AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಗ್ಲೆಂಡ್​ನಲ್ಲಿ ಬೂಮ್ ಬೂಮ್… ಪಾಕ್ ವೇಗಿಯ ಐತಿಹಾಸಿಕ ದಾಖಲೆ ಕ್ಲೀನ್ ಬೌಲ್ಡ್

IND vs ENG: ಲೀಡ್ಸ್​ನಲ್ಲಿ ನಡೆಯುತ್ತಿರುವ ತೆಂಡೂಲ್ಕರ್-ಅ್ಯಂಡರ್ಸನ್ ಟ್ರೋಫಿಯ ಮೊದಲ ಟೆಸ್ಟ್​ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್​ನಲ್ಲಿ 471 ರನ್ ಕಲೆಹಾಕಿದೆ. ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್ ಆರಂಭಿಸಿರುವ ಇಂಗ್ಲೆಂಡ್ ತಂಡವು ಎರಡನೇ ದಿನದಾಟದ ಅಂತ್ಯಕ್ಕೆ 3 ವಿಕೆಟ್ ಕಳೆದುಕೊಂಡು 209 ರನ್​ಗಳಿಸಿದೆ.

ಝಾಹಿರ್ ಯೂಸುಫ್
|

Updated on: Jun 22, 2025 | 8:31 AM

Share
ಲೀಡ್ಸ್​​ನ ಹೆಡಿಂಗ್ಲೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲೇ ಜಸ್​ಪ್ರೀತ್ ಬುಮ್ರಾ (Jasprit Bumrah) ಮಾರಕ ದಾಳಿ ಸಂಘಟಿಸಿದ್ದಾರೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಯಶಸ್ವಿ ಜೈಸ್ವಾಲ್ (101), ಶುಭ್​ಮನ್ ಗಿಲ್ (147) ಹಾಗೂ ರಿಷಭ್ ಪಂತ್ (134) ಅವರ ಶತಕಗಳ ನೆರವಿನೊಂದಿಗೆ ಪ್ರಥಮ ಇನಿಂಗ್ಸ್​ನಲ್ಲಿ 471 ರನ್​ ಕಲೆಹಾಕಿತು.

ಲೀಡ್ಸ್​​ನ ಹೆಡಿಂಗ್ಲೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲೇ ಜಸ್​ಪ್ರೀತ್ ಬುಮ್ರಾ (Jasprit Bumrah) ಮಾರಕ ದಾಳಿ ಸಂಘಟಿಸಿದ್ದಾರೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಯಶಸ್ವಿ ಜೈಸ್ವಾಲ್ (101), ಶುಭ್​ಮನ್ ಗಿಲ್ (147) ಹಾಗೂ ರಿಷಭ್ ಪಂತ್ (134) ಅವರ ಶತಕಗಳ ನೆರವಿನೊಂದಿಗೆ ಪ್ರಥಮ ಇನಿಂಗ್ಸ್​ನಲ್ಲಿ 471 ರನ್​ ಕಲೆಹಾಕಿತು.

1 / 5
ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ತಂಡಕ್ಕೆ ಮೊದಲ ಓವರ್​ನಲ್ಲೇ ಜಸ್​ಪ್ರೀತ್ ಬುಮ್ರಾ ಆರಂಭಿಕ ಆಘಾತ ನೀಡಿದ್ದರು. ಮೊದಲ ಓವರ್​ನ ಕೊನೆಯ ಎಸೆತದಲ್ಲಿ ಝಾಕ್ ಕ್ರಾಲಿ (4) ವಿಕೆಟ್ ಕಬಳಿಸಿದ ಬುಮ್ರಾ, ಆ ಬಳಿಕ ಬೆನ್ ಡಕೆಟ್ (64) ಅವರನ್ನು ಕ್ಲೀನ್ ಬೌಲ್ಡ್ ಮಾಡಿದರು. ಇನ್ನು ದ್ವಿತೀಯ ದಿನದಾಟದ ಅಂತ್ಯದ ವೇಳೆ ಜೋ ರೂಟ್ (28) ವಿಕೆಟ್ ಕಬಳಿಸಿ ಟೀಮ್ ಇಂಡಿಯಾಗೆ ಮೂರನೇ ಯಶಸ್ಸು ತಂದುಕೊಟ್ಟರು.

ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ತಂಡಕ್ಕೆ ಮೊದಲ ಓವರ್​ನಲ್ಲೇ ಜಸ್​ಪ್ರೀತ್ ಬುಮ್ರಾ ಆರಂಭಿಕ ಆಘಾತ ನೀಡಿದ್ದರು. ಮೊದಲ ಓವರ್​ನ ಕೊನೆಯ ಎಸೆತದಲ್ಲಿ ಝಾಕ್ ಕ್ರಾಲಿ (4) ವಿಕೆಟ್ ಕಬಳಿಸಿದ ಬುಮ್ರಾ, ಆ ಬಳಿಕ ಬೆನ್ ಡಕೆಟ್ (64) ಅವರನ್ನು ಕ್ಲೀನ್ ಬೌಲ್ಡ್ ಮಾಡಿದರು. ಇನ್ನು ದ್ವಿತೀಯ ದಿನದಾಟದ ಅಂತ್ಯದ ವೇಳೆ ಜೋ ರೂಟ್ (28) ವಿಕೆಟ್ ಕಬಳಿಸಿ ಟೀಮ್ ಇಂಡಿಯಾಗೆ ಮೂರನೇ ಯಶಸ್ಸು ತಂದುಕೊಟ್ಟರು.

2 / 5
ಈ ಮೂರು ವಿಕೆಟ್​ಗಳೊಂದಿಗೆ ಜಸ್​ಪ್ರೀತ್ ಬುಮ್ರಾ ಟೆಸ್ಟ್ ಕ್ರಿಕೆಟ್​ನಲ್ಲಿ ವಿಶೇಷ ದಾಖಲೆ ಬರೆದಿದ್ದಾರೆ. ಅದು ಕೂಡ ಪಾಕಿಸ್ತಾನ್ ಲೆಜೆಂಡ್ ವಾಸಿಂ ಅಕ್ರಂ ಅವರ ಭರ್ಜರಿ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. ಅಂದರೆ ಸೌತ್ ಆಫ್ರಿಕಾ, ಇಂಗ್ಲೆಂಡ್, ನ್ಯೂಝಿಲೆಂಡ್ ಹಾಗೂ ಆಸ್ಟ್ರೇಲಿಯಾದಲ್ಲಿ ಟೆಸ್ಟ್​ನಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ದಾಖಲೆ ಅಕ್ರಂ ಹೆಸರಿನಲ್ಲಿತ್ತು.

ಈ ಮೂರು ವಿಕೆಟ್​ಗಳೊಂದಿಗೆ ಜಸ್​ಪ್ರೀತ್ ಬುಮ್ರಾ ಟೆಸ್ಟ್ ಕ್ರಿಕೆಟ್​ನಲ್ಲಿ ವಿಶೇಷ ದಾಖಲೆ ಬರೆದಿದ್ದಾರೆ. ಅದು ಕೂಡ ಪಾಕಿಸ್ತಾನ್ ಲೆಜೆಂಡ್ ವಾಸಿಂ ಅಕ್ರಂ ಅವರ ಭರ್ಜರಿ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. ಅಂದರೆ ಸೌತ್ ಆಫ್ರಿಕಾ, ಇಂಗ್ಲೆಂಡ್, ನ್ಯೂಝಿಲೆಂಡ್ ಹಾಗೂ ಆಸ್ಟ್ರೇಲಿಯಾದಲ್ಲಿ ಟೆಸ್ಟ್​ನಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ದಾಖಲೆ ಅಕ್ರಂ ಹೆಸರಿನಲ್ಲಿತ್ತು.

3 / 5
ವಾಸಿಂ ಅಕ್ರಂ ಸೌತ್ ಆಫ್ರಿಕಾ, ಇಂಗ್ಲೆಂಡ್, ನ್ಯೂಝಿಲೆಂಡ್ ಹಾಗೂ ಆಸ್ಟ್ರೇಲಿಯಾದಲ್ಲಿ (SENA ದೇಶ) ಒಟ್ಟು 55 ಟೆಸ್ಟ್ ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿದ್ದರು. ಈ ವೇಳೆ ಒಟ್ಟು 146 ವಿಕೆಟ್ ಕಬಳಿದ್ದಾರೆ. ಈ ಮೂಲಕ ಸೇನಾ ದೇಶಗಳಲ್ಲಿ ಅತೀ ಹೆಚ್ಚು ವಿಕೆಟ್ ಕಬಳಿಸಿದ ಏಷ್ಯನ್ ಬೌಲರ್ ಎಂಬ ದಾಖಲೆ ನಿರ್ಮಿಸಿದ್ದರು.

ವಾಸಿಂ ಅಕ್ರಂ ಸೌತ್ ಆಫ್ರಿಕಾ, ಇಂಗ್ಲೆಂಡ್, ನ್ಯೂಝಿಲೆಂಡ್ ಹಾಗೂ ಆಸ್ಟ್ರೇಲಿಯಾದಲ್ಲಿ (SENA ದೇಶ) ಒಟ್ಟು 55 ಟೆಸ್ಟ್ ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿದ್ದರು. ಈ ವೇಳೆ ಒಟ್ಟು 146 ವಿಕೆಟ್ ಕಬಳಿದ್ದಾರೆ. ಈ ಮೂಲಕ ಸೇನಾ ದೇಶಗಳಲ್ಲಿ ಅತೀ ಹೆಚ್ಚು ವಿಕೆಟ್ ಕಬಳಿಸಿದ ಏಷ್ಯನ್ ಬೌಲರ್ ಎಂಬ ದಾಖಲೆ ನಿರ್ಮಿಸಿದ್ದರು.

4 / 5
ಇದೀಗ ಈ ದಾಖಲೆ ಮುರಿಯುವಲ್ಲಿ ಜಸ್​ಪ್ರೀತ್ ಬುಮ್ರಾ ಯಶಸ್ವಿಯಾಗಿದ್ದಾರೆ. ಸೌತ್ ಆಫ್ರಿಕಾ, ಇಂಗ್ಲೆಂಡ್, ನ್ಯೂಝಿಲೆಂಡ್ ಹಾಗೂ ಆಸ್ಟ್ರೇಲಿಯಾದಲ್ಲಿ ಈವರೆಗೆ 60 ಇನಿಂಗ್ಸ್ ಆಡಿರುವ ಬುಮ್ರಾ 148 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಸೇನಾ ದೇಶಗಳಲ್ಲಿ ಅತ್ಯಧಿಕ ವಿಕೆಟ್ ಪಡೆದ ಏಷ್ಯಾದ ಬೌಲರ್ ಎಂಬ ಹಿರಿಮೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಇದೀಗ ಈ ದಾಖಲೆ ಮುರಿಯುವಲ್ಲಿ ಜಸ್​ಪ್ರೀತ್ ಬುಮ್ರಾ ಯಶಸ್ವಿಯಾಗಿದ್ದಾರೆ. ಸೌತ್ ಆಫ್ರಿಕಾ, ಇಂಗ್ಲೆಂಡ್, ನ್ಯೂಝಿಲೆಂಡ್ ಹಾಗೂ ಆಸ್ಟ್ರೇಲಿಯಾದಲ್ಲಿ ಈವರೆಗೆ 60 ಇನಿಂಗ್ಸ್ ಆಡಿರುವ ಬುಮ್ರಾ 148 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಸೇನಾ ದೇಶಗಳಲ್ಲಿ ಅತ್ಯಧಿಕ ವಿಕೆಟ್ ಪಡೆದ ಏಷ್ಯಾದ ಬೌಲರ್ ಎಂಬ ಹಿರಿಮೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

5 / 5
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್