AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: 4ನೇ ಟೆಸ್ಟ್​ಗೆ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಅಲಭ್ಯ

India vs England Test: ಭಾರತ ಮತ್ತು ಇಂಗ್ಲೆಂಡ್ ನಡುವಣ 4ನೇ ಟೆಸ್ಟ್ ಪಂದ್ಯವು ಫೆಬ್ರವರಿ 23 ರಿಂದ ಶುರುವಾಗಲಿದೆ. ರಾಂಚಿಯಲ್ಲಿ ನಡೆಯಲಿರುವ ಈ ಪಂದ್ಯದಿಂದ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಹೊರಗುಳಿಯುವುದು ಬಹುತೇಕ ಖಚಿತವಾಗಿದೆ. ಅವರ ಬದಲಿಗೆ ಈ ಪಂದ್ಯದಲ್ಲಿ ಯುವ ಬೌಲರ್​ರೊಬ್ಬರು ಕಣಕ್ಕಿಳಿಯುವ ಸಾಧ್ಯತೆಯಿದೆ.

TV9 Web
| Edited By: |

Updated on: Feb 19, 2024 | 9:57 AM

Share
ಭಾರತ ಮತ್ತು ಇಂಗ್ಲೆಂಡ್ (India vs England) ನಡುವಣ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೂರು ಪಂದ್ಯಗಳು ಮುಗಿದಿವೆ. ಹೈದಾರಾಬಾದ್​ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಜಯ ಸಾಧಿಸಿದರೆ, ವಿಶಾಖಪಟ್ಟಣಂ ಹಾಗೂ ರಾಜ್​ಕೋಟ್​ನಲ್ಲಿ ನಡೆದ ಮೂರನೇ ಮತ್ತು ನಾಲ್ಕನೇ ಟೆಸ್ಟ್ ಪಂದ್ಯಗಳಲ್ಲಿ ಟೀಮ್ ಇಂಡಿಯಾ (Team India) ಜಯಭೇರಿ ಬಾರಿಸಿದೆ. ಇದೀಗ ಉಭಯ ತಂಡಗಳು ನಾಲ್ಕನೇ ಪಂದ್ಯಕ್ಕಾಗಿ ಸಜ್ಜಾಗಬೇಕಿದೆ.

ಭಾರತ ಮತ್ತು ಇಂಗ್ಲೆಂಡ್ (India vs England) ನಡುವಣ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೂರು ಪಂದ್ಯಗಳು ಮುಗಿದಿವೆ. ಹೈದಾರಾಬಾದ್​ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಜಯ ಸಾಧಿಸಿದರೆ, ವಿಶಾಖಪಟ್ಟಣಂ ಹಾಗೂ ರಾಜ್​ಕೋಟ್​ನಲ್ಲಿ ನಡೆದ ಮೂರನೇ ಮತ್ತು ನಾಲ್ಕನೇ ಟೆಸ್ಟ್ ಪಂದ್ಯಗಳಲ್ಲಿ ಟೀಮ್ ಇಂಡಿಯಾ (Team India) ಜಯಭೇರಿ ಬಾರಿಸಿದೆ. ಇದೀಗ ಉಭಯ ತಂಡಗಳು ನಾಲ್ಕನೇ ಪಂದ್ಯಕ್ಕಾಗಿ ಸಜ್ಜಾಗಬೇಕಿದೆ.

1 / 6
ಫೆಬ್ರವರಿ 23 ರಿಂದ ರಾಂಚಿಯಲ್ಲಿ ಶುರುವಾಗಲಿರುವ ಈ ಪಂದ್ಯಕ್ಕೆ ಟೀಮ್ ಇಂಡಿಯಾದ ಸ್ಟಾರ್ ಬೌಲರ್ ಜಸ್​ಪ್ರೀತ್ ಬುಮ್ರಾ ಅಲಭ್ಯರಾಗಲಿದ್ದಾರೆ. ಸತತ ಪಂದ್ಯಗಳನ್ನಾಡಿ ಬಳಲಿರುವ ಬುಮ್ರಾ ಅವರಿಗೆ ವಿಶ್ರಾಂತಿ ನೀಡಲು ಬಿಸಿಸಿಐ ಸೂಚಿಸಿದೆ. ಹೀಗಾಗಿ ನಾಲ್ಕನೇ ಪಂದ್ಯದಲ್ಲಿ ಅವರು ಕಣಕ್ಕಿಳಿಯುವುದಿಲ್ಲ ಎಂದು ತಿಳಿದು ಬಂದಿದೆ.

ಫೆಬ್ರವರಿ 23 ರಿಂದ ರಾಂಚಿಯಲ್ಲಿ ಶುರುವಾಗಲಿರುವ ಈ ಪಂದ್ಯಕ್ಕೆ ಟೀಮ್ ಇಂಡಿಯಾದ ಸ್ಟಾರ್ ಬೌಲರ್ ಜಸ್​ಪ್ರೀತ್ ಬುಮ್ರಾ ಅಲಭ್ಯರಾಗಲಿದ್ದಾರೆ. ಸತತ ಪಂದ್ಯಗಳನ್ನಾಡಿ ಬಳಲಿರುವ ಬುಮ್ರಾ ಅವರಿಗೆ ವಿಶ್ರಾಂತಿ ನೀಡಲು ಬಿಸಿಸಿಐ ಸೂಚಿಸಿದೆ. ಹೀಗಾಗಿ ನಾಲ್ಕನೇ ಪಂದ್ಯದಲ್ಲಿ ಅವರು ಕಣಕ್ಕಿಳಿಯುವುದಿಲ್ಲ ಎಂದು ತಿಳಿದು ಬಂದಿದೆ.

2 / 6
ಕಳೆದ ಮೂರು ವಾರಗಳಲ್ಲಿ ಜಸ್​ಪ್ರೀತ್ ಬುಮ್ರಾ  8.3, 16.1, 15.5, 17.2, 15 ಮತ್ತು 8 ಓವರ್‌ಗಳನ್ನು ಎಸೆದಿದ್ದಾರೆ. ಅಂದರೆ ಮೊಹಮ್ಮದ್ ಶಮಿಯ ಅನುಪಸ್ಥಿತಿ ನಡುವೆ ಬುಮ್ರಾ ಏಕಾಂಗಿಯಾಗಿ 80 ಓವರ್​ಗಳನ್ನು ಬೌಲಿಂಗ್ ಮಾಡಿದ್ದಾರೆ. ಅಲ್ಲದೆ ಟೀಮ್ ಇಂಡಿಯಾ ಬೌಲಿಂಗ್ ಲೈನಪ್ ಅನ್ನು ಮುನ್ನಡೆಸಿದ್ದಾರೆ.

ಕಳೆದ ಮೂರು ವಾರಗಳಲ್ಲಿ ಜಸ್​ಪ್ರೀತ್ ಬುಮ್ರಾ 8.3, 16.1, 15.5, 17.2, 15 ಮತ್ತು 8 ಓವರ್‌ಗಳನ್ನು ಎಸೆದಿದ್ದಾರೆ. ಅಂದರೆ ಮೊಹಮ್ಮದ್ ಶಮಿಯ ಅನುಪಸ್ಥಿತಿ ನಡುವೆ ಬುಮ್ರಾ ಏಕಾಂಗಿಯಾಗಿ 80 ಓವರ್​ಗಳನ್ನು ಬೌಲಿಂಗ್ ಮಾಡಿದ್ದಾರೆ. ಅಲ್ಲದೆ ಟೀಮ್ ಇಂಡಿಯಾ ಬೌಲಿಂಗ್ ಲೈನಪ್ ಅನ್ನು ಮುನ್ನಡೆಸಿದ್ದಾರೆ.

3 / 6
ಹೀಗೆ ಸತತ ಪಂದ್ಯಗಳಿಂದ ಬಳಲಿರುವ ಜಸ್​ಪ್ರೀತ್ ಬುಮ್ರಾ ಅವರಿಗೆ ವಿಶ್ರಾಂತಿ ನೀಡುವುದು ಅಗತ್ಯ. ಏಕೆಂದರೆ ಜೂನ್ 1 ರಿಂದ ಟಿ20 ವಿಶ್ವಕಪ್​ ಕೂಡ ಶುರುವಾಗಲಿದೆ. ಅದಕ್ಕೂ ಮುನ್ನ ಬುಮ್ರಾ ಅವರಿಗೆ ರೆಸ್ಟ್ ನೀಡಬೇಕಾದ ಅನಿವಾರ್ಯತೆಯನ್ನು ಬಿಸಿಸಿಐ ಮನಗಂಡಿದೆ. ಅದರಂತೆ ಫೆಬ್ರವರಿ 23 ರಿಂದ ಶುರುವಾಗಲಿರುವ ಮೂರನೇ ಪಂದ್ಯಕ್ಕೆ ಯಾರ್ಕರ್ ಕಿಂಗ್ ಅಲಭ್ಯರಾಗುವುದು ಬಹುತೇಕ ಖಚಿತ.

ಹೀಗೆ ಸತತ ಪಂದ್ಯಗಳಿಂದ ಬಳಲಿರುವ ಜಸ್​ಪ್ರೀತ್ ಬುಮ್ರಾ ಅವರಿಗೆ ವಿಶ್ರಾಂತಿ ನೀಡುವುದು ಅಗತ್ಯ. ಏಕೆಂದರೆ ಜೂನ್ 1 ರಿಂದ ಟಿ20 ವಿಶ್ವಕಪ್​ ಕೂಡ ಶುರುವಾಗಲಿದೆ. ಅದಕ್ಕೂ ಮುನ್ನ ಬುಮ್ರಾ ಅವರಿಗೆ ರೆಸ್ಟ್ ನೀಡಬೇಕಾದ ಅನಿವಾರ್ಯತೆಯನ್ನು ಬಿಸಿಸಿಐ ಮನಗಂಡಿದೆ. ಅದರಂತೆ ಫೆಬ್ರವರಿ 23 ರಿಂದ ಶುರುವಾಗಲಿರುವ ಮೂರನೇ ಪಂದ್ಯಕ್ಕೆ ಯಾರ್ಕರ್ ಕಿಂಗ್ ಅಲಭ್ಯರಾಗುವುದು ಬಹುತೇಕ ಖಚಿತ.

4 / 6
ಇನ್ನು ಮಾರ್ಚ್ 7 ರಂದು ಧರ್ಮಶಾಲಾದಲ್ಲಿ ನಡೆಯಲಿರುವ ಈ ಸರಣಿಯ ಅಂತಿಮ ಪಂದ್ಯದ ವೇಳೆಗೆ ಬುಮ್ರಾ ತಂಡವನ್ನು ಕೂಡಿಕೊಳ್ಳಲಿದ್ದಾರೆ. ಇತ್ತ ನಾಲ್ಕನೇ ಟೆಸ್ಟ್ ಪಂದ್ಯದಿಂದ ಜಸ್​ಪ್ರೀತ್ ಹೊರಗುಳಿದರೆ ಅವರ ಬದಲಿಗೆ ಮುಕೇಶ್ ಕುಮಾರ್ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ.

ಇನ್ನು ಮಾರ್ಚ್ 7 ರಂದು ಧರ್ಮಶಾಲಾದಲ್ಲಿ ನಡೆಯಲಿರುವ ಈ ಸರಣಿಯ ಅಂತಿಮ ಪಂದ್ಯದ ವೇಳೆಗೆ ಬುಮ್ರಾ ತಂಡವನ್ನು ಕೂಡಿಕೊಳ್ಳಲಿದ್ದಾರೆ. ಇತ್ತ ನಾಲ್ಕನೇ ಟೆಸ್ಟ್ ಪಂದ್ಯದಿಂದ ಜಸ್​ಪ್ರೀತ್ ಹೊರಗುಳಿದರೆ ಅವರ ಬದಲಿಗೆ ಮುಕೇಶ್ ಕುಮಾರ್ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ.

5 / 6
ಭಾರತ ಟೆಸ್ಟ್​ ತಂಡ: ರೋಹಿತ್ ಶರ್ಮಾ (ನಾಯಕ), ಜಸ್​ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್, ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ಆರ್ ಅಶ್ವಿನ್, ರವೀಂದ್ರ ಜಡೇಜಾ*, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಆಕಾಶ್ ದೀಪ್.

ಭಾರತ ಟೆಸ್ಟ್​ ತಂಡ: ರೋಹಿತ್ ಶರ್ಮಾ (ನಾಯಕ), ಜಸ್​ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್, ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ಆರ್ ಅಶ್ವಿನ್, ರವೀಂದ್ರ ಜಡೇಜಾ*, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಆಕಾಶ್ ದೀಪ್.

6 / 6
Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?