AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಂಪಿಯನ್ಸ್ ಟ್ರೋಫಿಗೂ ಜಸ್​ಪ್ರೀತ್ ಬುಮ್ರಾ ಅನುಮಾನ

Jasprit Bumrah Injury Update: ಸಿಡ್ನಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ 5ನೇ ಟೆಸ್ಟ್ ಪಂದ್ಯದ ವೇಳೆ ಜಸ್​ಪ್ರೀತ್ ಬುಮ್ರಾ ಬೆನ್ನು ನೋವಿನ ಸಮಸ್ಯೆಗೆ ಒಳಗಾಗಿದ್ದರು. ಹೀಗಾಗಿ ಕೊನೆಯ ಇನಿಂಗ್ಸ್​ನಲ್ಲಿ ಅವರು ಬೌಲಿಂಗ್ ಮಾಡಿರಲಿಲ್ಲ. ಅಲ್ಲದೆ ಇದೇ ನೋವಿನ ಕಾರಣ ಅವರು ಮುಂಬರುವ ಇಂಗ್ಲೆಂಡ್ ವಿರುದ್ಧದ ಸರಣಿಯಿಂದ ಹೊರಗುಳಿಯಲಿದ್ದಾರೆ. ಇದಾದ ಬಳಿಕವಷ್ಟೇ ಅವರ ಚಾಂಪಿಯನ್ಸ್ ಟ್ರೋಫಿ ಭವಿಷ್ಯ ನಿರ್ಧಾರವಾಗಲಿದೆ.

ಝಾಹಿರ್ ಯೂಸುಫ್
|

Updated on:Jan 07, 2025 | 1:58 PM

Share
ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಕೊನೆಯ ಪಂದ್ಯದ ವೇಳೆ ಬೆನ್ನು ನೋವಿನ ಸಮಸ್ಯೆಗೆ ಸಿಲುಕಿರುವ ಜಸ್​ಪ್ರೀತ್ ಬುಮ್ರಾ ಮುಂಬರುವ ಚಾಂಪಿಯನ್ಸ್ ಟ್ರೋಫಿಯಲ್ಲೂ ಕಣಕ್ಕಿಳಿಯುವುದು ಅನುಮಾನ. ಏಕೆಂದರೆ ಬೆನ್ನಿನ ಸ್ನಾಯು ಸೆಳೆತದ ಸಮಸ್ಯೆಯಿಂದ ಬಳಲುತ್ತಿರುವ ಅವರು ಸಂಪೂರ್ಣ ಫಿಟ್​ನೆಸ್ ಸಾಧಿಸಲು ಕನಿಷ್ಠ ಮೂರು ವಾರಗಳನ್ನು ತೆಗೆದುಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಕೊನೆಯ ಪಂದ್ಯದ ವೇಳೆ ಬೆನ್ನು ನೋವಿನ ಸಮಸ್ಯೆಗೆ ಸಿಲುಕಿರುವ ಜಸ್​ಪ್ರೀತ್ ಬುಮ್ರಾ ಮುಂಬರುವ ಚಾಂಪಿಯನ್ಸ್ ಟ್ರೋಫಿಯಲ್ಲೂ ಕಣಕ್ಕಿಳಿಯುವುದು ಅನುಮಾನ. ಏಕೆಂದರೆ ಬೆನ್ನಿನ ಸ್ನಾಯು ಸೆಳೆತದ ಸಮಸ್ಯೆಯಿಂದ ಬಳಲುತ್ತಿರುವ ಅವರು ಸಂಪೂರ್ಣ ಫಿಟ್​ನೆಸ್ ಸಾಧಿಸಲು ಕನಿಷ್ಠ ಮೂರು ವಾರಗಳನ್ನು ತೆಗೆದುಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.

1 / 5
ಇದೀಗ ಜಸ್​ಪ್ರೀತ್ ಬುಮ್ರಾ ಅವರ ಬೆನ್ನು ನೋವಿನ ಸಮಸ್ಯೆಯನ್ನು ಗ್ರೇಡ್-1 ಎಂದು ಪರಿಗಣಿಸಲಾಗಿದ್ದು, ಹೀಗಾಗಿ ಇಂಗ್ಲೆಂಡ್ ವಿರುದ್ಧದ ಸರಣಿಯಿಂದ ಅವರು ಸಂಪೂರ್ಣ ಹೊರಗುಳಿಯಲಿದ್ದಾರೆ. ಈ ವಿಶ್ರಾಂತಿಯ ಬಳಿಕ ಮತ್ತೊಮ್ಮೆ ಅವರು ವೈದ್ಯಕೀಯ ಪರೀಕ್ಷೆಗೆ ಒಳಪಡಲಿದ್ದಾರೆ.

ಇದೀಗ ಜಸ್​ಪ್ರೀತ್ ಬುಮ್ರಾ ಅವರ ಬೆನ್ನು ನೋವಿನ ಸಮಸ್ಯೆಯನ್ನು ಗ್ರೇಡ್-1 ಎಂದು ಪರಿಗಣಿಸಲಾಗಿದ್ದು, ಹೀಗಾಗಿ ಇಂಗ್ಲೆಂಡ್ ವಿರುದ್ಧದ ಸರಣಿಯಿಂದ ಅವರು ಸಂಪೂರ್ಣ ಹೊರಗುಳಿಯಲಿದ್ದಾರೆ. ಈ ವಿಶ್ರಾಂತಿಯ ಬಳಿಕ ಮತ್ತೊಮ್ಮೆ ಅವರು ವೈದ್ಯಕೀಯ ಪರೀಕ್ಷೆಗೆ ಒಳಪಡಲಿದ್ದಾರೆ.

2 / 5
ವಿಶ್ರಾಂತಿಯ ಬಳಿಕ ಸಂಪೂರ್ಣ ಫಿಟ್​ನೆಸ್​ನೊಂದಿಗೆ ಕಾಣಿಸಿಕೊಂಡರೆ ಮಾತ್ರ ಬುಮ್ರಾ ಚಾಂಪಿಯನ್ಸ್​ ಟ್ರೋಫಿಯಲ್ಲಿ ಕಣಕ್ಕಿಳಿಯಲಿದ್ದಾರೆ. ಒಂದು ವೇಳೆ ಅವರ ಬೆನ್ನು ನೋವಿನ ಸಮಸ್ಯೆಯು ಗ್ರೇಡ್-2 ಆಗಿ ಮಾರ್ಪಟ್ಟರೆ ಕನಿಷ್ಠ 6 ವಾರಗಳ ಕಾಲ ಮೈದಾನದಿಂದ ಹೊರಗುಳಿಯಬೇಕಾಗುತ್ತದೆ.

ವಿಶ್ರಾಂತಿಯ ಬಳಿಕ ಸಂಪೂರ್ಣ ಫಿಟ್​ನೆಸ್​ನೊಂದಿಗೆ ಕಾಣಿಸಿಕೊಂಡರೆ ಮಾತ್ರ ಬುಮ್ರಾ ಚಾಂಪಿಯನ್ಸ್​ ಟ್ರೋಫಿಯಲ್ಲಿ ಕಣಕ್ಕಿಳಿಯಲಿದ್ದಾರೆ. ಒಂದು ವೇಳೆ ಅವರ ಬೆನ್ನು ನೋವಿನ ಸಮಸ್ಯೆಯು ಗ್ರೇಡ್-2 ಆಗಿ ಮಾರ್ಪಟ್ಟರೆ ಕನಿಷ್ಠ 6 ವಾರಗಳ ಕಾಲ ಮೈದಾನದಿಂದ ಹೊರಗುಳಿಯಬೇಕಾಗುತ್ತದೆ.

3 / 5
ಹೀಗಾಗಿ ಜಸ್​ಪ್ರೀತ್ ಬುಮ್ರಾ ಅವರು ಚಾಂಪಿಯನ್ಸ್ ಟ್ರೋಫಿ ಆಡಲಿದ್ದಾರೆ ಎಂಬುದನ್ನು ಈಗಲೇ ಖಚಿತಪಡಿಸಲಾಗುವುದಿಲ್ಲ. ಅತ್ತ ಚಾಂಪಿಯನ್ಸ್ ಟ್ರೋಫಿ ಟೂರ್ನಿಯು ಫೆಬ್ರವರಿ 19 ರಿಂದ ಶುರುವಾಗಲಿದ್ದು, ಅದಕ್ಕೂ ಮುನ್ನ ಜಸ್​ಪ್ರೀತ್ ಬುಮ್ರಾ ಸಂಪೂರ್ಣ ಫಿಟ್​ನೆಸ್ ಸಾಧಿಸಿದರೆ ಮಾತ್ರ ಅವರನ್ನು ಆಯ್ಕೆ ಮಾಡಲು ಬಿಸಿಸಿಐ ನಿರ್ಧರಿಸಿದೆ.

ಹೀಗಾಗಿ ಜಸ್​ಪ್ರೀತ್ ಬುಮ್ರಾ ಅವರು ಚಾಂಪಿಯನ್ಸ್ ಟ್ರೋಫಿ ಆಡಲಿದ್ದಾರೆ ಎಂಬುದನ್ನು ಈಗಲೇ ಖಚಿತಪಡಿಸಲಾಗುವುದಿಲ್ಲ. ಅತ್ತ ಚಾಂಪಿಯನ್ಸ್ ಟ್ರೋಫಿ ಟೂರ್ನಿಯು ಫೆಬ್ರವರಿ 19 ರಿಂದ ಶುರುವಾಗಲಿದ್ದು, ಅದಕ್ಕೂ ಮುನ್ನ ಜಸ್​ಪ್ರೀತ್ ಬುಮ್ರಾ ಸಂಪೂರ್ಣ ಫಿಟ್​ನೆಸ್ ಸಾಧಿಸಿದರೆ ಮಾತ್ರ ಅವರನ್ನು ಆಯ್ಕೆ ಮಾಡಲು ಬಿಸಿಸಿಐ ನಿರ್ಧರಿಸಿದೆ.

4 / 5
ಇನ್ನು ಭಾರತ ಮತ್ತು ಇಂಗ್ಲೆಂಡ್ ನಡುವಣ 8 ಪಂದ್ಯಗಳ ಸರಣಿಯು ಜನವರಿ 22 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ 5 ಟಿ20 ಮತ್ತು 3 ಏಕದಿನ ಪಂದ್ಯಗಳನ್ನಾಡಲಿದೆ. ಈ ಪಂದ್ಯಗಳಿಗೆ ಜಸ್​ಪ್ರೀತ್ ಬುಮ್ರಾ ಅಲಭ್ಯರಾಗುವುದು ಖಚಿತವಾಗಿದೆ. ಈ ಸರಣಿಯ ಮುಕ್ತಾಯದ ಬೆನ್ನಲ್ಲೇ ಬುಮ್ರಾ ಫಿಟ್​​​ನೆಸ್ ಟೆಸ್ಟ್​ಗೆ ಒಳಗಾಗಲಿದ್ದು, ಆ ಬಳಿಕವಷ್ಟೇ ಅವರ ಚಾಂಪಿಯನ್ಸ್ ಟ್ರೋಫಿ ಭವಿಷ್ಯ ನಿರ್ಧಾರವಾಗಲಿದೆ.

ಇನ್ನು ಭಾರತ ಮತ್ತು ಇಂಗ್ಲೆಂಡ್ ನಡುವಣ 8 ಪಂದ್ಯಗಳ ಸರಣಿಯು ಜನವರಿ 22 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ 5 ಟಿ20 ಮತ್ತು 3 ಏಕದಿನ ಪಂದ್ಯಗಳನ್ನಾಡಲಿದೆ. ಈ ಪಂದ್ಯಗಳಿಗೆ ಜಸ್​ಪ್ರೀತ್ ಬುಮ್ರಾ ಅಲಭ್ಯರಾಗುವುದು ಖಚಿತವಾಗಿದೆ. ಈ ಸರಣಿಯ ಮುಕ್ತಾಯದ ಬೆನ್ನಲ್ಲೇ ಬುಮ್ರಾ ಫಿಟ್​​​ನೆಸ್ ಟೆಸ್ಟ್​ಗೆ ಒಳಗಾಗಲಿದ್ದು, ಆ ಬಳಿಕವಷ್ಟೇ ಅವರ ಚಾಂಪಿಯನ್ಸ್ ಟ್ರೋಫಿ ಭವಿಷ್ಯ ನಿರ್ಧಾರವಾಗಲಿದೆ.

5 / 5

Published On - 1:53 pm, Tue, 7 January 25

Follow Us
ಪಾರ್ಕ್​ಗಳ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಕೆ ಖಂಡಿಸಿ ಮೈಸೂರಲ್ಲೂ ಪ್ರತಿಭಟನೆ
ಪಾರ್ಕ್​ಗಳ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಕೆ ಖಂಡಿಸಿ ಮೈಸೂರಲ್ಲೂ ಪ್ರತಿಭಟನೆ
ಗೃಹಲಕ್ಷ್ಮಿ ಯೋಜನೆಗೆ 3 ವರ್ಷ: ಸಿಎಂ ಡಿಕೆ ಶಿವಕುಮಾರ್​​ ಮಹತ್ವದ ಸಂದೇಶ
ಗೃಹಲಕ್ಷ್ಮಿ ಯೋಜನೆಗೆ 3 ವರ್ಷ: ಸಿಎಂ ಡಿಕೆ ಶಿವಕುಮಾರ್​​ ಮಹತ್ವದ ಸಂದೇಶ
ಗೋಡೆಕೆರೆ ಗೇಟ್‌ ಬಳಿಯ ಅಪಘಾತದಲ್ಲಿ ಸಾವಿಗೀಡಾದವ್ರ ಒಂದೊಂದು ಕಥೆ
ಗೋಡೆಕೆರೆ ಗೇಟ್‌ ಬಳಿಯ ಅಪಘಾತದಲ್ಲಿ ಸಾವಿಗೀಡಾದವ್ರ ಒಂದೊಂದು ಕಥೆ
ನಟ ಚಿಕ್ಕಣ್ಣ ಮದುವೆ: ಡಾಲಿ, ಮಂಡ್ಯ ರಮೇಶ್, ಎ.ಪಿ. ಅರ್ಜುನ್ ಶುಭ ಹಾರೈಕೆ
ನಟ ಚಿಕ್ಕಣ್ಣ ಮದುವೆ: ಡಾಲಿ, ಮಂಡ್ಯ ರಮೇಶ್, ಎ.ಪಿ. ಅರ್ಜುನ್ ಶುಭ ಹಾರೈಕೆ
ಆಗಸ್ಟ್ 31 ರಿಂದ ಸೆಪ್ಟೆಂಬರ್​​ 6 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 31 ರಿಂದ ಸೆಪ್ಟೆಂಬರ್​​ 6 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ನೇಪಾಳ ಪ್ರವಾಹ: ಸಾವಿನ ದವಡೆಯಿಂದ ಪಾರಾಗಿ 54 ಕನ್ನಡಿಗರು ವಾಪಸ್​​
ನೇಪಾಳ ಪ್ರವಾಹ: ಸಾವಿನ ದವಡೆಯಿಂದ ಪಾರಾಗಿ 54 ಕನ್ನಡಿಗರು ವಾಪಸ್​​
ಇಂದು ಈ ರಾಶಿಯವರು ವ್ಯಾಪಾರ, ವ್ಯವಹಾರಗಳಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ವ್ಯಾಪಾರ, ವ್ಯವಹಾರಗಳಲ್ಲಿ ಜಾಗೃತರಾಗಿರಿ
'ಭಾರತದಲ್ಲಿ ಮುಸ್ಲಿಮರಿರಬಾರದು ಎನ್ನುವವರು ಹಿಂದೂಗಳೇ ಅಲ್ಲ'; ಮೋಹನ್ ಭಾಗವತ್
'ಭಾರತದಲ್ಲಿ ಮುಸ್ಲಿಮರಿರಬಾರದು ಎನ್ನುವವರು ಹಿಂದೂಗಳೇ ಅಲ್ಲ'; ಮೋಹನ್ ಭಾಗವತ್
ನೇಪಾಳದ ಪ್ರವಾಹ ಸಂತ್ರಸ್ತರಿಗಾಗಿ ಅಡುಗೆ ಮಾಡಿಕೊಟ್ಟ ಸೈನಿಕರು
ನೇಪಾಳದ ಪ್ರವಾಹ ಸಂತ್ರಸ್ತರಿಗಾಗಿ ಅಡುಗೆ ಮಾಡಿಕೊಟ್ಟ ಸೈನಿಕರು
ನಟ ಚಿಕ್ಕಣ್ಣ ಮದುವೆ ಆರತಕ್ಷತೆ ಸಂಭ್ರಮ: ವಿಡಿಯೋ ನೋಡಿ
ನಟ ಚಿಕ್ಕಣ್ಣ ಮದುವೆ ಆರತಕ್ಷತೆ ಸಂಭ್ರಮ: ವಿಡಿಯೋ ನೋಡಿ