AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jasprit Bumrah: ರೂಟ್ ಕ್ಲಿಯರ್ ಮಾಡಿ ದಾಖಲೆ ಬರೆದ ಬುಮ್ರಾ

India vs England 3rd Test: ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಜಸ್​ಪ್ರೀತ್ ಬುಮ್ರಾ ಕೇವಲ 1 ವಿಕೆಟ್ ಮಾತ್ರ ಪಡೆದಿದ್ದರು. ಈ ಒಂದು ವಿಕೆಟ್​ನೊಂದಿಗೆ ಬುಮ್ರಾ ವಿಶೇಷ ದಾಖಲೆ ಬರೆದಿದ್ದಾರೆ. ಅದು ಕೂಡ ಜೋ ರೂಟ್​ ರನ್ನು ಔಟ್ ಮಾಡುವ ಮೂಲಕ ಎಂಬುದು ವಿಶೇಷ.

TV9 Web
| Edited By: |

Updated on: Feb 18, 2024 | 9:55 AM

Share
ರಾಜ್​ಕೋಟ್​ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ ವಿಶೇಷ ದಾಖಲೆ ಬರೆದಿದ್ದಾರೆ. ಅದು ಕೂಡ ಇಂಗ್ಲೆಂಡ್ ತಂಡದ ಟೆಸ್ಟ್​ ಸ್ಪೆಷಲಿಸ್ಟ್ ಜೋ ರೂಟ್ ಅವರನ್ನು ಔಟ್ ಮಾಡುವ ಮೂಲಕ ಎಂಬುದು ವಿಶೇಷ.

ರಾಜ್​ಕೋಟ್​ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ ವಿಶೇಷ ದಾಖಲೆ ಬರೆದಿದ್ದಾರೆ. ಅದು ಕೂಡ ಇಂಗ್ಲೆಂಡ್ ತಂಡದ ಟೆಸ್ಟ್​ ಸ್ಪೆಷಲಿಸ್ಟ್ ಜೋ ರೂಟ್ ಅವರನ್ನು ಔಟ್ ಮಾಡುವ ಮೂಲಕ ಎಂಬುದು ವಿಶೇಷ.

1 / 6
ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಜೋ ರೂಟ್ (18) ಅವರನ್ನು ಜಸ್​ಪ್ರೀತ್ ಬುಮ್ರಾ ಔಟ್ ಮಾಡಿದ್ದರು. ಇದರೊಂದಿಗೆ ಟೆಸ್ಟ್ ಕ್ರಿಕೆಟ್​ನಲ್ಲಿ ರೂಟ್​ಗೆ ಅತೀ ಹೆಚ್ಚು ಬಾರಿ ರೂಟ್ ತೋರಿಸಿದ ಭಾರತೀಯ ಬೌಲರ್ ಎನಿಸಿಕೊಂಡಿದ್ದಾರೆ. ಹಾಗೆಯೇ ಜೋ ರೂಟ್​ರನ್ನು ಟೆಸ್ಟ್​ನಲ್ಲಿ ಅತ್ಯಧಿಕ ಬಾರಿ ಔಟ್ ಮಾಡಿದ ಮೂರನೇ ಬೌಲರ್ ಎಂಬ ದಾಖಲೆ ಬರೆದಿದ್ದಾರೆ.

ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಜೋ ರೂಟ್ (18) ಅವರನ್ನು ಜಸ್​ಪ್ರೀತ್ ಬುಮ್ರಾ ಔಟ್ ಮಾಡಿದ್ದರು. ಇದರೊಂದಿಗೆ ಟೆಸ್ಟ್ ಕ್ರಿಕೆಟ್​ನಲ್ಲಿ ರೂಟ್​ಗೆ ಅತೀ ಹೆಚ್ಚು ಬಾರಿ ರೂಟ್ ತೋರಿಸಿದ ಭಾರತೀಯ ಬೌಲರ್ ಎನಿಸಿಕೊಂಡಿದ್ದಾರೆ. ಹಾಗೆಯೇ ಜೋ ರೂಟ್​ರನ್ನು ಟೆಸ್ಟ್​ನಲ್ಲಿ ಅತ್ಯಧಿಕ ಬಾರಿ ಔಟ್ ಮಾಡಿದ ಮೂರನೇ ಬೌಲರ್ ಎಂಬ ದಾಖಲೆ ಬರೆದಿದ್ದಾರೆ.

2 / 6
ಇದರ ಜೊತೆಗೆ ಇಂಟರ್​ನ್ಯಾಷನಲ್ ಕ್ರಿಕೆಟ್​ನಲ್ಲಿ ಜೋ ರೂಟ್​ರನ್ನು ಅತೀ ಹೆಚ್ಚು ಬಾರಿ ಔಟ್ ಮಾಡಿದ 2ನೇ ಬೌಲರ್ ಎಂಬ ದಾಖಲೆಯನ್ನು ಜಸ್​ಪ್ರೀತ್ ಬುಮ್ರಾ ತಮ್ಮದಾಗಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಪ್ಯಾಟ್ ಕಮಿನ್ಸ್ ಮೊದಲ ಸ್ಥಾನದಲ್ಲಿದ್ದಾರೆ.

ಇದರ ಜೊತೆಗೆ ಇಂಟರ್​ನ್ಯಾಷನಲ್ ಕ್ರಿಕೆಟ್​ನಲ್ಲಿ ಜೋ ರೂಟ್​ರನ್ನು ಅತೀ ಹೆಚ್ಚು ಬಾರಿ ಔಟ್ ಮಾಡಿದ 2ನೇ ಬೌಲರ್ ಎಂಬ ದಾಖಲೆಯನ್ನು ಜಸ್​ಪ್ರೀತ್ ಬುಮ್ರಾ ತಮ್ಮದಾಗಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಪ್ಯಾಟ್ ಕಮಿನ್ಸ್ ಮೊದಲ ಸ್ಥಾನದಲ್ಲಿದ್ದಾರೆ.

3 / 6
39 ಇನಿಂಗ್ಸ್​ಗಳಲ್ಲಿ ಜೋ ರೂಟ್​ಗೆ ಬೌಲಿಂಗ್ ಮಾಡಿರುವ ಆಸ್ಟ್ರೇಲಿಯಾ ಆಟಗಾರ ಕಮಿನ್ಸ್ ಒಟ್ಟು 14 ಬಾರಿ ಔಟ್ ಮಾಡಿದ್ದಾರೆ. ಇದೀಗ 29 ಇನಿಂಗ್ಸ್​ಗಳಲ್ಲಿ ಜೋ ರೂಟ್​ರನ್ನು ಜಸ್​ಪ್ರೀತ್ ಬುಮ್ರಾ 13 ಬಾರಿ ಪೆವಿಲಿಯನ್​ಗೆ ಕಳುಹಿಸಿದ್ದಾರೆ. ಈ ಮೂಲಕ ಇಂಗ್ಲೆಂಡ್ ಬ್ಯಾಟರ್ ವಿರುದ್ಧದ ಅತ್ಯಂತ ಯಶಸ್ವಿ ಬೌಲರ್​ಗಳಲ್ಲಿ ಬುಮ್ರಾ ದ್ವಿತೀಯ ಸ್ಥಾನ ಅಲಂಕರಿಸಿದ್ದಾರೆ.

39 ಇನಿಂಗ್ಸ್​ಗಳಲ್ಲಿ ಜೋ ರೂಟ್​ಗೆ ಬೌಲಿಂಗ್ ಮಾಡಿರುವ ಆಸ್ಟ್ರೇಲಿಯಾ ಆಟಗಾರ ಕಮಿನ್ಸ್ ಒಟ್ಟು 14 ಬಾರಿ ಔಟ್ ಮಾಡಿದ್ದಾರೆ. ಇದೀಗ 29 ಇನಿಂಗ್ಸ್​ಗಳಲ್ಲಿ ಜೋ ರೂಟ್​ರನ್ನು ಜಸ್​ಪ್ರೀತ್ ಬುಮ್ರಾ 13 ಬಾರಿ ಪೆವಿಲಿಯನ್​ಗೆ ಕಳುಹಿಸಿದ್ದಾರೆ. ಈ ಮೂಲಕ ಇಂಗ್ಲೆಂಡ್ ಬ್ಯಾಟರ್ ವಿರುದ್ಧದ ಅತ್ಯಂತ ಯಶಸ್ವಿ ಬೌಲರ್​ಗಳಲ್ಲಿ ಬುಮ್ರಾ ದ್ವಿತೀಯ ಸ್ಥಾನ ಅಲಂಕರಿಸಿದ್ದಾರೆ.

4 / 6
ಒಂದು ವೇಳೆ ಮುಂದಿನ ಇನಿಂಗ್ಸ್ ಹಾಗೂ ಇನ್ನುಳಿದ 2 ಪಂದ್ಯಗಳಲ್ಲಿ ಜೋ ರೂಟ್ ಅವರನ್ನು ಜಸ್​ಪ್ರೀತ್ ಬುಮ್ರಾ ಎರಡು ಬಾರಿ ಔಟ್ ಮಾಡಿದರೆ ಪ್ಯಾಟ್ ಕಮಿನ್ಸ್ ಅವರನ್ನು ಹಿಂದಿಕ್ಕಿ ಈ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಲಿದ್ದಾರೆ.

ಒಂದು ವೇಳೆ ಮುಂದಿನ ಇನಿಂಗ್ಸ್ ಹಾಗೂ ಇನ್ನುಳಿದ 2 ಪಂದ್ಯಗಳಲ್ಲಿ ಜೋ ರೂಟ್ ಅವರನ್ನು ಜಸ್​ಪ್ರೀತ್ ಬುಮ್ರಾ ಎರಡು ಬಾರಿ ಔಟ್ ಮಾಡಿದರೆ ಪ್ಯಾಟ್ ಕಮಿನ್ಸ್ ಅವರನ್ನು ಹಿಂದಿಕ್ಕಿ ಈ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಲಿದ್ದಾರೆ.

5 / 6
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 445 ರನ್ ಕಲೆಹಾಕಿತು. ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್ ಆಡಿದ ಇಂಗ್ಲೆಂಡ್ 319 ರನ್​ಗಳಿಗೆ ಆಲೌಟ್ ಆಗಿದೆ. ಇದೀಗ ಟೀಮ್ ಇಂಡಿಯಾ ದ್ವಿತೀಯ ಇನಿಂಗ್ಸ್​ ಆಡುತ್ತಿದ್ದು, 56 ಓವರ್​ಗಳ ಮುಕ್ತಾಯದ ವೇಳೆ 2 ವಿಕೆಟ್ ಕಳೆದುಕೊಂಡು 213 ರನ್​ ಕಲೆಹಾಕಿದೆ.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 445 ರನ್ ಕಲೆಹಾಕಿತು. ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್ ಆಡಿದ ಇಂಗ್ಲೆಂಡ್ 319 ರನ್​ಗಳಿಗೆ ಆಲೌಟ್ ಆಗಿದೆ. ಇದೀಗ ಟೀಮ್ ಇಂಡಿಯಾ ದ್ವಿತೀಯ ಇನಿಂಗ್ಸ್​ ಆಡುತ್ತಿದ್ದು, 56 ಓವರ್​ಗಳ ಮುಕ್ತಾಯದ ವೇಳೆ 2 ವಿಕೆಟ್ ಕಳೆದುಕೊಂಡು 213 ರನ್​ ಕಲೆಹಾಕಿದೆ.

6 / 6
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ