AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪರೂಪದ ಸಾಧನೆಯ ಸನಿಹದಲ್ಲಿ ಜಸ್ಪ್ರೀತ್ ಬುಮ್ರಾ

ಭಾರತ-ಅಫ್ಘಾನಿಸ್ತಾನ ಟಿ20 ಸರಣಿಗೆ ಗಾಯದಿಂದ ಚೇತರಿಸಿದ ಜಸ್ಪ್ರೀತ್ ಬುಮ್ರಾ ಮರಳಿದ್ದಾರೆ. ಸೆಪ್ಟೆಂಬರ್ 13ಕ್ಕೆ ಆರಂಭವಾಗುವ ಸರಣಿಯ ಮೊದಲ ಪಂದ್ಯ ಬುಮ್ರಾಗೆ ವಿಶೇಷ. ಕೇವಲ ಒಂದು ವಿಕೆಟ್ ಪಡೆದರೆ, ಅವರು ಟಿ20 ಕ್ರಿಕೆಟ್‌ನಲ್ಲಿ 350 ವಿಕೆಟ್‌ಗಳ ಐತಿಹಾಸಿಕ ಮೈಲಿಗಲ್ಲು ತಲುಪಲಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಭಾರತದ ಮೂರನೇ ಬೌಲರ್ ಆಗಲಿದ್ದಾರೆ. ಚಾಹಲ್ ಮತ್ತು ಭುವನೇಶ್ವರ್ ನಂತರ ಈ ಪಟ್ಟಿಗೆ ಬುಮ್ರಾ ಸೇರಲಿದ್ದಾರೆ.

ಪೃಥ್ವಿಶಂಕರ
|

Updated on: Sep 12, 2026 | 9:52 PM

Share
ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಟಿ20 ಸರಣಿ ಸೆಪ್ಟೆಂಬರ್ 13 ರಂದು ಆರಂಭವಾಗಲಿದೆ. ಈ ಸರಣಿಗೆ ಟೀಂ ಇಂಡಿಯಾದ ಅನುಭವಿ ವೇಗಿ ಜಸ್ಪ್ರೀತ್ ಬುಮ್ರಾ ಅವರನ್ನು ತಂಡದಲ್ಲಿ ಆಯ್ಕೆ ಮಾಡಲಾಗಿದೆ. ಜುಲೈ ತಿಂಗಳಲ್ಲಿ ಇಂಗ್ಲೆಂಡ್‌ ವಿರುದ್ಧದ ಏಕದಿನ ಸರಣಿಯ ವೇಳೆ ಗಾಯಕ್ಕೆ ತುತ್ತಾಗಿದ್ದ ಬುಮ್ರಾ ಅಂದಿನಿಂದ ತಂಡದಿಂದ ಹೊರಗುಳಿದಿದ್ದರು(PC-PTI).

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಟಿ20 ಸರಣಿ ಸೆಪ್ಟೆಂಬರ್ 13 ರಂದು ಆರಂಭವಾಗಲಿದೆ. ಈ ಸರಣಿಗೆ ಟೀಂ ಇಂಡಿಯಾದ ಅನುಭವಿ ವೇಗಿ ಜಸ್ಪ್ರೀತ್ ಬುಮ್ರಾ ಅವರನ್ನು ತಂಡದಲ್ಲಿ ಆಯ್ಕೆ ಮಾಡಲಾಗಿದೆ. ಜುಲೈ ತಿಂಗಳಲ್ಲಿ ಇಂಗ್ಲೆಂಡ್‌ ವಿರುದ್ಧದ ಏಕದಿನ ಸರಣಿಯ ವೇಳೆ ಗಾಯಕ್ಕೆ ತುತ್ತಾಗಿದ್ದ ಬುಮ್ರಾ ಅಂದಿನಿಂದ ತಂಡದಿಂದ ಹೊರಗುಳಿದಿದ್ದರು(PC-PTI).

1 / 5
ಇದೀಗ ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿರುವ ಜಸ್ಪ್ರೀತ್ ಬುಮ್ರಾ ಅಫ್ಘಾನಿಸ್ತಾನ ವಿರುದ್ಧದ ಸರಣಿಯಲ್ಲಿ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಈ ಸರಣಿಯ ಮೊದಲ ಪಂದ್ಯ ಬುಮ್ರಾಗೆ ಮತ್ತಷ್ಟು ವಿಶೇಷವಾಗಿದೆ. ಏಕೆಂದರೆ ಈ ಪಂದ್ಯದಲ್ಲಿ ಬುಮ್ರಾ ಒಂದು ವಿಕೆಟ್ ಪಡೆದರೆ ಮತ್ತೊಂದು ಐತಿಹಾಸಿಕ ಮೈಲಿಗಲ್ಲು ದಾಟಲಿದ್ದಾರೆ(PC-PTI).

ಇದೀಗ ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿರುವ ಜಸ್ಪ್ರೀತ್ ಬುಮ್ರಾ ಅಫ್ಘಾನಿಸ್ತಾನ ವಿರುದ್ಧದ ಸರಣಿಯಲ್ಲಿ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಈ ಸರಣಿಯ ಮೊದಲ ಪಂದ್ಯ ಬುಮ್ರಾಗೆ ಮತ್ತಷ್ಟು ವಿಶೇಷವಾಗಿದೆ. ಏಕೆಂದರೆ ಈ ಪಂದ್ಯದಲ್ಲಿ ಬುಮ್ರಾ ಒಂದು ವಿಕೆಟ್ ಪಡೆದರೆ ಮತ್ತೊಂದು ಐತಿಹಾಸಿಕ ಮೈಲಿಗಲ್ಲು ದಾಟಲಿದ್ದಾರೆ(PC-PTI).

2 / 5
ಈ ಪಂದ್ಯದಲ್ಲಿ ಬುಮ್ರಾ 1 ವಿಕೆಟ್ ಪಡೆದರೆ, ಟಿ20 ಸ್ವರೂಪದಲ್ಲಿ 350 ವಿಕೆಟ್‌ಗಳನ್ನು ಪೂರೈಸುತ್ತಾರೆ. ಈ ಮೂಲಕ ಈ ಸಾಧನೆ ಮಾಡಿದ ಭಾರತದ ಮೂರನೇ ಆಟಗಾರ ಎನಿಸಿಕೊಳ್ಳಲಿದ್ದಾರೆ. ಬುಮ್ರಾಗೂ ಮೊದಲು, ಕೇವಲ ಇಬ್ಬರು ಭಾರತೀಯ ಬೌಲರ್‌ಗಳು ಈ ಸಾಧನೆ ಮಾಡಿದ್ದಾರೆ. ಅವರಲ್ಲಿ ಯುಜ್ವೇಂದ್ರ ಚಾಹಲ್ ಹಾಗೂ ಭುವನೇಶ್ವರ್ ಕುಮಾರ್ ಸೇರಿದ್ದಾರೆ(PC-PTI).

ಈ ಪಂದ್ಯದಲ್ಲಿ ಬುಮ್ರಾ 1 ವಿಕೆಟ್ ಪಡೆದರೆ, ಟಿ20 ಸ್ವರೂಪದಲ್ಲಿ 350 ವಿಕೆಟ್‌ಗಳನ್ನು ಪೂರೈಸುತ್ತಾರೆ. ಈ ಮೂಲಕ ಈ ಸಾಧನೆ ಮಾಡಿದ ಭಾರತದ ಮೂರನೇ ಆಟಗಾರ ಎನಿಸಿಕೊಳ್ಳಲಿದ್ದಾರೆ. ಬುಮ್ರಾಗೂ ಮೊದಲು, ಕೇವಲ ಇಬ್ಬರು ಭಾರತೀಯ ಬೌಲರ್‌ಗಳು ಈ ಸಾಧನೆ ಮಾಡಿದ್ದಾರೆ. ಅವರಲ್ಲಿ ಯುಜ್ವೇಂದ್ರ ಚಾಹಲ್ ಹಾಗೂ ಭುವನೇಶ್ವರ್ ಕುಮಾರ್ ಸೇರಿದ್ದಾರೆ(PC-PTI).

3 / 5
ಭಾರತದ ಪರ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ದಾಖಲೆ ಸ್ಟಾರ್ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ಅವರ ಹೆಸರಿನಲ್ಲಿದೆ. ಅವರು ತಮ್ಮ ವೃತ್ತಿಜೀವನದಲ್ಲಿ ಇದುವರೆಗೆ 343 ಪಂದ್ಯಗಳಲ್ಲಿ 396 ವಿಕೆಟ್‌ಗಳನ್ನು ಪಡೆದಿದ್ದಾರೆ. ಅವರ ನಂತರದ ಸ್ಥಾನದಲ್ಲಿರುವ ಭುವನೇಶ್ವರ್ ಕುಮಾರ್ 332 ಪಂದ್ಯಗಳಲ್ಲಿ 363 ವಿಕೆಟ್‌ಗಳನ್ನು ಪಡೆದಿದ್ದಾರೆ(PC-PTI).

ಭಾರತದ ಪರ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ದಾಖಲೆ ಸ್ಟಾರ್ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ಅವರ ಹೆಸರಿನಲ್ಲಿದೆ. ಅವರು ತಮ್ಮ ವೃತ್ತಿಜೀವನದಲ್ಲಿ ಇದುವರೆಗೆ 343 ಪಂದ್ಯಗಳಲ್ಲಿ 396 ವಿಕೆಟ್‌ಗಳನ್ನು ಪಡೆದಿದ್ದಾರೆ. ಅವರ ನಂತರದ ಸ್ಥಾನದಲ್ಲಿರುವ ಭುವನೇಶ್ವರ್ ಕುಮಾರ್ 332 ಪಂದ್ಯಗಳಲ್ಲಿ 363 ವಿಕೆಟ್‌ಗಳನ್ನು ಪಡೆದಿದ್ದಾರೆ(PC-PTI).

4 / 5
ಬುಮ್ರಾ ಬಗ್ಗೆ ಹೇಳುವುದಾದರೆ.. ಇಲ್ಲಿಯವರೆಗೆ 283 ಟಿ20 ಪಂದ್ಯಗಳನ್ನಾಡಿರುವ ಬುಮ್ರಾ 349 ವಿಕೆಟ್‌ಗಳನ್ನು ಪಡೆದಿದ್ದಾರೆ. ಅಫ್ಘಾನಿಸ್ತಾನ ವಿರುದ್ಧದ ಮೊದಲ ಟಿ20ಯಲ್ಲಿ ವಿಕೆಟ್ ಪಡೆಯುವ ಮೂಲಕ, ಅವರು 350 ವಿಕೆಟ್‌ಗಳ ಗಡಿ ತಲುಪಲಿದ್ದಾರೆ. ಈ ಮೂಲಕ ಚಾಹಲ್ ಹಾಗೂ ಭುವನೇಶ್ವರ್ ಅವರ ಪಟ್ಟಿ ಸೇರಿಕೊಳ್ಳಲಿದ್ದಾರೆ(PC-PTI).

ಬುಮ್ರಾ ಬಗ್ಗೆ ಹೇಳುವುದಾದರೆ.. ಇಲ್ಲಿಯವರೆಗೆ 283 ಟಿ20 ಪಂದ್ಯಗಳನ್ನಾಡಿರುವ ಬುಮ್ರಾ 349 ವಿಕೆಟ್‌ಗಳನ್ನು ಪಡೆದಿದ್ದಾರೆ. ಅಫ್ಘಾನಿಸ್ತಾನ ವಿರುದ್ಧದ ಮೊದಲ ಟಿ20ಯಲ್ಲಿ ವಿಕೆಟ್ ಪಡೆಯುವ ಮೂಲಕ, ಅವರು 350 ವಿಕೆಟ್‌ಗಳ ಗಡಿ ತಲುಪಲಿದ್ದಾರೆ. ಈ ಮೂಲಕ ಚಾಹಲ್ ಹಾಗೂ ಭುವನೇಶ್ವರ್ ಅವರ ಪಟ್ಟಿ ಸೇರಿಕೊಳ್ಳಲಿದ್ದಾರೆ(PC-PTI).

5 / 5
Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್