AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

3ನೇ ಪಂದ್ಯದಲ್ಲಿ ಜಸ್​ಪ್ರೀತ್ ಬುಮ್ರಾ ಚಾಂಪಿಯನ್ಸ್ ಟ್ರೋಫಿ ಭವಿಷ್ಯ ನಿರ್ಧಾರ

Jasprit Bumrah: ಜಸ್​ಪ್ರೀತ್ ಬುಮ್ರಾ ಸಂಪೂರ್ಣ ಫಿಟ್​ನೆಸ್ ಹೊಂದಿಲ್ಲದಿದ್ದರೂ ಅವರನ್ನು ಚಾಂಪಿಯನ್ಸ್ ಟ್ರೋಫಿ ತಂಡಕ್ಕೆ ಆಯ್ಕೆ ಮಾಡಲಾಗಿದೆ. ಇದೀಗ ಬಿಸಿಸಿಐ ಅವರ ವೈದ್ಯಕೀಯ ವರದಿಗಾಗಿ ಕಾಯುತ್ತಿದ್ದು, ಅವರು ಮುಂದಿನ ತಿಂಗಳ 2ನೇ ವಾರದೊಳಗೆ ಫಿಟ್​​ನೆಸ್ ಸಾಧಿಸಿದರೆ ಇಂಗ್ಲೆಂಡ್ ವಿರುದ್ಧದ ಕೊನೆಯ ಏಕದಿನ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ.

ಝಾಹಿರ್ ಯೂಸುಫ್
|

Updated on: Jan 19, 2025 | 7:11 AM

Share
ಚಾಂಪಿಯನ್ಸ್ ಟ್ರೋಫಿ ಹಾಗೂ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ. 15 ಸದಸ್ಯರ ಚಾಂಪಿಯನ್ಸ್ ಟ್ರೋಫಿ ತಂಡದಲ್ಲಿ ಜಸ್​ಪ್ರೀತ್ ಬುಮ್ರಾ ಹೆಸರು ಕಾಣಿಸಿಕೊಂಡರೂ, ಅದಕ್ಕೂ ಮುನ್ನ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಗೆ ಆಯ್ಕೆ ಮಾಡಲಾದ ತಂಡದಲ್ಲಿ ಅವರ ಹೆಸರಿಲ್ಲ.

ಚಾಂಪಿಯನ್ಸ್ ಟ್ರೋಫಿ ಹಾಗೂ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ. 15 ಸದಸ್ಯರ ಚಾಂಪಿಯನ್ಸ್ ಟ್ರೋಫಿ ತಂಡದಲ್ಲಿ ಜಸ್​ಪ್ರೀತ್ ಬುಮ್ರಾ ಹೆಸರು ಕಾಣಿಸಿಕೊಂಡರೂ, ಅದಕ್ಕೂ ಮುನ್ನ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಗೆ ಆಯ್ಕೆ ಮಾಡಲಾದ ತಂಡದಲ್ಲಿ ಅವರ ಹೆಸರಿಲ್ಲ.

1 / 5
ಅಂದರೆ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಜಸ್​ಪ್ರೀತ್ ಬುಮ್ರಾ ಕಾಣಿಸಿಕೊಳ್ಳುವುದಿಲ್ಲ. ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಬುಮ್ರಾ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಹೀಗಾಗಿ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಅವರ ಸ್ಥಾನದಲ್ಲಿ ಯುವ ವೇಗಿ ಹರ್ಷಿತ್ ರಾಣಾ ಕಣಕ್ಕಿಳಿಯಲಿದ್ದಾರೆ.

ಅಂದರೆ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಜಸ್​ಪ್ರೀತ್ ಬುಮ್ರಾ ಕಾಣಿಸಿಕೊಳ್ಳುವುದಿಲ್ಲ. ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಬುಮ್ರಾ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಹೀಗಾಗಿ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಅವರ ಸ್ಥಾನದಲ್ಲಿ ಯುವ ವೇಗಿ ಹರ್ಷಿತ್ ರಾಣಾ ಕಣಕ್ಕಿಳಿಯಲಿದ್ದಾರೆ.

2 / 5
ಇದಾಗ್ಯೂ ಜಸ್​ಪ್ರೀತ್ ಬುಮ್ರಾ ಮೂರನೇ ಏಕದಿನ ಪಂದ್ಯದ ವೇಳೆ ಟೀಮ್ ಇಂಡಿಯಾವನ್ನು ಕೂಡಿಕೊಳ್ಳುವ ಸಾಧ್ಯತೆಯಿದೆ. ಬಿಸಿಸಿಐ ಮೂಲಗಳ ಮಾಹಿತಿ ಪ್ರಕಾರ, ಫೆಬ್ರವರಿ 12 ರೊಳಗೆ ಅವರು ಫಿಟ್​ನೆಸ್ ಸಾಧಿಸಿದರೆ ಅವರು ಇಂಗ್ಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯವನ್ನಾಡಲಿದ್ದಾರೆ. ಈ ಪಂದ್ಯದಲ್ಲಿ ಅವರು ಸಂಪೂರ್ಣ 10 ಓವರ್​​ಗಳನ್ನು ಎಸೆಯಲು ಸಮರ್ಥರಾದರೆ ಮಾತ್ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಇದಾಗ್ಯೂ ಜಸ್​ಪ್ರೀತ್ ಬುಮ್ರಾ ಮೂರನೇ ಏಕದಿನ ಪಂದ್ಯದ ವೇಳೆ ಟೀಮ್ ಇಂಡಿಯಾವನ್ನು ಕೂಡಿಕೊಳ್ಳುವ ಸಾಧ್ಯತೆಯಿದೆ. ಬಿಸಿಸಿಐ ಮೂಲಗಳ ಮಾಹಿತಿ ಪ್ರಕಾರ, ಫೆಬ್ರವರಿ 12 ರೊಳಗೆ ಅವರು ಫಿಟ್​ನೆಸ್ ಸಾಧಿಸಿದರೆ ಅವರು ಇಂಗ್ಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯವನ್ನಾಡಲಿದ್ದಾರೆ. ಈ ಪಂದ್ಯದಲ್ಲಿ ಅವರು ಸಂಪೂರ್ಣ 10 ಓವರ್​​ಗಳನ್ನು ಎಸೆಯಲು ಸಮರ್ಥರಾದರೆ ಮಾತ್ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.

3 / 5
ಒಂದಾರ್ಥದಲ್ಲಿ ಇಂಗ್ಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯವು ಜಸ್​ಪ್ರೀತ್ ಬುಮ್ರಾ ಪಾಲಿಗೆ ಫಿಟ್​ನೆಸ್ ಟೆಸ್ಟ್ ಪಂದ್ಯ ಎನ್ನಬಹುದು. ಈ ಮ್ಯಾಚ್​ನಲ್ಲಿ ಬುಮ್ರಾ ಕಣಕ್ಕಿಳಿದು ತಮ್ಮ ಸಾಮರ್ಥ್ಯ ಸಾಬೀತುಪಡಿಸಲು ಯಶಸ್ವಿಯಾದರೆ ಮಾತ್ರ ಅವರು ಚಾಂಪಿಯನ್ಸ್ ಟ್ರೋಫಿಯ ಆರಂಭಿಕ ಪಂದ್ಯಗಳಿಗೆ ಲಭ್ಯರಿರಲಿದ್ದಾರೆ.

ಒಂದಾರ್ಥದಲ್ಲಿ ಇಂಗ್ಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯವು ಜಸ್​ಪ್ರೀತ್ ಬುಮ್ರಾ ಪಾಲಿಗೆ ಫಿಟ್​ನೆಸ್ ಟೆಸ್ಟ್ ಪಂದ್ಯ ಎನ್ನಬಹುದು. ಈ ಮ್ಯಾಚ್​ನಲ್ಲಿ ಬುಮ್ರಾ ಕಣಕ್ಕಿಳಿದು ತಮ್ಮ ಸಾಮರ್ಥ್ಯ ಸಾಬೀತುಪಡಿಸಲು ಯಶಸ್ವಿಯಾದರೆ ಮಾತ್ರ ಅವರು ಚಾಂಪಿಯನ್ಸ್ ಟ್ರೋಫಿಯ ಆರಂಭಿಕ ಪಂದ್ಯಗಳಿಗೆ ಲಭ್ಯರಿರಲಿದ್ದಾರೆ.

4 / 5
ಇಲ್ಲದಿದ್ದರೆ, ಫೆಬ್ರವರಿ 20 ರಂದು ನಡೆಯಲಿರುವ ಬಾಂಗ್ಲಾದೇಶ್  ಮತ್ತು ಫೆಬ್ರವರಿ 23 ರಂದು ನಡೆಯಲಿರುವ ಪಾಕಿಸ್ತಾನ್ ವಿರುದ್ಧದ ಹೈವೊಲ್ಟೇಜ್ ಪಂದ್ಯಗಳಿಗೆ ಜಸ್​ಪ್ರೀತ್ ಬುಮ್ರಾ ಅಲಭ್ಯರಾಗುವುದು ಖಚಿತ. ಹೀಗಾಗಿಯೇ ಇಂಗ್ಲೆಂಡ್ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಕಣಕ್ಕಿಳಿಸಿ ಜಸ್​ಪ್ರೀತ್ ಬುಮ್ರಾ ಅವರ ಚಾಂಪಿಯನ್ಸ್ ಟ್ರೋಫಿ ಭವಿಷ್ಯ ನಿರ್ಧರಿಸಲು ಬಿಸಿಸಿಐ ಆಯ್ಕೆ ಸಮಿತಿ ನಿರ್ಧರಿಸಿದೆ.

ಇಲ್ಲದಿದ್ದರೆ, ಫೆಬ್ರವರಿ 20 ರಂದು ನಡೆಯಲಿರುವ ಬಾಂಗ್ಲಾದೇಶ್ ಮತ್ತು ಫೆಬ್ರವರಿ 23 ರಂದು ನಡೆಯಲಿರುವ ಪಾಕಿಸ್ತಾನ್ ವಿರುದ್ಧದ ಹೈವೊಲ್ಟೇಜ್ ಪಂದ್ಯಗಳಿಗೆ ಜಸ್​ಪ್ರೀತ್ ಬುಮ್ರಾ ಅಲಭ್ಯರಾಗುವುದು ಖಚಿತ. ಹೀಗಾಗಿಯೇ ಇಂಗ್ಲೆಂಡ್ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಕಣಕ್ಕಿಳಿಸಿ ಜಸ್​ಪ್ರೀತ್ ಬುಮ್ರಾ ಅವರ ಚಾಂಪಿಯನ್ಸ್ ಟ್ರೋಫಿ ಭವಿಷ್ಯ ನಿರ್ಧರಿಸಲು ಬಿಸಿಸಿಐ ಆಯ್ಕೆ ಸಮಿತಿ ನಿರ್ಧರಿಸಿದೆ.

5 / 5
Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ