AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಸ್​ಪ್ರೀತ್ ಬುಮ್ರಾ ಬೆಂಕಿ ಬೌಲಿಂಗ್: 147 ವರ್ಷಗಳ ಇತಿಹಾಸದಲ್ಲೇ ಹೊಸ ದಾಖಲೆ

Australia vs India, 4th Test: ಎಂಸಿಜಿ ಮೈದಾನದಲ್ಲಿ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 4ನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು ಮೊದಲ ಇನಿಂಗ್ಸ್​ನಲ್ಲಿ 474 ರನ್ ಕಲೆಹಾಕಿದರೆ, ಟೀಮ್ ಇಂಡಿಯಾ 369 ರನ್​ ಪೇರಿಸಿದೆ. ಇದೀಗ ಆಸ್ಟ್ರೇಲಿಯಾ ತಂಡವು ದ್ವಿತೀಯ ಇನಿಂಗ್ಸ್​ನಲ್ಲಿ ಬ್ಯಾಟಿಂಗ್ ಮಾಡುತ್ತಿದೆ.

ಝಾಹಿರ್ ಯೂಸುಫ್
|

Updated on: Dec 29, 2024 | 9:03 AM

Share
ಮೆಲ್ಬೋರ್ನ್​ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 4 ವಿಕೆಟ್ ಕಬಳಿಸಿದ್ದ ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ, ಇದೀಗ ದ್ವಿತೀಯ ಇನಿಂಗ್ಸ್​ನಲ್ಲಿ ಮತ್ತೆ 4* ವಿಕೆಟ್ ಉರುಳಿಸಿದ್ದಾರೆ. ಈ 8 ವಿಕೆಟ್​ಗಳೊಂದಿಗೆ ಬುಮ್ರಾ ಟೆಸ್ಟ್​ ಕ್ರಿಕೆಟ್​ನಲ್ಲಿ 200* ವಿಕೆಟ್​​ಗಳನ್ನು ಪೂರೈಸಿದ್ದಾರೆ.

ಮೆಲ್ಬೋರ್ನ್​ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 4 ವಿಕೆಟ್ ಕಬಳಿಸಿದ್ದ ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ, ಇದೀಗ ದ್ವಿತೀಯ ಇನಿಂಗ್ಸ್​ನಲ್ಲಿ ಮತ್ತೆ 4* ವಿಕೆಟ್ ಉರುಳಿಸಿದ್ದಾರೆ. ಈ 8 ವಿಕೆಟ್​ಗಳೊಂದಿಗೆ ಬುಮ್ರಾ ಟೆಸ್ಟ್​ ಕ್ರಿಕೆಟ್​ನಲ್ಲಿ 200* ವಿಕೆಟ್​​ಗಳನ್ನು ಪೂರೈಸಿದ್ದಾರೆ.

1 / 5
ಈ ಮೂಲಕ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಅತ್ಯುತ್ತಮ ಅವರೇಜ್​ನಲ್ಲಿ 200 ವಿಕೆಟ್ ಕಬಳಿಸಿದ ಬೌಲರ್​ ಎಂಬ ವಿಶ್ವ ದಾಖಲೆಯನ್ನು ಜಸ್​ಪ್ರೀತ್ ಬುಮ್ರಾ ತಮ್ಮದಾಗಿಸಿಕೊಂಡಿದ್ದಾರೆ. ಟೀಮ್ ಇಂಡಿಯಾ ಪರ ಈವರೆಗೆ 44 ಟೆಸ್ಟ್ ಪಂದ್ಯಗಳನ್ನಾಡಿರುವ ಬುಮ್ರಾ 8494* ಎಸೆತಗಳನ್ನು ಎಸೆದಿದ್ದು ಈ ಮೂಲಕ ಒಟ್ಟು 202* ವಿಕೆಟ್ ಕಬಳಿಸಿದ್ದಾರೆ.

ಈ ಮೂಲಕ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಅತ್ಯುತ್ತಮ ಅವರೇಜ್​ನಲ್ಲಿ 200 ವಿಕೆಟ್ ಕಬಳಿಸಿದ ಬೌಲರ್​ ಎಂಬ ವಿಶ್ವ ದಾಖಲೆಯನ್ನು ಜಸ್​ಪ್ರೀತ್ ಬುಮ್ರಾ ತಮ್ಮದಾಗಿಸಿಕೊಂಡಿದ್ದಾರೆ. ಟೀಮ್ ಇಂಡಿಯಾ ಪರ ಈವರೆಗೆ 44 ಟೆಸ್ಟ್ ಪಂದ್ಯಗಳನ್ನಾಡಿರುವ ಬುಮ್ರಾ 8494* ಎಸೆತಗಳನ್ನು ಎಸೆದಿದ್ದು ಈ ಮೂಲಕ ಒಟ್ಟು 202* ವಿಕೆಟ್ ಕಬಳಿಸಿದ್ದಾರೆ.

2 / 5
ಅದು ಕೂಡ ಕೇವಲ 19.38 ರನ್ ಸರಾಸರಿಯಲ್ಲಿ ಎಂಬುದು ವಿಶೇಷ. ಈ ಮೂಲಕ 147 ವರ್ಷಗಳ ಟೆಸ್ಟ್ ಕ್ರಿಕೆಟ್​ ಇತಿಹಾಸದಲ್ಲಿ 20 ಕ್ಕಿಂತ ಕಡಿಮೆ ಅವರೇಜ್​ನಲ್ಲಿ 200 ವಿಕೆಟ್ ಕಬಳಿಸಿದ ವಿಶ್ವದ ಏಕೈಕ ಬೌಲರ್ ಎಂಬ ಹೊಸ ದಾಖಲೆಯನ್ನು ಜಸ್​ಪ್ರೀತ್ ಬುಮ್ರಾ ತಮ್ಮದಾಗಿಸಿಕೊಂಡಿದ್ದಾರೆ.

ಅದು ಕೂಡ ಕೇವಲ 19.38 ರನ್ ಸರಾಸರಿಯಲ್ಲಿ ಎಂಬುದು ವಿಶೇಷ. ಈ ಮೂಲಕ 147 ವರ್ಷಗಳ ಟೆಸ್ಟ್ ಕ್ರಿಕೆಟ್​ ಇತಿಹಾಸದಲ್ಲಿ 20 ಕ್ಕಿಂತ ಕಡಿಮೆ ಅವರೇಜ್​ನಲ್ಲಿ 200 ವಿಕೆಟ್ ಕಬಳಿಸಿದ ವಿಶ್ವದ ಏಕೈಕ ಬೌಲರ್ ಎಂಬ ಹೊಸ ದಾಖಲೆಯನ್ನು ಜಸ್​ಪ್ರೀತ್ ಬುಮ್ರಾ ತಮ್ಮದಾಗಿಸಿಕೊಂಡಿದ್ದಾರೆ.

3 / 5
ಇದಕ್ಕೂ ಮುನ್ನ ವೆಸ್ಟ್ ಇಂಡೀಸ್​ನ ಜೋಯಲ್ ಗಾರ್ನರ್ 20.34 ರ ಸರಾಸರಿಯಲ್ಲಿ 200 ವಿಕೆಟ್ ಕಬಳಿಸಿದ್ದು ಟೆಸ್ಟ್​ನಲ್ಲಿ ಶ್ರೇಷ್ಠ ಸಾಧನೆಯಾಗಿತ್ತು. ಇದೀಗ ದಾಖಲೆ ಮುರಿದು ಹೊಸ ಇತಿಹಾಸ ನಿರ್ಮಿಸುವಲ್ಲಿ ಜಸ್​ಪ್ರೀತ್ ಬುಮ್ರಾ ಯಶಸ್ವಿಯಾಗಿರುವುದು ವಿಶೇಷ.

ಇದಕ್ಕೂ ಮುನ್ನ ವೆಸ್ಟ್ ಇಂಡೀಸ್​ನ ಜೋಯಲ್ ಗಾರ್ನರ್ 20.34 ರ ಸರಾಸರಿಯಲ್ಲಿ 200 ವಿಕೆಟ್ ಕಬಳಿಸಿದ್ದು ಟೆಸ್ಟ್​ನಲ್ಲಿ ಶ್ರೇಷ್ಠ ಸಾಧನೆಯಾಗಿತ್ತು. ಇದೀಗ ದಾಖಲೆ ಮುರಿದು ಹೊಸ ಇತಿಹಾಸ ನಿರ್ಮಿಸುವಲ್ಲಿ ಜಸ್​ಪ್ರೀತ್ ಬುಮ್ರಾ ಯಶಸ್ವಿಯಾಗಿರುವುದು ವಿಶೇಷ.

4 / 5
ಇದೀಗ ಟೆಸ್ಟ್ ಕ್ರಿಕೆಟ್​ನಲ್ಲಿ 85 ಇನಿಂಗ್ಸ್​​ಗಳಲ್ಲಿ 1415* ಓವರ್​ಗಳನ್ನು ಎಸೆದಿರುವ ಜಸ್​ಪ್ರೀತ್ ಬುಮ್ರಾ ಒಟ್ಟು 202* ವಿಕೆಟ್ ಕಬಳಿಸಿದ್ದು, ಈ ಮೂಲಕ 200+ ವಿಕೆಟ್ ಪಡೆದ ಭಾರತದ 12ನೇ ಬೌಲರ್​​ ಎನಿಸಿಕೊಂಡಿದ್ದಾರೆ. ಹಾಗೆಯೇ ಈ ಸಾಧನೆ ಮಾಡಿದ ವಿಶ್ವದ 82ನೇ ಬೌಲರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

ಇದೀಗ ಟೆಸ್ಟ್ ಕ್ರಿಕೆಟ್​ನಲ್ಲಿ 85 ಇನಿಂಗ್ಸ್​​ಗಳಲ್ಲಿ 1415* ಓವರ್​ಗಳನ್ನು ಎಸೆದಿರುವ ಜಸ್​ಪ್ರೀತ್ ಬುಮ್ರಾ ಒಟ್ಟು 202* ವಿಕೆಟ್ ಕಬಳಿಸಿದ್ದು, ಈ ಮೂಲಕ 200+ ವಿಕೆಟ್ ಪಡೆದ ಭಾರತದ 12ನೇ ಬೌಲರ್​​ ಎನಿಸಿಕೊಂಡಿದ್ದಾರೆ. ಹಾಗೆಯೇ ಈ ಸಾಧನೆ ಮಾಡಿದ ವಿಶ್ವದ 82ನೇ ಬೌಲರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

5 / 5
Follow Us
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ