AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಜಸ್​ಪ್ರೀತ್ ಬುಮ್ರಾ ಔಟ್: ಎಡಗೈ ವೇಗಿಗೆ ಚೊಚ್ಚಲ ಚಾನ್ಸ್ 

India vs England 5th Test: ಭಾರತ ಮತ್ತು ಇಂಗ್ಲೆಂಡ್ ನಡುವಣ 5ನೇ ಟೆಸ್ಟ್ ಪಂದ್ಯವು ಗುರುವಾರದಿಂದ (ಜುಲೈ 31) ಶುರುವಾಗಲಿದೆ. ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯಲಿರುವ ಈ ನಿರ್ಣಾಯಕ ಪಂದ್ಯದಿಂದ ಟೀಮ್ ಇಂಡಿಯಾದ ಪ್ರಮುಖ ವೇಗಿ ಜಸ್​ಪ್ರೀತ್ ಬುಮ್ರಾ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ.

ಝಾಹಿರ್ ಯೂಸುಫ್
|

Updated on: Jul 30, 2025 | 8:57 AM

Share
ಭಾರತ ಮತ್ತು ಇಂಗ್ಲೆಂಡ್ ನಡುವಣ 5ನೇ ಟೆಸ್ಟ್ ಪಂದ್ಯದಿಂದ ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ ಹೊರಗುಳಿಯುವುದು ಬಹುತೇಕ ಖಚಿತವಾಗಿದೆ. ಟೀಮ್ ಇಂಡಿಯಾ ಮೂಲಗಳ ಮಾಹಿತಿ ಪ್ರಕಾರ, ಕೊನೆಯ ಟೆಸ್ಟ್ ಪಂದ್ಯದ ವೇಳೆ ಬುಮ್ರಾ ವಿಶ್ರಾಂತಿ ಪಡೆಯಲಿದ್ದಾರೆ. ಅತ್ತ ಬುಮ್ರಾ ಹೊರಗುಳಿಯುತ್ತಿರುವ ಕಾರಣ ಅವರ ಬದಲಿಗೆ ಮತ್ತೋರ್ವ ವೇಗಿ ಅಂತಿಮ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ ಎಂದು ತಿಳಿದು ಬಂದಿದೆ.

ಭಾರತ ಮತ್ತು ಇಂಗ್ಲೆಂಡ್ ನಡುವಣ 5ನೇ ಟೆಸ್ಟ್ ಪಂದ್ಯದಿಂದ ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ ಹೊರಗುಳಿಯುವುದು ಬಹುತೇಕ ಖಚಿತವಾಗಿದೆ. ಟೀಮ್ ಇಂಡಿಯಾ ಮೂಲಗಳ ಮಾಹಿತಿ ಪ್ರಕಾರ, ಕೊನೆಯ ಟೆಸ್ಟ್ ಪಂದ್ಯದ ವೇಳೆ ಬುಮ್ರಾ ವಿಶ್ರಾಂತಿ ಪಡೆಯಲಿದ್ದಾರೆ. ಅತ್ತ ಬುಮ್ರಾ ಹೊರಗುಳಿಯುತ್ತಿರುವ ಕಾರಣ ಅವರ ಬದಲಿಗೆ ಮತ್ತೋರ್ವ ವೇಗಿ ಅಂತಿಮ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ ಎಂದು ತಿಳಿದು ಬಂದಿದೆ.

1 / 5
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಜಸ್​ಪ್ರೀತ್ ಬುಮ್ರಾ ಕೇವಲ 3 ಮ್ಯಾಚ್​ಗಳನ್ನು ಮಾತ್ರ ಆಡಲಿದ್ದಾರೆ ಎನ್ನಲಾಗಿತ್ತು. ಬೆನ್ನು ನೋವಿನ ಸಮಸ್ಯೆಯ ಕಾರಣ ಅವರಿಗೆ ಹೆಚ್ಚಿನ ವಿಶ್ರಾಂತಿ ನೀಡಲು ಬಿಸಿಸಿಐ ನಿರ್ಧರಿಸಿತ್ತು. ಅದರ ಭಾಗವಾಗಿ ಬರ್ಮಿಂಗ್​ಹ್ಯಾಮ್​ನಲ್ಲಿ ನಡೆದ ದ್ವಿತೀಯ ಟೆಸ್ಟ್ ಪಂದ್ಯದ ವೇಳೆ ವಿಶ್ರಾಂತಿ ನೀಡಲಾಗಿತ್ತು. ಆ ಬಳಿಕ 3ನೇ ಮತ್ತು 4ನೇ ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಬುಮ್ರಾಗೆ ಇದೀಗ ಮತ್ತೆ ರೆಸ್ಟ್ ನೀಡಲು ನಿರ್ಧರಿಸಲಾಗಿದೆ.

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಜಸ್​ಪ್ರೀತ್ ಬುಮ್ರಾ ಕೇವಲ 3 ಮ್ಯಾಚ್​ಗಳನ್ನು ಮಾತ್ರ ಆಡಲಿದ್ದಾರೆ ಎನ್ನಲಾಗಿತ್ತು. ಬೆನ್ನು ನೋವಿನ ಸಮಸ್ಯೆಯ ಕಾರಣ ಅವರಿಗೆ ಹೆಚ್ಚಿನ ವಿಶ್ರಾಂತಿ ನೀಡಲು ಬಿಸಿಸಿಐ ನಿರ್ಧರಿಸಿತ್ತು. ಅದರ ಭಾಗವಾಗಿ ಬರ್ಮಿಂಗ್​ಹ್ಯಾಮ್​ನಲ್ಲಿ ನಡೆದ ದ್ವಿತೀಯ ಟೆಸ್ಟ್ ಪಂದ್ಯದ ವೇಳೆ ವಿಶ್ರಾಂತಿ ನೀಡಲಾಗಿತ್ತು. ಆ ಬಳಿಕ 3ನೇ ಮತ್ತು 4ನೇ ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಬುಮ್ರಾಗೆ ಇದೀಗ ಮತ್ತೆ ರೆಸ್ಟ್ ನೀಡಲು ನಿರ್ಧರಿಸಲಾಗಿದೆ.

2 / 5
ಇತ್ತ ಜಸ್​ಪ್ರೀತ್ ಬುಮ್ರಾ ಕೊನೆಯ ಟೆಸ್ಟ್ ಪಂದ್ಯದಿಂದ ಹೊರಗುಳಿತ್ತಿರುವ ಕಾರಣ, ಅವರ ಸ್ಥಾನದಲ್ಲಿ ಎಡಗೈ ವೇಗಿ ಅರ್ಷದೀಪ್ ಸಿಂಗ್ ಪಾದಾರ್ಪಣೆ ಮಾಡಲಿದ್ದಾರೆ ಎಂದು ಟೈಮ್ ಆಫ್ ಇಂಡಿಯಾ ವರದಿ ಮಾಡಿದೆ. ಹೀಗಾಗಿ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯಲಿರುವ ಅಂತಿಮ ಪಂದ್ಯದ ಮೂಲಕ ಅರ್ಷದೀಪ್ ಟೆಸ್ಟ್ ಕೆರಿಯರ್ ಆರಂಭಿಸುವುದನ್ನು ಎದುರು ನೋಡಬಹುದು.

ಇತ್ತ ಜಸ್​ಪ್ರೀತ್ ಬುಮ್ರಾ ಕೊನೆಯ ಟೆಸ್ಟ್ ಪಂದ್ಯದಿಂದ ಹೊರಗುಳಿತ್ತಿರುವ ಕಾರಣ, ಅವರ ಸ್ಥಾನದಲ್ಲಿ ಎಡಗೈ ವೇಗಿ ಅರ್ಷದೀಪ್ ಸಿಂಗ್ ಪಾದಾರ್ಪಣೆ ಮಾಡಲಿದ್ದಾರೆ ಎಂದು ಟೈಮ್ ಆಫ್ ಇಂಡಿಯಾ ವರದಿ ಮಾಡಿದೆ. ಹೀಗಾಗಿ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯಲಿರುವ ಅಂತಿಮ ಪಂದ್ಯದ ಮೂಲಕ ಅರ್ಷದೀಪ್ ಟೆಸ್ಟ್ ಕೆರಿಯರ್ ಆರಂಭಿಸುವುದನ್ನು ಎದುರು ನೋಡಬಹುದು.

3 / 5
ಇದಕ್ಕೂ ಮುನ್ನ ಅರ್ಷದೀಪ್ ಸಿಂಗ್ ಭಾರತದ ಪರ 63 ಟಿ20 ಹಾಗೂ 9 ಏಕದಿನ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ ಒಟ್ಟು 113 ವಿಕೆಟ್ ಕಬಳಿಸಿದ್ದಾರೆ. ಇದಾಗ್ಯೂ ಅವರಿಗೆ ರೆಡ್ ಬಾಲ್ ಕ್ರಿಕೆಟ್​ನಲ್ಲಿ ಪಾದಾರ್ಪಣೆ ಮಾಡಲು ಅವಕಾಶ ಸಿಕ್ಕಿರಲಿಲ್ಲ. ಇದೀಗ ಜಸ್​ಪ್ರೀತ್ ಬುಮ್ರಾ ಅವರ ಅನುಪಸ್ಥಿತಿಯಲ್ಲಿ ಅರ್ಷದೀಪ್ ಸಿಂಗ್​ಗೆ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ.

ಇದಕ್ಕೂ ಮುನ್ನ ಅರ್ಷದೀಪ್ ಸಿಂಗ್ ಭಾರತದ ಪರ 63 ಟಿ20 ಹಾಗೂ 9 ಏಕದಿನ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ ಒಟ್ಟು 113 ವಿಕೆಟ್ ಕಬಳಿಸಿದ್ದಾರೆ. ಇದಾಗ್ಯೂ ಅವರಿಗೆ ರೆಡ್ ಬಾಲ್ ಕ್ರಿಕೆಟ್​ನಲ್ಲಿ ಪಾದಾರ್ಪಣೆ ಮಾಡಲು ಅವಕಾಶ ಸಿಕ್ಕಿರಲಿಲ್ಲ. ಇದೀಗ ಜಸ್​ಪ್ರೀತ್ ಬುಮ್ರಾ ಅವರ ಅನುಪಸ್ಥಿತಿಯಲ್ಲಿ ಅರ್ಷದೀಪ್ ಸಿಂಗ್​ಗೆ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ.

4 / 5
ಭಾರತ ಟೆಸ್ಟ್ ತಂಡ: ಶುಭ್​ಮನ್ ಗಿಲ್ (ನಾಯಕ), ರಿಷಭ್ ಪಂತ್ (ಉಪನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ಅಭಿಮನ್ಯು ಈಶ್ವರನ್, ಕರುಣ್ ನಾಯರ್, ರವೀಂದ್ರ ಜಡೇಜಾ, ಧ್ರುವ್ ಜುರೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಆಕಾಶ್ ದೀಪ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಅನ್ಶುಲ್ ಕಂಬೋಜ್, ಎನ್​. ಜಗದೀಸನ್ (ವಿಕೆಟ್ ಕೀಪರ್).

ಭಾರತ ಟೆಸ್ಟ್ ತಂಡ: ಶುಭ್​ಮನ್ ಗಿಲ್ (ನಾಯಕ), ರಿಷಭ್ ಪಂತ್ (ಉಪನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ಅಭಿಮನ್ಯು ಈಶ್ವರನ್, ಕರುಣ್ ನಾಯರ್, ರವೀಂದ್ರ ಜಡೇಜಾ, ಧ್ರುವ್ ಜುರೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಆಕಾಶ್ ದೀಪ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಅನ್ಶುಲ್ ಕಂಬೋಜ್, ಎನ್​. ಜಗದೀಸನ್ (ವಿಕೆಟ್ ಕೀಪರ್).

5 / 5
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ