AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಟ್ರೇಲಿಯಾ ಪಿಚ್​ನಲ್ಲಿ ಇತಿಹಾಸ ನಿರ್ಮಿಸಿದ ಜಸ್​ಪ್ರೀತ್ ಬುಮ್ರಾ

Australia vs India, 3rd Test: ಬ್ರಿಸ್ಬೇನ್​​ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಜಸ್​ಪ್ರೀತ್ ಬುಮ್ರಾ ಒಟ್ಟು 9 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 6 ವಿಕೆಟ್ ಪಡೆದಿದ್ದ ಬುಮ್ರಾ ದ್ವಿತೀಯ ಇನಿಂಗ್ಸ್​ನಲ್ಲಿ 3 ವಿಕೆಟ್ ಉರುಳಿಸಿದ್ದಾರೆ. ಈ ಮೂಲಕ ಆಸ್ಟ್ರೇಲಿಯಾದಲ್ಲಿ ಟೀಮ್ ಇಂಡಿಯಾ ವೇಗಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Dec 18, 2024 | 10:20 AM

Share
ಬ್ರಿಸ್ಬೇನ್​ ಟೆಸ್ಟ್ ಪಂದ್ಯದ ಮೂಲಕ ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಕಪಿಲ್ ದೇವ್ ಹೆಸರಿನಲ್ಲಿದ್ದ ಸಾರ್ವಕಾಲಿಕ ದಾಖಲೆಯನ್ನು ಮುರಿದು ಬುಮ್ರಾ ಆಸ್ಟ್ರೇಲಿಯಾ ಪಿಚ್​ನಲ್ಲಿನ ಭಾರತದ ಅತ್ಯಂತ ಯಶಸ್ವಿ ಬೌಲರ್ ಎನಿಸಿಕೊಂಡಿದ್ದಾರೆ.

ಬ್ರಿಸ್ಬೇನ್​ ಟೆಸ್ಟ್ ಪಂದ್ಯದ ಮೂಲಕ ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಕಪಿಲ್ ದೇವ್ ಹೆಸರಿನಲ್ಲಿದ್ದ ಸಾರ್ವಕಾಲಿಕ ದಾಖಲೆಯನ್ನು ಮುರಿದು ಬುಮ್ರಾ ಆಸ್ಟ್ರೇಲಿಯಾ ಪಿಚ್​ನಲ್ಲಿನ ಭಾರತದ ಅತ್ಯಂತ ಯಶಸ್ವಿ ಬೌಲರ್ ಎನಿಸಿಕೊಂಡಿದ್ದಾರೆ.

1 / 5
ಗಾಬಾ ಮೈದಾನದಲ್ಲಿ ನಡೆದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೂರನೇ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಜಸ್​ಪ್ರೀತ್ ಬುಮ್ರಾ 6 ವಿಕೆಟ್ ಕಬಳಿಸಿದ್ದರು. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ 3* ವಿಕೆಟ್ ಉರುಳಿಸಿದ್ದಾರೆ. ಇದರೊಂದಿಗೆ ಆಸ್ಟ್ರೇಲಿಯಾದಲ್ಲಿ ಅತ್ಯಧಿಕ ವಿಕೆಟ್ ಪಡೆದ ಭಾರತೀಯ ಬೌಲರ್ ಎನಿಸಿಕೊಂಡಿದ್ದಾರೆ.

ಗಾಬಾ ಮೈದಾನದಲ್ಲಿ ನಡೆದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೂರನೇ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಜಸ್​ಪ್ರೀತ್ ಬುಮ್ರಾ 6 ವಿಕೆಟ್ ಕಬಳಿಸಿದ್ದರು. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ 3* ವಿಕೆಟ್ ಉರುಳಿಸಿದ್ದಾರೆ. ಇದರೊಂದಿಗೆ ಆಸ್ಟ್ರೇಲಿಯಾದಲ್ಲಿ ಅತ್ಯಧಿಕ ವಿಕೆಟ್ ಪಡೆದ ಭಾರತೀಯ ಬೌಲರ್ ಎನಿಸಿಕೊಂಡಿದ್ದಾರೆ.

2 / 5
ಆಸ್ಟ್ರೇಲಿಯಾದಲ್ಲಿ ಟೆಸ್ಟ್​ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಬೌಲರ್ ಎಂಬ ದಾಖಲೆ ಕಪಿಲ್ ದೇವ್ ಹೆಸರಿನಲ್ಲಿತ್ತು. ಟೀಮ್ ಇಂಡಿಯಾದ ಮಾಜಿ ನಾಯಕ 11 ಪಂದ್ಯಗಳಿಂದ ಒಟ್ಟು 51 ವಿಕೆಟ್ ಉರುಳಿಸಿ ದಾಖಲೆ ನಿರ್ಮಿಸಿದ್ದರು. ಇದೀಗ ಈ ಮೈಲುಗಲ್ಲನ್ನು ದಾಟುವಲ್ಲಿ ಬುಮ್ರಾ ಯಶಸ್ವಿಯಾಗಿದ್ದಾರೆ.

ಆಸ್ಟ್ರೇಲಿಯಾದಲ್ಲಿ ಟೆಸ್ಟ್​ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಬೌಲರ್ ಎಂಬ ದಾಖಲೆ ಕಪಿಲ್ ದೇವ್ ಹೆಸರಿನಲ್ಲಿತ್ತು. ಟೀಮ್ ಇಂಡಿಯಾದ ಮಾಜಿ ನಾಯಕ 11 ಪಂದ್ಯಗಳಿಂದ ಒಟ್ಟು 51 ವಿಕೆಟ್ ಉರುಳಿಸಿ ದಾಖಲೆ ನಿರ್ಮಿಸಿದ್ದರು. ಇದೀಗ ಈ ಮೈಲುಗಲ್ಲನ್ನು ದಾಟುವಲ್ಲಿ ಬುಮ್ರಾ ಯಶಸ್ವಿಯಾಗಿದ್ದಾರೆ.

3 / 5
ಜಸ್​ಪ್ರೀತ್ ಬುಮ್ರಾ ಆಸ್ಟ್ರೇಲಿಯಾದಲ್ಲಿ ಈವರೆಗೆ 10 ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ ಒಟ್ಟು 53 ವಿಕೆಟ್​​ಗಳನ್ನು ಕಬಳಿಸಿದ್ದಾರೆ. ಈ ಭರ್ಜರಿ ಪ್ರದರ್ಶನದೊಂದಿಗೆ ಆಸ್ಟ್ರೇಲಿಯಾ ಪಿಚ್​ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಭಾರತೀಯ ಬೌಲರ್ ಎಂಬ ದಾಖಲೆಯನ್ನು ಬುಮ್ರಾ ತಮ್ಮ ಹೆಸರಿಗೆ ಸೇರ್ಪಡೆಗೊಳಿಸಿದ್ದಾರೆ.

ಜಸ್​ಪ್ರೀತ್ ಬುಮ್ರಾ ಆಸ್ಟ್ರೇಲಿಯಾದಲ್ಲಿ ಈವರೆಗೆ 10 ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ ಒಟ್ಟು 53 ವಿಕೆಟ್​​ಗಳನ್ನು ಕಬಳಿಸಿದ್ದಾರೆ. ಈ ಭರ್ಜರಿ ಪ್ರದರ್ಶನದೊಂದಿಗೆ ಆಸ್ಟ್ರೇಲಿಯಾ ಪಿಚ್​ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಭಾರತೀಯ ಬೌಲರ್ ಎಂಬ ದಾಖಲೆಯನ್ನು ಬುಮ್ರಾ ತಮ್ಮ ಹೆಸರಿಗೆ ಸೇರ್ಪಡೆಗೊಳಿಸಿದ್ದಾರೆ.

4 / 5
ಇದಕ್ಕೂ ಮುನ್ನ ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 6 ವಿಕೆಟ್ ಕಬಳಿಸಿ ವಿದೇಶಿ ಟೆಸ್ಟ್​ನಲ್ಲಿ ಟೀಮ್ ಇಂಡಿಯಾ ಪರ ಅತ್ಯಧಿಕ ಬಾರಿ 5 ವಿಕೆಟ್ ಕಬಳಿಸಿದ ಭಾರತದ ವೇಗಿ ಎಂಬ ದಾಖಲೆಯನ್ನು ಜಸ್​ಪ್ರೀತ್ ಬುಮ್ರಾ ತಮ್ಮದಾಗಿಸಿಕೊಂಡಿದ್ದರು. ಈ ದಾಖಲೆ ಕೂಡ ಭಾರತದ ಮಾಜಿ ನಾಯಕ ಕಪಿಲ್ ದೇವ್ (10 ಬಾರಿ) ಹೆಸರಿನಲ್ಲಿತ್ತು. ಇದೀಗ 11ನೇ ಬಾರಿ 5 ವಿಕೆಟ್ ಕಬಳಿಸಿ ಬುಮ್ರಾ ಈ ದಾಖಲೆಯನ್ನು ಸಹ ತಮ್ಮದಾಗಿಸಿಕೊಂಡಿದ್ದಾರೆ.

ಇದಕ್ಕೂ ಮುನ್ನ ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 6 ವಿಕೆಟ್ ಕಬಳಿಸಿ ವಿದೇಶಿ ಟೆಸ್ಟ್​ನಲ್ಲಿ ಟೀಮ್ ಇಂಡಿಯಾ ಪರ ಅತ್ಯಧಿಕ ಬಾರಿ 5 ವಿಕೆಟ್ ಕಬಳಿಸಿದ ಭಾರತದ ವೇಗಿ ಎಂಬ ದಾಖಲೆಯನ್ನು ಜಸ್​ಪ್ರೀತ್ ಬುಮ್ರಾ ತಮ್ಮದಾಗಿಸಿಕೊಂಡಿದ್ದರು. ಈ ದಾಖಲೆ ಕೂಡ ಭಾರತದ ಮಾಜಿ ನಾಯಕ ಕಪಿಲ್ ದೇವ್ (10 ಬಾರಿ) ಹೆಸರಿನಲ್ಲಿತ್ತು. ಇದೀಗ 11ನೇ ಬಾರಿ 5 ವಿಕೆಟ್ ಕಬಳಿಸಿ ಬುಮ್ರಾ ಈ ದಾಖಲೆಯನ್ನು ಸಹ ತಮ್ಮದಾಗಿಸಿಕೊಂಡಿದ್ದಾರೆ.

5 / 5
Follow Us
ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ: ಸಾರಾ ಗೋವಿಂದು ಪ್ರತಿಕ್ರಿಯೆ
ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ: ಸಾರಾ ಗೋವಿಂದು ಪ್ರತಿಕ್ರಿಯೆ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ
‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು
‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ
ಗಾಣಗಾಪುರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ
ಗಾಣಗಾಪುರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ
ದಸರಾ ಗಜಪಡೆಗೆ ಹಣ್ಣು ತಿನ್ನಿಸಿದ ತ್ರಿಷಿಕಾ, ಆದ್ಯವೀರ್
ದಸರಾ ಗಜಪಡೆಗೆ ಹಣ್ಣು ತಿನ್ನಿಸಿದ ತ್ರಿಷಿಕಾ, ಆದ್ಯವೀರ್
2028ಕ್ಕೆ ರಾಮನಗರದಿಂದಲೇ ಸ್ಪರ್ಧೆ: ನಿಖಿಲ್​ ಕುಮಾರಸ್ವಾಮಿ
2028ಕ್ಕೆ ರಾಮನಗರದಿಂದಲೇ ಸ್ಪರ್ಧೆ: ನಿಖಿಲ್​ ಕುಮಾರಸ್ವಾಮಿ
ಎತ್ತಿನಹೊಳೆ ಯೋಜನೆಯ ಕಾಮಗಾರಿ ವೀಕ್ಷಿಸಿದ ಸಚಿವ ಚಲುವರಾಯಸ್ವಾಮಿ
ಎತ್ತಿನಹೊಳೆ ಯೋಜನೆಯ ಕಾಮಗಾರಿ ವೀಕ್ಷಿಸಿದ ಸಚಿವ ಚಲುವರಾಯಸ್ವಾಮಿ