AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಹಿತ್ ಶರ್ಮಾ ಮೇಲೆ ಅಪನಂಬಿಕೆ: ಜಸ್​ಪ್ರೀತ್ ಬುಮ್ರಾಗೆ ನಾಯಕತ್ವ ನೀಡಲು ಪ್ಲ್ಯಾನ್

Champions Trophy 2025: ಚಾಂಪಿಯನ್ಸ್ ಟ್ರೋಫಿ 2025 ರಲ್ಲಿ ಟೀಮ್ ಇಂಡಿಯಾದ ಉಪನಾಯಕನಾಗಿ ಜಸ್​ಪ್ರೀತ್ ಬುಮ್ರಾ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಇದಕ್ಕೆ ಮುಖ್ಯ ಕಾರಣ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರ ಕಳಪೆ ಫಾರ್ಮ್​. ಆಸ್ಟ್ರೇಲಿಯಾ ವಿರುದ್ಧ ಕಳಪೆ ಬ್ಯಾಟಿಂಗ್ ಪ್ರದರ್ಶಿಸಿರುವ ಹಿಟ್​ಮ್ಯಾನ್ ಚಾಂಪಿಯನ್ಸ್ ಟ್ರೋಫಿಯಲ್ಲೂ ವಿಫಲರಾದರೆ, ತಂಡದ ನಾಯಕ ಬದಲಾಗುವುದು ಖಚಿತ.

ಝಾಹಿರ್ ಯೂಸುಫ್
|

Updated on: Jan 06, 2025 | 1:20 PM

Share
ಚಾಂಪಿಯನ್ಸ್ ಟ್ರೋಫಿಗಾಗಿ ಸಿದ್ಧತೆಗಳು ಶುರುವಾಗಿದೆ. ಫೆಬ್ರವರಿ 19 ರಿಂದ ಆರಂಭವಾಗಲಿರುವ ಈ ಟೂರ್ನಿಗಾಗಿ ತಂಡಗಳನ್ನು ಪ್ರಕಟಿಸಲು ಜನವರಿ 12 ರವರೆಗೆ ಗಡುವು ನೀಡಲಾಗಿದೆ. ಇತ್ತ ಈ ಗಡುವಿನ ಬೆನ್ನಲ್ಲೇ ಬಿಸಿಸಿಐ ಆಯ್ಕೆ ಸಮಿತಿ ಟೀಮ್ ಇಂಡಿಯಾದಲ್ಲಿ ಮಹತ್ವದ ಬದಲಾವಣೆ ತರಲು ಚಿಂತನೆ ನಡೆಸಿದೆ. ಅದರಲ್ಲೂ ಚಾಂಪಿಯನ್ಸ್ ಟ್ರೋಫಿ ತಂಡದ ನಾಯಕನಾಗಿ ಜಸ್​ಪ್ರೀತ್ ಬುಮ್ರಾ ಅವರನ್ನು ಪರಿಗಣಿಸಲು ಚರ್ಚೆ ನಡೆಸಿದೆ.

ಚಾಂಪಿಯನ್ಸ್ ಟ್ರೋಫಿಗಾಗಿ ಸಿದ್ಧತೆಗಳು ಶುರುವಾಗಿದೆ. ಫೆಬ್ರವರಿ 19 ರಿಂದ ಆರಂಭವಾಗಲಿರುವ ಈ ಟೂರ್ನಿಗಾಗಿ ತಂಡಗಳನ್ನು ಪ್ರಕಟಿಸಲು ಜನವರಿ 12 ರವರೆಗೆ ಗಡುವು ನೀಡಲಾಗಿದೆ. ಇತ್ತ ಈ ಗಡುವಿನ ಬೆನ್ನಲ್ಲೇ ಬಿಸಿಸಿಐ ಆಯ್ಕೆ ಸಮಿತಿ ಟೀಮ್ ಇಂಡಿಯಾದಲ್ಲಿ ಮಹತ್ವದ ಬದಲಾವಣೆ ತರಲು ಚಿಂತನೆ ನಡೆಸಿದೆ. ಅದರಲ್ಲೂ ಚಾಂಪಿಯನ್ಸ್ ಟ್ರೋಫಿ ತಂಡದ ನಾಯಕನಾಗಿ ಜಸ್​ಪ್ರೀತ್ ಬುಮ್ರಾ ಅವರನ್ನು ಪರಿಗಣಿಸಲು ಚರ್ಚೆ ನಡೆಸಿದೆ.

1 / 5
ಇದಕ್ಕೆ ಮುಖ್ಯ ಕಾರಣ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರ ಕಳಪೆ ಫಾರ್ಮ್​. ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್​ ಸರಣಿಯಲ್ಲಿ ಅತ್ಯಂತ ಹೀನಾಯ ಪ್ರದರ್ಶನ ನೀಡಿರುವ ರೋಹಿತ್ ಶರ್ಮಾ ಚಾಂಪಿಯನ್ಸ್ ಟ್ರೋಫಿ ಹೇಗೆ ಪ್ರದರ್ಶನ ನೀಡುತ್ತಾರೆ ಎಂಬುದೇ ಚಿಂತೆ. ಒಂದು ವೇಳೆ ಈ ಟೂರ್ನಿಯಲ್ಲೂ ಅವರು ಕಳಪೆ ಪ್ರದರ್ಶನ ನೀಡಿದರೆ ನಾಯಕತ್ವ ಬದಲಾವಣೆ ಅನಿವಾರ್ಯ.

ಇದಕ್ಕೆ ಮುಖ್ಯ ಕಾರಣ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರ ಕಳಪೆ ಫಾರ್ಮ್​. ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್​ ಸರಣಿಯಲ್ಲಿ ಅತ್ಯಂತ ಹೀನಾಯ ಪ್ರದರ್ಶನ ನೀಡಿರುವ ರೋಹಿತ್ ಶರ್ಮಾ ಚಾಂಪಿಯನ್ಸ್ ಟ್ರೋಫಿ ಹೇಗೆ ಪ್ರದರ್ಶನ ನೀಡುತ್ತಾರೆ ಎಂಬುದೇ ಚಿಂತೆ. ಒಂದು ವೇಳೆ ಈ ಟೂರ್ನಿಯಲ್ಲೂ ಅವರು ಕಳಪೆ ಪ್ರದರ್ಶನ ನೀಡಿದರೆ ನಾಯಕತ್ವ ಬದಲಾವಣೆ ಅನಿವಾರ್ಯ.

2 / 5
ಆದರೆ ಪ್ರಸ್ತುತ ಭಾರತ ಏಕದಿನ ತಂಡದ ಉಪನಾಯಕ ಶುಭ್​​ಮನ್​ ಗಿಲ್​ಗೆ ಅನುಭವದ ಕೊರತೆಯಿದೆ. ಹೀಗಾಗಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಅವರಿಗೆ ಉಪನಾಯಕನ ಸ್ಥಾನ ನೀಡದಿರಲು ಬಿಸಿಸಿಐ ಆಯ್ಕೆ ಸಮಿತಿ ಚಿಂತಿಸಿದೆ. ಬದಲಾಗಿ ಜಸ್​ಪ್ರೀತ್ ಬುಮ್ರಾ ಅವರನ್ನು ವೈಸ್ ಕ್ಯಾಪ್ಟನ್ ಆಗಿ ನೇಮಿಸಲು ಆಸಕ್ತಿ ಹೊಂದಿದೆ.

ಆದರೆ ಪ್ರಸ್ತುತ ಭಾರತ ಏಕದಿನ ತಂಡದ ಉಪನಾಯಕ ಶುಭ್​​ಮನ್​ ಗಿಲ್​ಗೆ ಅನುಭವದ ಕೊರತೆಯಿದೆ. ಹೀಗಾಗಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಅವರಿಗೆ ಉಪನಾಯಕನ ಸ್ಥಾನ ನೀಡದಿರಲು ಬಿಸಿಸಿಐ ಆಯ್ಕೆ ಸಮಿತಿ ಚಿಂತಿಸಿದೆ. ಬದಲಾಗಿ ಜಸ್​ಪ್ರೀತ್ ಬುಮ್ರಾ ಅವರನ್ನು ವೈಸ್ ಕ್ಯಾಪ್ಟನ್ ಆಗಿ ನೇಮಿಸಲು ಆಸಕ್ತಿ ಹೊಂದಿದೆ.

3 / 5
ಈ ಮೂಲಕ ಚಾಂಪಿಯನ್ಸ್ ಟ್ರೋಫಿಯಲ್ಲಿ ರೋಹಿತ್ ಶರ್ಮಾ ವಿಫಲರಾದರೆ, ಆಡುವ ಬಳಗದಿಂದ ಅವರನ್ನು ಕೈ ಬಿಟ್ಟು ಜಸ್​ಪ್ರೀತ್ ಬುಮ್ರಾಗೆ ಕ್ಯಾಪ್ಟನ್ ಪಟ್ಟ ನೀಡಲು ಬಿಸಿಸಿಐ ಪ್ಲ್ಯಾನ್ ರೂಪಿಸಿದೆ. ಹೀಗಾಗಿ ಮುಂಬರುವ ಚಾಂಪಿಯನ್ಸ್ ಟ್ರೋಫಿಯಲ್ಲಿ ಗಿಲ್ ಬದಲಿಗೆ ಉಪನಾಯಕನಾಗಿ ಜಸ್​ಪ್ರೀತ್ ಬುಮ್ರಾ ಕಾಣಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಬಹುದು.

ಈ ಮೂಲಕ ಚಾಂಪಿಯನ್ಸ್ ಟ್ರೋಫಿಯಲ್ಲಿ ರೋಹಿತ್ ಶರ್ಮಾ ವಿಫಲರಾದರೆ, ಆಡುವ ಬಳಗದಿಂದ ಅವರನ್ನು ಕೈ ಬಿಟ್ಟು ಜಸ್​ಪ್ರೀತ್ ಬುಮ್ರಾಗೆ ಕ್ಯಾಪ್ಟನ್ ಪಟ್ಟ ನೀಡಲು ಬಿಸಿಸಿಐ ಪ್ಲ್ಯಾನ್ ರೂಪಿಸಿದೆ. ಹೀಗಾಗಿ ಮುಂಬರುವ ಚಾಂಪಿಯನ್ಸ್ ಟ್ರೋಫಿಯಲ್ಲಿ ಗಿಲ್ ಬದಲಿಗೆ ಉಪನಾಯಕನಾಗಿ ಜಸ್​ಪ್ರೀತ್ ಬುಮ್ರಾ ಕಾಣಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಬಹುದು.

4 / 5
ಇನ್ನು ಹೈಬ್ರಿಡ್ ಮಾದರಿಯಲ್ಲಿ ನಡೆಯಲಿರುವ ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ಫೆಬ್ರವರಿ 19 ರಿಂದ ಶುರುವಾಗಲಿದ್ದು, ಮಾರ್ಚ್ 9 ರಂದು ಫೈನಲ್ ಪಂದ್ಯ ನಡೆಯಲಿದೆ. ಇಲ್ಲಿ ಭಾರತದ ಪಂದ್ಯಗಳು ದುಬೈನಲ್ಲಿ ನಡೆದರೆ, ಉಳಿದೆಲ್ಲಾ ಮ್ಯಾಚ್​​ಗಳು ಪಾಕಿಸ್ತಾನದಲ್ಲಿ ಜರುಗಲಿದೆ. ಒಂದು ವೇಳೆ ಟೀಮ್ ಇಂಡಿಯಾ ಚಾಂಪಿಯನ್ಸ್ ಟ್ರೋಫಿಯಲ್ಲಿ ಫೈನಲ್​ಗೆ ಪ್ರವೇಶಿಸಿ, ಅಂತಿಮ ಪಂದ್ಯ ಕೂಡ ದುಬೈನಲ್ಲೇ ಆಯೋಜನೆಗೊಳ್ಳಲಿದೆ.

ಇನ್ನು ಹೈಬ್ರಿಡ್ ಮಾದರಿಯಲ್ಲಿ ನಡೆಯಲಿರುವ ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ಫೆಬ್ರವರಿ 19 ರಿಂದ ಶುರುವಾಗಲಿದ್ದು, ಮಾರ್ಚ್ 9 ರಂದು ಫೈನಲ್ ಪಂದ್ಯ ನಡೆಯಲಿದೆ. ಇಲ್ಲಿ ಭಾರತದ ಪಂದ್ಯಗಳು ದುಬೈನಲ್ಲಿ ನಡೆದರೆ, ಉಳಿದೆಲ್ಲಾ ಮ್ಯಾಚ್​​ಗಳು ಪಾಕಿಸ್ತಾನದಲ್ಲಿ ಜರುಗಲಿದೆ. ಒಂದು ವೇಳೆ ಟೀಮ್ ಇಂಡಿಯಾ ಚಾಂಪಿಯನ್ಸ್ ಟ್ರೋಫಿಯಲ್ಲಿ ಫೈನಲ್​ಗೆ ಪ್ರವೇಶಿಸಿ, ಅಂತಿಮ ಪಂದ್ಯ ಕೂಡ ದುಬೈನಲ್ಲೇ ಆಯೋಜನೆಗೊಳ್ಳಲಿದೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ