AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jasprit Bumrah: ಆಂಗ್ಲರ ನಾಡಲ್ಲಿ ಬುಮ್ರಾ ಬೂಮ್ ಬೂಮ್ ದಾಖಲೆ

Jasprit Bumrah: ಕೇವಲ 19 ರನ್​ ನೀಡಿ 6 ವಿಕೆಟ್ ಕಬಳಿಸುವ ಮೂಲಕ ಜಸ್​ಪ್ರೀತ್ ಬುಮ್ರಾ ಹೊಸ ಇತಿಹಾಸ ಬರೆದಿದ್ದಾರೆ. ಹಾಗೆಯೇ ಇಂಗ್ಲೆಂಡ್​ನಲ್ಲಿ ಕಡಿಮೆ ರನ್ ನೀಡಿ 5 ಕ್ಕಿಂತ ಹೆಚ್ಚು ವಿಕೆಟ್ ಪಡೆದ ವಿಶ್ವದ 4ನೇ ಬೌಲರ್ ಎನಿಸಿಕೊಂಡಿದ್ದಾರೆ.

TV9 Web
| Edited By: |

Updated on: Jul 12, 2022 | 8:24 PM

Share
ಕಿಯಾ ಓವಲ್​ ಮೈದಾನದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಬೌಲರ್​ಗಳ ಕರಾರುವಾಕ್ ದಾಳಿಗೆ ಇಂಗ್ಲೆಂಡ್ ತಂಡದ ಬ್ಯಾಟ್ಸ್​​ಮನ್​ಗಳು ತತ್ತರಿಸಿದ್ದಾರೆ. ಮಾರಕ ದಾಳಿ ಸಂಘಟಿಸಿದ ಟೀಮ್ ಇಂಡಿಯಾ ವೇಗಿಗಳು ಕೇವಲ 110 ರನ್​ಗಳಿಗೆ ಇಂಗ್ಲೆಂಡ್ ತಂಡವನ್ನು ಆಲೌಟ್ ಮಾಡಿದೆ. ವಿಶೇಷ ಎಂದರೆ ಈ ಪಂದ್ಯದಲ್ಲಿ ಜಸ್​ಪ್ರೀತ್ ಬುಮ್ರಾ 6 ವಿಕೆಟ್​ಗಳನ್ನು ಉರುಳಿಸುವ ಮೂಲಕ ಭರ್ಜರಿ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಕಿಯಾ ಓವಲ್​ ಮೈದಾನದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಬೌಲರ್​ಗಳ ಕರಾರುವಾಕ್ ದಾಳಿಗೆ ಇಂಗ್ಲೆಂಡ್ ತಂಡದ ಬ್ಯಾಟ್ಸ್​​ಮನ್​ಗಳು ತತ್ತರಿಸಿದ್ದಾರೆ. ಮಾರಕ ದಾಳಿ ಸಂಘಟಿಸಿದ ಟೀಮ್ ಇಂಡಿಯಾ ವೇಗಿಗಳು ಕೇವಲ 110 ರನ್​ಗಳಿಗೆ ಇಂಗ್ಲೆಂಡ್ ತಂಡವನ್ನು ಆಲೌಟ್ ಮಾಡಿದೆ. ವಿಶೇಷ ಎಂದರೆ ಈ ಪಂದ್ಯದಲ್ಲಿ ಜಸ್​ಪ್ರೀತ್ ಬುಮ್ರಾ 6 ವಿಕೆಟ್​ಗಳನ್ನು ಉರುಳಿಸುವ ಮೂಲಕ ಭರ್ಜರಿ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

1 / 5
ಈ ಪಂದ್ಯದಲ್ಲಿ 7.2 ಓವರ್ ಬೌಲಿಂಗ್ ಮಾಡಿದ್ದ ಬುಮ್ರಾ ಕೇವಲ 19 ರನ್​ ನೀಡಿದ್ದರು. ಅಲ್ಲದೆ ಜೇಸನ್ ರಾಯ್, ಜಾನಿ ಬೈರ್​ಸ್ಟೋವ್, ಜೋ ರೂಟ್, ಲಿಯಾಮ್ ಲಿವಿಂಗ್​ಸ್ಟೋನ್, ಡೇವಿಡ್ ವಿಲ್ಲಿ ಹಾಗೂ ಬ್ರೈಡೆನ್ ಕಾರ್ಸೆ ವಿಕೆಟ್ ಉರುಳಿಸಿದ್ದರು. ಈ ಮೂಲಕ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್​ನಲ್ಲಿ 6 ವಿಕೆಟ್ ಪಡೆದ ಮೊದಲ ಭಾರತೀಯ ವೇಗಿ ಎನಿಸಿಕೊಂಡಿದ್ದಾರೆ.

ಈ ಪಂದ್ಯದಲ್ಲಿ 7.2 ಓವರ್ ಬೌಲಿಂಗ್ ಮಾಡಿದ್ದ ಬುಮ್ರಾ ಕೇವಲ 19 ರನ್​ ನೀಡಿದ್ದರು. ಅಲ್ಲದೆ ಜೇಸನ್ ರಾಯ್, ಜಾನಿ ಬೈರ್​ಸ್ಟೋವ್, ಜೋ ರೂಟ್, ಲಿಯಾಮ್ ಲಿವಿಂಗ್​ಸ್ಟೋನ್, ಡೇವಿಡ್ ವಿಲ್ಲಿ ಹಾಗೂ ಬ್ರೈಡೆನ್ ಕಾರ್ಸೆ ವಿಕೆಟ್ ಉರುಳಿಸಿದ್ದರು. ಈ ಮೂಲಕ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್​ನಲ್ಲಿ 6 ವಿಕೆಟ್ ಪಡೆದ ಮೊದಲ ಭಾರತೀಯ ವೇಗಿ ಎನಿಸಿಕೊಂಡಿದ್ದಾರೆ.

2 / 5
ಅಂದರೆ ಇಂಗ್ಲೆಂಡ್​ನಲ್ಲಿ ಬುಮ್ರಾ ಹೊರತುಪಡಿಸಿದ ಭಾರತದ ಯಾವುದೇ ವೇಗಿಯು 6 ವಿಕೆಟ್​ಗಳನ್ನು ಪಡೆದಿರಲಿಲ್ಲ. ಇದೀಗ ಈ ಸಾಧನೆ ಮಾಡಿದ ಭಾರತದ ಮೊದಲ ವೇಗದ ಬೌಲರ್ ಎನಿಸಿಕೊಂಡಿದ್ದಾರೆ. ಅಲ್ಲದೆ ಇಂಗ್ಲೆಂಡ್ ವಿರುದ್ದ ಕಡಿಮೆ ರನ್​ಗೆ ಅತೀ ಹೆಚ್ಚು ವಿಕೆಟ್ ಪಡೆದ ಟೀಮ್ ಇಂಡಿಯಾ ಬೌಲರ್​ ಎಂಬ ದಾಖಲೆ ಕೂಡ ಬುಮ್ರಾ ಪಾಲಾಗಿದೆ.

ಅಂದರೆ ಇಂಗ್ಲೆಂಡ್​ನಲ್ಲಿ ಬುಮ್ರಾ ಹೊರತುಪಡಿಸಿದ ಭಾರತದ ಯಾವುದೇ ವೇಗಿಯು 6 ವಿಕೆಟ್​ಗಳನ್ನು ಪಡೆದಿರಲಿಲ್ಲ. ಇದೀಗ ಈ ಸಾಧನೆ ಮಾಡಿದ ಭಾರತದ ಮೊದಲ ವೇಗದ ಬೌಲರ್ ಎನಿಸಿಕೊಂಡಿದ್ದಾರೆ. ಅಲ್ಲದೆ ಇಂಗ್ಲೆಂಡ್ ವಿರುದ್ದ ಕಡಿಮೆ ರನ್​ಗೆ ಅತೀ ಹೆಚ್ಚು ವಿಕೆಟ್ ಪಡೆದ ಟೀಮ್ ಇಂಡಿಯಾ ಬೌಲರ್​ ಎಂಬ ದಾಖಲೆ ಕೂಡ ಬುಮ್ರಾ ಪಾಲಾಗಿದೆ.

3 / 5
ಈ ಹಿಂದೆ ಈ ದಾಖಲೆಯು ಆಶಿಶ್ ನೆಹ್ರಾ ಹೆಸರಿನಲ್ಲಿತ್ತು. ನೆಹ್ರಾ 2003 ರ ವಿಶ್ವಕಪ್​ನಲ್ಲಿ ಇಂಗ್ಲೆಂಡ್ ವಿರುದ್ದ 23 ರನ್​ ನೀಡಿ 6 ವಿಕೆಟ್ ಕಬಳಿಸಿದ್ದರು. ಇದು ಆಂಗ್ಲರ ವಿರುದ್ದ ಏಕದಿನ ಕ್ರಿಕೆಟ್​ನಲ್ಲಿ ಭಾರತೀಯ ಬೌಲರ್​ರೊಬ್ಬರ ಶ್ರೇಷ್ಠ ಸಾಧನೆಯಾಗಿತ್ತು.

ಈ ಹಿಂದೆ ಈ ದಾಖಲೆಯು ಆಶಿಶ್ ನೆಹ್ರಾ ಹೆಸರಿನಲ್ಲಿತ್ತು. ನೆಹ್ರಾ 2003 ರ ವಿಶ್ವಕಪ್​ನಲ್ಲಿ ಇಂಗ್ಲೆಂಡ್ ವಿರುದ್ದ 23 ರನ್​ ನೀಡಿ 6 ವಿಕೆಟ್ ಕಬಳಿಸಿದ್ದರು. ಇದು ಆಂಗ್ಲರ ವಿರುದ್ದ ಏಕದಿನ ಕ್ರಿಕೆಟ್​ನಲ್ಲಿ ಭಾರತೀಯ ಬೌಲರ್​ರೊಬ್ಬರ ಶ್ರೇಷ್ಠ ಸಾಧನೆಯಾಗಿತ್ತು.

4 / 5
ಇದೀಗ ಕೇವಲ 19 ರನ್​ ನೀಡಿ 6 ವಿಕೆಟ್ ಕಬಳಿಸುವ ಮೂಲಕ ಜಸ್​ಪ್ರೀತ್ ಬುಮ್ರಾ ಹೊಸ ಇತಿಹಾಸ ಬರೆದಿದ್ದಾರೆ. ಹಾಗೆಯೇ ಇಂಗ್ಲೆಂಡ್​ನಲ್ಲಿ ಕಡಿಮೆ ರನ್ ನೀಡಿ 5 ಕ್ಕಿಂತ ಹೆಚ್ಚು ವಿಕೆಟ್ ಪಡೆದ ವಿಶ್ವದ 4ನೇ ಬೌಲರ್ ಎನಿಸಿಕೊಂಡಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ಏಕೈಕ ಭಾರತೀಯ ವೇಗಿ ಎಂಬ ದಾಖಲೆ ಜಸ್​ಪ್ರೀತ್ ಬುಮ್ರಾ ಪಾಲಾಗಿದೆ.

ಇದೀಗ ಕೇವಲ 19 ರನ್​ ನೀಡಿ 6 ವಿಕೆಟ್ ಕಬಳಿಸುವ ಮೂಲಕ ಜಸ್​ಪ್ರೀತ್ ಬುಮ್ರಾ ಹೊಸ ಇತಿಹಾಸ ಬರೆದಿದ್ದಾರೆ. ಹಾಗೆಯೇ ಇಂಗ್ಲೆಂಡ್​ನಲ್ಲಿ ಕಡಿಮೆ ರನ್ ನೀಡಿ 5 ಕ್ಕಿಂತ ಹೆಚ್ಚು ವಿಕೆಟ್ ಪಡೆದ ವಿಶ್ವದ 4ನೇ ಬೌಲರ್ ಎನಿಸಿಕೊಂಡಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ಏಕೈಕ ಭಾರತೀಯ ವೇಗಿ ಎಂಬ ದಾಖಲೆ ಜಸ್​ಪ್ರೀತ್ ಬುಮ್ರಾ ಪಾಲಾಗಿದೆ.

5 / 5
Web contact
Web contact

TV9 Kannada

Read More
Follow Us
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ