಸಿದ ಮೊದಲ ಟಿ20 ಪಂದ್ಯದಲ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಪಡೆದ ಮೊದಲ ಭಾರತೀಯ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಬುಮ್ರಾ ಪಾತ್ರರಾದರು.

ಪೃಥ್ವಿಶಂಕರ
|

Updated on: Aug 19, 2023 | 7:29 AM

ಐರ್ಲೆಂಡ್ ವಿರುದ್ಧದ 3 ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯವನ್ನು ಡಕ್ವರ್ತ್ ಲೂಯಿಸ್ ನಿಯಮಗಳ ಅಡಿಯಲ್ಲಿ ಟೀಂ ಇಂಡಿಯಾ 2 ರನ್​ಗಳಿಂದ ಗೆದ್ದುಕೊಂಡಿದೆ. ಈ ಗೆಲುವಿನೊಂದಿಗೆ ಟೀಂ ಇಂಡಿಯಾ ಸರಣಿಯಲ್ಲಿ 1-0 ಅಂತರದ ಮುನ್ನಡೆ ಸಾಧಿಸಿದೆ.

ಐರ್ಲೆಂಡ್ ವಿರುದ್ಧದ 3 ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯವನ್ನು ಡಕ್ವರ್ತ್ ಲೂಯಿಸ್ ನಿಯಮಗಳ ಅಡಿಯಲ್ಲಿ ಟೀಂ ಇಂಡಿಯಾ 2 ರನ್​ಗಳಿಂದ ಗೆದ್ದುಕೊಂಡಿದೆ. ಈ ಗೆಲುವಿನೊಂದಿಗೆ ಟೀಂ ಇಂಡಿಯಾ ಸರಣಿಯಲ್ಲಿ 1-0 ಅಂತರದ ಮುನ್ನಡೆ ಸಾಧಿಸಿದೆ.

1 / 8
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಐರ್ಲೆಂಡ್, ಟೀಂ ಇಂಡಿಯಾ ಮುಂದೆ 140 ರನ್​ಗಳ ಸವಾಲನ್ನು ನೀಡಿತ್ತು. ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ 6.5 ಓವರ್​ಗಳಲ್ಲಿ 2 ವಿಕೆಟ್ ನಷ್ಟಕ್ಕೆ 47 ರನ್ ಕಲೆ ಹಾಕಿತ್ತು. ಅಷ್ಟರಲ್ಲಿ ಮಳೆ ಬಂದಿದ್ದರಿಂದಾಗಿ ಪಂದ್ಯವನ್ನು ಅರ್ಧಕ್ಕೆ ನಿಲ್ಲಿಸಬೇಕಾಯಿತು. ಅಂತಿಮವಾಗಿ ಮಳೆ ನಿಲ್ಲದ ಕಾರಣ ಟೀಂ ಇಂಡಿಯಾವನ್ನು ವಿಜಯಿ ಎಂದು ಘೋಷಿಸಲಾಯಿತು.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಐರ್ಲೆಂಡ್, ಟೀಂ ಇಂಡಿಯಾ ಮುಂದೆ 140 ರನ್​ಗಳ ಸವಾಲನ್ನು ನೀಡಿತ್ತು. ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ 6.5 ಓವರ್​ಗಳಲ್ಲಿ 2 ವಿಕೆಟ್ ನಷ್ಟಕ್ಕೆ 47 ರನ್ ಕಲೆ ಹಾಕಿತ್ತು. ಅಷ್ಟರಲ್ಲಿ ಮಳೆ ಬಂದಿದ್ದರಿಂದಾಗಿ ಪಂದ್ಯವನ್ನು ಅರ್ಧಕ್ಕೆ ನಿಲ್ಲಿಸಬೇಕಾಯಿತು. ಅಂತಿಮವಾಗಿ ಮಳೆ ನಿಲ್ಲದ ಕಾರಣ ಟೀಂ ಇಂಡಿಯಾವನ್ನು ವಿಜಯಿ ಎಂದು ಘೋಷಿಸಲಾಯಿತು.

2 / 8
ಇನ್ನು ಈ ಪಂದ್ಯದಲ್ಲಿ ನಾಯಕತ್ವದ ಜೊತೆಗೆ ಬರೋಬ್ಬರಿ 11 ತಿಂಗಳ ಬಳಿಕ ಟೀಂ ಇಂಡಿಯಾಕ್ಕೆ ಮರಳಿದ ವೇಗಿ  ಜಸ್ಪ್ರೀತ್ ಬುಮ್ರಾ, ಭಾರತ ಕ್ರಿಕೆಟ್ ಇತಿಹಾಸದಲ್ಲಿ ಯಾವೊಬ್ಬ ನಾಯಕನೂ ಮಾಡದ ದಾಖಲೆಯನ್ನು ತನ್ನ ಖಾತೆಗೆ ಹಾಕಿಕೊಂಡರು.

ಇನ್ನು ಈ ಪಂದ್ಯದಲ್ಲಿ ನಾಯಕತ್ವದ ಜೊತೆಗೆ ಬರೋಬ್ಬರಿ 11 ತಿಂಗಳ ಬಳಿಕ ಟೀಂ ಇಂಡಿಯಾಕ್ಕೆ ಮರಳಿದ ವೇಗಿ ಜಸ್ಪ್ರೀತ್ ಬುಮ್ರಾ, ಭಾರತ ಕ್ರಿಕೆಟ್ ಇತಿಹಾಸದಲ್ಲಿ ಯಾವೊಬ್ಬ ನಾಯಕನೂ ಮಾಡದ ದಾಖಲೆಯನ್ನು ತನ್ನ ಖಾತೆಗೆ ಹಾಕಿಕೊಂಡರು.

3 / 8
ವಾಸ್ತವವಾಗಿ ಟೀಂ ಇಂಡಿಯಾ ಪರ ಮೊದಲು ದಾಳಿಗಿಳಿದ ಬುಮ್ರಾ ಮೊದಲ ಓವರ್​ನಲ್ಲಿಯೇ 2 ವಿಕೆಟ್ ಉರುಳಿಸಿದರು. ಓವರ್​ನ ಮೊದಲ ಎಸೆತದಲ್ಲಿ ಆಂಡಿ ಬಾಲ್ಬಿರ್ನಿ ಕೈಯಿಂದ ಬೌಂಡರಿ ಹೊಡೆಸಿಕೊಂಡಿದ್ದ ಬುಮ್ರಾ,  ತನ್ನ ಎರಡನೇ ಎಸೆತದಲ್ಲಿ ಬಾಲ್ಬಿರ್ನಿ ವಿಕೆಟ್ ಉರುಳಿಸುವಲ್ಲಿ ಯಶಸ್ವಿಯಾದರು.

ವಾಸ್ತವವಾಗಿ ಟೀಂ ಇಂಡಿಯಾ ಪರ ಮೊದಲು ದಾಳಿಗಿಳಿದ ಬುಮ್ರಾ ಮೊದಲ ಓವರ್​ನಲ್ಲಿಯೇ 2 ವಿಕೆಟ್ ಉರುಳಿಸಿದರು. ಓವರ್​ನ ಮೊದಲ ಎಸೆತದಲ್ಲಿ ಆಂಡಿ ಬಾಲ್ಬಿರ್ನಿ ಕೈಯಿಂದ ಬೌಂಡರಿ ಹೊಡೆಸಿಕೊಂಡಿದ್ದ ಬುಮ್ರಾ, ತನ್ನ ಎರಡನೇ ಎಸೆತದಲ್ಲಿ ಬಾಲ್ಬಿರ್ನಿ ವಿಕೆಟ್ ಉರುಳಿಸುವಲ್ಲಿ ಯಶಸ್ವಿಯಾದರು.

4 / 8
ಆ ಬಳಿಕ ಅದೇ ಓವರ್​ನ ಐದನೇ ಎಸೆತದಲ್ಲಿ ಅವರು ಲೋರ್ಕನ್ ಟಕ್ಕರ್‌ಗೆ ಪೆವಿಲಿಯನ್ ದಾರಿ ತೋರಿಸಿದರು. ಮೊದಲ ಓವರ್‌ನಲ್ಲಿ ಕೇವಲ 4 ರನ್‌ಗಳಿಗೆ 2 ವಿಕೆಟ್‌ಗಳನ್ನು ಕಬಳಿಸುವ ಮೂಲಕ ಬುಮ್ರಾ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಬಾಚಿಕೊಂಡರು.

ಆ ಬಳಿಕ ಅದೇ ಓವರ್​ನ ಐದನೇ ಎಸೆತದಲ್ಲಿ ಅವರು ಲೋರ್ಕನ್ ಟಕ್ಕರ್‌ಗೆ ಪೆವಿಲಿಯನ್ ದಾರಿ ತೋರಿಸಿದರು. ಮೊದಲ ಓವರ್‌ನಲ್ಲಿ ಕೇವಲ 4 ರನ್‌ಗಳಿಗೆ 2 ವಿಕೆಟ್‌ಗಳನ್ನು ಕಬಳಿಸುವ ಮೂಲಕ ಬುಮ್ರಾ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಬಾಚಿಕೊಂಡರು.

5 / 8
ಇದರೊಂದಿಗೆ ನಾಯಕತ್ವ ವಹಿಸಿದ ಮೊದಲ ಟಿ20 ಪಂದ್ಯದಲ್ಲಿ  ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಪಡೆದ ಮೊದಲ ಭಾರತೀಯ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಬುಮ್ರಾ ಪಾತ್ರರಾದರು.

ಇದರೊಂದಿಗೆ ನಾಯಕತ್ವ ವಹಿಸಿದ ಮೊದಲ ಟಿ20 ಪಂದ್ಯದಲ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಪಡೆದ ಮೊದಲ ಭಾರತೀಯ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಬುಮ್ರಾ ಪಾತ್ರರಾದರು.

6 / 8
ಸೆಪ್ಟೆಂಬರ್ 2022 ರಲ್ಲಿ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಸಂದರ್ಭದಲ್ಲಿ ಗಾಯಗೊಂಡಿದ್ದ ಬುಮ್ರಾ ಕಳೆದ 11 ತಿಂಗಳಿಂದ ಕ್ರಿಕೆಟ್​ನಿಂದ ದೂರ ಉಳಿದಿದ್ದರು. ಇದರಿಂದ ಬುಮ್ರಾ ಟಿ20 ವಿಶ್ವಕಪ್ ಮತ್ತು ಐಪಿಎಲ್​ ಸೇರಿದಂತೆ, ಡಬ್ಲ್ಯುಟಿಸಿ ಫೈನಲ್​ನಲ್ಲೂ ಆಡಿರಲಿಲ್ಲ.

ಸೆಪ್ಟೆಂಬರ್ 2022 ರಲ್ಲಿ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಸಂದರ್ಭದಲ್ಲಿ ಗಾಯಗೊಂಡಿದ್ದ ಬುಮ್ರಾ ಕಳೆದ 11 ತಿಂಗಳಿಂದ ಕ್ರಿಕೆಟ್​ನಿಂದ ದೂರ ಉಳಿದಿದ್ದರು. ಇದರಿಂದ ಬುಮ್ರಾ ಟಿ20 ವಿಶ್ವಕಪ್ ಮತ್ತು ಐಪಿಎಲ್​ ಸೇರಿದಂತೆ, ಡಬ್ಲ್ಯುಟಿಸಿ ಫೈನಲ್​ನಲ್ಲೂ ಆಡಿರಲಿಲ್ಲ.

7 / 8
ಇದೀಗ ತಂಡಕ್ಕೆ ಮರಳಿರುವ ಬುಮ್ರಾ, ತಮ್ಮ ನಾಲ್ಕು ಓವರ್‌ಗಳ ಸ್ಪೆಲ್‌ನಲ್ಲಿ ಕೇವಲ 24 ರನ್‌ಗಳನ್ನು ಬಿಟ್ಟುಕೊಟ್ಟಿದಲ್ಲದೆ, 2 ವಿಕೆಟ್​ಗಳನ್ನು ಪಡೆದರು.

ಇದೀಗ ತಂಡಕ್ಕೆ ಮರಳಿರುವ ಬುಮ್ರಾ, ತಮ್ಮ ನಾಲ್ಕು ಓವರ್‌ಗಳ ಸ್ಪೆಲ್‌ನಲ್ಲಿ ಕೇವಲ 24 ರನ್‌ಗಳನ್ನು ಬಿಟ್ಟುಕೊಟ್ಟಿದಲ್ಲದೆ, 2 ವಿಕೆಟ್​ಗಳನ್ನು ಪಡೆದರು.

8 / 8
Follow us
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ
ಆಟವಾಡುತ್ತಿದ್ದಾಗ ಹೈವೋಲ್ಟೇಜ್ ತಂತಿ ತಗುಲಿ ಸುಟ್ಟು ಕರಕಲಾದ ಬಾಲಕ
ಆಟವಾಡುತ್ತಿದ್ದಾಗ ಹೈವೋಲ್ಟೇಜ್ ತಂತಿ ತಗುಲಿ ಸುಟ್ಟು ಕರಕಲಾದ ಬಾಲಕ
Weekly Horoscope: ಮಾರ್ಚ್ 30 ರಿಂದ ಏಪ್ರಿಲ್ 6 ರವರೆಗಿನ ವಾರ ಭವಿಷ್ಯ
Weekly Horoscope: ಮಾರ್ಚ್ 30 ರಿಂದ ಏಪ್ರಿಲ್ 6 ರವರೆಗಿನ ವಾರ ಭವಿಷ್ಯ