AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jasprit Bumrah: ಟೀಮ್ ಇಂಡಿಯಾದಿಂದ ಜಸ್​ಪ್ರೀತ್​ ಬುಮ್ರಾರನ್ನು 6 ತಿಂಗಳುಗಳ ಕಾಲ ಮರೆತುಬಿಡಿ..!

Jasprit Bumrah: ಜಸ್​ಪ್ರೀತ್ ಬುಮ್ರಾ ಸಂಪೂರ್ಣವಾಗಿ ಗುಣಮುಖರಾದರೆ ಮಾತ್ರ ಅಕ್ಟೋಬರ್​ನಲ್ಲಿ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ

TV9 Web
| Edited By: |

Updated on: Mar 01, 2023 | 10:10 PM

Share
ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ ಐಪಿಎಲ್ ಸೀಸನ್​ 16 ನಿಂದ ಹೊರಗುಳಿದಿದ್ದಾರೆ. ಕಳೆದ ಕೆಲ ತಿಂಗಳುಗಳಿಂದ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಬುಮ್ರಾ ಸದ್ಯಕ್ಕಂತು ಕಂಬ್ಯಾಕ್ ಮಾಡುವುದಿಲ್ಲ ಎಂಬುದು ಕೂಡ ಖಚಿತವಾಗಿದೆ.

ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ ಐಪಿಎಲ್ ಸೀಸನ್​ 16 ನಿಂದ ಹೊರಗುಳಿದಿದ್ದಾರೆ. ಕಳೆದ ಕೆಲ ತಿಂಗಳುಗಳಿಂದ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಬುಮ್ರಾ ಸದ್ಯಕ್ಕಂತು ಕಂಬ್ಯಾಕ್ ಮಾಡುವುದಿಲ್ಲ ಎಂಬುದು ಕೂಡ ಖಚಿತವಾಗಿದೆ.

1 / 6
ಕಳೆದ ವರ್ಷ ನಡೆದ ಆಸ್ಟ್ರೇಲಿಯಾ ವಿರುದ್ಧದ T20 ಸರಣಿಯ ವೇಳೆ ಬೆನ್ನು ನೋವಿಗೆ ತುತ್ತಾಗಿದ್ದ ಬುಮ್ರಾ ಟಿ20 ವಿಶ್ವಕಪ್ ತಪ್ಪಿಸಿಕೊಂಡಿದ್ದರು. ಇದಾಗ್ಯೂ ಅವರು ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಅಥವಾ ಐಪಿಎಲ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿತ್ತು.

ಕಳೆದ ವರ್ಷ ನಡೆದ ಆಸ್ಟ್ರೇಲಿಯಾ ವಿರುದ್ಧದ T20 ಸರಣಿಯ ವೇಳೆ ಬೆನ್ನು ನೋವಿಗೆ ತುತ್ತಾಗಿದ್ದ ಬುಮ್ರಾ ಟಿ20 ವಿಶ್ವಕಪ್ ತಪ್ಪಿಸಿಕೊಂಡಿದ್ದರು. ಇದಾಗ್ಯೂ ಅವರು ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಅಥವಾ ಐಪಿಎಲ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿತ್ತು.

2 / 6
ಆದರೆ ಬೆನ್ನು ನೋವಿನ ಸಮಸ್ಯೆಯಿಂದ ಗುಣಮುಖರಾಗದ ಬುಮ್ರಾ ಐಪಿಎಲ್​ನಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ಅಷ್ಟೇ ಅಲ್ಲದೆ ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಿಂದ ಸಹ ಹಿಂದೆ ಸರಿಯಲಿದ್ದಾರೆ. ಏಕೆಂದರೆ....

ಆದರೆ ಬೆನ್ನು ನೋವಿನ ಸಮಸ್ಯೆಯಿಂದ ಗುಣಮುಖರಾಗದ ಬುಮ್ರಾ ಐಪಿಎಲ್​ನಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ಅಷ್ಟೇ ಅಲ್ಲದೆ ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಿಂದ ಸಹ ಹಿಂದೆ ಸರಿಯಲಿದ್ದಾರೆ. ಏಕೆಂದರೆ....

3 / 6
ಜಸ್​ಪ್ರೀತ್ ಬುಮ್ರಾ ತಮ್ಮ ಬೆನ್ನು ನೋವಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಶಸ್ತ್ರಚಿಕಿತ್ಸೆಯ ಮೊರೆ ಹೋಗಲಿದ್ದಾರೆ ಎಂದು ವರದಿಯಾಗಿದೆ. ಇದರಿಂದ ಅವರು 6 ತಿಂಗಳುಗಳು ಕಾಲ ಮೈದಾನದಿಂದ ಹೊರಗುಳಿಯಲಿದ್ದಾರೆ.

ಜಸ್​ಪ್ರೀತ್ ಬುಮ್ರಾ ತಮ್ಮ ಬೆನ್ನು ನೋವಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಶಸ್ತ್ರಚಿಕಿತ್ಸೆಯ ಮೊರೆ ಹೋಗಲಿದ್ದಾರೆ ಎಂದು ವರದಿಯಾಗಿದೆ. ಇದರಿಂದ ಅವರು 6 ತಿಂಗಳುಗಳು ಕಾಲ ಮೈದಾನದಿಂದ ಹೊರಗುಳಿಯಲಿದ್ದಾರೆ.

4 / 6
ಅಂದರೆ ಜಸ್​ಪ್ರೀತ್ ಬುಮ್ರಾ ಸಂಪೂರ್ಣವಾಗಿ ಗುಣಮುಖರಾದರೆ ಮಾತ್ರ ಅಕ್ಟೋಬರ್​ನಲ್ಲಿ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. ಇದರೊಂದಿಗೆ ಐದಾರು ತಿಂಗಳುಗಳ ಕಾಲ ಬುಮ್ರಾ ಅವರನ್ನು ಟೀಮ್ ಇಂಡಿಯಾದ ಆಯ್ಕೆಗೆ ಪರಿಗಣಿಸುವುದಿಲ್ಲ ಎಂಬುದು ಕೂಡ ಕನ್​ಫರ್ಮ್ ಆಗಿದೆ.

ಅಂದರೆ ಜಸ್​ಪ್ರೀತ್ ಬುಮ್ರಾ ಸಂಪೂರ್ಣವಾಗಿ ಗುಣಮುಖರಾದರೆ ಮಾತ್ರ ಅಕ್ಟೋಬರ್​ನಲ್ಲಿ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. ಇದರೊಂದಿಗೆ ಐದಾರು ತಿಂಗಳುಗಳ ಕಾಲ ಬುಮ್ರಾ ಅವರನ್ನು ಟೀಮ್ ಇಂಡಿಯಾದ ಆಯ್ಕೆಗೆ ಪರಿಗಣಿಸುವುದಿಲ್ಲ ಎಂಬುದು ಕೂಡ ಕನ್​ಫರ್ಮ್ ಆಗಿದೆ.

5 / 6
ಜಸ್​ಪ್ರೀತ್ ಬುಮ್ರಾ ಕೊನೆಯ ಬಾರಿ ಟೀಮ್ ಇಂಡಿಯಾ ಪರ ಆಡಿದ್ದು ಸೆಪ್ಟೆಂಬರ್ 2022 ರಲ್ಲಿ. ಇದೀಗ ಮತ್ತೆ 6 ತಿಂಗಳುಗಳ ಕಾಲ ತಂಡದಿಂದ ಹೊರಗುಳಿಯಬೇಕಾದ ಪರಿಸ್ಥಿತಿ ಎದುರಾಗಿದೆ. ಇದಾಗ್ಯೂ ಏಕದಿನ ವಿಶ್ವಕಪ್​ ವೇಳೆ ಯಾರ್ಕರ್ ಮಾಂತ್ರಿಕ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡಲಿದ್ದಾರಾ ಕಾದು ನೋಡಬೇಕಿದೆ.

ಜಸ್​ಪ್ರೀತ್ ಬುಮ್ರಾ ಕೊನೆಯ ಬಾರಿ ಟೀಮ್ ಇಂಡಿಯಾ ಪರ ಆಡಿದ್ದು ಸೆಪ್ಟೆಂಬರ್ 2022 ರಲ್ಲಿ. ಇದೀಗ ಮತ್ತೆ 6 ತಿಂಗಳುಗಳ ಕಾಲ ತಂಡದಿಂದ ಹೊರಗುಳಿಯಬೇಕಾದ ಪರಿಸ್ಥಿತಿ ಎದುರಾಗಿದೆ. ಇದಾಗ್ಯೂ ಏಕದಿನ ವಿಶ್ವಕಪ್​ ವೇಳೆ ಯಾರ್ಕರ್ ಮಾಂತ್ರಿಕ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡಲಿದ್ದಾರಾ ಕಾದು ನೋಡಬೇಕಿದೆ.

6 / 6
Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ