AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

W,W,W,W,W: ಟೆಸ್ಟ್​ನಲ್ಲಿ ಇತಿಹಾಸ ನಿರ್ಮಿಸಿದ ಜಸ್​ಪ್ರೀತ್ ಬುಮ್ರಾ

Australia vs India, 3rd Test: ಗಾಬಾ ಮೈದಾನದಲ್ಲಿ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೂರನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡದ ಭರ್ಜರಿ ಪ್ರದರ್ಶನ ನೀಡಿದೆ. ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆದ ಆಸ್ಟ್ರೇಲಿಯಾ ಪರ ಟ್ರಾವಿಸ್ ಹೆಡ್ ಹಾಗೂ ಸ್ಟೀವ್ ಸ್ಮಿತ್ ಶತಕ ಸಿಡಿಸಿದ್ದಾರೆ. ಇತ್ತ ಟೀಮ್ ಇಂಡಿಯಾ ಪರ ಜಸ್​ಪ್ರೀತ್ ಬುಮ್ರಾ 5 ವಿಕೆಟ್ ಕಬಳಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Dec 15, 2024 | 12:53 PM

Share
ಬ್ರಿಸ್ಬೇನ್​ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ ಬಿಗಿ ದಾಳಿ ಸಂಘಟಿಸಿದ್ದಾರೆ. ಆಸ್ಟ್ರೇಲಿಯಾ ಬ್ಯಾಟರ್​​ಗಳ ಅಬ್ಬರದ ನಡುವೆ ಕರಾರುವಾಕ್ ದಾಳಿ ನಡೆಸಿದ ಬುಮ್ರಾ 5 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬ್ರಿಸ್ಬೇನ್​ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ ಬಿಗಿ ದಾಳಿ ಸಂಘಟಿಸಿದ್ದಾರೆ. ಆಸ್ಟ್ರೇಲಿಯಾ ಬ್ಯಾಟರ್​​ಗಳ ಅಬ್ಬರದ ನಡುವೆ ಕರಾರುವಾಕ್ ದಾಳಿ ನಡೆಸಿದ ಬುಮ್ರಾ 5 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

1 / 6
ದ್ವಿತೀಯ ದಿನದಾಟದ ಆರಂಭದಲ್ಲೇ ಉಸ್ಮಾನ್ ಖ್ವಾಜಾ (21) ವಿಕೆಟ್ ಕಬಳಿಸಿ ಶುಭಾರಂಭ ಮಾಡಿದ ಬುಮ್ರಾ, ಆ ಬಳಿಕ ನಾಥನ್ ಮೆಕ್​ಸ್ವೀನಿ (9) ವಿಕೆಟ್ ಪಡೆದರು. ಇದಾದ ಬಳಿಕ ಸ್ವೀವ್ ಸ್ಮಿತ್ (101) ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾದರು. ಆ ಬಳಿಕ ಬಂದ ಮಿಚೆಲ್ ಮಾರ್ಷ್ 5 ರನ್​​ಗಳಿಸಿ ಔಟಾದರು. ಇದರ ಬೆನ್ನಲ್ಲೇ ಟ್ರಾವಿಸ್ ಹೆಡ್ (152) ಕೂಡ ಬುಮ್ರಾಗೆ ವಿಕೆಟ್ ಒಪ್ಪಿಸಿದರು.

ದ್ವಿತೀಯ ದಿನದಾಟದ ಆರಂಭದಲ್ಲೇ ಉಸ್ಮಾನ್ ಖ್ವಾಜಾ (21) ವಿಕೆಟ್ ಕಬಳಿಸಿ ಶುಭಾರಂಭ ಮಾಡಿದ ಬುಮ್ರಾ, ಆ ಬಳಿಕ ನಾಥನ್ ಮೆಕ್​ಸ್ವೀನಿ (9) ವಿಕೆಟ್ ಪಡೆದರು. ಇದಾದ ಬಳಿಕ ಸ್ವೀವ್ ಸ್ಮಿತ್ (101) ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾದರು. ಆ ಬಳಿಕ ಬಂದ ಮಿಚೆಲ್ ಮಾರ್ಷ್ 5 ರನ್​​ಗಳಿಸಿ ಔಟಾದರು. ಇದರ ಬೆನ್ನಲ್ಲೇ ಟ್ರಾವಿಸ್ ಹೆಡ್ (152) ಕೂಡ ಬುಮ್ರಾಗೆ ವಿಕೆಟ್ ಒಪ್ಪಿಸಿದರು.

2 / 6
ಈ 5 ವಿಕೆಟ್​ಗಳೊಂದಿಗೆ ವಿದೇಶಿ ಟೆಸ್ಟ್​ನಲ್ಲಿ ಟೀಮ್ ಇಂಡಿಯಾ ಪರ ಅತ್ಯಧಿಕ ಬಾರಿ 5 ವಿಕೆಟ್ ಕಬಳಿಸಿದ ಭಾರತದ ವೇಗಿ ಎಂಬ ದಾಖಲೆಯನ್ನು ಜಸ್​ಪ್ರೀತ್ ಬುಮ್ರಾ ತಮ್ಮದಾಗಿಸಿಕೊಂಡರು. ಇದಕ್ಕೂ ಮುನ್ನ ಈ ದಾಖಲೆ ಭಾರತದ ಮಾಜಿ ನಾಯಕ ಕಪಿಲ್ ದೇವ್ ಹೆಸರಿನಲ್ಲಿತ್ತು.

ಈ 5 ವಿಕೆಟ್​ಗಳೊಂದಿಗೆ ವಿದೇಶಿ ಟೆಸ್ಟ್​ನಲ್ಲಿ ಟೀಮ್ ಇಂಡಿಯಾ ಪರ ಅತ್ಯಧಿಕ ಬಾರಿ 5 ವಿಕೆಟ್ ಕಬಳಿಸಿದ ಭಾರತದ ವೇಗಿ ಎಂಬ ದಾಖಲೆಯನ್ನು ಜಸ್​ಪ್ರೀತ್ ಬುಮ್ರಾ ತಮ್ಮದಾಗಿಸಿಕೊಂಡರು. ಇದಕ್ಕೂ ಮುನ್ನ ಈ ದಾಖಲೆ ಭಾರತದ ಮಾಜಿ ನಾಯಕ ಕಪಿಲ್ ದೇವ್ ಹೆಸರಿನಲ್ಲಿತ್ತು.

3 / 6
ಕಪಿಲ್ ದೇವ್​ ವಿದೇಶಿ ಟೆಸ್ಟ್​ನಲ್ಲಿ 10 ಬಾರಿ 5 ವಿಕೆಟ್​ಗಳ ಗುಚ್ಛ ಪಡೆದಿದ್ದಾರೆ. ಇದೀಗ ವಿದೇಶಿ ಪಿಚ್​ನಲ್ಲಿ 11ನೇ ಬಾರಿ 5 ವಿಕೆಟ್ ಕಬಳಿಸುವ ಮೂಲಕ ಜಸ್​ಪ್ರೀತ್ ಬುಮ್ರಾ ಹೊಸ ಇತಿಹಾಸ ನಿರ್ಮಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕಪಿಲ್ ದೇವ್​ ವಿದೇಶಿ ಟೆಸ್ಟ್​ನಲ್ಲಿ 10 ಬಾರಿ 5 ವಿಕೆಟ್​ಗಳ ಗುಚ್ಛ ಪಡೆದಿದ್ದಾರೆ. ಇದೀಗ ವಿದೇಶಿ ಪಿಚ್​ನಲ್ಲಿ 11ನೇ ಬಾರಿ 5 ವಿಕೆಟ್ ಕಬಳಿಸುವ ಮೂಲಕ ಜಸ್​ಪ್ರೀತ್ ಬುಮ್ರಾ ಹೊಸ ಇತಿಹಾಸ ನಿರ್ಮಿಸುವಲ್ಲಿ ಯಶಸ್ವಿಯಾಗಿದ್ದಾರೆ.

4 / 6
ಹಾಗೆಯೇ SENA (ಸೌತ್ ಆಫ್ರಿಕಾ, ಇಂಗ್ಲೆಂಡ್, ನ್ಯೂಝಿಲೆಂಡ್, ಆಸ್ಟ್ರೇಲಿಯಾ) ದೇಶಗಳಲ್ಲಿ ಅತ್ಯಧಿಕ ಬಾರಿ 5 ವಿಕೆಟ್ ಕಬಳಿಸಿದ ಭಾರತೀಯ ಬೌಲರ್​ ಎಂಬ ದಾಖಲೆ ಕೂಡ ಬುಮ್ರಾ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಕೂಡ ಕಪಿಲ್ ದೇವ್ (7 ಬಾರಿ) ಹೆಸರಿನಲ್ಲಿತ್ತು. ಇದೀಗ 8ನೇ ಬಾರಿ 5 ವಿಕೆಟ್ ಕಬಳಿಸಿ SENA ದೇಶದಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ ಭಾರತೀಯ ವೇಗಿ ಎನಿಸಿಕೊಂಡಿದ್ದಾರೆ.

ಹಾಗೆಯೇ SENA (ಸೌತ್ ಆಫ್ರಿಕಾ, ಇಂಗ್ಲೆಂಡ್, ನ್ಯೂಝಿಲೆಂಡ್, ಆಸ್ಟ್ರೇಲಿಯಾ) ದೇಶಗಳಲ್ಲಿ ಅತ್ಯಧಿಕ ಬಾರಿ 5 ವಿಕೆಟ್ ಕಬಳಿಸಿದ ಭಾರತೀಯ ಬೌಲರ್​ ಎಂಬ ದಾಖಲೆ ಕೂಡ ಬುಮ್ರಾ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಕೂಡ ಕಪಿಲ್ ದೇವ್ (7 ಬಾರಿ) ಹೆಸರಿನಲ್ಲಿತ್ತು. ಇದೀಗ 8ನೇ ಬಾರಿ 5 ವಿಕೆಟ್ ಕಬಳಿಸಿ SENA ದೇಶದಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ ಭಾರತೀಯ ವೇಗಿ ಎನಿಸಿಕೊಂಡಿದ್ದಾರೆ.

5 / 6
ಜಸ್​ಪ್ರೀತ್ ಬುಮ್ರಾ ಅವರ ಈ ಮಿಂಚಿನ ದಾಳಿಯ ಹೊರತಾಗಿಯೂ ಆಸ್ಟ್ರೇಲಿಯಾ ತಂಡವು ಬೃಹತ್ ಮೊತ್ತದತ್ತ ದಾಪುಗಾಲಿಟ್ಟಿದೆ. ಈ ಪಂದ್ಯದಲ್ಲಿ ಟ್ರಾವಿಸ್ ಹೆಡ್ (151) ಹಾಗೂ ಸ್ಟೀವ್ ಸ್ಮಿತ್ (101) ಬಾರಿಸಿದ ಸೆಂಚುರಿಗಳ ನೆರವಿನಿಂದ ಆಸ್ಟ್ರೇಲಿಯಾ ತಂಡವು 93 ಓವರ್​​ಗಳ ಮುಕ್ತಾಯದ ವೇಳೆಗೆ 6 ವಿಕೆಟ್ ಕಳೆದುಕೊಂಡು 356 ರನ್ ಕಲೆಹಾಕಿದೆ.

ಜಸ್​ಪ್ರೀತ್ ಬುಮ್ರಾ ಅವರ ಈ ಮಿಂಚಿನ ದಾಳಿಯ ಹೊರತಾಗಿಯೂ ಆಸ್ಟ್ರೇಲಿಯಾ ತಂಡವು ಬೃಹತ್ ಮೊತ್ತದತ್ತ ದಾಪುಗಾಲಿಟ್ಟಿದೆ. ಈ ಪಂದ್ಯದಲ್ಲಿ ಟ್ರಾವಿಸ್ ಹೆಡ್ (151) ಹಾಗೂ ಸ್ಟೀವ್ ಸ್ಮಿತ್ (101) ಬಾರಿಸಿದ ಸೆಂಚುರಿಗಳ ನೆರವಿನಿಂದ ಆಸ್ಟ್ರೇಲಿಯಾ ತಂಡವು 93 ಓವರ್​​ಗಳ ಮುಕ್ತಾಯದ ವೇಳೆಗೆ 6 ವಿಕೆಟ್ ಕಳೆದುಕೊಂಡು 356 ರನ್ ಕಲೆಹಾಕಿದೆ.

6 / 6
Follow Us
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು