AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Champions Trophy 2025: ಭಾರತ vs ಪಾಕಿಸ್ತಾನ್ ಪಂದ್ಯಕ್ಕೆ ಜಸ್​ಪ್ರೀತ್ ಬುಮ್ರಾ ಅಲಭ್ಯ

Jasprit Bumrah is set to miss Champions Trophy 2025: ಬಹುನಿರೀಕ್ಷಿತ ಚಾಂಪಿಯನ್ಸ್ ಟ್ರೋಫಿ ಟೂರ್ನಿಯು ಫೆಬ್ರವರಿ 19 ರಿಂದ ಶುರುವಾಗಲಿದೆ. 8 ತಂಡಗಳ ನಡುವಣ ಈ ಕದನದ ಆರಂಭಿಕ ಪಂದ್ಯಗಳಿಗೆ ಭಾರತ ತಂಡದ ಪ್ರಮುಖ ವೇಗಿ ಜಸ್​ಪ್ರೀತ್ ಬುಮ್ರಾ ಅಲಭ್ಯರಾಗುವುದು ಖಚಿತವಾಗಿದೆ. ಅಲ್ಲದೆ ಅವರು ಕೇವಲ 2 ಮ್ಯಾಚ್​​ಗಳಲ್ಲಿ ಮಾತ್ರ ಕಣಕ್ಕಿಳಿಯುವ ಸಾಧ್ಯತೆಯಿದೆ.

ಝಾಹಿರ್ ಯೂಸುಫ್
|

Updated on:Jan 12, 2025 | 9:40 AM

Share
ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ ಚಾಂಪಿಯನ್ಸ್ ಟ್ರೋಫಿಯ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗುವುದು ಖಚಿತವಾಗಿದೆ. ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಅವರು ಚಾಂಪಿಯನ್ಸ್ ಟ್ರೋಫಿಯ ಮೊದಲ ಸುತ್ತಿನ ಪಂದ್ಯಗಳಿಂದ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ.

ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ ಚಾಂಪಿಯನ್ಸ್ ಟ್ರೋಫಿಯ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗುವುದು ಖಚಿತವಾಗಿದೆ. ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಅವರು ಚಾಂಪಿಯನ್ಸ್ ಟ್ರೋಫಿಯ ಮೊದಲ ಸುತ್ತಿನ ಪಂದ್ಯಗಳಿಂದ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ.

1 / 7
ಸಿಡ್ನಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ 5ನೇ ಟೆಸ್ಟ್ ಪಂದ್ಯದ ವೇಳೆ ಜಸ್​ಪ್ರೀತ್ ಬುಮ್ರಾ ಬೆನ್ನಿನ ಸ್ನಾಯು ಸೆಳೆತಕ್ಕೆ ಒಳಗಾಗಿದ್ದರು. ಹೀಗಾಗಿ ಅರ್ಧದಲ್ಲೇ ಮೈದಾನ ತೊರೆದಿದ್ದರು. ಅಷ್ಟೇ ಅಲ್ಲದೆ ದ್ವಿತೀಯ ಇನಿಂಗ್ಸ್​ನಲ್ಲಿ ಬೌಲಿಂಗ್ ಮಾಡಿರಲಿಲ್ಲ. ಇದೀಗ ವೈದ್ಯಕೀಯ ಪರೀಕ್ಷೆಗೆ ಒಳಗಾಗಿರುವ ಬುಮ್ರಾಗೆ ಅವರ ಬೆನ್ನಿನಲ್ಲಿ ಊತ ಇರುವುದು ಕಂಡು ಬಂದಿದೆ.

ಸಿಡ್ನಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ 5ನೇ ಟೆಸ್ಟ್ ಪಂದ್ಯದ ವೇಳೆ ಜಸ್​ಪ್ರೀತ್ ಬುಮ್ರಾ ಬೆನ್ನಿನ ಸ್ನಾಯು ಸೆಳೆತಕ್ಕೆ ಒಳಗಾಗಿದ್ದರು. ಹೀಗಾಗಿ ಅರ್ಧದಲ್ಲೇ ಮೈದಾನ ತೊರೆದಿದ್ದರು. ಅಷ್ಟೇ ಅಲ್ಲದೆ ದ್ವಿತೀಯ ಇನಿಂಗ್ಸ್​ನಲ್ಲಿ ಬೌಲಿಂಗ್ ಮಾಡಿರಲಿಲ್ಲ. ಇದೀಗ ವೈದ್ಯಕೀಯ ಪರೀಕ್ಷೆಗೆ ಒಳಗಾಗಿರುವ ಬುಮ್ರಾಗೆ ಅವರ ಬೆನ್ನಿನಲ್ಲಿ ಊತ ಇರುವುದು ಕಂಡು ಬಂದಿದೆ.

2 / 7
ಹೀಗಾಗಿ ಜಸ್​ಪ್ರೀತ್ ಬುಮ್ರಾಗೆ ವೈದ್ಯರು ಹೆಚ್ಚಿನ ವಿಶ್ರಾಂತಿ ಸೂಚಿಸಿದ್ದಾರೆ. ಇದೇ ಕಾರಣದಿಂದಾಗಿ ಅವರು ಚಾಂಪಿಯನ್ಸ್ ಟ್ರೋಫಿಯ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ. ಅತ್ತ ಟೀಮ್ ಇಂಡಿಯಾ ಮೊದಲ ಸುತ್ತಿನಲ್ಲಿ ಒಟ್ಟು ಮೂರು ಪಂದ್ಯಗಳನ್ನಾಡಲಿದೆ.

ಹೀಗಾಗಿ ಜಸ್​ಪ್ರೀತ್ ಬುಮ್ರಾಗೆ ವೈದ್ಯರು ಹೆಚ್ಚಿನ ವಿಶ್ರಾಂತಿ ಸೂಚಿಸಿದ್ದಾರೆ. ಇದೇ ಕಾರಣದಿಂದಾಗಿ ಅವರು ಚಾಂಪಿಯನ್ಸ್ ಟ್ರೋಫಿಯ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ. ಅತ್ತ ಟೀಮ್ ಇಂಡಿಯಾ ಮೊದಲ ಸುತ್ತಿನಲ್ಲಿ ಒಟ್ಟು ಮೂರು ಪಂದ್ಯಗಳನ್ನಾಡಲಿದೆ.

3 / 7
ಫೆಬ್ರವರಿ 20 ರಂದು ನಡೆಯಲಿರುವ ತನ್ನ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಬಾಂಗ್ಲಾದೇಶ್ ತಂಡವನ್ನು ಎದುರಿಸಲಿದೆ. ಈ ಪಂದ್ಯಕ್ಕೆ ದುಬೈನ ಇಂಟರ್​ನ್ಯಾಷನಲ್ ಸ್ಟೇಡಿಯಂ ಆತಿಥ್ಯವಹಿಸಲಿದೆ. ಈ ಪಂದ್ಯದಲ್ಲಿ ಬುಮ್ರಾ ಕಣಕ್ಕಿಳಿಯುವುದಿಲ್ಲ.

ಫೆಬ್ರವರಿ 20 ರಂದು ನಡೆಯಲಿರುವ ತನ್ನ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಬಾಂಗ್ಲಾದೇಶ್ ತಂಡವನ್ನು ಎದುರಿಸಲಿದೆ. ಈ ಪಂದ್ಯಕ್ಕೆ ದುಬೈನ ಇಂಟರ್​ನ್ಯಾಷನಲ್ ಸ್ಟೇಡಿಯಂ ಆತಿಥ್ಯವಹಿಸಲಿದೆ. ಈ ಪಂದ್ಯದಲ್ಲಿ ಬುಮ್ರಾ ಕಣಕ್ಕಿಳಿಯುವುದಿಲ್ಲ.

4 / 7
ಇನ್ನು ಟೀಮ್ ಇಂಡಿಯಾದ 2ನೇ ಎದುರಾಳಿ ಪಾಕಿಸ್ತಾನ್. ಹೈವೋಲ್ಟೇಜ್ ಪೈಪೋಟಿಗೆ ಸಾಕ್ಷಿಯಾಗಲಿರುವ ಈ ಪಂದ್ಯವು ಫೆಬ್ರವರಿ 23 ರಂದು ನಡೆಯಲಿದೆ. ದುಬೈ ಅಂತಾರಾಷ್ಟ್ಟೀಯ ಸ್ಟೇಡಿಯಂನಲ್ಲೇ ಜರುಗಲಿರುವ ಈ ಪಂದ್ಯಕ್ಕೂ ಜಸ್​ಪ್ರೀತ್ ಬುಮ್ರಾ ಅಲಭ್ಯರಾಗಲಿದ್ದಾರೆ.

ಇನ್ನು ಟೀಮ್ ಇಂಡಿಯಾದ 2ನೇ ಎದುರಾಳಿ ಪಾಕಿಸ್ತಾನ್. ಹೈವೋಲ್ಟೇಜ್ ಪೈಪೋಟಿಗೆ ಸಾಕ್ಷಿಯಾಗಲಿರುವ ಈ ಪಂದ್ಯವು ಫೆಬ್ರವರಿ 23 ರಂದು ನಡೆಯಲಿದೆ. ದುಬೈ ಅಂತಾರಾಷ್ಟ್ಟೀಯ ಸ್ಟೇಡಿಯಂನಲ್ಲೇ ಜರುಗಲಿರುವ ಈ ಪಂದ್ಯಕ್ಕೂ ಜಸ್​ಪ್ರೀತ್ ಬುಮ್ರಾ ಅಲಭ್ಯರಾಗಲಿದ್ದಾರೆ.

5 / 7
ಹಾಗೆಯೇ ಭಾರತ ತಂಡವು ತನ್ನ ಕೊನೆಯ ಲೀಗ್ ಮ್ಯಾಚ್​ನಲ್ಲಿ ನ್ಯೂಝಿಲೆಂಡ್ ತಂಡವನ್ನು ಎದುರಿಸಲಿದೆ. ಈ ಪಂದ್ಯವು ಮಾರ್ಚ್ 2 ರಂದು ದುಬೈನಲ್ಲೇ ನಡೆಯಲಿದೆ. ಈ ಮೂರು ಪಂದ್ಯಗಳಿಂದ ಜಸ್​ಪ್ರೀತ್ ಬುಮ್ರಾ ಹೊರಗುಳಿಯುವುದು ಬಹುತೇಕ ಖಚಿತವಾಗಿದೆ.

ಹಾಗೆಯೇ ಭಾರತ ತಂಡವು ತನ್ನ ಕೊನೆಯ ಲೀಗ್ ಮ್ಯಾಚ್​ನಲ್ಲಿ ನ್ಯೂಝಿಲೆಂಡ್ ತಂಡವನ್ನು ಎದುರಿಸಲಿದೆ. ಈ ಪಂದ್ಯವು ಮಾರ್ಚ್ 2 ರಂದು ದುಬೈನಲ್ಲೇ ನಡೆಯಲಿದೆ. ಈ ಮೂರು ಪಂದ್ಯಗಳಿಂದ ಜಸ್​ಪ್ರೀತ್ ಬುಮ್ರಾ ಹೊರಗುಳಿಯುವುದು ಬಹುತೇಕ ಖಚಿತವಾಗಿದೆ.

6 / 7
ಇನ್ನು ಮಾರ್ಚ್ ಮೊದಲ ವಾರದ ವೇಳೆಗೆ ಜಸ್​ಪ್ರೀತ್ ಬುಮ್ರಾ ಸಂಪೂರ್ಣವಾಗಿ ಫಿಟ್ ಆಗುವ ನಿರೀಕ್ಷೆಯಿದ್ದು, ಹೀಗಾಗಿ ನಾಕೌಟ್ ಹಂತದಲ್ಲಿ ಕಣಕ್ಕಿಳಿಯುವ ಸಾಧ್ಯತೆಯಿದೆ. ಅಂದರೆ ಸೆಮಿಫೈನಲ್ ಮತ್ತು ಫೈನಲ್ ಪಂದ್ಯಗಳಿಗೆ ಮಾತ್ರ ಜಸ್​ಪ್ರೀತ್ ಬುಮ್ರಾ ಲಭ್ಯರಿರುವ ಸಾಧ್ಯತೆ ಹೆಚ್ಚು.

ಇನ್ನು ಮಾರ್ಚ್ ಮೊದಲ ವಾರದ ವೇಳೆಗೆ ಜಸ್​ಪ್ರೀತ್ ಬುಮ್ರಾ ಸಂಪೂರ್ಣವಾಗಿ ಫಿಟ್ ಆಗುವ ನಿರೀಕ್ಷೆಯಿದ್ದು, ಹೀಗಾಗಿ ನಾಕೌಟ್ ಹಂತದಲ್ಲಿ ಕಣಕ್ಕಿಳಿಯುವ ಸಾಧ್ಯತೆಯಿದೆ. ಅಂದರೆ ಸೆಮಿಫೈನಲ್ ಮತ್ತು ಫೈನಲ್ ಪಂದ್ಯಗಳಿಗೆ ಮಾತ್ರ ಜಸ್​ಪ್ರೀತ್ ಬುಮ್ರಾ ಲಭ್ಯರಿರುವ ಸಾಧ್ಯತೆ ಹೆಚ್ಚು.

7 / 7

Published On - 9:10 am, Sun, 12 January 25

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ