AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಸಿಸಿ ತಿಂಗಳ ಆಟಗಾರರ ಪಟ್ಟಿಯಲ್ಲಿ ಜಸ್​ಪ್ರೀತ್ ಬುಮ್ರಾ ಜತೆ ಇಬ್ಬರ ವೇಗಿಗಳ ಪೈಪೋಟಿ

ICC Player of the Month: ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಪ್ರತಿ ತಿಂಗಳು ಅತ್ಯುತ್ತಮ ಪ್ರದರ್ಶನ ನೀಡುವ ಆಟಗಾರರಿಗೆ ಪ್ಲೇಯರ್ ಆಫ್ ದಿ ಮಂತ್ ಪ್ರಶಸ್ತಿಯನ್ನು ನೀಡುತ್ತದೆ. ಈ ಬಾರಿ ಈ ಪ್ರಶಸ್ತಿ ಪಟ್ಟಿಯಲ್ಲಿ ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ ಕಾಣಿಸಿಕೊಂಡಿದ್ದಾರೆ. ಅವರ ಜೊತೆಗೆ ಇಬ್ಬರು ಪ್ರಮುಖ ಬೌಲರ್​​ಗಳು ಸಹ ಈ ಪ್ರಶಸ್ತಿ ಸುತ್ತಿನ ಪೈಪೋಟಿಯಲ್ಲಿದ್ದಾರೆ.

ಝಾಹಿರ್ ಯೂಸುಫ್
|

Updated on: Jan 08, 2025 | 9:24 AM

Share
ಐಸಿಸಿ ಡಿಸೆಂಬರ್ ತಿಂಗಳ ಆಟಗಾರರ ನಾಮನಿರ್ದೇಶಿತ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿಯ ಪಟ್ಟಿಯಲ್ಲಿ ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ, ಆಸ್ಟ್ರೇಲಿಯಾ ನಾಯಕ ಪ್ಯಾಟ್ ಕಮಿನ್ಸ್ ಹಾಗೂ ಸೌತ್ ಆಫ್ರಿಕಾ ವೇಗಿ ಡೇನ್ ಪ್ಯಾಟರ್ಸನ್ ಕಾಣಿಸಿಕೊಂಡಿದ್ದಾರೆ.

ಐಸಿಸಿ ಡಿಸೆಂಬರ್ ತಿಂಗಳ ಆಟಗಾರರ ನಾಮನಿರ್ದೇಶಿತ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿಯ ಪಟ್ಟಿಯಲ್ಲಿ ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ, ಆಸ್ಟ್ರೇಲಿಯಾ ನಾಯಕ ಪ್ಯಾಟ್ ಕಮಿನ್ಸ್ ಹಾಗೂ ಸೌತ್ ಆಫ್ರಿಕಾ ವೇಗಿ ಡೇನ್ ಪ್ಯಾಟರ್ಸನ್ ಕಾಣಿಸಿಕೊಂಡಿದ್ದಾರೆ.

1 / 5
ಜಸ್​​ಪ್ರೀತ್ ಬುಮ್ರಾ: ಡಿಸೆಂಬರ್ ತಿಂಗಳಲ್ಲಿ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಆಡಿದ್ದ ಜಸ್​ಪ್ರೀತ್ ಬುಮ್ರಾ ಅದ್ಭುತ ಪ್ರದರ್ಶನ ನೀಡಿದ್ದರು. ಆಸ್ಟ್ರೇಲಿಯಾ ವಿರುದ್ಧದ ಈ ಸರಣಿಯಲ್ಲಿ ಅಡಿಲೇಡ್​ನಲ್ಲಿ 61ಕ್ಕೆ 4, ಬ್ರಿಸ್ಬೇನ್‌ನಲ್ಲಿ 76ಕ್ಕೆ 6, ಮತ್ತು ಮೆಲ್ಬೋರ್ನ್‌ನಲ್ಲಿ 9 ವಿಕೆಟ್‌ಗಳನ್ನು ಕಬಳಿಸಿ ಮಿಂಚಿದ್ದರು. ಈ ಭರ್ಜರಿ ಪ್ರದರ್ಶನದ ಫಲವಾಗಿ ಇದೀಗ ಡಿಸೆಂಬರ್ ತಿಂಗಳ ಅಟಗಾರರ ಪಟ್ಟಿಗೆ ನಾಮನಿರ್ದೇನಗೊಂಡಿದ್ದಾರೆ.

ಜಸ್​​ಪ್ರೀತ್ ಬುಮ್ರಾ: ಡಿಸೆಂಬರ್ ತಿಂಗಳಲ್ಲಿ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಆಡಿದ್ದ ಜಸ್​ಪ್ರೀತ್ ಬುಮ್ರಾ ಅದ್ಭುತ ಪ್ರದರ್ಶನ ನೀಡಿದ್ದರು. ಆಸ್ಟ್ರೇಲಿಯಾ ವಿರುದ್ಧದ ಈ ಸರಣಿಯಲ್ಲಿ ಅಡಿಲೇಡ್​ನಲ್ಲಿ 61ಕ್ಕೆ 4, ಬ್ರಿಸ್ಬೇನ್‌ನಲ್ಲಿ 76ಕ್ಕೆ 6, ಮತ್ತು ಮೆಲ್ಬೋರ್ನ್‌ನಲ್ಲಿ 9 ವಿಕೆಟ್‌ಗಳನ್ನು ಕಬಳಿಸಿ ಮಿಂಚಿದ್ದರು. ಈ ಭರ್ಜರಿ ಪ್ರದರ್ಶನದ ಫಲವಾಗಿ ಇದೀಗ ಡಿಸೆಂಬರ್ ತಿಂಗಳ ಅಟಗಾರರ ಪಟ್ಟಿಗೆ ನಾಮನಿರ್ದೇನಗೊಂಡಿದ್ದಾರೆ.

2 / 5
ಪ್ಯಾಟ್ ಕಮಿನ್ಸ್: ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್​ ಡಿಸೆಂಬರ್ ತಿಂಗಳಲ್ಲಿ ಟೀಮ್ ಇಂಡಿಯಾ ವಿರುದ್ಧ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಆಡಿದ್ದರು. ಈ ವೇಳೆ ಬ್ಯಾಟಿಂಗ್​ ಮೂಲಕ 144 ರನ್​ ಬಾರಿಸಿದರೆ, ಬೌಲಿಂಗ್​ನಲ್ಲಿ 17 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಹೀಗಾಗಿ ಕಳೆದ ತಿಂಗಳ ಆಟಗಾರರ ಪಟ್ಟಿಯಲ್ಲಿ ಕಮಿನ್ಸ್ ಕೂಡ ಕಾಣಿಸಿಕೊಂಡಿದ್ದಾರೆ.

ಪ್ಯಾಟ್ ಕಮಿನ್ಸ್: ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್​ ಡಿಸೆಂಬರ್ ತಿಂಗಳಲ್ಲಿ ಟೀಮ್ ಇಂಡಿಯಾ ವಿರುದ್ಧ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಆಡಿದ್ದರು. ಈ ವೇಳೆ ಬ್ಯಾಟಿಂಗ್​ ಮೂಲಕ 144 ರನ್​ ಬಾರಿಸಿದರೆ, ಬೌಲಿಂಗ್​ನಲ್ಲಿ 17 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಹೀಗಾಗಿ ಕಳೆದ ತಿಂಗಳ ಆಟಗಾರರ ಪಟ್ಟಿಯಲ್ಲಿ ಕಮಿನ್ಸ್ ಕೂಡ ಕಾಣಿಸಿಕೊಂಡಿದ್ದಾರೆ.

3 / 5
ಡೇನ್ ಪ್ಯಾಟರ್ಸನ್: ಸೌತ್ ಆಫ್ರಿಕಾ ವೇಗಿ ಡೇನ್ ಪ್ಯಾಟರ್ಸನ್ ಡಿಸೆಂಬರ್​ನಲ್ಲಿ ಶ್ರೀಲಂಕಾ ಮತ್ತು ಪಾಕಿಸ್ತಾನ್ ವಿರುದ್ಧ ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 13 ವಿಕೆಟ್​ ಕಬಳಿಸುವ ಮೂಲಕ ಸೌತ್ ಆಫ್ರಿಕಾ ತಂಡ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಫೈನಲ್​ಗೇರುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಹೀಗಾಗಿ ಡೇನ್ ಪ್ಯಾಟರ್ಸನ್ ಕೂಡ ಐಸಿಸಿ ಡಿಸೆಂಬರ್ ತಿಂಗಳ ಆಟಗಾರರನಾಗಿ ನಾಮನಿರ್ದೇಶಿತರಾಗಿದ್ದಾರೆ.

ಡೇನ್ ಪ್ಯಾಟರ್ಸನ್: ಸೌತ್ ಆಫ್ರಿಕಾ ವೇಗಿ ಡೇನ್ ಪ್ಯಾಟರ್ಸನ್ ಡಿಸೆಂಬರ್​ನಲ್ಲಿ ಶ್ರೀಲಂಕಾ ಮತ್ತು ಪಾಕಿಸ್ತಾನ್ ವಿರುದ್ಧ ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 13 ವಿಕೆಟ್​ ಕಬಳಿಸುವ ಮೂಲಕ ಸೌತ್ ಆಫ್ರಿಕಾ ತಂಡ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಫೈನಲ್​ಗೇರುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಹೀಗಾಗಿ ಡೇನ್ ಪ್ಯಾಟರ್ಸನ್ ಕೂಡ ಐಸಿಸಿ ಡಿಸೆಂಬರ್ ತಿಂಗಳ ಆಟಗಾರರನಾಗಿ ನಾಮನಿರ್ದೇಶಿತರಾಗಿದ್ದಾರೆ.

4 / 5
ಈ ಮೂವರು ಆಟಗಾರರಲ್ಲಿ ಒಬ್ಬರಿಗೆ ಐಸಿಸಿ ಡಿಸೆಂಬರ್ ತಿಂಗಳ ಆಟಗಾರನ ಪ್ರಶಸ್ತಿ ಒಲಿಯಲಿದೆ. ಇವರಲ್ಲಿ ಯಾರು ಪ್ಲೇಯರ್ ಆಫ್ ದಿ ಮಂತ್ ಎಂಬುದನ್ನು ನಿರ್ಧರಿಸಲು ನೀವು ಕೂಡ ಓಟ್ ಮಾಡಬಹುದು. ಇದಕ್ಕಾಗಿ www.icc-cricket.com/awards ವೆಬ್​ಸೈಟ್​ಗೆ ತೆರಳಿ ನಿಮ್ಮ ನೆಚ್ಚಿನ ಆಟಗಾರರಿಗೆ ಓಟ್ ಮಾಡಿ.

ಈ ಮೂವರು ಆಟಗಾರರಲ್ಲಿ ಒಬ್ಬರಿಗೆ ಐಸಿಸಿ ಡಿಸೆಂಬರ್ ತಿಂಗಳ ಆಟಗಾರನ ಪ್ರಶಸ್ತಿ ಒಲಿಯಲಿದೆ. ಇವರಲ್ಲಿ ಯಾರು ಪ್ಲೇಯರ್ ಆಫ್ ದಿ ಮಂತ್ ಎಂಬುದನ್ನು ನಿರ್ಧರಿಸಲು ನೀವು ಕೂಡ ಓಟ್ ಮಾಡಬಹುದು. ಇದಕ್ಕಾಗಿ www.icc-cricket.com/awards ವೆಬ್​ಸೈಟ್​ಗೆ ತೆರಳಿ ನಿಮ್ಮ ನೆಚ್ಚಿನ ಆಟಗಾರರಿಗೆ ಓಟ್ ಮಾಡಿ.

5 / 5
Follow Us
ಮೈಸೂರು ರಸ್ತೆ To ಮಾಗಡಿ ರಸ್ತೆ ಕೇವಲ 15 ನಿಮಿಷ: ಹೇಗಿದೆ ನೋಡಿ ಕೃಷ್ಣ ಪಥ
ಮೈಸೂರು ರಸ್ತೆ To ಮಾಗಡಿ ರಸ್ತೆ ಕೇವಲ 15 ನಿಮಿಷ: ಹೇಗಿದೆ ನೋಡಿ ಕೃಷ್ಣ ಪಥ
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ