AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರನ್ ನೀಡದೆ ಓವರ್ ಮುಗಿಸುವುದರಲ್ಲಿ ವಿಶ್ವ ದಾಖಲೆ ನಿರ್ಮಿಸಿದ ಜಸ್ಪ್ರೀತ್ ಬುಮ್ರಾ

ಅಫ್ಘಾನಿಸ್ತಾನ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ ಐತಿಹಾಸಿಕ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಪಂದ್ಯದ ಮೊದಲ ಓವರ್‌ನಲ್ಲಿ ಮೇಡನ್ ಎಸೆದು, ಐಸಿಸಿ ಪೂರ್ಣ ಸದಸ್ಯ ರಾಷ್ಟ್ರಗಳ ಕ್ರಿಕೆಟಿಗರಲ್ಲಿ ಅತಿ ಹೆಚ್ಚು (13) ಅಂತರರಾಷ್ಟ್ರೀಯ ಟಿ20 ಮೇಡನ್ ಓವರ್‌ಗಳನ್ನು ಬೌಲ್ ಮಾಡಿದ ಕೀರ್ತಿಗೆ ಭಾಜನರಾದರು. ಈ ಮೂಲಕ ಜಿಂಬಾಬ್ವೆಯ ರಿಚರ್ಡ್ ನ್ಗಾರವಾ ಅವರ ದಾಖಲೆಯನ್ನು ಹಿಂದಿಕ್ಕಿ, ಟೀಂ ಇಂಡಿಯಾಕ್ಕೆ ಅದ್ಭುತ ಆರಂಭ ಒದಗಿಸಿದರು.

ಪೃಥ್ವಿಶಂಕರ
|

Updated on: Sep 15, 2026 | 8:52 PM

Share
ಅಫ್ಘಾನಿಸ್ತಾನ ವಿರುದ್ಧದ ಎರಡನೇ ಟಿ20ಪಂದ್ಯದಲ್ಲಿ ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ವಿಶ್ವ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡ ಭಾರತ ತಂಡಕ್ಕೆ ಬುಮ್ರಾ ಅದ್ಭುತ ಆರಂಭ ನೀಡಿದರು. ಪಂದ್ಯದ ಮೊದಲ ಓವರ್‌ನಲ್ಲೇ ಮೇಡನ್ ಓವರ್ ಎಸೆದ ಅವರು, ಐಸಿಸಿ ಪೂರ್ಣ ಸದಸ್ಯ ರಾಷ್ಟ್ರಗಳಲ್ಲಿ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಮೇಡನ್ ಓವರ್‌ಗಳನ್ನು ಎಸೆದ ಬೌಲರ್ ಎಂಬ ದಾಖಲೆ ನಿರ್ಮಿಸಿದರು(PC-PTI).

ಅಫ್ಘಾನಿಸ್ತಾನ ವಿರುದ್ಧದ ಎರಡನೇ ಟಿ20ಪಂದ್ಯದಲ್ಲಿ ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ವಿಶ್ವ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡ ಭಾರತ ತಂಡಕ್ಕೆ ಬುಮ್ರಾ ಅದ್ಭುತ ಆರಂಭ ನೀಡಿದರು. ಪಂದ್ಯದ ಮೊದಲ ಓವರ್‌ನಲ್ಲೇ ಮೇಡನ್ ಓವರ್ ಎಸೆದ ಅವರು, ಐಸಿಸಿ ಪೂರ್ಣ ಸದಸ್ಯ ರಾಷ್ಟ್ರಗಳಲ್ಲಿ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಮೇಡನ್ ಓವರ್‌ಗಳನ್ನು ಎಸೆದ ಬೌಲರ್ ಎಂಬ ದಾಖಲೆ ನಿರ್ಮಿಸಿದರು(PC-PTI).

1 / 5
ಅಲ್ಲದೆ ತಮ್ಮ ವೃತ್ತಿಜೀವನದಲ್ಲಿ ಮೊದಲ ಬಾರಿಗೆ ಮೊದಲ ಇನ್ನಿಂಗ್ಸ್‌ನಲ್ಲಿ ಮೇಡನ್ ಓವರ್ ಬೌಲ್ ಮಾಡಿದ ಸಾಧನೆಯನ್ನು ಬುಮ್ರಾ ಮಾಡಿದರು. ಈ ಪಂದ್ಯದ ಮೊದಲ ಓವರ್‌ನಲ್ಲಿ, ಅಫ್ಘಾನಿಸ್ತಾನದ ಆರಂಭಿಕ ಬ್ಯಾಟ್ಸ್‌ಮನ್ ಮತ್ತು ನಾಯಕ ಇಬ್ರಾಹಿಂ ಜದ್ರಾನ್​ಗೆ ಖಾತೆ ತೆರೆಯಲು ಸಾಧ್ಯವಾಗಲಿಲ್ಲ(PC-PTI).

ಅಲ್ಲದೆ ತಮ್ಮ ವೃತ್ತಿಜೀವನದಲ್ಲಿ ಮೊದಲ ಬಾರಿಗೆ ಮೊದಲ ಇನ್ನಿಂಗ್ಸ್‌ನಲ್ಲಿ ಮೇಡನ್ ಓವರ್ ಬೌಲ್ ಮಾಡಿದ ಸಾಧನೆಯನ್ನು ಬುಮ್ರಾ ಮಾಡಿದರು. ಈ ಪಂದ್ಯದ ಮೊದಲ ಓವರ್‌ನಲ್ಲಿ, ಅಫ್ಘಾನಿಸ್ತಾನದ ಆರಂಭಿಕ ಬ್ಯಾಟ್ಸ್‌ಮನ್ ಮತ್ತು ನಾಯಕ ಇಬ್ರಾಹಿಂ ಜದ್ರಾನ್​ಗೆ ಖಾತೆ ತೆರೆಯಲು ಸಾಧ್ಯವಾಗಲಿಲ್ಲ(PC-PTI).

2 / 5
ಇದರೊಂದಿಗೆ ಬುಮ್ರಾ ಅಂತರರಾಷ್ಟ್ರೀಯ ಟಿ20  ಪಂದ್ಯಗಳಲ್ಲಿ ಒಟ್ಟು 13 ಮೇಡನ್ ಓವರ್‌ಗಳನ್ನು ಎಸೆದಿದ್ದಾರೆ. ಇದು ಐಸಿಸಿ ಪೂರ್ಣ ಸದಸ್ಯ ರಾಷ್ಟ್ರಗಳಲ್ಲಿ ಹೊಸ ವಿಶ್ವ ದಾಖಲೆಯಾಗಿದೆ. ಈ ಹಿಂದೆ 12 ಮೇಡನ್ ಓವರ್‌ಗಳನ್ನು ಎಸೆದಿದ್ದ ಜಿಂಬಾಬ್ವೆಯ ರಿಚರ್ಡ್ ನ್ಗಾರವಾ ಅವರೊಂದಿಗೆ ಜಂಟಿಯಾಗಿ ಮೊದಲ ಸ್ಥಾನದಲ್ಲಿದ್ದ ಬುಮ್ರಾ ಇದೀಗ ಅವರನ್ನು ಹಿಂದಿಕ್ಕಿದ್ದಾರೆ(PC-PTI).

ಇದರೊಂದಿಗೆ ಬುಮ್ರಾ ಅಂತರರಾಷ್ಟ್ರೀಯ ಟಿ20 ಪಂದ್ಯಗಳಲ್ಲಿ ಒಟ್ಟು 13 ಮೇಡನ್ ಓವರ್‌ಗಳನ್ನು ಎಸೆದಿದ್ದಾರೆ. ಇದು ಐಸಿಸಿ ಪೂರ್ಣ ಸದಸ್ಯ ರಾಷ್ಟ್ರಗಳಲ್ಲಿ ಹೊಸ ವಿಶ್ವ ದಾಖಲೆಯಾಗಿದೆ. ಈ ಹಿಂದೆ 12 ಮೇಡನ್ ಓವರ್‌ಗಳನ್ನು ಎಸೆದಿದ್ದ ಜಿಂಬಾಬ್ವೆಯ ರಿಚರ್ಡ್ ನ್ಗಾರವಾ ಅವರೊಂದಿಗೆ ಜಂಟಿಯಾಗಿ ಮೊದಲ ಸ್ಥಾನದಲ್ಲಿದ್ದ ಬುಮ್ರಾ ಇದೀಗ ಅವರನ್ನು ಹಿಂದಿಕ್ಕಿದ್ದಾರೆ(PC-PTI).

3 / 5
ಭಾರತ ಪರ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಇನ್ನಿಂಗ್ಸ್‌ನ ಮೊದಲ ಓವರ್ ಮೇಡನ್ ಮಾಡಿದ ಬೌಲರ್​ಗಳ ಪಟ್ಟಿಯಲ್ಲಿ ಭುವನೇಶ್ವರ್ ಕುಮಾರ್ ಅಗ್ರಸ್ಥಾನದಲ್ಲಿದ್ದಾರೆ. ಭುವಿ ಇದುವರೆಗೆ 6 ಬಾರಿ ಈ ಸಾಧನೆ ಮಾಡಿದ್ದಾರೆ. ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಅರ್ಶ್‌ದೀಪ್ ಸಿಂಗ್ 2 ಬಾರಿ ಈ ಸಾಧನೆ ಮಾಡಿದ್ದಾರೆ(PC-PTI).

ಭಾರತ ಪರ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಇನ್ನಿಂಗ್ಸ್‌ನ ಮೊದಲ ಓವರ್ ಮೇಡನ್ ಮಾಡಿದ ಬೌಲರ್​ಗಳ ಪಟ್ಟಿಯಲ್ಲಿ ಭುವನೇಶ್ವರ್ ಕುಮಾರ್ ಅಗ್ರಸ್ಥಾನದಲ್ಲಿದ್ದಾರೆ. ಭುವಿ ಇದುವರೆಗೆ 6 ಬಾರಿ ಈ ಸಾಧನೆ ಮಾಡಿದ್ದಾರೆ. ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಅರ್ಶ್‌ದೀಪ್ ಸಿಂಗ್ 2 ಬಾರಿ ಈ ಸಾಧನೆ ಮಾಡಿದ್ದಾರೆ(PC-PTI).

4 / 5
ಉಳಿದಂತೆ ಹರ್ಭಜನ್ ಸಿಂಗ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ದೀಪಕ್ ಚಹಾರ್, ಮೊಹಮ್ಮದ್ ಸಿರಾಜ್, ಆಶಿಶ್ ನೆಹ್ರಾ, ಪ್ರವೀಣ್ ಕುಮಾರ್, ಬರೀಂದರ್ ಸ್ರಾನ್ ಮತ್ತು ಜಸ್ಪ್ರೀತ್ ಬುಮ್ರಾ ತಲಾ 1 ಬಾರಿ ಈ ಸಾಧನೆ ಮಾಡಿದ್ದಾರೆ(PC-PTI).

ಉಳಿದಂತೆ ಹರ್ಭಜನ್ ಸಿಂಗ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ದೀಪಕ್ ಚಹಾರ್, ಮೊಹಮ್ಮದ್ ಸಿರಾಜ್, ಆಶಿಶ್ ನೆಹ್ರಾ, ಪ್ರವೀಣ್ ಕುಮಾರ್, ಬರೀಂದರ್ ಸ್ರಾನ್ ಮತ್ತು ಜಸ್ಪ್ರೀತ್ ಬುಮ್ರಾ ತಲಾ 1 ಬಾರಿ ಈ ಸಾಧನೆ ಮಾಡಿದ್ದಾರೆ(PC-PTI).

5 / 5
Follow Us
ಬೆಂಗಳೂರಿನಲ್ಲಿ ಅಬ್ಬರಿಸಿದ ಮಳೆರಾಯ: ರಸ್ತೆಗಳೆಲ್ಲಾ ಜಲಾವೃತ!
ಬೆಂಗಳೂರಿನಲ್ಲಿ ಅಬ್ಬರಿಸಿದ ಮಳೆರಾಯ: ರಸ್ತೆಗಳೆಲ್ಲಾ ಜಲಾವೃತ!
ಕೊಪ್ಪಳ ಹಾಸ್ಟೆಲ್​​ಗೆ ಬಂದು ತಿಗಣಿಗೆ ಮದ್ದು ನೀಡಿದ ಚೆನ್ನೈ ತಜ್ಞರು
ಕೊಪ್ಪಳ ಹಾಸ್ಟೆಲ್​​ಗೆ ಬಂದು ತಿಗಣಿಗೆ ಮದ್ದು ನೀಡಿದ ಚೆನ್ನೈ ತಜ್ಞರು
ಬಿಗ್​​ಬಾಸ್​​ ಮನೆಯಿಂದ ಹೊರಬಂದಿದ್ದಕ್ಕೆ ಕಾರಣ ತಿಳಿಸಿದ ಓಂ ಪ್ರಕಾಶ್ ರಾವ್
ಬಿಗ್​​ಬಾಸ್​​ ಮನೆಯಿಂದ ಹೊರಬಂದಿದ್ದಕ್ಕೆ ಕಾರಣ ತಿಳಿಸಿದ ಓಂ ಪ್ರಕಾಶ್ ರಾವ್
ಅರಿಶಿನದ ಕೊಂಬುಗಳಿಂದಲೇ ಸಿದ್ಧವಾದ ಪರಿಸರಸ್ನೇಹಿ ಗಣೇಶನ ಮೂರ್ತಿ!
ಅರಿಶಿನದ ಕೊಂಬುಗಳಿಂದಲೇ ಸಿದ್ಧವಾದ ಪರಿಸರಸ್ನೇಹಿ ಗಣೇಶನ ಮೂರ್ತಿ!
ಕೆಡಿಪಿ ಸಭೆಗೆ ಪೊಲೀಸ್ ಆಯುಕ್ತ ಗೈರಾಗಿದ್ದಕ್ಕೆ ಸಚಿವ ಯು.ಟಿ.ಖಾದರ್ ಗರಂ
ಕೆಡಿಪಿ ಸಭೆಗೆ ಪೊಲೀಸ್ ಆಯುಕ್ತ ಗೈರಾಗಿದ್ದಕ್ಕೆ ಸಚಿವ ಯು.ಟಿ.ಖಾದರ್ ಗರಂ
ಗಂಭೀರ ಪಡೆದುಕೊಂಡ ಜಾರಕಿಹೊಳಿ ಕೇಸ್: ಇಡಿ ಸಭೆಯಲ್ಲಿ ಮಹತ್ವದ ಚರ್ಚೆ
ಗಂಭೀರ ಪಡೆದುಕೊಂಡ ಜಾರಕಿಹೊಳಿ ಕೇಸ್: ಇಡಿ ಸಭೆಯಲ್ಲಿ ಮಹತ್ವದ ಚರ್ಚೆ
LIVE: ಕೇಂದ್ರ ಸಚಿವ ಜೆ.ಪಿ‌.ನಡ್ಡಾ ಮಹತ್ವದ ಸುದ್ದಿಗೋಷ್ಠಿ
LIVE: ಕೇಂದ್ರ ಸಚಿವ ಜೆ.ಪಿ‌.ನಡ್ಡಾ ಮಹತ್ವದ ಸುದ್ದಿಗೋಷ್ಠಿ
ಕ್ಯಾರೆಕ್ಟರ್ ಲೆಸ್ ಎಂದ ಮಂಜ, ಗಂಡಸೇ ಅಲ್ಲ ಎಂದ ಕಾವ್ಯಾ: ವಿಡಿಯೋ
ಕ್ಯಾರೆಕ್ಟರ್ ಲೆಸ್ ಎಂದ ಮಂಜ, ಗಂಡಸೇ ಅಲ್ಲ ಎಂದ ಕಾವ್ಯಾ: ವಿಡಿಯೋ
ಟಿ.ನರಸೀಪುರ ಇನ್ಸ್​​​ಪೆಕ್ಟರ್ ಪರ ಡಿಕೆ ಶಿವಕುಮಾರ್ ಬ್ಯಾಟಿಂಗ್
ಟಿ.ನರಸೀಪುರ ಇನ್ಸ್​​​ಪೆಕ್ಟರ್ ಪರ ಡಿಕೆ ಶಿವಕುಮಾರ್ ಬ್ಯಾಟಿಂಗ್
ವೈಷ್ಣವಿ ಬಟ್ಟೆ ಬಗ್ಗೆ ಅವಿನಾಶ್ ಕಮೆಂಟ್; ಉತ್ತರಿಸಿದ ಪ್ರಥಮಾ
ವೈಷ್ಣವಿ ಬಟ್ಟೆ ಬಗ್ಗೆ ಅವಿನಾಶ್ ಕಮೆಂಟ್; ಉತ್ತರಿಸಿದ ಪ್ರಥಮಾ