AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಸತತ 9 ಆವೃತ್ತಿ; ಇತಿಹಾಸ ಸೃಷ್ಟಿಸಿದ ಜಸ್ಪ್ರೀತ್ ಬುಮ್ರಾ

Jasprit Bumrah's IPL Dominance: ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ಪ್ಲೇಆಫ್ ತಲುಪಿದೆ. ಜಸ್ಪ್ರೀತ್ ಬುಮ್ರಾ ಅವರ ಅದ್ಭುತ ಪ್ರದರ್ಶನ ಇದಕ್ಕೆ ಪ್ರಮುಖ ಕಾರಣ. ಕಳೆದ 9 ಐಪಿಎಲ್ ಸೀಸನ್‌ಗಳಲ್ಲಿಸತತವಾಗಿ 15ಕ್ಕೂ ಹೆಚ್ಚು ವಿಕೆಟ್‌ಗಳನ್ನು ಪಡೆದಿರುವ ದಾಖಲೆ ಇದೀಗ ಬುಮ್ರಾ ಪಾಲಾಗಿದೆ. ಅವರ ಅತ್ಯುತ್ತಮ ಎಕಾನಮಿ ರೇಟ್ ಕೂಡ ಮುಂಬೈ ತಂಡದ ಯಶಸ್ಸಿಗೆ ಕಾರಣವಾಗಿದೆ.

ಪೃಥ್ವಿಶಂಕರ
|

Updated on: May 22, 2025 | 10:31 PM

ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತೊಮ್ಮೆ ಪ್ಲೇಆಫ್ ತಲುಪಿದೆ. ಆರಂಭಿಕ ಪಂದ್ಯಗಳಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದ ಈ ತಂಡ, ಕಳೆದ 8 ಪಂದ್ಯಗಳಲ್ಲಿ 7 ಪಂದ್ಯಗಳನ್ನು ಗೆಲ್ಲುವ ಮೂಲಕ ಪ್ಲೇಆಫ್‌ನಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿತು. ಮುಂಬೈ ತಂಡದ ಈ ಯಶಸ್ಸಿಗೆ ಕಾರಣ ಜಸ್ಪ್ರೀತ್ ಬುಮ್ರಾ ಎಂದರೆ ತಪ್ಪಾಗಲಾರದು.

ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತೊಮ್ಮೆ ಪ್ಲೇಆಫ್ ತಲುಪಿದೆ. ಆರಂಭಿಕ ಪಂದ್ಯಗಳಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದ ಈ ತಂಡ, ಕಳೆದ 8 ಪಂದ್ಯಗಳಲ್ಲಿ 7 ಪಂದ್ಯಗಳನ್ನು ಗೆಲ್ಲುವ ಮೂಲಕ ಪ್ಲೇಆಫ್‌ನಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿತು. ಮುಂಬೈ ತಂಡದ ಈ ಯಶಸ್ಸಿಗೆ ಕಾರಣ ಜಸ್ಪ್ರೀತ್ ಬುಮ್ರಾ ಎಂದರೆ ತಪ್ಪಾಗಲಾರದು.

1 / 6
 ಈ ಸೀಸನ್​ನಲ್ಲಿ ಇದುವರೆಗೆ 16 ವಿಕೆಟ್‌ಗಳನ್ನು ಕಬಳಿಸಿರುವ ಬುಮ್ರಾ, ಇದರೊಂದಿಗೆ ಐಪಿಎಲ್‌ನಲ್ಲಿ ದಾಖಲೆಯನ್ನು ಸಹ ಸೃಷ್ಟಿಸಿದ್ದಾರೆ. ಐಪಿಎಲ್ ಇತಿಹಾಸದಲ್ಲಿ ಸತತ 9 ಸೀಸನ್‌ಗಳಲ್ಲಿ ಅದ್ಭುತ ಪ್ರದರ್ಶನ ನೀಡಿದ ಏಕೈಕ ಬೌಲರ್ ಜಸ್ಪ್ರೀತ್ ಬುಮ್ರಾ. ಅವರು ಸತತ 9 ಸೀಸನ್​ಗಳಲ್ಲಿ 15 ಅಥವಾ ಅದಕ್ಕಿಂತ ಹೆಚ್ಚು ವಿಕೆಟ್‌ಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಸೀಸನ್​ನಲ್ಲಿ ಇದುವರೆಗೆ 16 ವಿಕೆಟ್‌ಗಳನ್ನು ಕಬಳಿಸಿರುವ ಬುಮ್ರಾ, ಇದರೊಂದಿಗೆ ಐಪಿಎಲ್‌ನಲ್ಲಿ ದಾಖಲೆಯನ್ನು ಸಹ ಸೃಷ್ಟಿಸಿದ್ದಾರೆ. ಐಪಿಎಲ್ ಇತಿಹಾಸದಲ್ಲಿ ಸತತ 9 ಸೀಸನ್‌ಗಳಲ್ಲಿ ಅದ್ಭುತ ಪ್ರದರ್ಶನ ನೀಡಿದ ಏಕೈಕ ಬೌಲರ್ ಜಸ್ಪ್ರೀತ್ ಬುಮ್ರಾ. ಅವರು ಸತತ 9 ಸೀಸನ್​ಗಳಲ್ಲಿ 15 ಅಥವಾ ಅದಕ್ಕಿಂತ ಹೆಚ್ಚು ವಿಕೆಟ್‌ಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

2 / 6
2016 ರಿಂದ ತಮ್ಮ ಯಶಸ್ಸಿನ ಓಟವನ್ನು ಮುಂದುವರೆಸಿರುವ ಬುಮ್ರಾ, ಅಂದಿನಿಂದ ಇಂದಿನವರೆಗೆ ಪ್ರತಿ ಆವೃತ್ತಿಯಲ್ಲೂ 15 ಅಥವಾ ಅದಕ್ಕಿಂತ ಹೆಚ್ಚು ವಿಕೆಟ್‌ಗಳನ್ನು ಪಡೆದಿದ್ದಾರೆ. 2017 ರಲ್ಲಿ 20 ವಿಕೆಟ್ ಕಬಳಿಸಿದ್ದ ಬುಮ್ರಾ, 2018 ರಲ್ಲಿ 17 ವಿಕೆಟ್ ಮತ್ತು 2019 ರಲ್ಲಿ 19 ವಿಕೆಟ್ ಕಬಳಿಸಿದ್ದರು.

2016 ರಿಂದ ತಮ್ಮ ಯಶಸ್ಸಿನ ಓಟವನ್ನು ಮುಂದುವರೆಸಿರುವ ಬುಮ್ರಾ, ಅಂದಿನಿಂದ ಇಂದಿನವರೆಗೆ ಪ್ರತಿ ಆವೃತ್ತಿಯಲ್ಲೂ 15 ಅಥವಾ ಅದಕ್ಕಿಂತ ಹೆಚ್ಚು ವಿಕೆಟ್‌ಗಳನ್ನು ಪಡೆದಿದ್ದಾರೆ. 2017 ರಲ್ಲಿ 20 ವಿಕೆಟ್ ಕಬಳಿಸಿದ್ದ ಬುಮ್ರಾ, 2018 ರಲ್ಲಿ 17 ವಿಕೆಟ್ ಮತ್ತು 2019 ರಲ್ಲಿ 19 ವಿಕೆಟ್ ಕಬಳಿಸಿದ್ದರು.

3 / 6
2020 ರಲ್ಲಿ 27 ವಿಕೆಟ್ ಉರುಳಿಸಿದ್ದ ಬುಮ್ರಾಗ ಇದು ಅವರ ಐಪಿಎಲ್ ವೃತ್ತಿಜೀವನದ ಅತ್ಯುತ್ತಮ ವರ್ಷವಾಗಿತ್ತು. ಆ ಬಳಿಕ 2021 ರಲ್ಲಿ 21 ವಿಕೆಟ್ ಪಡೆದಿದ್ದ ಬುಮ್ರಾ 2022 ರಲ್ಲಿ 15 ವಿಕೆಟ್, 2024 ರಲ್ಲಿ 20 ವಿಕೆಟ್ ಪಡೆದಿದ್ದಾರೆ. ಇದೀಗ ಈ ಸೀಸನ್​ನಲ್ಲಿ ಇದುವರೆಗೆ 16 ವಿಕೆಟ್ ಪಡೆದಿದ್ದಾರೆ.

2020 ರಲ್ಲಿ 27 ವಿಕೆಟ್ ಉರುಳಿಸಿದ್ದ ಬುಮ್ರಾಗ ಇದು ಅವರ ಐಪಿಎಲ್ ವೃತ್ತಿಜೀವನದ ಅತ್ಯುತ್ತಮ ವರ್ಷವಾಗಿತ್ತು. ಆ ಬಳಿಕ 2021 ರಲ್ಲಿ 21 ವಿಕೆಟ್ ಪಡೆದಿದ್ದ ಬುಮ್ರಾ 2022 ರಲ್ಲಿ 15 ವಿಕೆಟ್, 2024 ರಲ್ಲಿ 20 ವಿಕೆಟ್ ಪಡೆದಿದ್ದಾರೆ. ಇದೀಗ ಈ ಸೀಸನ್​ನಲ್ಲಿ ಇದುವರೆಗೆ 16 ವಿಕೆಟ್ ಪಡೆದಿದ್ದಾರೆ.

4 / 6
ಬುಮ್ರಾ ಕೇವಲ ವಿಕೆಟ್ ಪಡೆದಿದ್ದಾರೆ ಎಂದಲ್ಲ. ಇವರ ಎಕಾನಮಿ ರೇಟ್​ ಕೂಡ ಅದ್ಭುತವಾಗಿದೆ. ಕಳೆದ 9 ಸೀಸನ್‌ಗಳಲ್ಲಿ 5 ರಲ್ಲಿ ಬುಮ್ರಾ ಅವರ ಎಕಾನಮಿ ರೇಟ್ ಪ್ರತಿ ಓವರ್‌ಗೆ 7 ರನ್‌ಗಳಿಗಿಂತ ಕಡಿಮೆಯಿದೆ. ದೊಡ್ಡ ವಿಷಯವೆಂದರೆ ಬುಮ್ರಾ ಎಂದಿಗೂ 8 ರ ಎಕಾನಮಿ ರೇಟ್​ನಲ್ಲಿ ರನ್‌ಗಳನ್ನು ನೀಡಿಲ್ಲ. ಬುಮ್ರಾ ಅವರ ಈ ಅಂಕಿಅಂಶಗಳು ನಿಜಕ್ಕೂ ಅದ್ಭುತವಾಗಿವೆ.

ಬುಮ್ರಾ ಕೇವಲ ವಿಕೆಟ್ ಪಡೆದಿದ್ದಾರೆ ಎಂದಲ್ಲ. ಇವರ ಎಕಾನಮಿ ರೇಟ್​ ಕೂಡ ಅದ್ಭುತವಾಗಿದೆ. ಕಳೆದ 9 ಸೀಸನ್‌ಗಳಲ್ಲಿ 5 ರಲ್ಲಿ ಬುಮ್ರಾ ಅವರ ಎಕಾನಮಿ ರೇಟ್ ಪ್ರತಿ ಓವರ್‌ಗೆ 7 ರನ್‌ಗಳಿಗಿಂತ ಕಡಿಮೆಯಿದೆ. ದೊಡ್ಡ ವಿಷಯವೆಂದರೆ ಬುಮ್ರಾ ಎಂದಿಗೂ 8 ರ ಎಕಾನಮಿ ರೇಟ್​ನಲ್ಲಿ ರನ್‌ಗಳನ್ನು ನೀಡಿಲ್ಲ. ಬುಮ್ರಾ ಅವರ ಈ ಅಂಕಿಅಂಶಗಳು ನಿಜಕ್ಕೂ ಅದ್ಭುತವಾಗಿವೆ.

5 / 6
ಇನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 59 ರನ್‌ಗಳಿಂದ ಸೋಲಿಸುವ ಮೂಲಕ ಮುಂಬೈ ಪ್ಲೇ ಆಫ್​ಗೆ ಅರ್ಹತೆ ಪಡೆದಿದೆ. ಆರಂಭದಲ್ಲಿ ಆಡಿದ ಐದು ಪಂದ್ಯಗಳಲ್ಲಿ ಕೇವಲ ಒಂದು ಪಂದ್ಯವನ್ನು ಮಾತ್ರ ಗೆದ್ದಿತು. ಆದರೆ ನಂತರ ತಂಡವು ಅದ್ಭುತ ಪುನರಾಗಮನ ಮಾಡಿ ಸತತ 6 ಪಂದ್ಯಗಳನ್ನು ಗೆದ್ದು ನಾಕೌಟ್ ಸುತ್ತಿಗೆ ಎಂಟ್ರಿಕೊಟ್ಟಿದೆ.

ಇನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 59 ರನ್‌ಗಳಿಂದ ಸೋಲಿಸುವ ಮೂಲಕ ಮುಂಬೈ ಪ್ಲೇ ಆಫ್​ಗೆ ಅರ್ಹತೆ ಪಡೆದಿದೆ. ಆರಂಭದಲ್ಲಿ ಆಡಿದ ಐದು ಪಂದ್ಯಗಳಲ್ಲಿ ಕೇವಲ ಒಂದು ಪಂದ್ಯವನ್ನು ಮಾತ್ರ ಗೆದ್ದಿತು. ಆದರೆ ನಂತರ ತಂಡವು ಅದ್ಭುತ ಪುನರಾಗಮನ ಮಾಡಿ ಸತತ 6 ಪಂದ್ಯಗಳನ್ನು ಗೆದ್ದು ನಾಕೌಟ್ ಸುತ್ತಿಗೆ ಎಂಟ್ರಿಕೊಟ್ಟಿದೆ.

6 / 6
Follow us
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ