AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಹಿತ್ ಶರ್ಮಾ ಮೇಲೆ ಅಪನಂಬಿಕೆ: ಜಸ್​ಪ್ರೀತ್ ಬುಮ್ರಾಗೆ ನಾಯಕತ್ವ ನೀಡಲು ಪ್ಲ್ಯಾನ್

Champions Trophy 2025: ಚಾಂಪಿಯನ್ಸ್ ಟ್ರೋಫಿ 2025 ರಲ್ಲಿ ಟೀಮ್ ಇಂಡಿಯಾದ ಉಪನಾಯಕನಾಗಿ ಜಸ್​ಪ್ರೀತ್ ಬುಮ್ರಾ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಇದಕ್ಕೆ ಮುಖ್ಯ ಕಾರಣ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರ ಕಳಪೆ ಫಾರ್ಮ್​. ಆಸ್ಟ್ರೇಲಿಯಾ ವಿರುದ್ಧ ಕಳಪೆ ಬ್ಯಾಟಿಂಗ್ ಪ್ರದರ್ಶಿಸಿರುವ ಹಿಟ್​ಮ್ಯಾನ್ ಚಾಂಪಿಯನ್ಸ್ ಟ್ರೋಫಿಯಲ್ಲೂ ವಿಫಲರಾದರೆ, ತಂಡದ ನಾಯಕ ಬದಲಾಗುವುದು ಖಚಿತ.

ಝಾಹಿರ್ ಯೂಸುಫ್
|

Updated on: Jan 06, 2025 | 1:20 PM

ಚಾಂಪಿಯನ್ಸ್ ಟ್ರೋಫಿಗಾಗಿ ಸಿದ್ಧತೆಗಳು ಶುರುವಾಗಿದೆ. ಫೆಬ್ರವರಿ 19 ರಿಂದ ಆರಂಭವಾಗಲಿರುವ ಈ ಟೂರ್ನಿಗಾಗಿ ತಂಡಗಳನ್ನು ಪ್ರಕಟಿಸಲು ಜನವರಿ 12 ರವರೆಗೆ ಗಡುವು ನೀಡಲಾಗಿದೆ. ಇತ್ತ ಈ ಗಡುವಿನ ಬೆನ್ನಲ್ಲೇ ಬಿಸಿಸಿಐ ಆಯ್ಕೆ ಸಮಿತಿ ಟೀಮ್ ಇಂಡಿಯಾದಲ್ಲಿ ಮಹತ್ವದ ಬದಲಾವಣೆ ತರಲು ಚಿಂತನೆ ನಡೆಸಿದೆ. ಅದರಲ್ಲೂ ಚಾಂಪಿಯನ್ಸ್ ಟ್ರೋಫಿ ತಂಡದ ನಾಯಕನಾಗಿ ಜಸ್​ಪ್ರೀತ್ ಬುಮ್ರಾ ಅವರನ್ನು ಪರಿಗಣಿಸಲು ಚರ್ಚೆ ನಡೆಸಿದೆ.

ಚಾಂಪಿಯನ್ಸ್ ಟ್ರೋಫಿಗಾಗಿ ಸಿದ್ಧತೆಗಳು ಶುರುವಾಗಿದೆ. ಫೆಬ್ರವರಿ 19 ರಿಂದ ಆರಂಭವಾಗಲಿರುವ ಈ ಟೂರ್ನಿಗಾಗಿ ತಂಡಗಳನ್ನು ಪ್ರಕಟಿಸಲು ಜನವರಿ 12 ರವರೆಗೆ ಗಡುವು ನೀಡಲಾಗಿದೆ. ಇತ್ತ ಈ ಗಡುವಿನ ಬೆನ್ನಲ್ಲೇ ಬಿಸಿಸಿಐ ಆಯ್ಕೆ ಸಮಿತಿ ಟೀಮ್ ಇಂಡಿಯಾದಲ್ಲಿ ಮಹತ್ವದ ಬದಲಾವಣೆ ತರಲು ಚಿಂತನೆ ನಡೆಸಿದೆ. ಅದರಲ್ಲೂ ಚಾಂಪಿಯನ್ಸ್ ಟ್ರೋಫಿ ತಂಡದ ನಾಯಕನಾಗಿ ಜಸ್​ಪ್ರೀತ್ ಬುಮ್ರಾ ಅವರನ್ನು ಪರಿಗಣಿಸಲು ಚರ್ಚೆ ನಡೆಸಿದೆ.

1 / 5
ಇದಕ್ಕೆ ಮುಖ್ಯ ಕಾರಣ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರ ಕಳಪೆ ಫಾರ್ಮ್​. ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್​ ಸರಣಿಯಲ್ಲಿ ಅತ್ಯಂತ ಹೀನಾಯ ಪ್ರದರ್ಶನ ನೀಡಿರುವ ರೋಹಿತ್ ಶರ್ಮಾ ಚಾಂಪಿಯನ್ಸ್ ಟ್ರೋಫಿ ಹೇಗೆ ಪ್ರದರ್ಶನ ನೀಡುತ್ತಾರೆ ಎಂಬುದೇ ಚಿಂತೆ. ಒಂದು ವೇಳೆ ಈ ಟೂರ್ನಿಯಲ್ಲೂ ಅವರು ಕಳಪೆ ಪ್ರದರ್ಶನ ನೀಡಿದರೆ ನಾಯಕತ್ವ ಬದಲಾವಣೆ ಅನಿವಾರ್ಯ.

ಇದಕ್ಕೆ ಮುಖ್ಯ ಕಾರಣ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರ ಕಳಪೆ ಫಾರ್ಮ್​. ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್​ ಸರಣಿಯಲ್ಲಿ ಅತ್ಯಂತ ಹೀನಾಯ ಪ್ರದರ್ಶನ ನೀಡಿರುವ ರೋಹಿತ್ ಶರ್ಮಾ ಚಾಂಪಿಯನ್ಸ್ ಟ್ರೋಫಿ ಹೇಗೆ ಪ್ರದರ್ಶನ ನೀಡುತ್ತಾರೆ ಎಂಬುದೇ ಚಿಂತೆ. ಒಂದು ವೇಳೆ ಈ ಟೂರ್ನಿಯಲ್ಲೂ ಅವರು ಕಳಪೆ ಪ್ರದರ್ಶನ ನೀಡಿದರೆ ನಾಯಕತ್ವ ಬದಲಾವಣೆ ಅನಿವಾರ್ಯ.

2 / 5
ಆದರೆ ಪ್ರಸ್ತುತ ಭಾರತ ಏಕದಿನ ತಂಡದ ಉಪನಾಯಕ ಶುಭ್​​ಮನ್​ ಗಿಲ್​ಗೆ ಅನುಭವದ ಕೊರತೆಯಿದೆ. ಹೀಗಾಗಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಅವರಿಗೆ ಉಪನಾಯಕನ ಸ್ಥಾನ ನೀಡದಿರಲು ಬಿಸಿಸಿಐ ಆಯ್ಕೆ ಸಮಿತಿ ಚಿಂತಿಸಿದೆ. ಬದಲಾಗಿ ಜಸ್​ಪ್ರೀತ್ ಬುಮ್ರಾ ಅವರನ್ನು ವೈಸ್ ಕ್ಯಾಪ್ಟನ್ ಆಗಿ ನೇಮಿಸಲು ಆಸಕ್ತಿ ಹೊಂದಿದೆ.

ಆದರೆ ಪ್ರಸ್ತುತ ಭಾರತ ಏಕದಿನ ತಂಡದ ಉಪನಾಯಕ ಶುಭ್​​ಮನ್​ ಗಿಲ್​ಗೆ ಅನುಭವದ ಕೊರತೆಯಿದೆ. ಹೀಗಾಗಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಅವರಿಗೆ ಉಪನಾಯಕನ ಸ್ಥಾನ ನೀಡದಿರಲು ಬಿಸಿಸಿಐ ಆಯ್ಕೆ ಸಮಿತಿ ಚಿಂತಿಸಿದೆ. ಬದಲಾಗಿ ಜಸ್​ಪ್ರೀತ್ ಬುಮ್ರಾ ಅವರನ್ನು ವೈಸ್ ಕ್ಯಾಪ್ಟನ್ ಆಗಿ ನೇಮಿಸಲು ಆಸಕ್ತಿ ಹೊಂದಿದೆ.

3 / 5
ಈ ಮೂಲಕ ಚಾಂಪಿಯನ್ಸ್ ಟ್ರೋಫಿಯಲ್ಲಿ ರೋಹಿತ್ ಶರ್ಮಾ ವಿಫಲರಾದರೆ, ಆಡುವ ಬಳಗದಿಂದ ಅವರನ್ನು ಕೈ ಬಿಟ್ಟು ಜಸ್​ಪ್ರೀತ್ ಬುಮ್ರಾಗೆ ಕ್ಯಾಪ್ಟನ್ ಪಟ್ಟ ನೀಡಲು ಬಿಸಿಸಿಐ ಪ್ಲ್ಯಾನ್ ರೂಪಿಸಿದೆ. ಹೀಗಾಗಿ ಮುಂಬರುವ ಚಾಂಪಿಯನ್ಸ್ ಟ್ರೋಫಿಯಲ್ಲಿ ಗಿಲ್ ಬದಲಿಗೆ ಉಪನಾಯಕನಾಗಿ ಜಸ್​ಪ್ರೀತ್ ಬುಮ್ರಾ ಕಾಣಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಬಹುದು.

ಈ ಮೂಲಕ ಚಾಂಪಿಯನ್ಸ್ ಟ್ರೋಫಿಯಲ್ಲಿ ರೋಹಿತ್ ಶರ್ಮಾ ವಿಫಲರಾದರೆ, ಆಡುವ ಬಳಗದಿಂದ ಅವರನ್ನು ಕೈ ಬಿಟ್ಟು ಜಸ್​ಪ್ರೀತ್ ಬುಮ್ರಾಗೆ ಕ್ಯಾಪ್ಟನ್ ಪಟ್ಟ ನೀಡಲು ಬಿಸಿಸಿಐ ಪ್ಲ್ಯಾನ್ ರೂಪಿಸಿದೆ. ಹೀಗಾಗಿ ಮುಂಬರುವ ಚಾಂಪಿಯನ್ಸ್ ಟ್ರೋಫಿಯಲ್ಲಿ ಗಿಲ್ ಬದಲಿಗೆ ಉಪನಾಯಕನಾಗಿ ಜಸ್​ಪ್ರೀತ್ ಬುಮ್ರಾ ಕಾಣಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಬಹುದು.

4 / 5
ಇನ್ನು ಹೈಬ್ರಿಡ್ ಮಾದರಿಯಲ್ಲಿ ನಡೆಯಲಿರುವ ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ಫೆಬ್ರವರಿ 19 ರಿಂದ ಶುರುವಾಗಲಿದ್ದು, ಮಾರ್ಚ್ 9 ರಂದು ಫೈನಲ್ ಪಂದ್ಯ ನಡೆಯಲಿದೆ. ಇಲ್ಲಿ ಭಾರತದ ಪಂದ್ಯಗಳು ದುಬೈನಲ್ಲಿ ನಡೆದರೆ, ಉಳಿದೆಲ್ಲಾ ಮ್ಯಾಚ್​​ಗಳು ಪಾಕಿಸ್ತಾನದಲ್ಲಿ ಜರುಗಲಿದೆ. ಒಂದು ವೇಳೆ ಟೀಮ್ ಇಂಡಿಯಾ ಚಾಂಪಿಯನ್ಸ್ ಟ್ರೋಫಿಯಲ್ಲಿ ಫೈನಲ್​ಗೆ ಪ್ರವೇಶಿಸಿ, ಅಂತಿಮ ಪಂದ್ಯ ಕೂಡ ದುಬೈನಲ್ಲೇ ಆಯೋಜನೆಗೊಳ್ಳಲಿದೆ.

ಇನ್ನು ಹೈಬ್ರಿಡ್ ಮಾದರಿಯಲ್ಲಿ ನಡೆಯಲಿರುವ ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ಫೆಬ್ರವರಿ 19 ರಿಂದ ಶುರುವಾಗಲಿದ್ದು, ಮಾರ್ಚ್ 9 ರಂದು ಫೈನಲ್ ಪಂದ್ಯ ನಡೆಯಲಿದೆ. ಇಲ್ಲಿ ಭಾರತದ ಪಂದ್ಯಗಳು ದುಬೈನಲ್ಲಿ ನಡೆದರೆ, ಉಳಿದೆಲ್ಲಾ ಮ್ಯಾಚ್​​ಗಳು ಪಾಕಿಸ್ತಾನದಲ್ಲಿ ಜರುಗಲಿದೆ. ಒಂದು ವೇಳೆ ಟೀಮ್ ಇಂಡಿಯಾ ಚಾಂಪಿಯನ್ಸ್ ಟ್ರೋಫಿಯಲ್ಲಿ ಫೈನಲ್​ಗೆ ಪ್ರವೇಶಿಸಿ, ಅಂತಿಮ ಪಂದ್ಯ ಕೂಡ ದುಬೈನಲ್ಲೇ ಆಯೋಜನೆಗೊಳ್ಳಲಿದೆ.

5 / 5
Follow us
ಗಂಡನ ಮನೆಯಿಂದ ಮಗಳನ್ನ ಹೊತ್ತೊಯ್ದ ಪೋಷಕರು, ಮುಂದೇನಾಯ್ತು?
ಗಂಡನ ಮನೆಯಿಂದ ಮಗಳನ್ನ ಹೊತ್ತೊಯ್ದ ಪೋಷಕರು, ಮುಂದೇನಾಯ್ತು?
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ವಯನಾಡು: ಪ್ರಿಯಾಂಕಾ ಗಾಂಧಿಯಿಂದ ಉದ್ಘಾಟಗೊಳ್ಳುವ ಹೊತ್ತಲ್ಲೇ ಬಿದ್ದ ನಾಮಫಲಕ
ವಯನಾಡು: ಪ್ರಿಯಾಂಕಾ ಗಾಂಧಿಯಿಂದ ಉದ್ಘಾಟಗೊಳ್ಳುವ ಹೊತ್ತಲ್ಲೇ ಬಿದ್ದ ನಾಮಫಲಕ