AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಗ್ಲೆಂಡ್​ನಲ್ಲಿ ಬೂಮ್ ಬೂಮ್… ಪಾಕ್ ವೇಗಿಯ ಐತಿಹಾಸಿಕ ದಾಖಲೆ ಕ್ಲೀನ್ ಬೌಲ್ಡ್

IND vs ENG: ಲೀಡ್ಸ್​ನಲ್ಲಿ ನಡೆಯುತ್ತಿರುವ ತೆಂಡೂಲ್ಕರ್-ಅ್ಯಂಡರ್ಸನ್ ಟ್ರೋಫಿಯ ಮೊದಲ ಟೆಸ್ಟ್​ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್​ನಲ್ಲಿ 471 ರನ್ ಕಲೆಹಾಕಿದೆ. ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್ ಆರಂಭಿಸಿರುವ ಇಂಗ್ಲೆಂಡ್ ತಂಡವು ಎರಡನೇ ದಿನದಾಟದ ಅಂತ್ಯಕ್ಕೆ 3 ವಿಕೆಟ್ ಕಳೆದುಕೊಂಡು 209 ರನ್​ಗಳಿಸಿದೆ.

ಝಾಹಿರ್ ಯೂಸುಫ್
|

Updated on: Jun 22, 2025 | 8:31 AM

Share
ಲೀಡ್ಸ್​​ನ ಹೆಡಿಂಗ್ಲೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲೇ ಜಸ್​ಪ್ರೀತ್ ಬುಮ್ರಾ (Jasprit Bumrah) ಮಾರಕ ದಾಳಿ ಸಂಘಟಿಸಿದ್ದಾರೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಯಶಸ್ವಿ ಜೈಸ್ವಾಲ್ (101), ಶುಭ್​ಮನ್ ಗಿಲ್ (147) ಹಾಗೂ ರಿಷಭ್ ಪಂತ್ (134) ಅವರ ಶತಕಗಳ ನೆರವಿನೊಂದಿಗೆ ಪ್ರಥಮ ಇನಿಂಗ್ಸ್​ನಲ್ಲಿ 471 ರನ್​ ಕಲೆಹಾಕಿತು.

ಲೀಡ್ಸ್​​ನ ಹೆಡಿಂಗ್ಲೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲೇ ಜಸ್​ಪ್ರೀತ್ ಬುಮ್ರಾ (Jasprit Bumrah) ಮಾರಕ ದಾಳಿ ಸಂಘಟಿಸಿದ್ದಾರೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಯಶಸ್ವಿ ಜೈಸ್ವಾಲ್ (101), ಶುಭ್​ಮನ್ ಗಿಲ್ (147) ಹಾಗೂ ರಿಷಭ್ ಪಂತ್ (134) ಅವರ ಶತಕಗಳ ನೆರವಿನೊಂದಿಗೆ ಪ್ರಥಮ ಇನಿಂಗ್ಸ್​ನಲ್ಲಿ 471 ರನ್​ ಕಲೆಹಾಕಿತು.

1 / 5
ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ತಂಡಕ್ಕೆ ಮೊದಲ ಓವರ್​ನಲ್ಲೇ ಜಸ್​ಪ್ರೀತ್ ಬುಮ್ರಾ ಆರಂಭಿಕ ಆಘಾತ ನೀಡಿದ್ದರು. ಮೊದಲ ಓವರ್​ನ ಕೊನೆಯ ಎಸೆತದಲ್ಲಿ ಝಾಕ್ ಕ್ರಾಲಿ (4) ವಿಕೆಟ್ ಕಬಳಿಸಿದ ಬುಮ್ರಾ, ಆ ಬಳಿಕ ಬೆನ್ ಡಕೆಟ್ (64) ಅವರನ್ನು ಕ್ಲೀನ್ ಬೌಲ್ಡ್ ಮಾಡಿದರು. ಇನ್ನು ದ್ವಿತೀಯ ದಿನದಾಟದ ಅಂತ್ಯದ ವೇಳೆ ಜೋ ರೂಟ್ (28) ವಿಕೆಟ್ ಕಬಳಿಸಿ ಟೀಮ್ ಇಂಡಿಯಾಗೆ ಮೂರನೇ ಯಶಸ್ಸು ತಂದುಕೊಟ್ಟರು.

ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ತಂಡಕ್ಕೆ ಮೊದಲ ಓವರ್​ನಲ್ಲೇ ಜಸ್​ಪ್ರೀತ್ ಬುಮ್ರಾ ಆರಂಭಿಕ ಆಘಾತ ನೀಡಿದ್ದರು. ಮೊದಲ ಓವರ್​ನ ಕೊನೆಯ ಎಸೆತದಲ್ಲಿ ಝಾಕ್ ಕ್ರಾಲಿ (4) ವಿಕೆಟ್ ಕಬಳಿಸಿದ ಬುಮ್ರಾ, ಆ ಬಳಿಕ ಬೆನ್ ಡಕೆಟ್ (64) ಅವರನ್ನು ಕ್ಲೀನ್ ಬೌಲ್ಡ್ ಮಾಡಿದರು. ಇನ್ನು ದ್ವಿತೀಯ ದಿನದಾಟದ ಅಂತ್ಯದ ವೇಳೆ ಜೋ ರೂಟ್ (28) ವಿಕೆಟ್ ಕಬಳಿಸಿ ಟೀಮ್ ಇಂಡಿಯಾಗೆ ಮೂರನೇ ಯಶಸ್ಸು ತಂದುಕೊಟ್ಟರು.

2 / 5
ಈ ಮೂರು ವಿಕೆಟ್​ಗಳೊಂದಿಗೆ ಜಸ್​ಪ್ರೀತ್ ಬುಮ್ರಾ ಟೆಸ್ಟ್ ಕ್ರಿಕೆಟ್​ನಲ್ಲಿ ವಿಶೇಷ ದಾಖಲೆ ಬರೆದಿದ್ದಾರೆ. ಅದು ಕೂಡ ಪಾಕಿಸ್ತಾನ್ ಲೆಜೆಂಡ್ ವಾಸಿಂ ಅಕ್ರಂ ಅವರ ಭರ್ಜರಿ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. ಅಂದರೆ ಸೌತ್ ಆಫ್ರಿಕಾ, ಇಂಗ್ಲೆಂಡ್, ನ್ಯೂಝಿಲೆಂಡ್ ಹಾಗೂ ಆಸ್ಟ್ರೇಲಿಯಾದಲ್ಲಿ ಟೆಸ್ಟ್​ನಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ದಾಖಲೆ ಅಕ್ರಂ ಹೆಸರಿನಲ್ಲಿತ್ತು.

ಈ ಮೂರು ವಿಕೆಟ್​ಗಳೊಂದಿಗೆ ಜಸ್​ಪ್ರೀತ್ ಬುಮ್ರಾ ಟೆಸ್ಟ್ ಕ್ರಿಕೆಟ್​ನಲ್ಲಿ ವಿಶೇಷ ದಾಖಲೆ ಬರೆದಿದ್ದಾರೆ. ಅದು ಕೂಡ ಪಾಕಿಸ್ತಾನ್ ಲೆಜೆಂಡ್ ವಾಸಿಂ ಅಕ್ರಂ ಅವರ ಭರ್ಜರಿ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. ಅಂದರೆ ಸೌತ್ ಆಫ್ರಿಕಾ, ಇಂಗ್ಲೆಂಡ್, ನ್ಯೂಝಿಲೆಂಡ್ ಹಾಗೂ ಆಸ್ಟ್ರೇಲಿಯಾದಲ್ಲಿ ಟೆಸ್ಟ್​ನಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ದಾಖಲೆ ಅಕ್ರಂ ಹೆಸರಿನಲ್ಲಿತ್ತು.

3 / 5
ವಾಸಿಂ ಅಕ್ರಂ ಸೌತ್ ಆಫ್ರಿಕಾ, ಇಂಗ್ಲೆಂಡ್, ನ್ಯೂಝಿಲೆಂಡ್ ಹಾಗೂ ಆಸ್ಟ್ರೇಲಿಯಾದಲ್ಲಿ (SENA ದೇಶ) ಒಟ್ಟು 55 ಟೆಸ್ಟ್ ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿದ್ದರು. ಈ ವೇಳೆ ಒಟ್ಟು 146 ವಿಕೆಟ್ ಕಬಳಿದ್ದಾರೆ. ಈ ಮೂಲಕ ಸೇನಾ ದೇಶಗಳಲ್ಲಿ ಅತೀ ಹೆಚ್ಚು ವಿಕೆಟ್ ಕಬಳಿಸಿದ ಏಷ್ಯನ್ ಬೌಲರ್ ಎಂಬ ದಾಖಲೆ ನಿರ್ಮಿಸಿದ್ದರು.

ವಾಸಿಂ ಅಕ್ರಂ ಸೌತ್ ಆಫ್ರಿಕಾ, ಇಂಗ್ಲೆಂಡ್, ನ್ಯೂಝಿಲೆಂಡ್ ಹಾಗೂ ಆಸ್ಟ್ರೇಲಿಯಾದಲ್ಲಿ (SENA ದೇಶ) ಒಟ್ಟು 55 ಟೆಸ್ಟ್ ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿದ್ದರು. ಈ ವೇಳೆ ಒಟ್ಟು 146 ವಿಕೆಟ್ ಕಬಳಿದ್ದಾರೆ. ಈ ಮೂಲಕ ಸೇನಾ ದೇಶಗಳಲ್ಲಿ ಅತೀ ಹೆಚ್ಚು ವಿಕೆಟ್ ಕಬಳಿಸಿದ ಏಷ್ಯನ್ ಬೌಲರ್ ಎಂಬ ದಾಖಲೆ ನಿರ್ಮಿಸಿದ್ದರು.

4 / 5
ಇದೀಗ ಈ ದಾಖಲೆ ಮುರಿಯುವಲ್ಲಿ ಜಸ್​ಪ್ರೀತ್ ಬುಮ್ರಾ ಯಶಸ್ವಿಯಾಗಿದ್ದಾರೆ. ಸೌತ್ ಆಫ್ರಿಕಾ, ಇಂಗ್ಲೆಂಡ್, ನ್ಯೂಝಿಲೆಂಡ್ ಹಾಗೂ ಆಸ್ಟ್ರೇಲಿಯಾದಲ್ಲಿ ಈವರೆಗೆ 60 ಇನಿಂಗ್ಸ್ ಆಡಿರುವ ಬುಮ್ರಾ 148 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಸೇನಾ ದೇಶಗಳಲ್ಲಿ ಅತ್ಯಧಿಕ ವಿಕೆಟ್ ಪಡೆದ ಏಷ್ಯಾದ ಬೌಲರ್ ಎಂಬ ಹಿರಿಮೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಇದೀಗ ಈ ದಾಖಲೆ ಮುರಿಯುವಲ್ಲಿ ಜಸ್​ಪ್ರೀತ್ ಬುಮ್ರಾ ಯಶಸ್ವಿಯಾಗಿದ್ದಾರೆ. ಸೌತ್ ಆಫ್ರಿಕಾ, ಇಂಗ್ಲೆಂಡ್, ನ್ಯೂಝಿಲೆಂಡ್ ಹಾಗೂ ಆಸ್ಟ್ರೇಲಿಯಾದಲ್ಲಿ ಈವರೆಗೆ 60 ಇನಿಂಗ್ಸ್ ಆಡಿರುವ ಬುಮ್ರಾ 148 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಸೇನಾ ದೇಶಗಳಲ್ಲಿ ಅತ್ಯಧಿಕ ವಿಕೆಟ್ ಪಡೆದ ಏಷ್ಯಾದ ಬೌಲರ್ ಎಂಬ ಹಿರಿಮೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

5 / 5
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ
ಮಗಳೊಟ್ಟಿಗೆ ಕಾಪು ಮಾರಿಗುಡಿ ದೇವಾಲಯಕ್ಕೆ ಅಶ್ವಿನಿ ಪುನೀತ್​​ ರಾಜ್​​ಕುಮಾರ್
ಮಗಳೊಟ್ಟಿಗೆ ಕಾಪು ಮಾರಿಗುಡಿ ದೇವಾಲಯಕ್ಕೆ ಅಶ್ವಿನಿ ಪುನೀತ್​​ ರಾಜ್​​ಕುಮಾರ್
ಸಿಎಂ ಜೊತೆಗಿದ್ದ ಶಾಸಕರೆಲ್ಲ ಸ್ವಂತ ಖರ್ಚಿನಲ್ಲಿ ದೆಹಲಿ ಹೋಗಿದ್ದರೇ?
ಸಿಎಂ ಜೊತೆಗಿದ್ದ ಶಾಸಕರೆಲ್ಲ ಸ್ವಂತ ಖರ್ಚಿನಲ್ಲಿ ದೆಹಲಿ ಹೋಗಿದ್ದರೇ?
ಕೆಲದಿನಗಳ ಮಟ್ಟಿಗೆ ಮುಂದೂಡಲ್ಪಟ್ಟ ಮುಖ್ಯಮಂತ್ರಿ ಗಾದಿಯ ಸಂಘರ್ಷ
ಕೆಲದಿನಗಳ ಮಟ್ಟಿಗೆ ಮುಂದೂಡಲ್ಪಟ್ಟ ಮುಖ್ಯಮಂತ್ರಿ ಗಾದಿಯ ಸಂಘರ್ಷ
ಯಶ್ ವಿಚಾರದಲ್ಲಿ ಅಷ್ಟು ಕಟುತ್ವ ಏಕೆ? ಉತ್ತರಿಸಿದ ತಾಯಿ ಪುಷ್ಪಾ
ಯಶ್ ವಿಚಾರದಲ್ಲಿ ಅಷ್ಟು ಕಟುತ್ವ ಏಕೆ? ಉತ್ತರಿಸಿದ ತಾಯಿ ಪುಷ್ಪಾ
ಧಾರ್ಮಿಕ ಸ್ಥಳಕ್ಕೆ ಬಂದಾಗ ರಾಜಕೀಯ ಮಾತಾಡಲಾರೆ: ಪರಮೇಶ್ವರ್
ಧಾರ್ಮಿಕ ಸ್ಥಳಕ್ಕೆ ಬಂದಾಗ ರಾಜಕೀಯ ಮಾತಾಡಲಾರೆ: ಪರಮೇಶ್ವರ್
ದಿನಸಿ ಸಾಲ ವಾಪಾಸ್ ಕೇಳಿದ್ದಕ್ಕೆ ಅಂಗಡಿಗೇ ಬೆಂಕಿ ಹಚ್ಚಲು ಮುಂದಾದ ವ್ಯಕ್ತಿ!
ದಿನಸಿ ಸಾಲ ವಾಪಾಸ್ ಕೇಳಿದ್ದಕ್ಕೆ ಅಂಗಡಿಗೇ ಬೆಂಕಿ ಹಚ್ಚಲು ಮುಂದಾದ ವ್ಯಕ್ತಿ!
ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ಸಂಘರ್ಷ ಶುರುವಾಗಿದೆ: ಅಶೋಕ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ಸಂಘರ್ಷ ಶುರುವಾಗಿದೆ: ಅಶೋಕ
ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಅಸಹಾಯಕ ತಂದೆ
ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಅಸಹಾಯಕ ತಂದೆ