Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK: ಪಾಕಿಸ್ತಾನ್ ತಂಡ ಭಾರತದ ವಿರುದ್ಧ ಆಡಬಾರದು: ಜಾವೇದ್ ಮಿಯಾಂದಾದ್

India vs Pakistan: ಈ ಬಾರಿಯ ಏಷ್ಯಾಕಪ್ ಹಾಗೂ ಏಕದಿನ ವಿಶ್ವಕಪ್​ನಲ್ಲಿ ಭಾರತ-ಪಾಕಿಸ್ತಾನ್ ಮುಖಾಮುಖಿಯಾಗುವುದು ಖಚಿತ.

TV9 Web
| Updated By: ಝಾಹಿರ್ ಯೂಸುಫ್

Updated on: Jun 19, 2023 | 10:08 PM

ಏಷ್ಯಾಕಪ್ (Asia Cup 2023) ಆಯೋಜನಾ ಸಮಸ್ಯೆ ಬಗೆಹರಿದಿದೆ. ಈ ಬಾರಿಯ ಏಷ್ಯಾಕಪ್​ ಅನ್ನು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ (PCB) ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಲಿದೆ. ಅದರಂತೆ ಪಾಕಿಸ್ತಾನ್ ಹಾಗೂ ಶ್ರೀಲಂಕಾದಲ್ಲಿ ಟೂರ್ನಿ ನಡೆಯಲಿದೆ. ಇಲ್ಲಿ ಭಾರತ ತಂಡವು (Team India) ತನ್ನೆಲ್ಲಾ ಪಂದ್ಯಗಳನ್ನು ಶ್ರೀಲಂಕಾದಲ್ಲಿ ಆಡಲಿದೆ.

ಏಷ್ಯಾಕಪ್ (Asia Cup 2023) ಆಯೋಜನಾ ಸಮಸ್ಯೆ ಬಗೆಹರಿದಿದೆ. ಈ ಬಾರಿಯ ಏಷ್ಯಾಕಪ್​ ಅನ್ನು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ (PCB) ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಲಿದೆ. ಅದರಂತೆ ಪಾಕಿಸ್ತಾನ್ ಹಾಗೂ ಶ್ರೀಲಂಕಾದಲ್ಲಿ ಟೂರ್ನಿ ನಡೆಯಲಿದೆ. ಇಲ್ಲಿ ಭಾರತ ತಂಡವು (Team India) ತನ್ನೆಲ್ಲಾ ಪಂದ್ಯಗಳನ್ನು ಶ್ರೀಲಂಕಾದಲ್ಲಿ ಆಡಲಿದೆ.

1 / 7
ಇತ್ತ ಭಾರತಕ್ಕಾಗಿ ಹೈಬ್ರಿಡ್ ಮಾದರಿಯನ್ನು ಮುಂದಿಟ್ಟು ಟೂರ್ನಿ ಆಯೋಜಿಸಲು ಮುಂದಾಗಿರುವ ಪಿಸಿಬಿ ನಡೆಯನ್ನು ಪಾಕಿಸ್ತಾನ್ ತಂಡದ ಮಾಜಿ ಆಟಗಾರ ಜಾವೇದ್ ಮಿಯಾಂದಾದ್ ಕಟುವಾಗಿ ಟೀಕಿಸಿದ್ದಾರೆ.

ಇತ್ತ ಭಾರತಕ್ಕಾಗಿ ಹೈಬ್ರಿಡ್ ಮಾದರಿಯನ್ನು ಮುಂದಿಟ್ಟು ಟೂರ್ನಿ ಆಯೋಜಿಸಲು ಮುಂದಾಗಿರುವ ಪಿಸಿಬಿ ನಡೆಯನ್ನು ಪಾಕಿಸ್ತಾನ್ ತಂಡದ ಮಾಜಿ ಆಟಗಾರ ಜಾವೇದ್ ಮಿಯಾಂದಾದ್ ಕಟುವಾಗಿ ಟೀಕಿಸಿದ್ದಾರೆ.

2 / 7
ಈ ಬಗ್ಗೆ ಮಾತನಾಡಿರುವ ಮಿಯಾಂದಾದ್ಮ, ಬಿಸಿಸಿಐ ತನ್ನ ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸಲು ಒಪ್ಪುವವರೆಗೂ ಪಾಕ್ ತಂಡ ಭಾರತಕ್ಕೆ ಪ್ರವಾಸ ಮಾಡಬಾರದು. ಅಲ್ಲದೆ ಇದರಿಂದ ಪಾಕಿಸ್ತಾನಕ್ಕೆ ಯಾವುದೇ ನಷ್ಟವಾಗುವುದಿಲ್ಲ ಎಂದಿದ್ದಾರೆ.

ಈ ಬಗ್ಗೆ ಮಾತನಾಡಿರುವ ಮಿಯಾಂದಾದ್ಮ, ಬಿಸಿಸಿಐ ತನ್ನ ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸಲು ಒಪ್ಪುವವರೆಗೂ ಪಾಕ್ ತಂಡ ಭಾರತಕ್ಕೆ ಪ್ರವಾಸ ಮಾಡಬಾರದು. ಅಲ್ಲದೆ ಇದರಿಂದ ಪಾಕಿಸ್ತಾನಕ್ಕೆ ಯಾವುದೇ ನಷ್ಟವಾಗುವುದಿಲ್ಲ ಎಂದಿದ್ದಾರೆ.

3 / 7
ನಾನು ಇಂತಹ ನಿರ್ಧಾರ ಕೈಗೊಳ್ಳುವ ಸ್ಥಾನದಲ್ಲಿ ಇದ್ದಿದ್ದರೆ, ಖಂಡಿತವಾಗಿಯೂ ಪಾಕಿಸ್ತಾನ್ ತಂಡವನ್ನು ಏಕದಿನ ವಿಶ್ವಕಪ್ ಆಡಲು ಭಾರತಕ್ಕೆ ಕಳುಹಿಸುತ್ತಿರಲಿಲ್ಲ. ನಾವು ಅವರೊಂದಿಗೆ ಆಡಲು ಯಾವಾಗಲೂ ಸಿದ್ಧರಿರುತ್ತೇವೆ. ಇದೇ ಕಾರಣದಿಂದಾಗಿ ಅವರು ಈ ರೀತಿಯಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಮಿಯಾಂದಾದ್ ಆಕ್ರೋಶ ಹೊರಹಾಕಿದ್ದಾರೆ.

ನಾನು ಇಂತಹ ನಿರ್ಧಾರ ಕೈಗೊಳ್ಳುವ ಸ್ಥಾನದಲ್ಲಿ ಇದ್ದಿದ್ದರೆ, ಖಂಡಿತವಾಗಿಯೂ ಪಾಕಿಸ್ತಾನ್ ತಂಡವನ್ನು ಏಕದಿನ ವಿಶ್ವಕಪ್ ಆಡಲು ಭಾರತಕ್ಕೆ ಕಳುಹಿಸುತ್ತಿರಲಿಲ್ಲ. ನಾವು ಅವರೊಂದಿಗೆ ಆಡಲು ಯಾವಾಗಲೂ ಸಿದ್ಧರಿರುತ್ತೇವೆ. ಇದೇ ಕಾರಣದಿಂದಾಗಿ ಅವರು ಈ ರೀತಿಯಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಮಿಯಾಂದಾದ್ ಆಕ್ರೋಶ ಹೊರಹಾಕಿದ್ದಾರೆ.

4 / 7
ಪಾಕಿಸ್ತಾನ್ ಕ್ರಿಕೆಟ್ ಬಹಳ ದೊಡ್ಡದಿದೆ. ನಾವು ಅತ್ಯುತ್ತಮ ಆಟಗಾರರನ್ನು ವಿಶ್ವ ಕ್ರಿಕೆಟ್​ಗೆ ನೀಡುತ್ತಿದ್ದೇವೆ. ಹೀಗಾಗಿ ಏಕದಿನ ವಿಶ್ವಕಪ್​ಗಾಗಿ ಭಾರತಕ್ಕೆ ಹೋಗದಿದ್ದರೂ ಪಾಕಿಸ್ತಾನಕ್ಕೆ ಯಾವುದೇ ನಷ್ಟವಾಗುವುದಿಲ್ಲ ಎಂದು ಜಾವೇದ್ ಮಿಯಾಂದಾದ್ ಅಭಿಪ್ರಾಯಪಟ್ಟಿದ್ದಾರೆ.

ಪಾಕಿಸ್ತಾನ್ ಕ್ರಿಕೆಟ್ ಬಹಳ ದೊಡ್ಡದಿದೆ. ನಾವು ಅತ್ಯುತ್ತಮ ಆಟಗಾರರನ್ನು ವಿಶ್ವ ಕ್ರಿಕೆಟ್​ಗೆ ನೀಡುತ್ತಿದ್ದೇವೆ. ಹೀಗಾಗಿ ಏಕದಿನ ವಿಶ್ವಕಪ್​ಗಾಗಿ ಭಾರತಕ್ಕೆ ಹೋಗದಿದ್ದರೂ ಪಾಕಿಸ್ತಾನಕ್ಕೆ ಯಾವುದೇ ನಷ್ಟವಾಗುವುದಿಲ್ಲ ಎಂದು ಜಾವೇದ್ ಮಿಯಾಂದಾದ್ ಅಭಿಪ್ರಾಯಪಟ್ಟಿದ್ದಾರೆ.

5 / 7
ಇದಾಗ್ಯೂ ಈ ಬಾರಿಯ ಏಷ್ಯಾಕಪ್ ಹಾಗೂ ಏಕದಿನ ವಿಶ್ವಕಪ್​ನಲ್ಲಿ ಭಾರತ-ಪಾಕಿಸ್ತಾನ್ ಮುಖಾಮುಖಿಯಾಗುವುದು ಖಚಿತ. ಏಷ್ಯಾಕಪ್​ನ ಲೀಗ್​ನಲ್ಲಿ ಮೊದಲ ಮುಖಾಮುಖಿಯಾದರೆ, ಆ ಬಳಿಕ ಸೂಪರ್​-4 ನಲ್ಲಿ 2ನೇ ಬಾರಿ ಮುಖಾಮುಖಿಯಾಗಬಹುದು. ಇನ್ನು ಉಭಯ ತಂಡಗಳು ಫೈನಲ್​ ಪ್ರವೇಶಿಸಿದರೆ ಮೂರನೇ ಬಾರಿ ಸೆಣಸಲಿದೆ.

ಇದಾಗ್ಯೂ ಈ ಬಾರಿಯ ಏಷ್ಯಾಕಪ್ ಹಾಗೂ ಏಕದಿನ ವಿಶ್ವಕಪ್​ನಲ್ಲಿ ಭಾರತ-ಪಾಕಿಸ್ತಾನ್ ಮುಖಾಮುಖಿಯಾಗುವುದು ಖಚಿತ. ಏಷ್ಯಾಕಪ್​ನ ಲೀಗ್​ನಲ್ಲಿ ಮೊದಲ ಮುಖಾಮುಖಿಯಾದರೆ, ಆ ಬಳಿಕ ಸೂಪರ್​-4 ನಲ್ಲಿ 2ನೇ ಬಾರಿ ಮುಖಾಮುಖಿಯಾಗಬಹುದು. ಇನ್ನು ಉಭಯ ತಂಡಗಳು ಫೈನಲ್​ ಪ್ರವೇಶಿಸಿದರೆ ಮೂರನೇ ಬಾರಿ ಸೆಣಸಲಿದೆ.

6 / 7
ಹಾಗೆಯೇ ಐಸಿಸಿ ಸಿದ್ಧಪಡಿಸಿರುವ ODI ವಿಶ್ವಕಪ್‌ನ ಕರಡು ವೇಳಾಪಟ್ಟಿಯ ಪ್ರಕಾರ, ಅಕ್ಟೋಬರ್ 15 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ-ಪಾಕಿಸ್ತಾನ್ ಮುಖಾಮುಖಿಯಾಗಲಿದೆ. ಆದರೆ ಈ ಮಹತ್ವದ ಟೂರ್ನಿಯಲ್ಲೂ ಭಾಗವಹಿಸಬಾರದೆಂಬ ಹೇಳಿಕೆ ನೀಡಿ ಇದೀಗ ಜಾವೇದ್ ಮಿಯಾಂದಾದ್ ಹೊಸ ವಿವಾದ ಹುಟ್ಟುಹಾಕಲು ಯತ್ನಿಸಿದ್ದಾರೆ.

ಹಾಗೆಯೇ ಐಸಿಸಿ ಸಿದ್ಧಪಡಿಸಿರುವ ODI ವಿಶ್ವಕಪ್‌ನ ಕರಡು ವೇಳಾಪಟ್ಟಿಯ ಪ್ರಕಾರ, ಅಕ್ಟೋಬರ್ 15 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ-ಪಾಕಿಸ್ತಾನ್ ಮುಖಾಮುಖಿಯಾಗಲಿದೆ. ಆದರೆ ಈ ಮಹತ್ವದ ಟೂರ್ನಿಯಲ್ಲೂ ಭಾಗವಹಿಸಬಾರದೆಂಬ ಹೇಳಿಕೆ ನೀಡಿ ಇದೀಗ ಜಾವೇದ್ ಮಿಯಾಂದಾದ್ ಹೊಸ ವಿವಾದ ಹುಟ್ಟುಹಾಕಲು ಯತ್ನಿಸಿದ್ದಾರೆ.

7 / 7
Follow us
ಮೈಸೂರು: ಶತಮಾನದಷ್ಟು ಹಳೆಯದಾದ ಕಟ್ಟಡದ ಮೇಲೆ ವಕ್ಫ್​ ಕಣ್ಣು, ನೋಟೀಸ್
ಮೈಸೂರು: ಶತಮಾನದಷ್ಟು ಹಳೆಯದಾದ ಕಟ್ಟಡದ ಮೇಲೆ ವಕ್ಫ್​ ಕಣ್ಣು, ನೋಟೀಸ್
ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ