Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾಗೆ ಬಿಗ್ ಶಾಕ್: ಚಾಂಪಿಯನ್ಸ್ ಟ್ರೋಫಿಯಿಂದ ಜಸ್​ಪ್ರೀತ್ ಬುಮ್ರಾ ಔಟ್

Jasprit Bumrah Ruled Out: ಸಿಡ್ನಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ 5ನೇ ಟೆಸ್ಟ್ ಪಂದ್ಯದ ವೇಳೆ ಜಸ್​ಪ್ರೀತ್ ಬುಮ್ರಾ ಬೆನ್ನು ನೋವಿನ ಸಮಸ್ಯೆಗೆ ಒಳಗಾಗಿದ್ದರು. ಹೀಗಾಗಿ ಕೊನೆಯ ಇನಿಂಗ್ಸ್​ನಲ್ಲಿ ಅವರು ಬೌಲಿಂಗ್ ಮಾಡಿರಲಿಲ್ಲ. ಅಲ್ಲದೆ ಇದೇ ನೋವಿನ ಕಾರಣ ಅವರು ಮುಂಬರುವ ಚಾಂಪಿಯನ್ಸ್ ಟ್ರೋಫಿಯಿಂದಲೂ ಹೊರಗುಳಿದಿದ್ದಾರೆ. ಹೀಗಾಗಿ ಈ ಬಾರಿಯ ಐಸಿಸಿ ಟೂರ್ನಿಯಲ್ಲಿ ಬುಮ್ರಾ ಕಾಣಿಸಿಕೊಳ್ಳುವುದಿಲ್ಲ.

ಝಾಹಿರ್ ಯೂಸುಫ್
|

Updated on: Feb 12, 2025 | 7:38 AM

ಚಾಂಪಿಯನ್ಸ್ ಟ್ರೋಫಿ ಆರಂಭಕ್ಕೆ ಇನ್ನು ದಿನಗಳು ಮಾತ್ರ ಉಳಿದಿವೆ. ಅದಕ್ಕೂ ಮುನ್ನವೇ ಟೀಮ್ ಇಂಡಿಯಾಗೆ ಆಘಾತ ಎದುರಾಗಿದೆ. ತಂಡದ ಪ್ರಮುಖ ವೇಗಿ ಜಸ್​ಪ್ರೀತ್ ಬುಮ್ರಾ ಫಿಟ್​ನೆಸ್ ಸಮಸ್ಯೆಯ ಕಾರಣ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದಿದ್ದಾರೆ.

ಚಾಂಪಿಯನ್ಸ್ ಟ್ರೋಫಿ ಆರಂಭಕ್ಕೆ ಇನ್ನು ದಿನಗಳು ಮಾತ್ರ ಉಳಿದಿವೆ. ಅದಕ್ಕೂ ಮುನ್ನವೇ ಟೀಮ್ ಇಂಡಿಯಾಗೆ ಆಘಾತ ಎದುರಾಗಿದೆ. ತಂಡದ ಪ್ರಮುಖ ವೇಗಿ ಜಸ್​ಪ್ರೀತ್ ಬುಮ್ರಾ ಫಿಟ್​ನೆಸ್ ಸಮಸ್ಯೆಯ ಕಾರಣ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದಿದ್ದಾರೆ.

1 / 5
ಬೆನ್ನು ನೋವಿನ ಸಮಸ್ಯೆಯ ಕಾರಣ ಬುಮ್ರಾ ಇಂಗ್ಲೆಂಡ್ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದರು. ಇದಾಗ್ಯೂ ಅವರು ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಕಣಕ್ಕಿಳಿಯಲಿದ್ದಾರೆ ಎನ್ನಲಾಗಿತ್ತು. ಆದರೀಗ ಅವರು ಸಂಪೂರ್ಣ ಫಿಟ್​ನೆಸ್ ಸಾಧಿಸಲು ಕನಿಷ್ಠ ಮೂರು ವಾರಗಳನ್ನು ತೆಗೆದುಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ. ಹೀಗಾಗಿ ಜಸ್​ಪ್ರೀತ್ ಬುಮ್ರಾ ಚಾಂಪಿಯನ್ಸ್ ಟ್ರೋಫಿಯಿಂದ ಹಿಂದೆ ಸರಿದಿದ್ದಾರೆ.

ಬೆನ್ನು ನೋವಿನ ಸಮಸ್ಯೆಯ ಕಾರಣ ಬುಮ್ರಾ ಇಂಗ್ಲೆಂಡ್ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದರು. ಇದಾಗ್ಯೂ ಅವರು ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಕಣಕ್ಕಿಳಿಯಲಿದ್ದಾರೆ ಎನ್ನಲಾಗಿತ್ತು. ಆದರೀಗ ಅವರು ಸಂಪೂರ್ಣ ಫಿಟ್​ನೆಸ್ ಸಾಧಿಸಲು ಕನಿಷ್ಠ ಮೂರು ವಾರಗಳನ್ನು ತೆಗೆದುಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ. ಹೀಗಾಗಿ ಜಸ್​ಪ್ರೀತ್ ಬುಮ್ರಾ ಚಾಂಪಿಯನ್ಸ್ ಟ್ರೋಫಿಯಿಂದ ಹಿಂದೆ ಸರಿದಿದ್ದಾರೆ.

2 / 5
ಇತ್ತ ಜಸ್​ಪ್ರೀತ್ ಬುಮ್ರಾ ಅಲಭ್ಯರಾಗಿರುವ ಕಾರಣ ಅವರ ಸ್ಥಾನದಲ್ಲಿ ಹರ್ಷಿತ್ ರಾಣಾ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಅದರಂತೆ ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯಲ್ಲಿ ವೇಗಿಗಳಾಗಿ ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ, ಹರ್ಷಿತ್ ರಾಣಾ ಹಾಗೂ ಹಾರ್ದಿಕ್ ಪಾಂಡ್ಯ ಕಾಣಿಸಿಕೊಳ್ಳಲಿದ್ದಾರೆ.

ಇತ್ತ ಜಸ್​ಪ್ರೀತ್ ಬುಮ್ರಾ ಅಲಭ್ಯರಾಗಿರುವ ಕಾರಣ ಅವರ ಸ್ಥಾನದಲ್ಲಿ ಹರ್ಷಿತ್ ರಾಣಾ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಅದರಂತೆ ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯಲ್ಲಿ ವೇಗಿಗಳಾಗಿ ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ, ಹರ್ಷಿತ್ ರಾಣಾ ಹಾಗೂ ಹಾರ್ದಿಕ್ ಪಾಂಡ್ಯ ಕಾಣಿಸಿಕೊಳ್ಳಲಿದ್ದಾರೆ.

3 / 5
ಟೀಮ್ ಇಂಡಿಯಾ ಚಾಂಪಿಯನ್ಸ್ ಟ್ರೋಫಿ ಟೂರ್ನಿಗಾಗಿ ಫೆಬ್ರವರಿ 15 ರಂದು ದುಬೈಗೆ ತೆರಳಲಿದೆ. ಏಕೆಂದರೆ ಈ ಬಾರಿಯ ಟೂರ್ನಿಯು ಹೈಬ್ರಿಡ್ ಮಾದರಿಯಲ್ಲಿ ನಡೆಯುತ್ತಿದ್ದು, ಅದರಂತೆ ಬಹುತೇಕ ಪಂದ್ಯಗಳು ಪಾಕಿಸ್ತಾನದಲ್ಲಿ ಜರುಗಲಿದ್ದು, ಟೀಮ್ ಇಂಡಿಯಾ ಮ್ಯಾಚ್​ಗಳಿಗೆ ದುಬೈ ಆತಿಥ್ಯವಹಿಸಲಿದೆ.

ಟೀಮ್ ಇಂಡಿಯಾ ಚಾಂಪಿಯನ್ಸ್ ಟ್ರೋಫಿ ಟೂರ್ನಿಗಾಗಿ ಫೆಬ್ರವರಿ 15 ರಂದು ದುಬೈಗೆ ತೆರಳಲಿದೆ. ಏಕೆಂದರೆ ಈ ಬಾರಿಯ ಟೂರ್ನಿಯು ಹೈಬ್ರಿಡ್ ಮಾದರಿಯಲ್ಲಿ ನಡೆಯುತ್ತಿದ್ದು, ಅದರಂತೆ ಬಹುತೇಕ ಪಂದ್ಯಗಳು ಪಾಕಿಸ್ತಾನದಲ್ಲಿ ಜರುಗಲಿದ್ದು, ಟೀಮ್ ಇಂಡಿಯಾ ಮ್ಯಾಚ್​ಗಳಿಗೆ ದುಬೈ ಆತಿಥ್ಯವಹಿಸಲಿದೆ.

4 / 5
2025ರ ಚಾಂಪಿಯನ್ಸ್ ಟ್ರೋಫಿ ಟೂರ್ನಿಯು ಫೆಬ್ರವರಿ 19 ರಿಂದ ಶುರುವಾಗಲಿದೆ. ಹಾಗೆಯೇ ಫೈನಲ್ ಪಂದ್ಯ ಮಾರ್ಚ್ 9 ರಂದು ನಡೆಯಲಿದೆ. ಮೊದಲ ಪಂದ್ಯದಲ್ಲಿ ಪಾಕಿಸ್ತಾನ್ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದ್ದು, ಭಾರತ ತಂಡವು ಫೆಬ್ರವರಿ 20 ರಂದು ಬಾಂಗ್ಲಾದೇಶ್ ವಿರುದ್ಧ ಕಣಕ್ಕಿಳಿಯುವ ಮೂಲಕ ಚಾಂಪಿಯನ್ಸ್ ಟ್ರೋಫಿ ಅಭಿಯಾನ ಆರಂಭಿಸಲಿದೆ.

2025ರ ಚಾಂಪಿಯನ್ಸ್ ಟ್ರೋಫಿ ಟೂರ್ನಿಯು ಫೆಬ್ರವರಿ 19 ರಿಂದ ಶುರುವಾಗಲಿದೆ. ಹಾಗೆಯೇ ಫೈನಲ್ ಪಂದ್ಯ ಮಾರ್ಚ್ 9 ರಂದು ನಡೆಯಲಿದೆ. ಮೊದಲ ಪಂದ್ಯದಲ್ಲಿ ಪಾಕಿಸ್ತಾನ್ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದ್ದು, ಭಾರತ ತಂಡವು ಫೆಬ್ರವರಿ 20 ರಂದು ಬಾಂಗ್ಲಾದೇಶ್ ವಿರುದ್ಧ ಕಣಕ್ಕಿಳಿಯುವ ಮೂಲಕ ಚಾಂಪಿಯನ್ಸ್ ಟ್ರೋಫಿ ಅಭಿಯಾನ ಆರಂಭಿಸಲಿದೆ.

5 / 5
Follow us
ಸಣ್ಣ ವಯಸ್ಸಲ್ಲಿ ಮಾಡಿದ್ದ ಆಣೆ: ಕೊಟ್ಟ ಮಾತು ನಡೆಸಿಕೊಟ್ಟ ಧ್ರುವ ಸರ್ಜಾ
ಸಣ್ಣ ವಯಸ್ಸಲ್ಲಿ ಮಾಡಿದ್ದ ಆಣೆ: ಕೊಟ್ಟ ಮಾತು ನಡೆಸಿಕೊಟ್ಟ ಧ್ರುವ ಸರ್ಜಾ
ಹೋಳಿ ಹಬ್ಬದಂದೇ ಹರಿಯಾಣದ ಬಿಜೆಪಿ ನಾಯಕನ ಹತ್ಯೆ; ಸಿಸಿಟಿವಿ ವಿಡಿಯೋ ವೈರಲ್
ಹೋಳಿ ಹಬ್ಬದಂದೇ ಹರಿಯಾಣದ ಬಿಜೆಪಿ ನಾಯಕನ ಹತ್ಯೆ; ಸಿಸಿಟಿವಿ ವಿಡಿಯೋ ವೈರಲ್
ಅಮೃತಸರ ದೇವಾಲಯದ ಮೇಲಿನ ಗ್ರೆನೇಡ್ ದಾಳಿ ಸಿಸಿಟಿವಿಯಲ್ಲಿ ಸೆರೆ
ಅಮೃತಸರ ದೇವಾಲಯದ ಮೇಲಿನ ಗ್ರೆನೇಡ್ ದಾಳಿ ಸಿಸಿಟಿವಿಯಲ್ಲಿ ಸೆರೆ
ರಸ್ತೆಯಲ್ಲಿ ಮಹಿಳೆ, ಮಗುವಿನ ಮೇಲೆ ಬೀದಿ ಹಸು ಅಟ್ಯಾಕ್; ವಿಡಿಯೋ ಇಲ್ಲಿದೆ
ರಸ್ತೆಯಲ್ಲಿ ಮಹಿಳೆ, ಮಗುವಿನ ಮೇಲೆ ಬೀದಿ ಹಸು ಅಟ್ಯಾಕ್; ವಿಡಿಯೋ ಇಲ್ಲಿದೆ
ಯುವತಿಯರೊಂದಿಗೆ ಮಕ್ಕಳನ್ನು ಹೆಗಲ ಮೇಲೆ ಹೊತ್ತು ಕುಣಿದ ಗೃಹಿಣಿಯರು
ಯುವತಿಯರೊಂದಿಗೆ ಮಕ್ಕಳನ್ನು ಹೆಗಲ ಮೇಲೆ ಹೊತ್ತು ಕುಣಿದ ಗೃಹಿಣಿಯರು
ಕುಂಭಮೇಳ ಎಫೆಕ್ಟ್: ನಾಗಾಸಾಧು ವೇಷ ಹಾಕಿಕೊಂಡು ಹೋಳಿ ಆಚರಣೆ
ಕುಂಭಮೇಳ ಎಫೆಕ್ಟ್: ನಾಗಾಸಾಧು ವೇಷ ಹಾಕಿಕೊಂಡು ಹೋಳಿ ಆಚರಣೆ
ಸಾಯುವ ಮುನ್ನ ದಿವ್ಯಾ ಕುಮಾರ್ 4 ಬಾಲ್​ನಲ್ಲಿ 20 ರನ್ ಬಾರಿಸಿದ ವಿಡಿಯೋ
ಸಾಯುವ ಮುನ್ನ ದಿವ್ಯಾ ಕುಮಾರ್ 4 ಬಾಲ್​ನಲ್ಲಿ 20 ರನ್ ಬಾರಿಸಿದ ವಿಡಿಯೋ
ಮಾರ್ಚ್ 8ರಂದು ನಾನು ಮತ್ತು ಸಿಎಂ ಇಬ್ಬರೂ ಲಭ್ಯರಿರಲಿಲ್ಲ: ಶಿವಕುಮಾರ್
ಮಾರ್ಚ್ 8ರಂದು ನಾನು ಮತ್ತು ಸಿಎಂ ಇಬ್ಬರೂ ಲಭ್ಯರಿರಲಿಲ್ಲ: ಶಿವಕುಮಾರ್
ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮಸ್ಯೆ ಒಪ್ಪಿಕೊಂಡ ಬಿಬಿಎಂಪಿ ಕಮಿಷನರ್
ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮಸ್ಯೆ ಒಪ್ಪಿಕೊಂಡ ಬಿಬಿಎಂಪಿ ಕಮಿಷನರ್
ಹೋಳಿ ವೇಳೆ ಪೊಲೀಸ್ ಅಧಿಕಾರಿಗೆ ಡ್ಯಾನ್ಸ್ ಮಾಡಲು ತೇಜ್ ಪ್ರತಾಪ್ ಒತ್ತಾಯ
ಹೋಳಿ ವೇಳೆ ಪೊಲೀಸ್ ಅಧಿಕಾರಿಗೆ ಡ್ಯಾನ್ಸ್ ಮಾಡಲು ತೇಜ್ ಪ್ರತಾಪ್ ಒತ್ತಾಯ