AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jasprit Bumrah: ಟೀಂ ಇಂಡಿಯಾಕ್ಕೆ ಬುಮ್ರಾ ಕಂಬ್ಯಾಕ್ ಯಾವಾಗ? ಇಲ್ಲಿದೆ ಬಿಗ್ ಅಪ್​ಡೇಟ್

Jasprit Bumrah: ಟೀಂ ಇಂಡಿಯಾದ ಪ್ರಮುಖ ಬೌಲಿಂಗ್ ಅಸ್ತ್ರ, ಯಾರ್ಕರ್ ಕಿಂಗ್ ಜಸ್ಪ್ರಿತ್ ಬುಮ್ರಾ, ಏಷ್ಯಾಕಪ್​ಗೂ ಮುನ್ನ ನಡೆಯುವ ಐರ್ಲೆಂಡ್ ವಿರುದ್ಧದ ಸರಣಿ ಮೂಲಕ ಟೀಂ ಇಂಡಿಯಾ ಸೇರಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.

ಪೃಥ್ವಿಶಂಕರ
|

Updated on: Jun 18, 2023 | 1:47 PM

Share
ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸೋತು ಭಾರಿ ಟೀಕೆಗೆ ಗುರಿಯಾಗಿದ್ದ ಟೀಂ ಇಂಡಿಯಾ ಒಂದು ತಿಂಗಳ ಬಳಿಕ ವಿಂಡೀಸ್ ಪ್ರವಾಸ ಮಾಡಲಿದೆ. ಈ ಪ್ರವಾಸದೊಂದಿಗೆ ಈ ಹಿಂದೆ ಇಂಜುರಿಯಿಂದಾಗಿ ತಂಡದಿಂದ ಹೊರಗುಳಿದಿದ್ದ ಹಲವು ಸ್ಟಾರ್ ಕ್ರಿಕೆಟಿಗರು ಟೀಂ ಇಂಡಿಯಾಕ್ಕೆ ಮರಳಲು ಸಿದ್ಧರಾಗಿದ್ದಾರೆ.

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸೋತು ಭಾರಿ ಟೀಕೆಗೆ ಗುರಿಯಾಗಿದ್ದ ಟೀಂ ಇಂಡಿಯಾ ಒಂದು ತಿಂಗಳ ಬಳಿಕ ವಿಂಡೀಸ್ ಪ್ರವಾಸ ಮಾಡಲಿದೆ. ಈ ಪ್ರವಾಸದೊಂದಿಗೆ ಈ ಹಿಂದೆ ಇಂಜುರಿಯಿಂದಾಗಿ ತಂಡದಿಂದ ಹೊರಗುಳಿದಿದ್ದ ಹಲವು ಸ್ಟಾರ್ ಕ್ರಿಕೆಟಿಗರು ಟೀಂ ಇಂಡಿಯಾಕ್ಕೆ ಮರಳಲು ಸಿದ್ಧರಾಗಿದ್ದಾರೆ.

1 / 5
ಅವರುಗಳಲ್ಲಿ ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್​ರಂತಹ ಕ್ರಿಕೆಟಿಗರು ಸೇರಿದ್ದಾರೆ. ಇದೀಗ ಹೊರಬಿದ್ದಿರುವ ಮಾಹಿತಿ ಪ್ರಕಾರ ಟೀಂ ಇಂಡಿಯಾದ ಪ್ರಮುಖ ಬೌಲಿಂಗ್ ಅಸ್ತ್ರ, ಯಾರ್ಕರ್ ಕಿಂಗ್ ಜಸ್ಪ್ರಿತ್ ಬುಮ್ರಾ, ಏಷ್ಯಾಕಪ್​ಗೂ ಮುನ್ನ ನಡೆಯುವ ಐರ್ಲೆಂಡ್ ವಿರುದ್ಧದ ಸರಣಿ ಮೂಲಕ ಟೀಂ ಇಂಡಿಯಾ ಸೇರಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.

ಅವರುಗಳಲ್ಲಿ ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್​ರಂತಹ ಕ್ರಿಕೆಟಿಗರು ಸೇರಿದ್ದಾರೆ. ಇದೀಗ ಹೊರಬಿದ್ದಿರುವ ಮಾಹಿತಿ ಪ್ರಕಾರ ಟೀಂ ಇಂಡಿಯಾದ ಪ್ರಮುಖ ಬೌಲಿಂಗ್ ಅಸ್ತ್ರ, ಯಾರ್ಕರ್ ಕಿಂಗ್ ಜಸ್ಪ್ರಿತ್ ಬುಮ್ರಾ, ಏಷ್ಯಾಕಪ್​ಗೂ ಮುನ್ನ ನಡೆಯುವ ಐರ್ಲೆಂಡ್ ವಿರುದ್ಧದ ಸರಣಿ ಮೂಲಕ ಟೀಂ ಇಂಡಿಯಾ ಸೇರಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.

2 / 5
ಈ ಬಗ್ಗೆ ನ್ಯೂಸ್ 18 ವರದಿ ಮಾಡಿದ್ದು, ಆಗಸ್ಟ್‌ನಲ್ಲಿ ಟೀಂ ಇಂಡಿಯಾ ಐರ್ಲೆಂಡ್ ಪ್ರವಾಸ ಮಾಡಲಿದ್ದು, ಈ ಪ್ರವಾಸದಲ್ಲಿ ಬುಮ್ರಾ ಟೀಂ ಇಂಡಿಯಾವನ್ನು ಸೇರಿಕೊಳ್ಳಲಿದ್ದಾರೆ. ವೆಸ್ಟ್ ಇಂಡೀಸ್ ಪ್ರವಾಸ ಮುಗಿದ ಬಳಿಕ ಮೆನ್ ಇನ್ ಬ್ಲೂ ತಂಡ ಮೂರು ಪಂದ್ಯಗಳ ಟಿ20 ಸರಣಿಗೆ ಐರ್ಲೆಂಡ್​ಗೆ ಪ್ರಯಾಣಿಸಲಿದೆ. ಈ ಪ್ರವಾಸವೂ ಆಗಸ್ಟ್ 18 ರಿಂದ ಆರಂಭವಾಗಿ 20, ಮತ್ತು 23 ರಂದು ಅಂತ್ಯಗೊಳ್ಳಲಿದೆ ಎಂದು ತನ್ನ ವರದಿಯಲ್ಲಿ ತಿಳಿಸಿದೆ.

ಈ ಬಗ್ಗೆ ನ್ಯೂಸ್ 18 ವರದಿ ಮಾಡಿದ್ದು, ಆಗಸ್ಟ್‌ನಲ್ಲಿ ಟೀಂ ಇಂಡಿಯಾ ಐರ್ಲೆಂಡ್ ಪ್ರವಾಸ ಮಾಡಲಿದ್ದು, ಈ ಪ್ರವಾಸದಲ್ಲಿ ಬುಮ್ರಾ ಟೀಂ ಇಂಡಿಯಾವನ್ನು ಸೇರಿಕೊಳ್ಳಲಿದ್ದಾರೆ. ವೆಸ್ಟ್ ಇಂಡೀಸ್ ಪ್ರವಾಸ ಮುಗಿದ ಬಳಿಕ ಮೆನ್ ಇನ್ ಬ್ಲೂ ತಂಡ ಮೂರು ಪಂದ್ಯಗಳ ಟಿ20 ಸರಣಿಗೆ ಐರ್ಲೆಂಡ್​ಗೆ ಪ್ರಯಾಣಿಸಲಿದೆ. ಈ ಪ್ರವಾಸವೂ ಆಗಸ್ಟ್ 18 ರಿಂದ ಆರಂಭವಾಗಿ 20, ಮತ್ತು 23 ರಂದು ಅಂತ್ಯಗೊಳ್ಳಲಿದೆ ಎಂದು ತನ್ನ ವರದಿಯಲ್ಲಿ ತಿಳಿಸಿದೆ.

3 / 5
ಈ ಸರಣಿ ಬಳಿಕ ಟೀಂ ಇಂಡಿಯಾ ಏಷ್ಯಾಕಪ್​ಗಾಗಿ ಶ್ರೀಲಂಕಾ ಪ್ರವಾಸ ಮಾಡಬೇಕಾಗಿದೆ. ಹೀಗಾಗಿ ಏಷ್ಯಾಕಪ್ ತಯಾರಿಯ ದೃಷ್ಟಿಯಿಂದ ಬುಮ್ರಾ ಐರ್ಲೆಂಡ್ ವಿರುದ್ಧ ಸರಣಿ ಆಡಲಿದ್ದಾರೆ. ಇಂಜುರಿಯಿಂದಾಗಿ ಬುಮ್ರಾ ಕಳೆದ ವರ್ಷ ಏಷ್ಯಾಕಪ್ ಮತ್ತು ಟಿ 20 ವಿಶ್ವಕಪ್‌ನಿಂದ ಹೊರಗುಳಿದಿದ್ದರು. ಹಾಗೆಯೇ ಐಪಿಎಲ್, ಡಬ್ಲ್ಯುಟಿಸಿಯಲ್ಲೂ ಆಡಲಿಲ್ಲ. ಆದರೆ ಈ ವರ್ಷದ ಅಕ್ಟೋಬರ್ ಮತ್ತು ನವೆಂಬರ್ ತಿಂಗಳಲ್ಲಿ ಭಾರತದಲ್ಲಿ ನಡೆಯಲಿರುವ ವಿಶ್ವಕಪ್‌ನಲ್ಲಿ ಭಾಗವಹಿಸಲು ಬುಮ್ರಾ ಸಂಪೂರ್ಣ ಫಿಟ್ ಆಗುವ ನಿರೀಕ್ಷೆಯಿದೆ.

ಈ ಸರಣಿ ಬಳಿಕ ಟೀಂ ಇಂಡಿಯಾ ಏಷ್ಯಾಕಪ್​ಗಾಗಿ ಶ್ರೀಲಂಕಾ ಪ್ರವಾಸ ಮಾಡಬೇಕಾಗಿದೆ. ಹೀಗಾಗಿ ಏಷ್ಯಾಕಪ್ ತಯಾರಿಯ ದೃಷ್ಟಿಯಿಂದ ಬುಮ್ರಾ ಐರ್ಲೆಂಡ್ ವಿರುದ್ಧ ಸರಣಿ ಆಡಲಿದ್ದಾರೆ. ಇಂಜುರಿಯಿಂದಾಗಿ ಬುಮ್ರಾ ಕಳೆದ ವರ್ಷ ಏಷ್ಯಾಕಪ್ ಮತ್ತು ಟಿ 20 ವಿಶ್ವಕಪ್‌ನಿಂದ ಹೊರಗುಳಿದಿದ್ದರು. ಹಾಗೆಯೇ ಐಪಿಎಲ್, ಡಬ್ಲ್ಯುಟಿಸಿಯಲ್ಲೂ ಆಡಲಿಲ್ಲ. ಆದರೆ ಈ ವರ್ಷದ ಅಕ್ಟೋಬರ್ ಮತ್ತು ನವೆಂಬರ್ ತಿಂಗಳಲ್ಲಿ ಭಾರತದಲ್ಲಿ ನಡೆಯಲಿರುವ ವಿಶ್ವಕಪ್‌ನಲ್ಲಿ ಭಾಗವಹಿಸಲು ಬುಮ್ರಾ ಸಂಪೂರ್ಣ ಫಿಟ್ ಆಗುವ ನಿರೀಕ್ಷೆಯಿದೆ.

4 / 5
"ಜಸ್ಪ್ರೀತ್ ಬುಮ್ರಾ ಈ ವರ್ಷದ ಆಗಸ್ಟ್‌ನಲ್ಲಿ ನಡೆಯಲ್ಲಿರುವ ಐರ್ಲೆಂಡ್ ವಿರುದ್ಧದ ಸರಣಿಗೆ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದು ಭಾರತೀಯ ಕ್ರಿಕೆಟ್ ತಂಡಕ್ಕೆ ದೊಡ್ಡ ಉತ್ತೇಜನ ನೀಡಲಿದೆ. ಎನ್​ಸಿಎಯ ವೈದ್ಯಕೀಯ ವಿಭಾಗ ಮುಖ್ಯಸ್ಥ ನಿತಿನ್ ಪಟೇಲ್ ಮತ್ತು ಫಿಸಿಯೋ ರಜನಿಕಾಂತ್, ಬುಮ್ರಾ ಅವರ ಫಿಟ್​ನೆಸ್​ಗೆ ಬುಮ್ರಾ ಅವರೊಂದಿಗೆ ಕೆಲಸ ಮಾಡುತ್ತಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದರೆ, ಬುಮ್ರಾ ಪೂರ್ನ ಫಿಟ್‌ನೆಸ್‌ನೊಂದಿಗೆ ಮೈದಾನಕ್ಕೆ ಮರಳುವ ಸಾಧ್ಯತೆಯಿದೆ" ಎಂದು ಮಂಡಳಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ ಎಂದು ನ್ಯೂಸ್ 18 ವರದಿ ಮಾಡಿದೆ.

"ಜಸ್ಪ್ರೀತ್ ಬುಮ್ರಾ ಈ ವರ್ಷದ ಆಗಸ್ಟ್‌ನಲ್ಲಿ ನಡೆಯಲ್ಲಿರುವ ಐರ್ಲೆಂಡ್ ವಿರುದ್ಧದ ಸರಣಿಗೆ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದು ಭಾರತೀಯ ಕ್ರಿಕೆಟ್ ತಂಡಕ್ಕೆ ದೊಡ್ಡ ಉತ್ತೇಜನ ನೀಡಲಿದೆ. ಎನ್​ಸಿಎಯ ವೈದ್ಯಕೀಯ ವಿಭಾಗ ಮುಖ್ಯಸ್ಥ ನಿತಿನ್ ಪಟೇಲ್ ಮತ್ತು ಫಿಸಿಯೋ ರಜನಿಕಾಂತ್, ಬುಮ್ರಾ ಅವರ ಫಿಟ್​ನೆಸ್​ಗೆ ಬುಮ್ರಾ ಅವರೊಂದಿಗೆ ಕೆಲಸ ಮಾಡುತ್ತಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದರೆ, ಬುಮ್ರಾ ಪೂರ್ನ ಫಿಟ್‌ನೆಸ್‌ನೊಂದಿಗೆ ಮೈದಾನಕ್ಕೆ ಮರಳುವ ಸಾಧ್ಯತೆಯಿದೆ" ಎಂದು ಮಂಡಳಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ ಎಂದು ನ್ಯೂಸ್ 18 ವರದಿ ಮಾಡಿದೆ.

5 / 5
Follow Us
ಬಿಗ್​​ಬಾಸ್ ಕೊಟ್ಟ ಶಿಕ್ಷೆಗೆ ಗಳ-ಗಳನೆ ಅತ್ತ ಕಿರಣ್ ಶಾಸ್ತ್ರಿ: ವಿಡಿಯೋ
ಬಿಗ್​​ಬಾಸ್ ಕೊಟ್ಟ ಶಿಕ್ಷೆಗೆ ಗಳ-ಗಳನೆ ಅತ್ತ ಕಿರಣ್ ಶಾಸ್ತ್ರಿ: ವಿಡಿಯೋ
ಫಾಲ್ಕೆ ಪ್ರಶಸ್ತಿ ಲಭಿಸಿರುವುದಕ್ಕೆ ಅನಂತ್‌ನಾಗ್‌ ಫಸ್ಟ್ ರಿಯಾಕ್ಷನ್
ಫಾಲ್ಕೆ ಪ್ರಶಸ್ತಿ ಲಭಿಸಿರುವುದಕ್ಕೆ ಅನಂತ್‌ನಾಗ್‌ ಫಸ್ಟ್ ರಿಯಾಕ್ಷನ್
ಟಿವಿ9 ಕಚೇರಿಯಲ್ಲಿ ಗಣೇಶೋತ್ಸವ: ಅದ್ಧೂರಿ ಮೆರವಣಿಗೆಯೊಂದಿಗೆ ಗಣೇಶ ವಿಸರ್ಜನೆ
ಟಿವಿ9 ಕಚೇರಿಯಲ್ಲಿ ಗಣೇಶೋತ್ಸವ: ಅದ್ಧೂರಿ ಮೆರವಣಿಗೆಯೊಂದಿಗೆ ಗಣೇಶ ವಿಸರ್ಜನೆ
ಬಿಕೆ ಹರಿಪ್ರಸಾದ್ ಕೈಗೆ ಬಲ ತುಂಬಿದ ಸುರ್ಜೆವಾಲಾ, ವೇಣುಗೋಪಾಲ್
ಬಿಕೆ ಹರಿಪ್ರಸಾದ್ ಕೈಗೆ ಬಲ ತುಂಬಿದ ಸುರ್ಜೆವಾಲಾ, ವೇಣುಗೋಪಾಲ್
ಯುಪಿಐ ವಹಿವಾಟುಗಳಿಗೆ ಹೊಸ ಶುಲ್ಕ: ಯಾರು ಶುಲ್ಕ ಕಟ್ಟಬೇಕು? ಇಲ್ಲಿದೆ ಉತ್ತರ
ಯುಪಿಐ ವಹಿವಾಟುಗಳಿಗೆ ಹೊಸ ಶುಲ್ಕ: ಯಾರು ಶುಲ್ಕ ಕಟ್ಟಬೇಕು? ಇಲ್ಲಿದೆ ಉತ್ತರ
ಬೀದರ್​ನ ಪ್ರವಾಸಿ ತಾಣಗಳಲ್ಲಿ ಇರುವ ಕುಂದು ಕೊರತೆಗಳು ಒಂದಾ, ಎರಡಾ? ವಿಡಿಯೋ
ಬೀದರ್​ನ ಪ್ರವಾಸಿ ತಾಣಗಳಲ್ಲಿ ಇರುವ ಕುಂದು ಕೊರತೆಗಳು ಒಂದಾ, ಎರಡಾ? ವಿಡಿಯೋ
ಮೈಸೂರು ಹೊಸ ಮನೆ ಹಿಂದಿನ ರಹಸ್ಯ ಬಿಚ್ಚಿಟ್ಟ ಯತೀಂದ್ರ ಸಿದ್ದರಾಮಯ್ಯ
ಮೈಸೂರು ಹೊಸ ಮನೆ ಹಿಂದಿನ ರಹಸ್ಯ ಬಿಚ್ಚಿಟ್ಟ ಯತೀಂದ್ರ ಸಿದ್ದರಾಮಯ್ಯ
ಪಿಎಂ ಕಿಸಾನ್ ಸಮ್ಮಾನ್ ನಿಧಿ: ಇ-ಕೆವೈಸಿ ಮಾಡಿಸೋದೇಗೆ?; ಇಲ್ಲಿದೆ ಮಾಹಿತಿ
ಪಿಎಂ ಕಿಸಾನ್ ಸಮ್ಮಾನ್ ನಿಧಿ: ಇ-ಕೆವೈಸಿ ಮಾಡಿಸೋದೇಗೆ?; ಇಲ್ಲಿದೆ ಮಾಹಿತಿ
ಗಣೇಶ ಹಬ್ಬಕ್ಕೆ ಡಿಪೋ, ಬಸ್ ನಿಲ್ದಾಣದಲ್ಲಿ ಪ್ರಸಾದ ಸಿದ್ದಗೊಳಿಸದಂತೆ ಆದೇಶ
ಗಣೇಶ ಹಬ್ಬಕ್ಕೆ ಡಿಪೋ, ಬಸ್ ನಿಲ್ದಾಣದಲ್ಲಿ ಪ್ರಸಾದ ಸಿದ್ದಗೊಳಿಸದಂತೆ ಆದೇಶ
ತಾವರೆಕೆರೆ ಮೆಟ್ರೋ ಸ್ಟೇಷನ್ ಹೆಸರು ಬದಲಿಸದಂತೆ ಸ್ಥಳೀಯರು ಬಿಗಿಪಟ್ಟು
ತಾವರೆಕೆರೆ ಮೆಟ್ರೋ ಸ್ಟೇಷನ್ ಹೆಸರು ಬದಲಿಸದಂತೆ ಸ್ಥಳೀಯರು ಬಿಗಿಪಟ್ಟು