AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಸ್​ಪ್ರೀತ್ ಬುಮ್ರಾ ಬೆಂಕಿ ಬೌಲಿಂಗ್: 147 ವರ್ಷಗಳ ಇತಿಹಾಸದಲ್ಲೇ ಹೊಸ ದಾಖಲೆ

Australia vs India, 4th Test: ಎಂಸಿಜಿ ಮೈದಾನದಲ್ಲಿ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 4ನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು ಮೊದಲ ಇನಿಂಗ್ಸ್​ನಲ್ಲಿ 474 ರನ್ ಕಲೆಹಾಕಿದರೆ, ಟೀಮ್ ಇಂಡಿಯಾ 369 ರನ್​ ಪೇರಿಸಿದೆ. ಇದೀಗ ಆಸ್ಟ್ರೇಲಿಯಾ ತಂಡವು ದ್ವಿತೀಯ ಇನಿಂಗ್ಸ್​ನಲ್ಲಿ ಬ್ಯಾಟಿಂಗ್ ಮಾಡುತ್ತಿದೆ.

ಝಾಹಿರ್ ಯೂಸುಫ್
|

Updated on: Dec 29, 2024 | 9:03 AM

Share
ಮೆಲ್ಬೋರ್ನ್​ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 4 ವಿಕೆಟ್ ಕಬಳಿಸಿದ್ದ ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ, ಇದೀಗ ದ್ವಿತೀಯ ಇನಿಂಗ್ಸ್​ನಲ್ಲಿ ಮತ್ತೆ 4* ವಿಕೆಟ್ ಉರುಳಿಸಿದ್ದಾರೆ. ಈ 8 ವಿಕೆಟ್​ಗಳೊಂದಿಗೆ ಬುಮ್ರಾ ಟೆಸ್ಟ್​ ಕ್ರಿಕೆಟ್​ನಲ್ಲಿ 200* ವಿಕೆಟ್​​ಗಳನ್ನು ಪೂರೈಸಿದ್ದಾರೆ.

ಮೆಲ್ಬೋರ್ನ್​ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 4 ವಿಕೆಟ್ ಕಬಳಿಸಿದ್ದ ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ, ಇದೀಗ ದ್ವಿತೀಯ ಇನಿಂಗ್ಸ್​ನಲ್ಲಿ ಮತ್ತೆ 4* ವಿಕೆಟ್ ಉರುಳಿಸಿದ್ದಾರೆ. ಈ 8 ವಿಕೆಟ್​ಗಳೊಂದಿಗೆ ಬುಮ್ರಾ ಟೆಸ್ಟ್​ ಕ್ರಿಕೆಟ್​ನಲ್ಲಿ 200* ವಿಕೆಟ್​​ಗಳನ್ನು ಪೂರೈಸಿದ್ದಾರೆ.

1 / 5
ಈ ಮೂಲಕ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಅತ್ಯುತ್ತಮ ಅವರೇಜ್​ನಲ್ಲಿ 200 ವಿಕೆಟ್ ಕಬಳಿಸಿದ ಬೌಲರ್​ ಎಂಬ ವಿಶ್ವ ದಾಖಲೆಯನ್ನು ಜಸ್​ಪ್ರೀತ್ ಬುಮ್ರಾ ತಮ್ಮದಾಗಿಸಿಕೊಂಡಿದ್ದಾರೆ. ಟೀಮ್ ಇಂಡಿಯಾ ಪರ ಈವರೆಗೆ 44 ಟೆಸ್ಟ್ ಪಂದ್ಯಗಳನ್ನಾಡಿರುವ ಬುಮ್ರಾ 8494* ಎಸೆತಗಳನ್ನು ಎಸೆದಿದ್ದು ಈ ಮೂಲಕ ಒಟ್ಟು 202* ವಿಕೆಟ್ ಕಬಳಿಸಿದ್ದಾರೆ.

ಈ ಮೂಲಕ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಅತ್ಯುತ್ತಮ ಅವರೇಜ್​ನಲ್ಲಿ 200 ವಿಕೆಟ್ ಕಬಳಿಸಿದ ಬೌಲರ್​ ಎಂಬ ವಿಶ್ವ ದಾಖಲೆಯನ್ನು ಜಸ್​ಪ್ರೀತ್ ಬುಮ್ರಾ ತಮ್ಮದಾಗಿಸಿಕೊಂಡಿದ್ದಾರೆ. ಟೀಮ್ ಇಂಡಿಯಾ ಪರ ಈವರೆಗೆ 44 ಟೆಸ್ಟ್ ಪಂದ್ಯಗಳನ್ನಾಡಿರುವ ಬುಮ್ರಾ 8494* ಎಸೆತಗಳನ್ನು ಎಸೆದಿದ್ದು ಈ ಮೂಲಕ ಒಟ್ಟು 202* ವಿಕೆಟ್ ಕಬಳಿಸಿದ್ದಾರೆ.

2 / 5
ಅದು ಕೂಡ ಕೇವಲ 19.38 ರನ್ ಸರಾಸರಿಯಲ್ಲಿ ಎಂಬುದು ವಿಶೇಷ. ಈ ಮೂಲಕ 147 ವರ್ಷಗಳ ಟೆಸ್ಟ್ ಕ್ರಿಕೆಟ್​ ಇತಿಹಾಸದಲ್ಲಿ 20 ಕ್ಕಿಂತ ಕಡಿಮೆ ಅವರೇಜ್​ನಲ್ಲಿ 200 ವಿಕೆಟ್ ಕಬಳಿಸಿದ ವಿಶ್ವದ ಏಕೈಕ ಬೌಲರ್ ಎಂಬ ಹೊಸ ದಾಖಲೆಯನ್ನು ಜಸ್​ಪ್ರೀತ್ ಬುಮ್ರಾ ತಮ್ಮದಾಗಿಸಿಕೊಂಡಿದ್ದಾರೆ.

ಅದು ಕೂಡ ಕೇವಲ 19.38 ರನ್ ಸರಾಸರಿಯಲ್ಲಿ ಎಂಬುದು ವಿಶೇಷ. ಈ ಮೂಲಕ 147 ವರ್ಷಗಳ ಟೆಸ್ಟ್ ಕ್ರಿಕೆಟ್​ ಇತಿಹಾಸದಲ್ಲಿ 20 ಕ್ಕಿಂತ ಕಡಿಮೆ ಅವರೇಜ್​ನಲ್ಲಿ 200 ವಿಕೆಟ್ ಕಬಳಿಸಿದ ವಿಶ್ವದ ಏಕೈಕ ಬೌಲರ್ ಎಂಬ ಹೊಸ ದಾಖಲೆಯನ್ನು ಜಸ್​ಪ್ರೀತ್ ಬುಮ್ರಾ ತಮ್ಮದಾಗಿಸಿಕೊಂಡಿದ್ದಾರೆ.

3 / 5
ಇದಕ್ಕೂ ಮುನ್ನ ವೆಸ್ಟ್ ಇಂಡೀಸ್​ನ ಜೋಯಲ್ ಗಾರ್ನರ್ 20.34 ರ ಸರಾಸರಿಯಲ್ಲಿ 200 ವಿಕೆಟ್ ಕಬಳಿಸಿದ್ದು ಟೆಸ್ಟ್​ನಲ್ಲಿ ಶ್ರೇಷ್ಠ ಸಾಧನೆಯಾಗಿತ್ತು. ಇದೀಗ ದಾಖಲೆ ಮುರಿದು ಹೊಸ ಇತಿಹಾಸ ನಿರ್ಮಿಸುವಲ್ಲಿ ಜಸ್​ಪ್ರೀತ್ ಬುಮ್ರಾ ಯಶಸ್ವಿಯಾಗಿರುವುದು ವಿಶೇಷ.

ಇದಕ್ಕೂ ಮುನ್ನ ವೆಸ್ಟ್ ಇಂಡೀಸ್​ನ ಜೋಯಲ್ ಗಾರ್ನರ್ 20.34 ರ ಸರಾಸರಿಯಲ್ಲಿ 200 ವಿಕೆಟ್ ಕಬಳಿಸಿದ್ದು ಟೆಸ್ಟ್​ನಲ್ಲಿ ಶ್ರೇಷ್ಠ ಸಾಧನೆಯಾಗಿತ್ತು. ಇದೀಗ ದಾಖಲೆ ಮುರಿದು ಹೊಸ ಇತಿಹಾಸ ನಿರ್ಮಿಸುವಲ್ಲಿ ಜಸ್​ಪ್ರೀತ್ ಬುಮ್ರಾ ಯಶಸ್ವಿಯಾಗಿರುವುದು ವಿಶೇಷ.

4 / 5
ಇದೀಗ ಟೆಸ್ಟ್ ಕ್ರಿಕೆಟ್​ನಲ್ಲಿ 85 ಇನಿಂಗ್ಸ್​​ಗಳಲ್ಲಿ 1415* ಓವರ್​ಗಳನ್ನು ಎಸೆದಿರುವ ಜಸ್​ಪ್ರೀತ್ ಬುಮ್ರಾ ಒಟ್ಟು 202* ವಿಕೆಟ್ ಕಬಳಿಸಿದ್ದು, ಈ ಮೂಲಕ 200+ ವಿಕೆಟ್ ಪಡೆದ ಭಾರತದ 12ನೇ ಬೌಲರ್​​ ಎನಿಸಿಕೊಂಡಿದ್ದಾರೆ. ಹಾಗೆಯೇ ಈ ಸಾಧನೆ ಮಾಡಿದ ವಿಶ್ವದ 82ನೇ ಬೌಲರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

ಇದೀಗ ಟೆಸ್ಟ್ ಕ್ರಿಕೆಟ್​ನಲ್ಲಿ 85 ಇನಿಂಗ್ಸ್​​ಗಳಲ್ಲಿ 1415* ಓವರ್​ಗಳನ್ನು ಎಸೆದಿರುವ ಜಸ್​ಪ್ರೀತ್ ಬುಮ್ರಾ ಒಟ್ಟು 202* ವಿಕೆಟ್ ಕಬಳಿಸಿದ್ದು, ಈ ಮೂಲಕ 200+ ವಿಕೆಟ್ ಪಡೆದ ಭಾರತದ 12ನೇ ಬೌಲರ್​​ ಎನಿಸಿಕೊಂಡಿದ್ದಾರೆ. ಹಾಗೆಯೇ ಈ ಸಾಧನೆ ಮಾಡಿದ ವಿಶ್ವದ 82ನೇ ಬೌಲರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು